Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಧಾನಸಭೆಯಲ್ಲಿ Kageri ಗರಂ – ಕಲಾಪ ಮುಂದೂಡಿಕೆ
    ರಾಜಕೀಯ

    ವಿಧಾನಸಭೆಯಲ್ಲಿ Kageri ಗರಂ – ಕಲಾಪ ಮುಂದೂಡಿಕೆ

    vartha chakraBy vartha chakraFebruary 16, 202351 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    Bengaluru

    Congress ಕಾರ್ಯಾಧ್ಯಕ್ಷ ಹಾಗೂ ಭಾಲ್ಕಿ ಕ್ಷೇತ್ರದ ಶಾಸಕ ಈಶ್ವರ ಖಂಡ್ರೆ (Eshwar Khandre) ಅವರ ಕುರಿತು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ‌ಕಾಗೇರಿ (Vishweshwar Hegde Kageri) ವಿಧಾನಸಭೆಯಲ್ಲಿ ನೀಡಿದ ಹೇಳಿಕೆ ಭಾರಿ ಕೋಲಾಹಲವನ್ನೇ ಸೃಷ್ಟಿಸಿ, ಕಲಾಪವನ್ನು ಅಲ್ಪಕಾಲಾವಧಿಗೆ ಮುಂದೂಡಲಾಯಿತು.

    ಶೂನ್ಯವೇಳೆಯ ಕಲಾಪದಲ್ಲಿ ಸಭಾಧ್ಯಕ್ಷರು ಸೂಚನೆ ನೀಡಿದ ನಂತರವೂ ಏರು ದನಿಯಲ್ಲಿ ಖಂಡ್ರೆ ಮಾತನಾಡುವುದನ್ನು ಖಂಡಿಸಿದ ಸಭಾದ್ಯಕ್ಷರು, ‘ನಿಮ್ಮಂಥವರು ಆಯ್ಕೆಯಾಗಿ ಬರುವುದು ಈ ಸದನಕ್ಕೆ ಅವಮಾನ’ ಎಂದು ಹೇಳಿದರು.

    ಸಭಾಧ್ಯಕ್ಷರ ಮಾತಿಗೆ ತೀವ್ರ ಆಕ್ಷೇಪಿಸಿದ ಕಾಂಗ್ರೆಸ್  ‘ಭಾಲ್ಕಿ ಜನರಿಗೆ ಮಾಡಿದ ಅವಮಾನವಿದು’ ಎಂದು ವಿರೋಧಿಸಿ ಸದನದ ಬಾವಿಗಿಳಿದು ಧರಣಿ ನಡೆಸಲು ಮುಂದಾದರು. ಸದನ ಸಹಜ ಸ್ಥಿತಿಗೆ ಬಾರದ ಕಾರಣ ಸಭಾಧ್ಯಕ್ಷರು ಸದನದ ಕಾರ್ಯಕಲಾಪವನ್ನು ಕೆಲಕಾಲ ಕಾಲ ಮುಂದೂಡಿದರು.

    ಆಗಿದ್ದೇನು?

    ಶೂನ್ಯ ವೇಳೆಯಲ್ಲಿ ವಿರೋಧ ಪಕ್ಷದ ಉಪ ನಾಯಕ ಯು.ಟಿ.ಖಾದರ್ (U. T. Khader) ಅವರು, ‘ರಾಜ್ಯದಲ್ಲಿ ಇತ್ತೀಚೆಗೆ ಕೇಳಿಬರುತ್ತಿರುವ ದ್ವೇಷಭಾಷಣ ಕುರಿತಂತೆ ಪ್ರಸ್ತಾಪಿಸಿ, ಸಚಿವರು ಹಾಗೂ ಜನಪ್ರತಿನಿಧಿಗಳು ನೀಡುತ್ತಿರುವ ಹೇಳಿಕೆಗಳು ಅಶಾಂತಿಗೆ ಕಾರಣವಾಗುತ್ತಿವೆ’ ಎಂದು ಹೇಳಿದರು.

    ಇದಕ್ಕೆ ಉತ್ತರಿಸಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ (Dr C N Ashwath Narayan) ಅವರು ತಾವು ನೀಡಿದ್ದ ಹೇಳಿಕೆಯನ್ನು ಸಮರ್ಥಿಸಿಕೊಂಡರು.

    ‘ನನಗೆ ಯಾರನ್ನೂ ವೈಯಕ್ತಿಕವಾಗಿ ಅಗೌರವಿಸುವ ಹಾಗೂ ಟೀಕೆ ಮಾಡುವ ಉದ್ದೇಶವಿಲ್ಲ. ಕೇವಲ ರಾಜಕೀಯ ಭಾಷಣ ಮಾಡಿದ್ದೇನೆಂದು’ ಸ್ಪಷ್ಟಪಡಿಸಿದರು.

    ಸಚಿವರ ಈ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಯು.ಟಿ.ಖಾದರ್, ಕೃಷ್ಣಬೈರೇಗೌಡ (Krishna Byre Gowda), ತನ್ವೀರ್ ಸೇಠ್ (Tanveer Seth), ಪ್ರಿಯಾಂಕ ಖರ್ಗೆ (Priyank M. Kharge), ಈಶ್ವರಖಂಡ್ರೆ ಮತ್ತಿತರರು, ಪ್ರಚೋದನಕಾರಿ ಹೇಳಿಕೆ ನೀಡಿರುವ ಸಚಿವರ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

    ಸಚಿವರ ಉತ್ತರ ಹಾರಿಕೆಯಾಗಿದೆ. ಆರೋಪಿ ಸ್ಥಾನದಲ್ಲಿ ಇರುವವರಿಂದ ಇನ್ನೇನು ಉತ್ತರ ನಿರೀಕ್ಷಿಸಲು ಸಾಧ್ಯ ಎಂದು ವಾಗ್ದಾಳಿ ಆರಂಭಿಸಿದರು. ಆಗ ಸದನದಲ್ಲಿ ಗದ್ದಲದ ವಾತಾವರಣ ಉಂಟಾಯಿತು.

    ಗದ್ದಲದ ನಡುವೆಯೇ ಅಶ್ವತ್ಥನಾರಾಯಣ ತಮ್ಮ ನಿಲುವನ್ನು ಸಮರ್ಥಿಸುತ್ತಾ,  ಉತ್ತರಿಸುತ್ತಿದ್ದಾಗ ಈಶ್ವರ ಖಂಡ್ರೆ ಏರಿದ ಧ್ವನಿಯಲ್ಲಿ ಮಾತನಾಡಿದರು. ಇದು ಸಭಾಧ್ಯಕ್ಷರನ್ನು ಕೆರಳಿಸಿತು. ಮಾತು ನಿಲ್ಲಿಸಿ ಕೂರುವಂತೆ ಅವರಿಗೆ ತಾಕೀತು ಮಾಡಿದರೂ, ಪದೇ ಪದೇ ಕುಳಿತುಕೊಳ್ಳಿ ಎಂದು ಸೂಚನೆ ನೀಡಿದ ಹೊರತಾಗಿಯೂ, ಖಂಡ್ರೆ ಮಾತನಾಡುವುದನ್ನು ನಿಲ್ಲಿಸಲಿಲ್ಲ.

    ಇದರಿಂದ ಸಹನೆ ಕಳೆದುಕೊಂಡ ಕಾಗೇರಿ ಅವರು, ‘ನೀವು ಹಿರಿಯರು, ಈ ರೀತಿ ನಡೆದುಕೊಳ್ಳುವುದು ನಿಮಗೆ ಶೋಭೆ ತರುವುದಿಲ್ಲ. ಸಚಿವರಾಗಿ ಕೆಲಸ ಮಾಡಿದ ಅನುಭವವಿದೆ. ಸಭಾಧ್ಯಕ್ಷರು ಹೇಳಿದ ಮೇಲೂ ನೀವು ಪೀಠಕ್ಕೆ ಗೌರವ ಕೊಡದೆ ಮಾತನಾಡುತ್ತಿದ್ದೀರಿ. ಇದೇನಾ ನೀವು ಸಭಾಧ್ಯಕ್ಷರಿಗೆ ಕೊಡುವ ಗೌರವ’ ಎಂದು ಪ್ರಶ್ನಿಸಿದರು.

    ‘ನಾನು ಇದುವರೆಗೆ ಸಹನೆ ಕಳೆದುಕೊಳ್ಳದೇ ಮಾತನಾಡಿದ್ದೇನೆ. ಪೂರ್ಣ ಅಧಿಕಾರ ಚಲಾಯಿಸುವ ಅವಕಾಶ ಮಾಡಿಕೊಡಬೇಡಿ. ನನ್ನನ್ನು ಅನಗತ್ಯವಾಗಿ ಎಳೆದು ಮಾತನಾಡಿಸುತ್ತೀರಿ. ಕೇಳುವ ಸೌಜನ್ಯವಿಲ್ಲವೆ? ಪದೇ ಪದೇ ಇದೇ ರೀತಿ ಮುಂದುವರೆದರೆ, ಸದನದಿಂದ ಹೊರ ಹಾಕಬೇಕಾಗುತ್ತದೆ’ ಎಂದು ಸಭಾಧ್ಯಕ್ಷರು ಎಚ್ಚರಿಕೆ ನೀಡಿದರು.

    Verbattle
    Verbattle
    Verbattle
    assemly proceedings Congress Dr C N Ashwath Narayan Eshwar Khandre Government Karnataka m Politics Vishweshwar Hegde Kageri war ಕಾಂಗ್ರೆಸ್ ಕಾನೂನು ರಾಜಕೀಯ ವಿಧಾನಸಭೆ ಕಲಾಪ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    Next Article Vote ನ ಮೇಲೆ ಕಣ್ಣು- budget ನಲ್ಲಿ ಸರ್ವರಿಗೂ ಹೊನ್ನು
    vartha chakra
    • Website

    Related Posts

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    ಡಿ.ಕೆ. ಸುರೇಶ್ ಚುಚ್ಚುಮಾತು

    January 21, 2026

    ರಿಯಾಲಿಟಿ ಶೋ ಅಲ್ಲ, ಇದು ಪಕ್ಕಾ ‘ಸ್ಕ್ರಿಪ್ಟೆಡ್’ ಡ್ರಾಮಾ: ಬಿಗ್ ಬಾಸ್ ಮನೆಯ ಕರಾಳ ಸತ್ಯ ಬಯಲು?!

    January 19, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DavidDug on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • kvartira-borisovpoisk on ಕಾಂಗ್ರೆಸ್ ಪಕ್ಷದವರು ಭ್ರಷ್ಟಾಚಾರದ ಪಿತಾಮಹರೆಂದು ರುಜುವಾತು- ಬಿ.ವೈ.ವಿಜಯೇಂದ್ರ
    • Daviddek on ದೇವಿಗೆ ಶಿವಕುಮಾರ್ ಕೇಳಿದ ಐದು ಪ್ರಶ್ನೆ!
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.