Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕದ್ದ ಚಿತ್ರ ತೆರೆಗೆ ಸಿದ್ಧ
    ಸಿನೆಮ

    ಕದ್ದ ಚಿತ್ರ ತೆರೆಗೆ ಸಿದ್ಧ

    vartha chakraBy vartha chakraSeptember 1, 2022Updated:September 1, 2022No Comments1 Min Read
    Facebook Twitter WhatsApp Pinterest LinkedIn Tumblr Email
    Kadda chitra
    Share
    Facebook Twitter LinkedIn Pinterest Email WhatsApp

    ವಿಭಿನ್ನ ಶೀರ್ಷಿಕೆಯ ‘ಕದ್ದ ಚಿತ್ರ’ ಸಿನಿಮಾ ತೆರೆಗೆ ಬರಲು ಸಿದ್ಧವಾಗಿದೆ.
    ಈಗಾಗಲೇ ತನ್ನ ಬಹುತೇಕ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳನ್ನು ಪೂರ್ಣಗೊಳಿಸಿರುವ ಚಿತ್ರತಂಡವು ಚಿತ್ರದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿದೆ.
    ವಿಜಯ ರಾಘವೇಂದ್ರ, ನಮ್ರತಾ ಸುರೇಂದ್ರನಾಥ, ರಾಘು ಶಿವಮೊಗ್ಗ, ಬಾಲಾಜಿ ಮನೋಹರ್‌, ಸುಜಿತ್‌ ಸುಪ್ರಭ್‌, ಬೇಬಿ ಆರಾಧ್ಯ, ವಿನಯ್‌, ಸ್ಟೀಫ‌ನ್‌ ಮುಂತಾದವರ ಅಭಿನಯ ಕದ್ದಚಿತ್ರ ಸಿನೆಮಾದಲ್ಲಿದೆ.
    ಪ್ರಚಾರದ ಭಾಗವಾಗಿ ಇತ್ತೀಚೆಗೆ “ಕದ್ದ ಚಿತ್ರ’ ಸಿನಿಮಾದ ಮೊದಲ ಕ್ಯಾರೆಕ್ಟರ್‌ ಟೀಸರ್‌ ಮತ್ತು “ಮೊದಲ ಮಳೆ…’ ಎಂಬ ಹಾಡು ಬಿಡುಗಡೆಯಾಗಿದೆ. ಇದೇ ವೇಳೆ ಹಾಜರಿದ್ದ ನಟ ಶಿವರಾಜಕುಮಾರ್‌, “ಕದ್ದ ಚಿತ್ರ’ ಸಿನಿಮಾಕ್ಕೆ ಶುಭ ಹಾರೈಸಿದರು.
    ಇನ್ನು ಬಿಡುಗಡೆಯಾಗಿರುವ “ಕದ್ದ ಚಿತ್ರ’ ಟೀಸರ್‌ನಲ್ಲಿ ಪಾತ್ರ ಪರಿಚಯ ಮಾಡಿಕೊಡಲಾಗಿದ್ದು, ಬಿಡುಗಡೆಯಾಗಿರುವ “ಮೊದಲ ಮಳೆಯ…’ ಎಂಬ ಗೀತೆಗೆ ಕೃಷ್ಣರಾಜ್‌ ಸಂಗೀತ ಸಂಯೋಜಿಸಿದ್ದಾರೆ. ಗೀತೆಗೆ ಅನಿಕೇತ್‌ ಶ್ರೀವತ್ಸ ಸಾಹಿತ್ಯವಿದ್ದು, ಸೂರಜ್‌ ಸಂತೋಷ್‌ ಈ ಹಾಡಿಗೆ ಧ್ವನಿಯಾಗಿದ್ದಾರೆ.
    ಇದೇ ವೇಳೆ ಮಾತನಾಡಿದ ನಿರ್ದೇಶಕ ಸುಹಾಸ್‌ ಕೃಷ್ಣ, “ಇದೊಂದು ಕಾದಂಬರಿ ಆಧಾರಿತ ಸಿನಿಮಾವಾಗಿದ್ದು, ಕೃತಿ ಚೌರ್ಯದ ಕಥೆ ಸಿನಿಮಾದಲ್ಲಿದೆ. ಬರಹಗಾರನ ವೃತ್ತಿ, ವೈಯಕ್ತಿಕ ಜೀವನದಲ್ಲಿ ಹಲವು ಅಡೆತಡೆಗಳು ಬರುತ್ತವೆ. ಅವಲ್ಲವನ್ನು ಆತ ಹೇಗೆ ಎದುರಿಸುತ್ತಾನೆ ಎನ್ನುವುದು ಸಿನಿಮಾದ ಕಥೆಯ ಒಂದು ಎಳೆ’ ಎಂದು ಕಥಾಹಂದರ ಬಿಚ್ಚಿಟ್ಟರು.
    ತಮ್ಮ ಪಾತ್ರದ ಬಗ್ಗೆ ಮಾತನಾಡಿದ ನಾಯಕ ನಟ ವಿಜಯ ರಾಘವೇಂದ್ರ, “ನಿರ್ದೇಶಕರು ನನ್ನೊಂದಿಗೆ ಮಾತನಾಡುವಾಗ ಅವರಲ್ಲಿರುವ ಹಸಿವು, ಆತುರ ಕಾಣಿಸಿತು. ಪಾತ್ರಕ್ಕೆ ತಕ್ಕಂತೆ ಮೊದಲ ಬಾರಿ ಸಿಗರೇಟ್‌ ಸೇದಿದ್ದೇನೆ. ಒಮ್ಮೆ ಶಾಂತ ಸ್ವಭಾವ, ಮತ್ತೂಮ್ಮೆ ಕೋಪದಿಂದ ಒಮ್ಮೆಲೇ ಪ್ರೇರಿತನಾಗುವಂಥ ಪಾತ್ರ ನಿರ್ವಹಿಸಿದ್ದೇನೆ. ಅದೆಲ್ಲದಕ್ಕೂ ಬಲವಾದ ಕಾರಣವಿರುತ್ತದೆ. ಅದೇನು ಅನ್ನೋದನ್ನ ಸಿನಿಮಾದಲ್ಲೇ ನೋಡಬೇಕು’ ಎಂದರು.
    “ಶಾನ್ವಿ ಟಾಕೀಸ್‌’ ಬ್ಯಾನರ್‌ನಲ್ಲಿ ಸಂದೀಪ್‌ ಹೆಚ್‌. ಕೆ. ನಿರ್ಮಿಸಿರುವ “ಕದ್ದ ಚಿತ್ರ’ ಚಿತ್ರಕ್ಕೆ ಶ್ರೀ ಕ್ರೇಜಿಮೈಂಡ್ ಸಂಕಲನ, ಗೌತಮ್‌ ಮನು ಛಾಯಾಗ್ರಹಣವಿದೆ. ಸದ್ಯ ಪ್ರಚಾರ ಕಾರ್ಯದಲ್ಲಿರುವ “ಕದ್ದ ಚಿತ್ರ’ ಸಿನಿಮಾ ಅಕ್ಟೋಬರ್‌ನಲ್ಲಿ ತೆರೆಗೆ ಬರಲಿದೆ

    ಸಾಹಿತ್ಯ ಸಿನಿಮ ಸಿನೆಮ
    Share. Facebook Twitter Pinterest LinkedIn Tumblr Email WhatsApp
    Previous Articleಅವೈಜ್ಞಾನಿಕ ಕಾಮಗಾರಿಯಿಂದ ಪ್ರವಾಹ
    Next Article ಕನ್ನಡದಲ್ಲಿ ಮಾತನಾಡಿ ಜೈರಾಮ್ ರಮೇಶ್
    vartha chakra
    • Website

    Related Posts

    ಡಿ ಬಾಸ್ ಸ್ವಿಟ್ಜರ್ಲ್ಯಾಂಡ್ ಗೆ ಹೋಗೋಕೆ ಆಗೋಲ್ಲ!

    July 11, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    June 13, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Leroyevorn on ಯಡಿಯೂರಪ್ಪ ಅವರಿಗೆ Z category ಭದ್ರತೆ | Yediyurappa
    • TommyKit on ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    • Leroyevorn on BJP ಭದ್ರಕೋಟೆಗೆ ಪೊನ್ನಣ್ಣ ಲಗ್ಗೆ | A S Ponnanna
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe