Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಂತೋಷ್ ಪ್ರಕರಣವನ್ನು ಹಳ್ಳ ಹಿಡಿಸಿದ ಪೊಲೀಸರು..
    ಸುದ್ದಿ

    ಸಂತೋಷ್ ಪ್ರಕರಣವನ್ನು ಹಳ್ಳ ಹಿಡಿಸಿದ ಪೊಲೀಸರು..

    vartha chakraBy vartha chakraJuly 21, 2022Updated:July 21, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು : ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣವನ್ನು ಕೊನೆಗೂ‌ ಪೊಲೀಸರು ಹಳ್ಳ ಹಿಡಿಸಿದ್ದಾರೆ. ಇದು ನಿರೀಕ್ಷಿತ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
    ಈ ಸಂಬಂಧ ಟ್ವೀಟ್ ಮಾಡಿರುವ ಅವರು ‌ಕೆಲವೇ ದಿನಗಳ‌‌ ಹಿಂದಷ್ಟೆ ಸಂತೋಷ್ ಪತ್ನಿ ತನಿಖೆ ನ್ಯಾಯಯುತವಾಗಿ ನಡೆಯುತ್ತಿಲ್ಲ, ಪ್ರಕರಣದ ಪ್ರಮುಖ ಆರೋಪಿ ಈಶ್ವರಪ್ಪರನ್ನು ಪೊಲೀಸರು ರಕ್ಷಿಸುತ್ತಿದ್ದಾರೆ ಎಂದು ರಾಜ್ಯಪಾಲರಿಗೆ ದೂರಿದ್ದರು. ಕೊನೆಗೂ ಅದು ನಿಜವಾಗಿದೆ ಎಂದಿದ್ದಾರೆ.
    ಆತ್ಮಹತ್ಯೆಗೂ ಮುನ್ನ ಸಂತೋಷ್, ತನ್ನ ಸಾವಿಗೆ ಈಶ್ವರಪ್ಪ ಕಾರಣ ಎಂದು ಡೆತ್ ನೋಟ್ ಬರೆದಿದ್ದರು. ಡೆತ್‌ನೋಟ್ ಪ್ರಬಲವಾದ ಸಾಕ್ಷಿ. ಆದರೆ ಉಡುಪಿ ಪೊಲೀಸರು ಈಶ್ವರಪ್ಪರ ವಿಚಾರಣೆಯನ್ನೇ ನಡೆಸಿಲ್ಲ.‌ ಪ್ರಕರಣದ ಪ್ರಮುಖ ಆರೋಪಿ ಈಶ್ವರಪ್ಪರನ್ನು ವಿಚಾರಣೆ ನಡೆಸದೆ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಇದು ನ್ಯಾಯಸಮ್ಮತ ತನಿಖೆಯೆ.? ಎಂದು ಪ್ರಶ್ನಿಸಿದ್ದಾರೆ.
    ಸರ್ಕಾರದ 40% ಕಮೀಷನ್ ದಂಧೆಗೆ ಅಮಾಯಕ ಸಂತೋಷ್ ಜೀವ ಕಳೆದುಕೊಂಡರು. ಆದರೆ ಸಂತೋಷ್ ಆತ್ಮಹತ್ಯೆಗೆ ಶರಣಾದ ತಕ್ಷಣವೇ ಸ್ವತಃ ಮುಖ್ಯಮಂತ್ರಿಗಳೇ ಈಶ್ವರಪ್ಪರಿಗೆ ಕ್ಲೀನ್‌ಚಿಟ್ ಕೊಟ್ಟು ಈಶ್ವರಪ್ಪರನ್ನು ರಕ್ಷಿಸುವ ಕೆಲಸ ಮಾಡಿದರು. ಒಬ್ಬ ಮುಖ್ಯಮಂತ್ರಿಯೇ ಆರೋಪಿಯ ರಕ್ಷಣೆಗೆ ನಿಂತ ಮೇಲೆ, ಪೊಲೀಸರು ಪಾರದರ್ಶಕ ತನಿಖೆ ನಡೆಸಲು ಸಾಧ್ಯವೇ.?ಎಂದಿದ್ದಾರೆ.
    ರಾಜ್ಯ ಸರ್ಕಾರದ ಅಧೀನದಲ್ಲಿರುವ ಪೊಲೀಸರಿಂದ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ನ್ಯಾಯ ಸಿಗಲು ಸಾಧ್ಯವಿಲ್ಲ. ಸರ್ಕಾರ ತನ್ನ ಮೇಲಿನ 40% ಕಮೀಷನ್ ಆರೋಪದಿಂದ ಪಾರಾಗಲು ಈ ಪ್ರಕರಣದಲ್ಲಿ ‌’ಬಿ ರಿಪೋರ್ಟ್’ ಸಲ್ಲಿಸುವಂತೆ ಮಾಡಿದೆ. ಇದು 40% ಸರ್ಕಾರ ಅಲ್ಲ ಎಂದು ಸಾಬೀತುಪಡಿಸುವ ಇರಾದೆಯಿದ್ದರೆ, ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ‌ ಒಪ್ಪಿಸಲಿ ಎಂದು ಆಗ್ರಹಿಸಿದ್ದಾರೆ.

    eshwarappa Politics ಈಶ್ವರಪ್ಪ ಉಡುಪಿ ಕಾನೂನು ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleದುರಂತ ಕಂಡ ಅಪಘಾತ
    Next Article ವಿವಿ ಬಾಗಿಲಿಗೆ ನಮಸ್ಕರಿಸಿ ಬಲಗಾಲಿಟ್ಟು ಒಳ ಬಂದ ನೂತನ ಕುಲಪತಿ
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • KennethSOYNC on ಪೊಲೀಸರ ಸಮಯಪ್ರಜ್ಞೆಯಿಂದ ದರ್ಶನ್ ಬಂಧನ.
    • Chriswot on ಸೈಬರ್ ಅಪರಾಧ ತಡೆಗೆ ಹೊಸ ಕ್ರಮ
    • KennethSOYNC on ಜನವರಿಯಿಂದ ಯುವನಿಧಿ ಆರಂಭ | Yuvanidhi
    Latest Kannada News

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮುರುಡೇಶ್ವರಕ್ಕೆ_ ಹೋಗ್ತಿದ್ದೀರಾ ಜೀನ್ಸ್ ಹಾಕ್ಲೇಬೇಡಿ! #murudeshwar #culturedress #karnataka #rules #shiva
    Subscribe