Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » E.D.ಗೆ ಪಂಗನಾಮ ಹಾಕಿದ ಐನಾತಿಗಳು..
    ಸುದ್ದಿ

    E.D.ಗೆ ಪಂಗನಾಮ ಹಾಕಿದ ಐನಾತಿಗಳು..

    vartha chakraBy vartha chakraJuly 12, 2022Updated:July 12, 2022No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜು.12- ಜಾರಿ ನಿರ್ದೇಶನಾಲಯ (ಇಡಿ)‌ ಜಪ್ತಿ ಮಾಡಿದ್ದ ಆಸ್ತಿಗೆ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡಿದ್ದ ದಂಪತಿ ಹಾಗು ಸಬ್ ರಿಜಿಸ್ಟ್ರಾರ್​ಗಳು ಸೇರಿ ಏಳು ಮಂದಿಯ ವಿರುದ್ಧ ಕೆ.ಆರ್.ಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    ಜಾರಿ ನಿರ್ದೇಶನಾಲಯ (ಇಡಿ) ಸಹಾಯಕ ನಿರ್ದೇಶಕ ರಿತೇಶ್​ಕುಮಾರ್ ಕೊಟ್ಟ ದೂರಿನ ಆಧಾರದ ಮೇಲೆ ವಂಚನೆ ಮಾಡಿದ ಜಾನ್ ಮೈಕಲ್, ಮಂಜುಳಾ ಮೈಕಲ್ ದಂಪತಿ, ಕೆ.ಆರ್.ಪುರ ಸಬ್ ರಿಜಿಸ್ಟ್ರಾರ್​ಗಳಾದ ಸಿ.ವಿ. ಸುಮನ, ಕೃಷ್ಣ ಎಸ್. ನಾಯಕ್ ಮತ್ತು ಆಸ್ತಿ ಖರೀದಿಸಿದ ಲಕ್ಷ್ಮೀ ಉಮಾಪತಿ, ಬಸಂತಿ ವಿರುದ್ಧ ಎಫ್​ಐಆರ್ ದಾಖಲಿಸಿ ಕೆ.ಆರ್.ಪುರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
    ಬಿಡಿಎ ಲೇಔಟ್​ನಲ್ಲಿ ಮುಖ್ಯಮಂತ್ರಿ ವಿವೇಚನೆಗೆ ಬಿಟ್ಟಿರುವ ಸಿಎ ನಿವೇಶನಗಳನ್ನು ಮಂಜೂರು ಮಾಡಿಸಿ ಕೊಡುವುದಾಗಿ ಹೇಳಿ ಪ್ರತ್ಯೇಕವಾಗಿ ಇಬ್ಬರ ಕಡೆಯಿಂದ ಜಾನ್ ಮೈಕಲ್ ದಂಪತಿ 1.45 ಕೋಟಿ ರೂ. ವಂಚನೆ ಮಾಡಿದ್ದರು. ಇದೇ ಹಣದಲ್ಲಿ ಕಾರು ಮತ್ತು ಭೂಮಿ ಖರೀದಿ ಮಾಡಿದ್ದರು. ಹಣ ಕಳೆದುಕೊಂಡವರು ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಿಸಿದ್ದರು.
    ಇದೇ ವೇಳೆ ಅಕ್ರಮ ಹಣಕಾಸು ವಹಿವಾಟು ಆರೋಪದ ಮೇಲೆ ಇಡಿ ಅಧಿಕಾರಿಗಳು, 2011ರಲ್ಲಿ ಕೇಸ್ ದಾಖಲು ಮಾಡಿಕೊಂಡು ಜಾನ್ ಮೈಕಲ್ ದಂಪತಿಗೆ ಸೇರಿದ ಬಿದರಹಳ್ಳಿ ಹೋಬಳಿ ಜಿಂಕೆ ತಿಮ್ಮನಹಳ್ಳಿ ಗ್ರಾಮದಲ್ಲಿನ ಸೈಟ್​ಗಳನ್ನು ಜಪ್ತಿ ಮಾಡಿದ್ದರು. ಜತೆಗೆ ಕೆ.ಆರ್.ಪುರ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಇಡಿ ಜಪ್ತಿ ಮಾಡಿರುವ ಕುರಿತು ತಡೆಯಾಜ್ಞೆ ನೀಡಿದ್ದರು.
    2018ರಲ್ಲಿ ಜಾನ್ ಮೈಕಲ್ ದಂಪತಿ, ಇಡಿ ನ್ಯಾಯಾಲಯ ಸೈಟ್​ಗಳ ಮಾರಾಟಕ್ಕೆ ನೀಡಿದ್ದ ತಡೆಯಾಜ್ಞೆ ತೆರವು ಮಾಡಿದೆ ಎಂಬ ನಕಲಿ ಆದೇಶ ಪ್ರತಿ ಸೃಷ್ಟಿ ಮಾಡಿದ್ದರು. ಈ ನಕಲಿ ಆದೇಶ ಪ್ರತಿಯನ್ನು ಕೆ.ಆರ್.ಪುರ ಸಬ್ ರಿಜಿಸ್ಟ್ರಾರ್ ಕಚೇರಿಗೆ (ಅಂದಿನ ಉಪ ನೋಂದಣಾಧಿಕಾರಿ ಕೃಷ್ಣ ಎಸ್. ನಾಯಕ್) ನೀಡಿ ಇಡಿ ನೀಡಿದ್ದ ತಡೆಯಾಜ್ಞೆಯನ್ನು ಸರ್ಕಾರಿ ದಾಖಲೆಯಿಂದ ತೆಗೆಸಿದ್ದರು. ಆಬಳಿಕ 2020ರಲ್ಲಿ ಜಾನ್ ಮೈಕಲ್ ದಂಪತಿ, ಇಡಿ ಜಪ್ತಿ ಮಾಡಿದ್ದ ಸ್ವತ್ತನ್ನು ಲಕ್ಷ್ಮೀ ಉಮಾಪತಿ ಮತ್ತು ಬಸಂತಿ ಎಂಬುವರಿಗೆ 55.41 ಲಕ್ಷ ರೂ.ಗೆ ಮಾರಾಟ ಮಾಡಿದ್ದಾರೆ. ಈ ಕ್ರಯ ಪತ್ರವನ್ನು ಕೆ.ಆರ್.ಪುರ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ (ಉಪ ನೋಂದಣಾಧಿಕಾರಿ ಸಿ.ವಿ. ಸುಮನ) ನಡೆದಿದೆ. ಮೈಕಲ್ ದಂಪತಿ ವಂಚನೆಗೆ ಸಬ್ ರಿಜಿಸ್ಟ್ರಾರ್​ಗಳು ಮತ್ತು ಖರೀದಿದಾರರು ಒಳಸಂಚು ರೂಪಿಸಿ ಜಪ್ತಿ ಮಾಡಿರುವ ಆಸ್ತಿಯನ್ನು ಮಾರಾಟ ಮಾಡಲಾಗಿದೆ ಎಂದು ದೂರು ನೀಡಿದ್ದಾರೆ. ಇದರ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
    ಜಾಮೀನು ಅರ್ಜಿ ವಜಾ:
    ಕೆ.ಆರ್.ಪುರ ಠಾಣೆಯಲ್ಲಿ ಎಫ್​ಐಆರ್ ಆಗಿರುವ ವಿಷಯ ತಿಳಿದು ಸಬ್ ರಿಜಿಸ್ಟ್ರಾರ್​ಗಳಾದ ಕೃಷ್ಣ ನಾಯಕ್ ಮತ್ತು ಸುಮನ, ನಿರೀಕ್ಷಣಾ ಜಾಮೀನು ಕೋರಿ 55ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ ನ್ಯಾಯಾಲಯದ ಮೋರೆ ಹೋಗಿದ್ದರು. ಜಾಮೀನು ನಿರಾಕರಿಸಿ ನ್ಯಾಯಾಲಯ ಅರ್ಜಿ ವಜಾ ಮಾಡಿದೆ.

    Government
    Share. Facebook Twitter Pinterest LinkedIn Tumblr Email WhatsApp
    Previous Articleತಿರುಪತಿಯಲ್ಲಿ ರಾಜ್ಯದ ಯಾತ್ರಿಕರಿಗೆ 236 ಕೋಟಿ ಯೋಜನೆ
    Next Article ಭಾರೀ ಅಲೆಗಳ ಅಬ್ಬರ ತೀವ್ರಗೊಂಡ ಕಡಲ್ಕೊರೆತ
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • j3exn on ಸ್ನೇಹಿತೆಯ ಮನೆಯಲ್ಲಿ ಚಿನ್ನ ಕದ್ದ ಸಿನಿಮಾ ನಟಿ | Soumya Shetty
    • EdwardNor on ವನ, ವನ್ಯಜೀವಿ ಸಂರಕ್ಷಣೆಗೆ ನಾವೀನ್ಯ ತಂತ್ರಜ್ಞಾನ ಬಳಕೆ :ಈಶ್ವರ ಖಂಡ್ರೆ | Eshwar Khandre
    • x5lka on ಉತ್ತರಾದಿ ಮಠದ ವಾದಕ್ಕೆ ಪುರಸ್ಕಾರ
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe