Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಲ್ಲಡ್ಕ ಪ್ರಭಾಕರ ಭಟ್ ರನ್ನು ರೌಡಿ ಪಟ್ಟಿಗೆ ಸೇರಿಸಿ | Kalladka Prabhakar Bhat
    Trending

    ಕಲ್ಲಡ್ಕ ಪ್ರಭಾಕರ ಭಟ್ ರನ್ನು ರೌಡಿ ಪಟ್ಟಿಗೆ ಸೇರಿಸಿ | Kalladka Prabhakar Bhat

    vartha chakraBy vartha chakraDecember 27, 2023Updated:December 27, 20231 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಡ್ಯ,ಡಿ.27- ಸಂಘ ಪರಿವಾರದ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ (Kalladka Prabhakar Bhat) ವಿರುದ್ಧ ಪ್ರಚೋದನಕಾರಿ ಭಾಷಣ, ಮಹಿಳೆಯರ ಚುಡಾವಣೆ, ಲೈಂಗಿಕ ನಿಂದನೆ, ಧಾರ್ಮಿಕ ನಿಂದನೆ, ಗಲಭೆಗೆ ಪ್ರಚೋದನೆ ಸೇರಿ ಹಲವು ಸೆಕ್ಷನ್ ಗಳಡಿ ದೂರುಗಳನ್ನು ದಾಖಲಿಸಲಾಗಿದೆ.ಅಷ್ಟೇ ಅಲ್ಲ ಇವರನ್ನು ರೌಡಿ ಪಟ್ಟಿಗೆ ಸೇರಿಸುವಂತೆ ಪೊಲೀಸರಿಗೆ ಮನವಿ ಮಾಡಲಾಗಿದೆ.
    ಒಂದೇ ಭಾಷಣ ಆಧರಿಸಿ ಹಲವು ಸೆಕ್ಷನ್ ಗಳಡಿ ಹೋರಾಟಗಾರ್ತಿ ನಜ್ಮಾ ನಜೀರ್‌ ಚಿಕ್ಕನೇರಳೆ ದೂರು ದಾಖಲಿಸಿದ್ದಾರೆ.
    ಇದನ್ನು ಆಧರಿಸಿ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಲಾಗಿದೆ.
    ಶ್ರೀರಂಗಪಟ್ಟಣದ ಗಂಜಾಂನಲ್ಲಿ ಹನುಮ ಜಯಂತಿ ಅಂಗವಾಗಿ ನಡೆದ ಸಂಕೀರ್ತನಾ ಯಾತ್ರೆ ವೇಳೆ ಕಲ್ಲಡ್ಕ ಪ್ರಭಾಕರ ಭಟ್‌ ಭಾಷಣ ಮಾಡಿದ್ದರು.ಈ ವೇಳೆ ಅವರು ಮುಸ್ಲಿಂ ಸಮುದಾಯದಲ್ಲಿ ಮಹಿಳೆಯರಿಗೆ ತ್ರಿವಳಿ ತಲಾಕ್ ಹೇಳುವ ಅವಕಾಶ ಇತ್ತು. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ತ್ರಿವಳಿ ತಲಾಕ್ ರದ್ದು ಮಾಡಿದೆ.

    ಬಹು ಪತ್ನಿತ್ವ ಪಿಡುಗು ಮತ್ತು ತ್ರಿವಳಿ ತಲಾಕ್‌ ಕಾಟದಿಂದಾಗಿ ಈ ಹಿಂದೆ ಮುಸಲ್ಮಾನ ಹೆಣ್ಣು ಮಕ್ಕಳಿಗೆ ಪರ್ಮನೆಂಟ್ ಗಂಡ ಇರಲಿಲ್ಲ.ಈಗ ತ್ರಿವಳಿ ತಲಾಕ್‌ ರದ್ದುಪಡಿಸುವ ಮೂಲಕ ಅವರಿಗೆ ಪರ್ಮನೆಂಟ್ ಗಂಡ ಕೊಟ್ಟಿದ್ದು ಪ್ರಧಾನಿ ನರೇಂದ್ರ ಮೋದಿ ಸರ್ಕಾರವಾಗಿದೆ ಎಂದು ಕಲ್ಲಡ್ಕ ಹೇಳಿದ್ದರು.
    ಮುಸ್ಲಿಂ ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ಹೋರಾಟಗಾರ್ತಿ ನಜ್ಮಾ ನಜೀರ್ ದೂರು ನೀಡಿದ್ದರು.ಇದನ್ನು ಆಧರಿಸಿ ಎಫ್ ಐ ಆರ್ ದಾಖಲು ಮಾಡಲಾಗಿದೆ.
    ಮಹಿಳೆಯರನ್ನು ಚುಡಾಯಿಸಿರುವುದು, ಲೈಂಗಿಕವಾಗಿ ಅವಮಾನಿಸಿರುವುದು, ಲೈಂಗಿಕ ದೌರ್ಜನ್ಯಕ್ಕೆ ಪ್ರಚೋದಿಸಿರುವುದು, ಸಾರ್ವಜನಿಕವಾಗಿ ಬೆದರಿಕೆಯೊಡ್ಡಿರುವುದು, ಧರ್ಮವನ್ನು ಅವಮಾನಿಸಿರುವುದು, ಧರ್ಮಗಳ ಮಧ್ಯೆ ಎತ್ತಿಕಟ್ಟಿ ಗಲಭೆ ನಡೆಸಿರುವುದು, ಸಾವು ನೋವುಗಳನ್ನು ಪ್ರಚೋದಿಸಿರುವುದು ಮುಂತಾದ ಆರೋಪಗಳನ್ನು ಹೊರಿಸಿ ನಜ್ಮಾ ದೂರು ಸಲ್ಲಿಸಿದ್ದಾರೆ. ಇದನ್ನು ಆಧರಿಸಿ, ಐಪಿಸಿ ಸೆಕ್ಷನ್ 354, 294, 509, 506, 153A, 295, 295A, 298ರಡಿ ಪೊಲೀಸರು ಪ್ರಕರಣ ದಾಖಲು ಮಾಡಿ ರೌಡಿ ಶೀಟರ್ ತೆರೆಯುವಂತೆಯೂ ನಜ್ಮಾ ನಜೀರ್ ಮನವಿ‌ ಮಾಡಿದ್ದಾರೆ.
    ಮುಸಲ್ಮಾನ ಹುಡುಗರು ಅಷ್ಟೇ ಅಲ್ಲ, ಮುಸ್ಲಿಂ ಮಹಿಳೆಯರೂ ಮತಾಂತರ ಮಾಡುತ್ತಿದ್ದಾರೆ. ನಿಮ್ಮ ಮುಸ್ಲಿಂ ಸಮಾಜದಲ್ಲಿ ಹುಡುಗಿಯರು ಇಲ್ಲವಾ? ಹಿಂದೂ ಹುಡುಗಿಯರನ್ನು ಯಾಕೆ ಟಾರ್ಗೆಟ್ ಮಾಡ್ತೀರಾ? ನಿಮಗೆ ತ್ರಿವಳಿ ತಲಾಖ್‌ ನೀಡುವ ಪದ್ಧತಿಯನ್ನು ತೆಗೆದು ಹಾಕಿದ್ದು ನರೇಂದ್ರ ಮೋದಿ ಅಲ್ಲವೇ ಎಂದು ಭಟ್‌ ಪ್ರಶ್ನಿಸಿದ್ದರು.

    ನಿಮಗೆ ತಾಕತ್ ಇದ್ದರೆ ಹಿಜಾಬ್ ನಿಷೇಧ ವಾಪಸ್ ಪಡೆಯಿರಿ. ಶಾಲೆಗಳಲ್ಲಿ ಸಮವಸ್ತ್ರವನ್ನು ಕಡ್ಡಾಯ ಮಾಡಲಾಗಿದೆ. ಸಮವಸ್ತ್ರ ಜಾರಿ ಮಾಡಿದ್ದೇ ಏಕರೂಪತೆ ತರುವ ಉದ್ದೇಶದಿಂದಾಗಿದೆ. ಸಿಎಂ ಸಿದ್ದರಾಮಯ್ಯ ಅವರೇ, ಮಕ್ಕಳಲ್ಲಿ ಯಾಕೆ ತಾರತಮ್ಯ ಹುಟ್ಟು ಹಾಕುತ್ತೀರಿ? ಅಲ್ಪಸಂಖ್ಯಾತರ ಅಭಿವೃದ್ಧಿಗೆ 10,000 ಕೋಟಿ ರೂ. ಕೊಡುವುದಾಗಿ ಘೋಷಣೆ ಮಾಡಿದ್ದಾರೆ. ಯಾರಪ್ಪನ ಮನೆಯ ದುಡ್ಡು ಕೊಡುತ್ತೀರಿ? ತೆರಿಗೆ ಕಟ್ಟುವವರು ಹಿಂದುಗಳು. ನಮ್ಮ ಹಣ ಅಲ್ಪಸಂಖ್ಯಾತರಿಗೆ ಕೊಡುತ್ತೀರಾ ಎಂದು ಕಲ್ಲಡ್ಕ ಪ್ರಭಾಕರ್‌ ಭಟ್‌ ಪ್ರಶ್ನಿಸಿದ್ದರು.ನಾವು
    ಶಾಲೆಯೊಳಗೆ ಜೈ ಶ್ರೀರಾಮ್ ಎಂದು ಕೂಗುತ್ತೇವೆ. ಹಿಜಾಬ್ ನಿಷೇಧ ವಾಪಸ್ ತೆಗೆಯುತ್ತಾರಂತೆ. ಅವರು ಹಿಜಾಬ್ ಹಾಕಿಕೊಂಡು ಬರಲಿ. ನಾವು ಕೇಸರಿ ಶಾಲು ಹಾಕಿಕೊಂಡು ಬರುತ್ತೇವೆ. ಕೇಸರಿ ಟೋಪಿ ಹಾಕಿಕೊಂಡು ಬರುತ್ತೇವೆ ಎಂದು ಕಲ್ಲಡ್ಕ ಕಿಡಿಕಾರಿದ್ದರು.

     

    Also Read | Latest Kannada News | Kannada News

    ದಕ್ಷಿಣ ಭಾರತದ RSS ಗೆ ನೂತನ ಸಾರಥಿ, ಉಮಾಪತಿ | GS Umapathy

    Verbattle
    Verbattle
    Verbattle
    #kannada art Bangalore crime Government india Kalladka Prabhakar Bhat kannada news Karnataka m News Politics rss Trending Varthachakra ಧರ್ಮ ಧಾರ್ಮಿಕ ನರೇಂದ್ರ ಮೋದಿ ಶಾಲೆ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಆರೋಪ ನ್ಯಾಯಾಂಗ ತನಿಖೆಗೆ | Lakshmi Hebbalkar
    Next Article ಯತ್ನಾಳ್ ಅ’ಸಂತೋಷ’ದ ಹಿಂದಿನ‌ ರಹಸ್ಯ | Yatnal
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    1 Comment

    1. Fjziud on February 13, 2026 8:18 am

      betmgm bet 10 get 200 betmgm-play mgm sports app

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    • Muculu on ಸಂಬಳ ಜಾಸ್ತಿ ಮಾಡದಿದ್ದರೆ ಕರೆಂಟ್ ಕಟ್
    • LinwoodGah on ವಿದ್ಯುತ್ ಇಂಜಿನಿಯರ್ ಗಳಿಗೆ ಗೌರವ್ ಗುಪ್ತಾ ಕರೆ
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.