Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೈಂದೂರು ಒತ್ತನೆಣೆ ಸುಟ್ಟ ಕಾರಿನಲ್ಲಿ ಪತ್ತೆಯಾದ ಅಸ್ಥಿಪಂಜರ ಪ್ರಕರಣದಲ್ಲಿ ಟ್ವಿಸ್ಟ್ ಮೇಲೆ ಟ್ವಿಸ್ಟ್
    ಸುದ್ದಿ

    ಬೈಂದೂರು ಒತ್ತನೆಣೆ ಸುಟ್ಟ ಕಾರಿನಲ್ಲಿ ಪತ್ತೆಯಾದ ಅಸ್ಥಿಪಂಜರ ಪ್ರಕರಣದಲ್ಲಿ ಟ್ವಿಸ್ಟ್ ಮೇಲೆ ಟ್ವಿಸ್ಟ್

    vartha chakraBy vartha chakraJuly 15, 2022Updated:July 15, 2022No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಉಡುಪಿ_ನಿನ್ನೆ ಮುಂಜಾನೆ ಬೈಂದೂರು ಗಡಿ ಭಾಗದಲ್ಲಿ ಪತ್ತೆಯಾದ ಸುಟ್ಟ ಕಾರು ಮತ್ತು ಅಸ್ಥಿಪಂಜರ ಜಿಲ್ಲೆಯಲ್ಲಿ ಸಾಕಷ್ಟು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಪೊಲೀಸ್ ತನಿಖಾಧಿಕಾರಿಗಳಿಗೆ ಸುಟ್ಟ ಕಾರಿನಲ್ಲಿ ಪತ್ತೆಯಾದ ಅಸ್ಥಿಪಂಜರ ಗುರುತು ಪತ್ತೆಯಾಗಿದೆ. ಕಾರಿನ ಮಾಲಕನೇ ಬಂಧನದ ಭೀತಿಯಲ್ಲಿ ಕ್ರೈಂ ಸ್ಟೋರಿ ಕೊಲೆ ಮಾಡಿ ಸುಟ್ಟಿರುವ ಘಟನೆ ಸದ್ಯ ಬೆಳಕಿಗೆ ಬಂದಿದೆ..

    ಹೌದು ನಿನ್ನೆ ಮುಂಜಾನೆ ಜಿಲ್ಲೆಯ ಗಡಿಯ ತಾಲೂಕು ಬೈಂದೂರಿನ ನಿರ್ಜನ ಪ್ರದೇಶದಲ್ಲಿ ಸುಟ್ಟ ಕಾರೊಂದು ಅಸ್ಥಿಪಂಜರದೊಂದಿಗೆ ಪತ್ತೆಯಾಗಿ ಜಿಲ್ಲೆ ಮತ್ತೊಮ್ಮೆ ಬೆಚ್ಚಿಬೀಳುವಂತೆ ಮಾಡಿದೆ. ಬೈಂದೂರು ತಾಲೂಕಿನ ಶಿರೂರು ಒತ್ತನೆಣೆ ಹೆನ್ ಬೇರು ಎಂಬಲ್ಲಿ ಸೆಡಾನ್ ಕಾರ್ ಸಂಪೂರ್ಣ ಸುಟ್ಟು ಭಸ್ಮವಾಗಿ, ಒಳಗೆ ಅಸ್ಥಿಪಂಜರ ಪತ್ತೆಯಾಗಿತ್ತು. ತನಿಖೆ ಕೈಗೆತ್ತಿಕೊಂಡ ಪೊಲೀಸರು ಸುಟ್ಟು ಹೋದ ಕಾರು ಕಾರ್ಕಳ ತಾಲೂಕಿನ ಮಾಳ ಗ್ರಾಮದ ನಿವಾಸಿ ಸದಾನಂದ ಶೇರಿಗಾರ್ ಎಂಬವರಿಗೆ ಸೇರಿದ್ದು ಎಂದು ಪತ್ತೆಹಚ್ಚಿದ್ದಾರೆ. ಕಾರಿನ ಚೆಸ್ಸಿ ನಂಬರ್ ಮೂಲಕ ಕಾರಿನ ನಂಬರ್ ಪತ್ತೆ ಮಾಡಿ ಪರಿಶೀಲನೆ ನೆಡೆಸಿದಾಗ ಕಾರು ಮಂಗಳವಾರ ರಾತ್ರಿ 12.30ಕ್ಕೆ ಸಾಸ್ತಾನ ಟೋಲ್ ಗೇಟಿನಲ್ಲಿ ಉಡುಪಿ ಕಡೆಯಿಂದ ಕುಂದಾಪುರ ಕಡೆಗೆ ಹೋಗಿರುವುದು ತಿಳಿದುಬಂದಿದೆ. ಮಾತ್ರವಲ್ಲದೆ ಸಾಸ್ತಾನ ಟೋಲ್ ಗೇಟ್ ನಲ್ಲಿ ಮಹಿಳೆಯೊಬ್ಬಳು ಕಾರಿನಿಂದ ಇಳಿದು ಟೋಲ್ ಸಿಬ್ಬಂದಿಗೆ ಹಣ ನೀಡಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.

    ಸಾಸ್ತಾನ ಟೋಲ್ ಗೇಟ್ ನ ಸಿಸಿ ಟಿವಿ ಪೂಟೇಜ್ ನಲ್ಲಿ ಕಂಡ ಮಹಿಳೆ ಯಾರು? ರಾತ್ರಿ 12-30 ಕ್ಕೆ ಸಾಸ್ತಾನ ಟೋಲ್ ಗೇಟಿನಲ್ಲಿ ಉಡುಪಿ ಕಡೆಯಿಂದ ಕುಂದಾಪುರ ಕಡೆಗೆ ಪ್ರಾಯಾಣಿಸಿರುವ ದೃಶ್ಯ ಸೆರೆ ಸಂಪೂರ್ಣ ಲಾಕ್ ಮಾಡಿದ ಸ್ಥಿತಿಯಲ್ಲಿದ್ದ ಕಾರಿನಲ್ಲಿದ್ದ ಅಸ್ಥಿಪಂಜರ ಯಾರದ್ದು?

    ತನಿಖೆಯ ವೇಳೆ ಕಾರಿನ ಹಿಂಬದಿ ಸೀಟಿನಲ್ಲಿ ಸುಟ್ಟುಹೋದ ಸ್ಥಿತಿಯಲ್ಲಿ ಪತ್ತೆಯಾದ ಮೃತ ದೇಹವನ್ನು ಕಾರ್ಕಳದ ಶಿಲ್ಪಾ ಎನ್ನುವ ಮಹಿಳೆಯದ್ದಾಗಿದೆ ಎನ್ನಲಾಗಿತ್ತು. ಆದರೆ ಶಿಲ್ಪ ಅವರು ಜೀವಂತವಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಕಾರು ಮಾಲಿಕ ಸದಾನಂದ ಶೇರಿಗಾರ್ ಮತ್ತು ಶಿಲ್ಪಾ ಅವರ ಪತಿ ಸ್ನೇಹಿತರು ಎನ್ನುವ ಮಾಹಿತಿ ಲಭ್ಯವಾಗಿತ್ತು. ಮೇಲ್ನೋಟಕ್ಕೆ ಕೊಲೆಯಂತೆ ಭಾಸವಾದ ಪ್ರಕರಣವನ್ನು ಬೆನ್ನಟ್ಟಿದ್ದ ಬೈಂದೂರು ಪೊಲೀಸರು ಕಾರಿನ ಮಾಲಕನಾದ ಸದಾನಂದ ಶೇರೆಗಾರ್ ಕುಟುಂಬದ ವಿವರ ಪಡೆದು ಆರೋಪಿಗಳನ್ನು ಬಂಧಿಸಿದ್ದಾರೆ. ಹಳೆಯ ಪ್ರಕರಣದಲ್ಲಿ ಸದಾನಂದ ಶೇರೆಗಾರ್ ಬಂಧನ ಭೀತಿಯಿಂದ, ಕೈಂ ಸ್ಟೋರಿ ಒಂದರಲ್ಲಿ ನೋಡಿದ ಕಥೆಯಂತೆ ತಾನೇ ಸತ್ತುಹೋಗಿರುವ ಸುದ್ದಿ ಬಿಂಬಿಸಲು ಸ್ವಂತ ಕಾರಿನಲ್ಲಿ ತನ್ನದೇ ವ್ಯಕ್ತಿತ್ವ ಹೋಲುವ ವ್ಯಕ್ತಿಯನ್ನು ತನ್ನ ಅನೈತಿಕ ಸಂಬಂಧದ ಗೆಳತಿ ಶಿಲ್ಪಾ ಪೂಜಾರಿ ಮೂಲಕ ಬಲೆಗೆ ಬೀಳಿಸಿದ್ದಾನೆ. ಕಾರ್ಕಳದಲ್ಲಿ ಕಂಠಪೂರ್ತಿ ಕುಡಿಸಿ ವಯಾಗ್ರ ಮಾತ್ರೆ ಎಂದು ನಿದ್ರೆ ಮಾತ್ರೆ ನೀಡಿ ಕಾರಿನಲ್ಲಿ ಕುಳ್ಳಿಸಿಕೊಂಡು ಬಂದು ಹೇನ್‌ಬೇರು ರಸ್ತೆ ನಿರ್ಜನ ಪ್ರದೇಶದಲ್ಲಿ ಪೆಟ್ರೋಲ್ ಸುರಿದು ಕಾರಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದರು. ಪೊಲೀಸ್ ತನಿಖೆಯ ವೇಳೆ ಸದಾನಂದ ಶೇರೆಗಾರ್(52), ಶಿಲ್ಪಾ (30) ಪ್ರಮುಖ ಆರೋಪಿಗಳಾದರೆ ಸತೀಶ್ ದೇವಾಡಿಗ, ನಿತಿನ್ ದೇವಾಡಿಗ ಕೊಲೆಗೆ ಸಾಥ್ ನೀಡಿರುವುದು ಪತ್ತೆಯಾಗಿದ್ದು, ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ ಮತ್ತು ಹೆಚ್ಚಿನ ವಿವರಗಳನ್ನು ಆರಕ್ಷಕರು ತನಿಖೆ ನಡೆಸುತ್ತಿದ್ದಾರೆ.

    ತನಿಖೆಯಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಿದ ಬೈಂದೂರು ಪೊಲೀಸ್ ರು ಶಿಲ್ಪಾ ಪೂಜಾರಿ, ಸತೀಶ್ ದೇವಾಡಿಗ, ನಿತಿಶ್ ದೇವಾಡಿಗ, ಸದಾನಂದ ಶೇರೆಗಾರ್ ಬಂಧಿತ ಆರೋಪಿಗಳು ಮೇಸ್ತ್ರೀ ಆನಂದ್ ಮೇಸ್ತ್ರೀ ಹೆಣ್ಣು ಹೆಂಡದ ಆಸೆಯಿಂದ ಜೀವ ಕಳೆದುಕೊಂಡಾತ.

    ಒಟ್ಟಾರೆಯಾಗಿ, ಕ್ರೈಂ ಸ್ರ್ಟೋರಿ ನೋಡಿ ಗುತ್ತಿಗೆ ಆಧಾರದ ಸರ್ವೇಯರ್ ಸದಾನಂದ ಮೇಸ್ತ್ರಿಯ ಜೀವ ತೆಗೆದಿದ್ದಾನೆ. ಹಳೆಯ ಪ್ರಕರಣದಲ್ಲಿ ಬಂಧನಕ್ಕೊಳಬೇಕಾದ ತಾನು ಮಾಡಿದ ಯಡವಟ್ಟು ಯೋಜನೆಯಿಂದಲೇ ಕೊಲೆ ಆರೋಪಿಯಾಗಿ ಜೈಲು ಕಂಬಿ ಎಣಿಸುವಂತಾಗಿದೆ.

    kundapura ಉಡುಪಿ ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleಸುಶ್ಮಿತಾ ಸೇನ್ ನನ್ನ ಬೆಟರ್ ಹಾಫ್ ಎಂದ ಲಲಿತ್ ಮೋದಿ
    Next Article ನಟ ದಿವಂಗತ ಪವರ್ ಸ್ಟಾರ್ ಡಾ||ಪುನೀತ್ ರಾಜ್‍ಕುಮಾರ್ ಗೆ ಬಿಬಿಎಂಪಿ ಗೌರವ
    vartha chakra
    • Website

    Related Posts

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    May 29, 2025

    ಬಿಕೆ ಹರಿಪ್ರಸಾದ್ ಗೆ ಸಿಎಂ ಕೊಟ್ಟ ಜವಾಬ್ದಾರಿ ಏನು ಗೊತ್ತಾ ?

    May 29, 2025

    ಕೋಮು ಸಂಘರ್ಷ ತಡೆ ಕಾರ್ಯಪಡೆ ರಚನೆ.

    May 29, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • nohu90.careers on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Antoinette on ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !
    • can i order cheap pioglitazone on ಕುಂಭಮೇಳದಲ್ಲಿ ಕಿನ್ನರ ಕಲರವ
    Latest Kannada News

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    May 31, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    May 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    May 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಚಿವ ಖಂಡ್ರೆ ಮನೆ ಬಳಿಯೇ ಕಾರ್ ಗಾಜು ಒಡೆದು 2 ಲಕ್ಷ ಕಳವು!
    Subscribe