Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೂಟಿನಲ್ಲಿ ಹೊಡೆಯುತ್ತೇನೆ ಎಂದ ವಿಧಾನ ಪರಿಷತ್ ಸದಸ್ಯೆ | Karadi Sanganna
    Trending

    ಬೂಟಿನಲ್ಲಿ ಹೊಡೆಯುತ್ತೇನೆ ಎಂದ ವಿಧಾನ ಪರಿಷತ್ ಸದಸ್ಯೆ | Karadi Sanganna

    vartha chakraBy vartha chakraMarch 14, 2024No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.14- ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಹಾಲಿ ಸಂಸದ ಕರಡಿ ಸಂಗಣ್ಣ (Karadi Sanganna) ಅವರಿಗೆ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿರುವ ಹೈಕಮಾಂಡ್ ವಿರುದ್ಧ ಅವರ ಬೆಂಬಲಿಗರು ಮತ್ತು ಪಕ್ಷದ ಕಾರ್ಯಕರ್ತರು ರೊಚ್ಚಿಗೆದ್ದಿದ್ದಾರೆ.
    ಕೊಪ್ಪಳ ಜಿಲ್ಲಾ ಬಿಜೆಪಿ ಕಚೇರಿಗೆ ಲಗ್ಗೆ ಹಾಕಿದ ಸಂಸದರ ಬೆಂಬಲಿಗರು ಮತ್ತು ಬಿಜೆಪಿ ಕಾರ್ಯಕರ್ತರು ಕಚೇರಿಯ ಕಿಟಕಿ ಬಾಗಿಲು ಧ್ವಂಸಗೊಳಿಸಿ ಪೀಠೋಪಕರಣಗಳನ್ನು ಪುಡಿಗಟ್ಟಿದರು.

    ಕೊಪ್ಪಳ ಕ್ಷೇತ್ರದ ಘೋಷಿತ ಅಭ್ಯರ್ಥಿ ಡಾ. ಕೆ. ಬಸವರಾಜ ಅವರು ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್ ಅವರೊಂದಿಗೆ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸುತ್ತಿದ್ದರು ಈ ವೇಳೆ ಅಲ್ಲಿಗೆ ಧಾವಿಸಿದ ಕರಡಿ ಸಂಗಣ್ಣ ಬೆಂಬಲಿಗರು ದಿಡೀರ್ ಪ್ರತಿಭಟನೆ ನಡೆಸಿದರು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಘೋಷಣೆ ಹಾಕಿದ ಕಾರ್ಯಕರ್ತರು ನಂತರ ಕಲ್ಲು ತೂರಾಟ ನಡೆಸಿದರು. ಇದರಿಂದ ಕಚೇರಿಯಾಗಿ ಕಿಟಕಿ ಬಾಗಿಲುಗಳ ಗಾಜು ಪುಡಿಪುಡಿಯಾದರೆ, ಕಚೇರಿ ಒಳಗೆ ನುಗ್ಗಿದ ಕುಪಿತ ಕಾರ್ಯಕರ್ತರ ಪಡೆ ಪೀಠೋಪಕರಣಗಳನ್ನು ತಂತ ಗೊಳಿಸಿತು.
    ಇದರ ಬೆನ್ನಲ್ಲೇ ಘೋಷಿತ ಅಭ್ಯರ್ಥಿ ಬಸವರಾಜ ಅವರು ದೊಡ್ಡನಗೌಡ ಪಾಟೀಲ್ ಅವರೊಂದಿಗೆ ಕರಡಿ ಸಂಗಣ್ಣ ಅವರನ್ನು ಭೇಟಿ ಮಾಡಲು ತೆರಳಿದರು. ಅವರ ಭೇಟಿಗೆ ನಿರಾಕರಿಸಿದ ಕರಡಿ ಸಂಗಣ್ಣ ಕ್ಷೇತ್ರದಲ್ಲಿ ಹೇಗೆ ಪ್ರಚಾರ ಮಾಡುತ್ತಿರೋ ಗೆಲುವು ಸಾಧಿಸುತ್ತಿರೋ ನೋಡುತ್ತೀನಿ ಎಂದು ಹೇಳಿ ಕಳುಹಿಸಿದರು.

    ಈ ಘಟನೆ ನಡೆದ ನಂತರ ಕರಡಿ ಸಂಗಣ್ಣ ಅವರ ಮನೆಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಲು ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ್ ಕೂಡ ಆಗಮಿಸಿದ್ದಾರೆ. ಈ ವೇಳೆ ಸಂಸದ ಸಂಗಣ್ಣ ಬೆಂಬಲಿಗನೊಬ್ಬ ನೀವ್ಯಾಕೆ ಇಲ್ಲಿಗೆ ಬಂದಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ಇದರಿಂದ ಗರಂ ಆದ ಎಂಎಲ್‌ಸಿ ಹೇಮಲತಾ ನಾಯಕ್ ಅವರು, ನೀನ್ಯಾವನೋ ನನ್ನ ಕೇಳುವುದಕ್ಕೆ ಎಂದು ಕ್ಲಾಸ್ ತೆಗೆದುಕೊಂಡಿದ್ದಾರೆ.
    ಬಳಿಕ ಎದುರಿನ ವ್ಯಕ್ತಿ ನಾನು ಕಾರ್ಯಕರ್ತ ಹೀಗಾಗಿ ಕೇಳಿದ್ದೇನೆ ಎಂದಿದ್ದಾರೆ. ಇದರಿಂದ ಮತ್ತಷ್ಟು ಕೋಪಗೊಂಡ ಹೇಮಲತಾ ನಾಯಕ್ ನಾನು ಕೂಡ ಕಾರ್ಯಕರ್ತಳಾಗಿಯೇ ಕೆಲಸ ಮಾಡಿದವಳು. ನಾನು ಕೂಡ ಬಿಜೆಪಿ ಕಾರ್ಯಕರ್ತೆಯಾಗಿಯೇ ಇಲ್ಲಿಗೆ ಬಂದಿದ್ದೇನೆ. ಹೆಚ್ಚಿಗೆ ಮಾತನಾಡಿದರೆ ಬೂಟು ತಗೊಂಡು ಹೊಡೆಯುತ್ತೇನೆ.. ನನ್ನ ಮಗನೇ… ಎಂದು ಬೈದಿದ್ದಾರೆ. ಈ ವೇಳೆ ಪೊಲೀಸರು ಬಂದು ಕಾರ್ಯಕರ್ತನನ್ನು ಪತ್ರಿಕಾಗೋಷ್ಠಿ ನಡೆಯುತ್ತಿದ್ದ ಮನೆಯಿಂದ ಹೊರಗೆ ಕಳುಹಿಸಿ ಪರಿಸ್ಥಿತಿಯನ್ನು ತಹಬಂದಿಗೆ ತಂದರು.

    Verbattle
    Verbattle
    Verbattle
    Karnataka News Politics Trending
    Share. Facebook Twitter Pinterest LinkedIn Tumblr Email WhatsApp
    Previous Articleವಿಧಾನಸೌಧದ ಮುಂದೆ ಭುವನೇಶ್ವರಿ ಪ್ರತಿಮೆ | Bhuvaneshwari
    Next Article ಕುಮಾರಸ್ವಾಮಿ ಲೋಕಸಭೆ ಚುನಾವಣೆ ಪ್ರಚಾರಕ್ಕೆ ಡೌಟು | Kumaraswamy
    vartha chakra
    • Website

    Related Posts

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Mcbpto on ಸಿದ್ದರಾಮಯ್ಯ ಅವರನ್ನು ಯಾಕೆ ಬಂಧಿಸಲಿಲ್ಲ?
    • LinwoodGah on ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    • Swdavs on ಹುಬ್ಬಳ್ಳಿ-ಧಾರವಾಡದಿಂದ ಇವರೆಲ್ಲಾ ಗಡಿಪಾರು
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.