Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಿನಲ್ಲಿ ಹವಾ ಎಬ್ಬಿಸುತ್ತಾರಾ ಮೋದಿ..! | Modi
    Trending

    ಬೆಂಗಳೂರಿನಲ್ಲಿ ಹವಾ ಎಬ್ಬಿಸುತ್ತಾರಾ ಮೋದಿ..! | Modi

    vartha chakraBy vartha chakraApril 9, 20241 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಏ.9: ಈ ಬಾರಿ ರಾಜ್ಯದ ಎಲ್ಲಾ ಲೋಕಸಭೆ ಕ್ಷೇತ್ರಗಳನ್ನು ಗೆಲ್ಲಬೇಕೆಂದು ಕಾರ್ಯತಂತ್ರ ರೂಪಿಸುತ್ತಿರುವ ಬಿಜೆಪಿಗೆ ಕಾಂಗ್ರೆಸ್ ಪಕ್ಷ ದೊಡ್ಡ ಸವಾಲೊಡ್ಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನೇತೃತ್ವದ ಸರ್ಕಾರದ ಗ್ಯಾರಂಟಿಗಳು ಬಿಜೆಪಿಗೆ ತಲೆ ನೋವಾಗಿ ಪರಿಣಮಿಸಿವೆ.
    ಮೊದಲ ಹಂತದ ಚುನಾವಣೆ ನಡೆಯುತ್ತಿರುವ ರಾಜ್ಯದ ಬಹುತೇಕ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಈ ವಿಷಯವಾಗಿ ದೊಡ್ಡ ಸಮಸ್ಯೆ ಎದುರಿಸುತ್ತಿದ್ದಾರೆ ಇದನ್ನು ಸಮರ್ಥವಾಗಿ ನಿಭಾಯಿಸಬೇಕು ಎಂದು ಹೇಳಿರುವ ಅಭ್ಯರ್ಥಿಗಳು ತಮ್ಮ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಚಾರ ಮಾಡಿದರೆ ಗೆಲುವಿಗೆ ಸಹಕಾರಿಯಾಗಲಿದೆ ಎಂದು ರಾಜ್ಯ ಮತ್ತು ರಾಷ್ಟ್ರೀಯ ನಾಯಕರಿಗೆ ಮನವಿ ಮಾಡಿದ್ದಾರೆ.

    ಈ ಹಿನ್ನೆಲೆಯಲ್ಲಿ ಪ್ರಧಾನಿ ಸಚಿವಾಲಯ ರಾಜ್ಯ ಬಿಜೆಪಿ ನಾಯಕರನ್ನು ಸಂಪರ್ಕಿಸಿ ಮೊದಲ ಹಂತದ ಚುನಾವಣೆ ನಡೆಯುವ ಯಾವ ಯಾವ ಕ್ಷೇತ್ರಗಳಲ್ಲಿ ಪ್ರಧಾನಿ ಅವರ ಪ್ರಚಾರ ಮತ್ತು ರೋಡ್ ಶೋ ಅಗತ್ಯವಿದೆ ಎಂಬ ಬಗ್ಗೆ ತಿಳಿಸುವಂತೆ ಸೂಚಿಸಿದೆ.
    ಈ ಹಿನ್ನೆಲೆಯಲ್ಲಿ ರಾಜನಾಯಕರು ಕೇಂದ್ರ ಬಿಜೆಪಿಗೆ ಮನವಿಯೊಂದನ್ನು ಸಲ್ಲಿಸಿದ್ದು, ಮೊದಲ ಹಂತದ ಚುನಾವಣೆ ನಡೆಯುತ್ತಿರುವ ರಾಜ್ಯದ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಪ್ರಧಾನಿ ಅವರ ಬಹಿರಂಗ ಸಭೆಗಳಿಗಿಂತಲೂ ರೋಡ್ ಶೋಗಳು ಹೆಚ್ಚು ಪರಿಣಾಮಕಾರಿಯಾಗಿರಲಿವೆ. ಇದರಿಂದ ಸಮಯದ ಉಳಿತಾಯವು ಆಗಲಿದೆ ಜೊತೆಗೆ ಹೆಚ್ಚು ಜನರನ್ನು ತಲುಪಬಹುದಾಗಿದೆ ಎಂದು ಹೇಳಿ ರೋಡ್ ಶೋಗಳ ಅಗತ್ಯವನ್ನು ಪ್ರತಿಪಾದಿಸಿದೆ.
    ಬೆಂಗಳೂರು ನಗರವನ್ನು ಒಳಗೊಳ್ಳುವ ನಾಲ್ಕು ಕ್ಷೇತ್ರಗಳನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ನಗರದಲ್ಲಿ ಎರಡು ಕಡೆ ರೋಡ್ ಶೋ ನಡೆಸಬೇಕು ಒಂದೇ ದಿನ ಕನಿಷ್ಠ ಮೂರರಿಂದ ಐದು ಕಿಲೋ ಮೀಟರ್ ವರೆಗೆ ರೋಷ ನಡೆಸುವ ಮೂಲಕ ಬೆಂಗಳೂರು ಉತ್ತರ ದಕ್ಷಿಣ ಕೇಂದ್ರ ಮತ್ತು ಗ್ರಾಮಾಂತರ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪರ ಪ್ರಚಾರ ಮಾಡಬಹುದಾಗಿದೆ ಎಂದು ಹೇಳಿದೆ.

    ಅದೇ ರೀತಿಯಲ್ಲಿ ಮೈಸೂರು ಮತ್ತು ಮಂಗಳೂರಿನಲ್ಲೂ ರೋಡ್ ಶೋ ನಡೆಸುವ ಅಗತ್ಯವಿದೆ ಎಂದು ತಿಳಿಸಿದ್ದು ಇದಕ್ಕಾಗಿ ಒಂದು ರೂಟ್ ಮ್ಯಾಪ್ ಕೂಡ ಸಿದ್ಧಪಡಿಸಿ ಅದನ್ನು ಬಿಜೆಪಿ ರಾಷ್ಟ್ರೀಯ ನಾಯಕರಿಗೆ ತಲುಪಿಸಲಾಗಿದೆ ಇದಾದ ನಂತರ ಕೆಲವು ಪ್ರದೇಶಗಳಲ್ಲಿ ಬಹಿರಂಗ ಸಭೆ ನಡೆಸಬಹುದು ಎಂದು ಹೇಳಿದೆ.
    ರಾಜ್ಯ ನಾಯಕರು ರೋಡ್ ಶೋ ಮತ್ತು ಕೆಲವು ಕಡೆ ಬಹಿರಂಗ ಸಭೆಗಳ ಬಗ್ಗೆ ಮನವಿ ಮಾಡಿದ್ದು ಈ ಕುರಿತಂತೆ ಬಿಜೆಪಿ ಕೇಂದ್ರ ನಾಯಕತ್ವ ಮತ್ತು ಪ್ರಧಾನಿ ಸಚಿವಾಲಯ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ.
    ಬಿಜೆಪಿ ಈ ಚುನಾವಣೆಯನ್ನು ಪ್ರಧಾನಿ ಮೋದಿ ಅವರ ಅಲೆಯ ಮೇಲೆ ಎದುರಿಸಲು ಸಿದ್ಧತೆ ನಡೆಸಿದ್ದು ಅದಕ್ಕಾಗಿಯೇ ಈ ಕಾರ್ಯತಂತ್ರವನ್ನು ರೂಪಿಸಿದೆ. ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸದೇ ಹೋದರೆ ಬೆಂಗಳೂರಿನಲ್ಲಿ ಅಭ್ಯರ್ಥಿಗಳು ದೊಡ್ಡ ಪ್ರಮಾಣದ ಹಿನ್ನಡೆ ಅನುಭವಿಸಬೇಕಾದ ಸಾಧ್ಯತೆ ಇದೆ ಎಂದು ಹೇಳಿದ್ದು ಏಪ್ರಿಲ್ 14ರಂದು ಬಹುತೇಕ ಪ್ರಧಾನಿಗಳು ಬೆಂಗಳೂರಿನಲ್ಲಿ ರೋಡ್ ಶೋ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

    Verbattle
    Verbattle
    Verbattle
    m modi ಕಾಂಗ್ರೆಸ್ Election ನರೇಂದ್ರ ಮೋದಿ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Next Article ಆರ್ ಎಸ್ ಎಸ್ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಅಡ್ಡಿ | RSS
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    1 Comment

    1. Eqbbcw on February 13, 2026 1:14 pm

      betmgm New Mexico betmgm free 200 betmgm North Carolina

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    • Tracymix on ಯಾರೇ.. ಕೂಗಾಡಲಿ…
    • Tracymix on ಜ.29ರಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.