Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » JDS ಟಿಕೆಟ್ ಆಕಾಂಕ್ಷಿಯಿಂದಲೇ ದೋಖಾ!
    ರಾಜಕೀಯ

    JDS ಟಿಕೆಟ್ ಆಕಾಂಕ್ಷಿಯಿಂದಲೇ ದೋಖಾ!

    vartha chakraBy vartha chakraFebruary 26, 2023Updated:February 28, 2023No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಫೆ.26- ವಿಧಾನ ಪರಿಷತ್ ಸದಸ್ಯ ಬೋಜೆಗೌಡ ಅವರ ದುಬಾರಿ ಕಾರಿಗೆ ನಂಬರ್ ಪ್ಲೇಟ್ ಅಳವಡಿಸಿ ನಕಲಿ ದಾಖಲೆ ಸೃಷ್ಟಿಸಿ ಮಾರಾಟಕ್ಕೆ ಇರಿಸಿದ್ದ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಹೈಗ್ರೌಂಡ್ ಪೊಲೀಸರು ಜೆಡಿಎಸ್ ಮುಖಂಡನೊಬ್ಬನನ್ನು ಬಂಧಿಸಿದ್ದಾರೆ. ವಿಧಾನಸಭಾ ಟಿಕೆಟ್ ಗಾಗಿ ಓಡಾಡುತ್ತಿದ್ದ ಜೆಡಿಎಸ್ ಮುಖಂಡ ಶಬಾಜ್ ಬಂಧಿತ ಆರೋಪಿಗಳಾಗಿದ್ದಾನೆ.
    ಭೋಜೆಗೌಡರ ಕಾರಿನ ನಂಬರ್ ಪ್ಲೇಟ್ ನಕಲು ಮಾಡಿ ಅದೇ ನಂಬರ್ ನಲ್ಲಿ ಬೇರೆ ಕಾರನ್ನು ಮಾರಾಟ ಮಾಡಲು ಯತ್ನಿಸಲಾಗಿದೆ. ಈ ಸಂಬಂಧ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.
    ವಿಚಾರಣೆ ವೇಳೆ ಮಂಜು ಕೊಟ್ಟ ಮಾಹಿತಿಯನ್ನು ಆಧರಿಸಿ ಶಬಾಜ್ ನನ್ನು ಬಂಧಿಸಲಾಗಿದೆ.
    ಬಂಧಿತ ಶಬಾಜ್, ಹಲವು ಜೆಡಿಎಸ್ ನಾಯಕರೊಂದಿಗೆ ಕಾಣಿಸಿಕೊಂಡಿದ್ದಾನೆ. ನಕಲಿ ದಾಖಲೆ ಸೃಷ್ಟಿಸಿದ್ದ ಕಾರನ್ನು ರಲ್ಲಿ ಶಬಾಜ್, ಮಂಜನಿಗೆ ಕೊಟ್ಟಿದ್ದರು. ಮಂಜ ಸೆಕೆಂಡ್ ಹ್ಯಾಂಡ್ ಕಾರ್ ಶೋ ರೂಮ್ ಮಾಲೀಕ ಇಮ್ರಾನ್ ಗೆ ಕೊಟ್ಟಿದ್ದ.
    ಮಂಜ ಹಾಗೂ ಶಬಾಜ್ ನನ್ನ ಹೈಗ್ರೌಂಡ್ ಪೊಲೀಸರು ಬಂಧಿಸಿದ್ದು ಇದೇ ರೀತಿ ಹಲವು ಕಾರ್ ಗಳ ನಂಬರ್ ಪ್ಲೇಟ್ ನಕಲಿ ಮಾಡಿ ಮಾರಾಟ ಮಾಡಿರುವ ಶಂಕೆ ವ್ಯಕ್ತವಾಗಿದ್ದು ತನಿಖೆಯನ್ನು ಮುಂದುವರೆಸಲಾಗಿದೆ.
    ಎಂಎಲ್ ಸಿ ಭೋಜೆಗೌಡರ ಇನೋವಾ ಕ್ರಿಸ್ಟಾ ಕಾರಿದ್ದು, ಆ ಕಾರಿನ ನಂಬರ್ ಕೆಎ18 ಜಡ್ -5977 ಪ್ಲೇಟನ್ನು ಮತ್ತೊಂದು ಇನ್ನೋವಾ ಕ್ರಿಸ್ಟಾ ಕಾರಿಗೆ ಅಳವಡಿಸಿ ಕ್ವೀನ್ ರಸ್ತೆಯ ಸೆಕೆಂಡ್ ಹ್ಯಾಂಡ್ ಶೋರೂಂವೊಂದರಲ್ಲಿ ಮಾರಾಟಕ್ಕೆ ಇಡಲಾಗಿತ್ತು.
    ಭೋಜೆಗೌಡರ ಅಪ್ತ ಸಹಾಯಕ ಮಾದೇಶ್ ಕ್ವೀನ್ ರಸ್ತೆಯಲ್ಲಿ ಬರುವಾಗ ಶೋರೂಂ ಬಳಿ ಇನ್ನೋವಾ ಕ್ರಿಸ್ಟಾ ಕಾರನ್ನ ನೋಡಿ ಇದು ಎಂಎಲ್​ಸಿ ಭೋಜೆಗೌಡರ ಕಾರು ಅಲ್ವಾ ಅಂತ ಶೋರೂಂ ಸಿಬ್ಬಂದಿಯನ್ನು ವಿಚಾರಿಸಿದ್ದಾರೆ.
    ಬಳಿಕ ಭೋಜೆಗೌಡರಿಗೆ ಫೋನ್ ಮಾಡಿ ಕಾರು ಮಾರಾಟ ಮಾಡುತ್ತಿದ್ದೀರಾ ಎಂದು ವಿಚಾರಿಸಿದಾಗ, ಭೋಜೆಗೌಡರು ಇಲ್ಲ ಕಾರು ಮನೆಯ ಬಳಿಯೇ ಇದೆ ಎಂದು ಹೇಳಿದ್ದಾರೆ. ನಂತರ ಭೋಜೆಗೌಡರ ಪಿಎ ಮಾದೇಶ್ ನಕಲಿ ನಂಬರ್ ಪ್ಲೇಟ್ ಬಳಸಿ ಬೇರೆ ಕಾರನ್ನು ಮಾರಾಟ ಮಾಡಲಾಗುತ್ತಿದೆ ಎಂದು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.
    ನಂತರ ಈ ಬಗ್ಗೆ ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯಿಸಿದ ಎಂಎಲ್ ಸಿ ಭೋಜೆಗೌಡ, ಒಂದೊಂದು ನಂಬರ್ ಇಟ್ಟುಕೊಂಡು ಹತ್ತು ಬಸ್ ಓಡಿಸುತ್ತಾರೆ ಈ ಬಗ್ಗೆ ಸಮಗ್ರ ತನಿಖೆ ಮಾಡಬೇಕು ಅಂತ ಒತ್ತಾಯಿಸಿದ್ದಾರೆ. ದಂಧೆಕೋರರು ವಿವಿಐಪಿ ಕಾರಿನ ನಂಬರ್ ಬಳಸುತ್ತಾರೆ, ಅವರು ಎಷ್ಟೇ ಪ್ರಭಾವಿ ಆಗಿದ್ದರೂ ಕ್ರಮ ಆಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದ್ದರು.

    JDS ಕಾರು
    Share. Facebook Twitter Pinterest LinkedIn Tumblr Email WhatsApp
    Previous Articleಚುನಾವಣೆಗೆ ನೆತ್ತರೋಕುಳಿ
    Next Article ಪೊಲೀಸ್ ಠಾಣೆ ಮೆಟ್ಟಿಲೇರಿದ ಪರಮೇಶ್ವರ್
    vartha chakra
    • Website

    Related Posts

    ಬೆಚ್ಚಿ ಬಿದ್ದ ಮಂಗಳೂರು

    May 2, 2025

    CM ವಿರುದ್ಧ ರೌಡಿ ಶೀಟ್ ತೆರೆಯಬೇಕಾ.?

    April 29, 2025

    ವಿ.ಸಿ.ನಾಲೆಯಲ್ಲಿ ಸಿಕ್ಕ ಕಾರು ಬೆಚ್ಚಿ ಬೀಳಿಸಿತು

    April 29, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಗೆಲುವಿಗಾಗಿ ವಿಶೇಷ ಪೂಜೆ.

    ಆಪರೇಷನ್ ಸಿಂಧೂರ

    ಮಹಿಳೆಯರೇ‌ ಹುಷಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Floydfox on ಮುಖ್ಯ ಶಿಕ್ಷಕಿ ಮಾಡಿದ ಘನಂದಾರಿ ಕೆಲಸ | Viral News
    • Dwightpoest on ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    • сервисные центры москвы on ಕೈಲಾಸವಾಸಿಯಾದ ‘ಕಲೈವಾಣಿ’
    Latest Kannada News

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    May 8, 2025

    ಗೆಲುವಿಗಾಗಿ ವಿಶೇಷ ಪೂಜೆ.

    May 8, 2025

    ಆಪರೇಷನ್ ಸಿಂಧೂರ

    May 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಯುದ್ಧದ ಎಫೆಕ್ಟ್ ಐಪಿಎಲ್ ಪಂದ್ಯವೇ ರದ್ದು #india #pakistan #worldnews #attack #sharevideo #dailyupdate
    Subscribe