Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿಯಲ್ಲಿ ಬದಲಾವಣೆಯ ಪರ್ವ..?
    ಸುದ್ದಿ

    ಬಿಜೆಪಿಯಲ್ಲಿ ಬದಲಾವಣೆಯ ಪರ್ವ..?

    vartha chakraBy vartha chakraAugust 9, 2022Updated:August 9, 2022No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.8- ರಾಜ್ಯ ಬಿಜೆಪಿಯಲ್ಲಿ ಇದೀಗ ಬದಲಾವಣೆಯ ಪರ್ವ ಸ್ವಾತಂತ್ರ್ಯ ದಿನಾಚರಣೆ ನಂತರ ಯಾರೂ ಕೂಡ ಊಹಿಸಲಾಗದ ಬದಲಾವಣೆಯಾಗಲಿದೆ ಎಂಬ ಮಾತುಗಳು ಬಿಜೆಪಿ ಪಾಳಯದಲ್ಲ ಕೇಳಿಬರುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,ಪಕ್ಷದ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಸ್ಥಾನಗಳಿಗೆ ಬೇರೆಯವರು ನೇಮಕವಾಗಲಿದ್ದಾರೆಂಬ ಚರ್ಚೆ ಆರಂಭವಾಗಿದೆ.
    ಇವರ ಬದಲಾವಣೆಯಿಂದ ತೆರವಾಗುವ ಸ್ಥಾನಗಳಿಗೆ ಜಗದೀಶ್ ಶೆಟ್ಟರ್, ಶೋಭಾ ಕರಂದ್ಲಾಜೆ,ಸಿ.ಟಿ.ರವಿ, ಸುನಿಲ್ ಕುಮಾರ್ ಅವರ ಹೆಸರುಗಳು ಪ್ರಬಲವಾಗಿ ಕೇಳಿಬರುತ್ತಿವೆ.
    ನಳೀನ್ ಕುಮಾರ್ ಕಟೀಲ್ ಅವರ ಅಧಿಕಾರವಧಿ ಪೂರ್ಣಗೊಳ್ಳುತ್ತಿದ್ದು ಇವರ ಸ್ಥಾನಕ್ಕೆ ಕರಾವಳಿ ಇಲ್ಲವೇ ಮಲೆನಾಡು ಮೂಲದವರನ್ನೇ ನೇಮಿಸಲಾಗುತ್ತಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಆದರೂ ಮಾಜಿ ಸಚಿವ ಅರವಿಂದ ಲಿಂಬಾವಳಿ, ಶಿವಕುಮಾರ್ ಉದಾಸಿ, ಅಶೋಕ ಮೊದಲಾದವರು ಈ ಹುದ್ದೆಯ ಮೇಲೆ ಕಣ್ಣಿಟ್ಟಿದ್ದು ಲಾಭಿ ನಡೆಸಿದ್ದಾರೆ.
    ಇದರೊಂದಿಗೆ ಮುಖ್ಯಮಂತ್ರಿಯೂ‌ ಬದಲಾಗಲಿದ್ದಾರೆ ಎನ್ನಲಾಗುತ್ತಿದ್ದು ಈ ಸ್ಥಾನಕ್ಕೆ ಶೆಟ್ಟರ್, ಅರವಿಂದ ಬೆಲ್ಲದ್,ಕೇಂದ್ರ ಮಂತ್ರಿ ಭಗವಂತ್ ಖೂಬಾ,ಗೋವಿಂದ ಕಾರಜೋಳ ಹೆಸರು ಕೇಳಿಬರುತ್ತಿದೆ
    ಇದಿಲ್ಲದೆ ಹೋದರೆ ಸಚಿವ ಸಂಪುಟ ವಿಸ್ತರಣೆ ಅಥವ ಪುನಾರಚನೆ ಕುರಿತಂತೆ ಮಹತ್ವದ ಬದಲಾವಣೆ ಮಾಡಲು ಕೇಂದ್ರ ಬಿಜೆಪಿ ವರಿಷ್ಠರು ತೀರ್ಮಾನಿಸಿದ್ದಾರೆ ಎನ್ನಲಾಗುತ್ತಿದೆ.
    ಬದಲಾವಣೆ ಎಂದರೆ ಕೇವಲ ಸಿಎಂ ಬೊಮ್ಮಾಯಿ ಅವರ ಕುರ್ಚಿಗೆ ಆಪತ್ತು ಎಂದು ಭಾವಿಸಬೇಕಾಗಿಲ್ಲ. ಇದು ಯಾರಿಗೆ ಬೇಕಾದರೂ ಅದೃಷ್ಟ ಕೈ ಕೊಟ್ಟು ಇನ್ಯಾರಿಗೂ ಜಾಕ್‍ಪಾಟ್ ಹೊಡೆದರೂ ಅಚ್ಚರಿ ಇಲ್ಲ ಎನ್ನುತ್ತಿದೆ ಪಕ್ಷದ ಮೂಲಗಳು.
    ಕಳೆದ ವಾರ ಬೆಂಗಳೂರಿಗೆ ಆಗಮಿಸಿದ್ದ ಬಿಜೆಪಿ ಚುನಾವಣಾ ಚಾಣುಕ್ಯ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು, ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ರಾಜ್ಯ ಘಟಕದ ಅಧ್ಯಕ್ಷ ನಳೀನ್‍ಕುಮಾರ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸಚಿವರು ಸೇರಿದಂತೆ ಕೆಲವು ಪ್ರಮುಖರ ಜೊತೆ ಮಾತುಕತೆ ನಡೆಸಿದ ವೇಳೆ ಬದಲಾವಣೆಯ ಸುಳಿವನ್ನು ನೀಡಿದ್ದರು ಎಂದು ಉನ್ನತ ಮೂಲಗಳು ತಿಳಿಸಿವೆ.
    ಒಂದು ಕಡೆ ರಾಜ್ಯದಲ್ಲಿ ಪ್ರತಿಪಕ್ಷ ಕಾಂಗ್ರೆಸ್ ದಿನದಿಂದ ದಿನಕ್ಕೆ ಪ್ರಬಲವಾಗುತ್ತಿರುವುದು, ಮತ್ತೊಂದು ಕಡೆ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಕೊಲೆಯಾದ ನಂತರ ಸ್ವಪಕ್ಷೀಯರ ವಿರುದ್ದ ಕಾರ್ಯಕರ್ತರೇ ತಿರುಗಿಬಿದ್ದಿರುವುದು ಬಿಜೆಪಿ ನಾಯಕರಿಗೆ ನುಂಗಲಾರದ ಬಿಸಿ ತುಪ್ಪವಾಗಿ ಪರಿಣಮಿಸಿದೆ.
    ಇದನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ಚಿಂತಕ ಚಾವಡಿ, 2023ರ ವಿಧಾನಸಭೆ ಚುನಾವಣೆಯಲ್ಲಿ ಗರಿಷ್ಠ 3 ಸಂಖ್ಯೆಗಳನ್ನು ದಾಟಬೇಕಾದರೆ ಪಕ್ಷದಲ್ಲಿ ಕೆಲವು ಮಹತ್ವದ ಬದಲಾವಣೆ ಮಾಡಬೇಕೆಂದು ಬಿಜೆಪಿಗೆ ಸಲಹೆ ಕೊಟ್ಟಿದೆ.
    ಈಗಿರುವ ಸ್ಥಿತಿಗತಿಯಲ್ಲಿ ಚುನಾವಣೆ ಎದುರಿಸಲು ಸಾಧ್ಯವೇ ಇಲ್ಲ. ಕೇವಲ ನರೇಂದ್ರಮೋದಿ ನಾಯಕತ್ವದಲ್ಲಿ ಬಿಜೆಪಿಯನ್ನು ದಡ ಸೇರಿಸಲು ಸಾಧ್ಯವಿಲ್ಲ.ಉತ್ತರ ಭಾರತದ ರಾಜ್ಯಗಳಂತೆ ಕರ್ನಾಟಕದಲ್ಲಿ ಭಾವನಾತ್ಮಕ ವಿಷಯಗಳನ್ನು ಇಟ್ಟುಕೊಂಡು ಕೋಮು ದೃಢೀಕರಣ ನಡೆಸುವುದು ಅಷ್ಟು ಸುಲಭವಲ್ಲ. ಆ ಪ್ರಯೋಗ 10 ಜಿಲ್ಲೆಗಳಲ್ಲಿ ಮಾತ್ರ ನಡೆಯಬಹುದು ಎಂದು ಹೈಕಮಾಂಡ್ ಲೆಕ್ಕಾಚಾರ ಹಾಕಿದೆ ಹೀಗಾಗಿ ಬದಲಾವಣೆ ಮೂಲಕ ಯಶಸ್ಸು ಗಳಿಸುವ ಲೆಕ್ಕಾಚಾರದಲ್ಲಿ ತೊಡಗಿದೆ.
    ನಾಯಕತ್ವ ಬದಲಾಯಿಸಿ ಆಕ್ರಮಣಕಾರಿ ನಾಯಕತ್ವ ಹಾಗೂ ಆರ್‍ಎಸ್‍ಎಸ್ ಹಿನ್ನೆಲೆ ಹೊಂದಿರುವವರನ್ನು ಸಿಎಂ ಸ್ಥಾನದಲ್ಲಿ ಕೂರಿಸಬೇಕೆಂಬ ಬೇಡಿಕೆ ಕೇಳಿಬಂದಿದೆ. ಬೊಮ್ಮಾಯಿ ಅವರನ್ನು ಮುಂದುವರೆಸುವುದು ಬಿಡುವುದು ಮೋದಿ ಕೈಯಲ್ಲಿದೆ ಎಂದು ಬಿಜೆಪಿಯವರೇ ಹೇಳುತ್ತಿದ್ದಾರೆ.
    ಅಂತಿಮವಾಗಿ ಆ.15ರ ನಂತರ ಈ ಎಲ್ಲ ಬೆಳವಣಿಗೆಗಳಿಗೂ ಚಾಲನೆ ದೊರಕುವ ಸಂಭವವಿದೆ.

    Verbattle
    Verbattle
    Verbattle
    News Politics ಕಾಂಗ್ರೆಸ್ ಕೊಲೆ ಬೊಮ್ಮಾಯಿ
    Share. Facebook Twitter Pinterest LinkedIn Tumblr Email WhatsApp
    Previous Articleವಿಮಾನದಲ್ಲಿ ಬಾಂಬ್- ಬೆದರಿಕೆ ಪತ್ರ ಸೃಷ್ಟಿಸಿದ ಆತಂಕ..
    Next Article ಪೊಲೀಸ್ ಕಾನ್ಸ್‌ಟೇಬಲ್ ಅಟ್ಟಾಡಿಸಿ ಬಿಯರ್ ಬಾಟಲಿಗಳಿಂದ ಹೊಡೆದಾಟ
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on Alcohol ಇಲ್ಲದೆ ಪಾರ್ಟಿ ನಡೆಯುತ್ತಾ?
    • Xkauxi on ಬೆಂಗಳೂರಿನ ಈ ರಸ್ತೆಯಲ್ಲಿ ಸಂಚಾರ ನಿಷೇಧ
    • LarryCax on ಪಂಚಮಸಾಲಿ ಮೀಸಲಾತಿಗೆ ವಿರೋಧ.
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.