Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೊಲೀಸರಿಂದ BSNLಗೆ ಬೆಣೆ Jio ಗೆ ಮಣೆ
    ರಾಜ್ಯ

    ಪೊಲೀಸರಿಂದ BSNLಗೆ ಬೆಣೆ Jio ಗೆ ಮಣೆ

    vartha chakraBy vartha chakraFebruary 22, 20232 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.

    ಖಾಸಗಿಯವರೊಂದಿಗಿನ ಪೈಪೋಟಿ ಎದುರಿಸಲಾಗದೆ, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ನಷ್ಟ ಇಲ್ಲವೆ ಮುಚ್ಚುವ ಹಂತದಲ್ಲಿವೆ. ಸಾರ್ವಜನಿಕ ಸಹಭಾಗಿತ್ವದ ಈ ಸಂಸ್ಥೆಗಳು ಉಳಿಯಬೇಕು, ಖಾಸಗಿಯವರ ಜೊತೆ ಸರಿಸಮನಾದ ಪೈಪೋಟಿ ಎದುರಿಸುವಂತೆ ಅವುಗಳನ್ನು ಅಭಿವೃದ್ಧಿ ಪಡಿಸಬೇಕು ಎಂಬ ಕೂಗು ಪ್ರಬಲವಾಗಿ ಕೇಳಿಬರುತ್ತಿದೆ.

    ಇದಕ್ಕಾಗಿ ಸರ್ಕಾರ ಮೇಕ್ ಇನ್ ಇಂಡಿಯಾ (Make in India), ಆತ್ಮ ನಿರ್ಭರ್ (Atmanirbhar Bharat) ನಂತಹ ಯೋಜನೆಗಳನ್ನು ಪ್ರಕಟಿಸಿದೆ. ಆದರೆ ಇದರ ಬೆನ್ನಲ್ಲೇ ಸರ್ಕಾರದ ಅಂಗ ಸಂಸ್ಥೆಗಳ ಧೋರಣೆಯಿಂದಾಗಿ ಸಾರ್ವಜನಿಕ ಸಹಭಾಗಿತ್ವದ ಸಂಸ್ಥೆಗಳು ಸೊರಗುವಂತಾಗಿದೆ. ಇದಕ್ಕೆ ಈಗಿನ ಉದಾಹರಣೆ BSNL (ಭಾರತ್ ಸಂಚಾರ ನಿಗಮ ನಿಯಮಿತ).

    ಒಂದು ಕಾಲಕ್ಕೆ ದೇಶದ ದೂರಸಂಪರ್ಕ ವಲಯದಲ್ಲಿ ಅನಭಿಷಕ್ತ ದೊರೆಯಂತಿದ್ದ BSNL ಇದೀಗ ತನ್ನ ದುರಾಡಳಿತ, ಅಸಮರ್ಪಕ ಸೇವೆ, ಸಿಬ್ಬಂದಿಯ ಅನಾದರಣೆ, ಪೈಪೋಟಿ ಎದುರಿಸಲಾಗದ ಜಡ್ಡುಗಟ್ಟಿದ ಪರಿಸ್ಥಿತಿಯಿಂದಾಗಿ ದಿವಾಳಿಯ ಹಂತ ತಲುಪಿರುವುದು ಬೆಳಕಿನಷ್ಟು ಸ್ಪಷ್ಟ.

    ಹೀಗಿದ್ದರೂ ಸರ್ಕಾರದ ಸಂಸ್ಥೆಯೊಂದು ಅವಸಾನ ಹೊಂದದೆ ಬದುಕಿ ಉಳಿಯಬೇಕು. ಇದಕ್ಕೆ ಸರ್ಕಾರ ಎಲ್ಲಾ ಉತ್ತೇಜನ ನೀಡಬೇಕು. ವ್ಯವಸ್ಥೆಯಲ್ಲಿ ಹೊಸತನ ತರಬೇಕು ಹೊಸ ಗ್ರಾಹಕರು BSNL ಸೇವಾ ಜಾಲಕ್ಕೆ ಸೇರ್ಪಡೆಯಾಗಬೇಕು ಎಂಬ ಆಗ್ರಹ ಕೇಳಿಬರುತ್ತಿರುವ ಬೆನ್ನಲ್ಲೇ ರಾಜ್ಯ ಪೊಲೀಸ್ ಇಲಾಖೆ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.

    ರಾಜ್ಯಾದ್ಯಂತ ಸರಿಯಾಗಿ BSNL ನೆಟ್‌ವರ್ಕ್ ಸಿಗುತ್ತಿಲ್ಲ, ಇದರಿಂದ ಅಧಿಕಾರಿಗಳ ಸಂಪರ್ಕ ಸಾಧ್ಯವಾಗುತ್ತಿಲ್ಲ ಎಂಬ ಕಾರಣವನ್ನು ನೀಡಿ ರಾಜ್ಯ ಪೊಲೀಸ್ ಇಲಾಖೆ ಈ ಮಹತ್ವದ ನಿರ್ಧಾರ ಕೈಗೊಂಡಿದೆ. ಇದರ ಪರಿಣಾಮವಾಗಿ BSNL ನ ಸುಮಾರು 38,347 ಸಿಮ್‌ಕಾರ್ಡ್‌ಗಳನ್ನು Card ಬದಲಾಯಿಸಲು ಸರ್ಕಾರದ ಅನುಮತಿ ಪಡೆದುಕೊಂಡಿದೆ.

    38,347 ಸಂಪರ್ಕಗಳಲ್ಲಿ ಹೆಚ್ಚಿನ ಸಂಪರ್ಕ ಸಂಖ್ಯೆಗಳು ಗ್ರಾಮೀಣ ಪ್ರದೇಶಗಳಲ್ಲಿವೆ. ಅಲ್ಲಿ ಉತ್ತಮ ನೆಟ್‌ವರ್ಕ್ ಕೊರತೆ ಕಂಡುಬಂದಿದೆ. ಇದರಿಂದ ಫೋಟೋ, ವೀಡಿಯೋ ಸೇರಿದಂತೆ ಇತರ ದತ್ತಾಂಶಗಳನ್ನು ವರ್ಗಾಯಿಸುವುದು ಕಷ್ಟಸಾಧ್ಯವಾಗುತ್ತಿತ್ತು. ಪೊಲೀಸ್ ತುರ್ತು ಸೇವೆಗಳಿಗಾಗಿ ಲಭ್ಯವಿರುವ ನೆಟ್‌ವರ್ಕ್‌ಗಳ ದಕ್ಷತೆ ಹೆಚ್ಚಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಬದಲಾವಣೆಯ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಇಲಾಖೆ ಮೂಲಗಳು ತಿಳಿಸಿವೆ.

    ಇದೀಗ ಈ ಸೇವೆಯನ್ನು ರಿಲಯನ್ಸ್ ನ ಜಿಯೋ (Reliance Jio) ಸಂಸ್ಥೆಗೆ ನೀಡಲಾಗುತ್ತದೆ. ಇದರಿಂದ ಎಲ್ಲಾ BSNL ಸಿಮ್ ಕಾರ್ಡ್ ಗಳು Jio ಸಿಮ್ ಕಾರ್ಡ್ ಗಳಾಗಿ ಪರಿವರ್ತನೆಯಾಗಲಿವೆ. ಖಾಸಗಿ ಸಂಸ್ಥೆಗಳು ಈಗಾಗಲೇ 5ಜಿ ಸೇವೆ ನೀಡುತ್ತಿವೆ. ಆದರೆ BSNL 4ಜಿ ಸೇವೆಯನ್ನೂ ನೀಡುತ್ತಿಲ್ಲ. ಇದರಿಂದ ತುರ್ತು ಸೇವೆಗಳಿಗೆ ಸಮಸ್ಯೆಯಾಗಿದೆ. ಹಾಗಾಗಿ ಸಾರ್ವಜನಿಕ ಸಂಗ್ರಹಣೆಯಲ್ಲಿ ಕರ್ನಾಟಕ ಪಾರದರ್ಶಕ ಕಾಯ್ದೆ 1999ರ ಪ್ರಕಾರ ವಾಣಿಜ್ಯ ಮೌಲ್ಯಮಾಪನದ ನಂತರ ರಿಲಯನ್ಸ್ ಜಿಯೋವನ್ನು ಆಯ್ಕೆ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ.

    ಪೊಲೀಸ್ ಇಲಾಖೆಯ ಈ ನಿರ್ಧಾರ BSNL ಗೆ ದೊಡ್ಡ ಹೊಡೆತ ನೀಡಿದೆ. ಸರ್ಕಾರಿ ಸಂಸ್ಥೆಯನ್ನು ಕಡೆಗಣಿಸಿ ಖಾಸಗಿ ಸಂಸ್ಥೆಗೆ ಉತ್ತೇಜನ ನೀಡುವ ಈ ನಡೆ ಸಾರ್ವಜನಿಕ ವಲಯದಲ್ಲಿ ಚರ್ಚಾಸ್ಪದವಾಗಿದೆ.

    Verbattle
    Verbattle
    Verbattle
    ATM Atmanirbhar Bharat Bangalore BSNL india Karnataka m Make in India Reliance Jio ವಾಣಿಜ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಮೇದಾರ ಅಭಿವೃದ್ಧಿ ನಿಗಮ ಸ್ಥಾಪನೆ
    Next Article Bus ನಲ್ಲಿ ಯುವತಿ ಮೇಲೆ ಮೂತ್ರ ವಿಸರ್ಜಿಸಿದ Mechanical Engineer
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn on ಡ್ರಗ್ಸ್ ಜಾಲದಲ್ಲಿ ಮಂತ್ರಿಗಳ ಆಪ್ತರು!
    • LinwoodGah on ವಿದ್ಯುತ್ ದರ ಹೆಚ್ಚಳಕ್ಕೆ ಮಂತ್ರಿ ಜಾರ್ಜ್ ಹೇಳಿದ್ದೇನು ಗೊತ್ತಾ?
    • LinwoodGah on ಪ್ರಹ್ಲಾದ್ ಜೋಷಿ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸವಾಲು
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.