Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕನ್ನಡದ ಪತ್ರಿಕೋದ್ಯಮಕ್ಕೆ ಉತ್ತಮ ಭವಿಷ್ಯವಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
    ಸುದ್ದಿ

    ಕನ್ನಡದ ಪತ್ರಿಕೋದ್ಯಮಕ್ಕೆ ಉತ್ತಮ ಭವಿಷ್ಯವಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

    vartha chakraBy vartha chakraJuly 1, 2022Updated:July 1, 2022No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಕನ್ನಡ ಪತ್ರಿಕೋದ್ಯಮದಲ್ಲಿ ಪತ್ರಕರ್ತರ ಕೊಡುಗೆ ಬಹಳ ದೊಡ್ಡದಿದೆ. ಭಾಷೆ, ಸಾಹಿತ್ಯ, ನಾಡಿನ ಅಭಿವೃದ್ಧಿಗೆ, ಜನಜೀವನದ ಗುಣಮಟ್ಟವನ್ನು ಹೆಚ್ಚಿಸಲು, ಕರ್ನಾಟಕವನ್ನು ಪ್ರಗತಿಶೀಲ ರಾಜ್ಯವನ್ನಾಗಿ ಬಿಂಬಿಸಲು, ಸಮಾಜದಲ್ಲಿ ಸಾಮರಸ್ಯ ಮೂಡಿಸಲು ಮತ್ತು ಮೌಲ್ಯಾಧಾರಿತವಾದ ವಿಚಾರಗಳಿಗೆ ಶಕ್ತಿಯನ್ನು ತುಂಬಲು ಪತ್ರಕರ್ತರು ಅದ್ಭುತ ಕೆಲಸವನ್ನು ಮಾಡಿದ್ದಾರೆ. ಸಂಪಾದಕೀಯಗಳು ಅತ್ಯಂತ ಮಹತ್ವದ್ದಿರುತ್ತಿತ್ತು, ಅದ್ಭುತ ವಿಶ್ಲೇಷಣೆಗಳಿರುತ್ತಿದ್ದವು. ಸ್ವಾತಂತ್ರ್ಯಾ ನಂತರ ಕರ್ನಾಟಕದಲ್ಲಿ ಪ್ರಜಾವಾಣಿ, ಸಂಯುಕ್ತ ಕರ್ನಾಟಕ, ಕನ್ನಡ ಪ್ರಭದ ಸಂಗ್ರಹಕ್ಕೆ ಹೋದರೆ ಅದ್ಭುತವಾದ ಲೇಖನಗಳನ್ನು ಕಾಣಬಹುದು. ಅಂದಿನ ಚಿತ್ರಣ ನಮ್ಮ ಮುಂದೆ ಬರುತ್ತದೆ. ಆಧುನಿಕ ಕಾಲದಲ್ಲಿ ಮಕ್ಕಳು, ಮಹಿಳೆಯರಿಗೆ ವಿವಿಧ ಪುರವಣಿಗಳನ್ನು ಹೊರತಂದ ವಿಜಯಕರ್ನಾಟಕ, ವಿಜಯವಾಣಿ ಮುಂತಾದ ಪತ್ರಿಕೆಗಳು ತಮ್ಮದೇ ಪಾತ್ರವನ್ನು ವಹಿಸಿದೆ. ಎಲೆಕ್ಟ್ರಾನಿಕ್ ಮಾಧ್ಯಮ ಬಹಳ ಪರಿಣಾಮಕಾರಿಯಾಗಿ ತನ್ನ ಕೆಲಸವನ್ನು ಮಾಡುತ್ತಿದೆ ಎಂದರು.

    ಟೀಕೆಗಳಿಂದ ಸುಧಾರಣೆ ಸಾಧ್ಯ
    ಸುದ್ದಿಯನ್ನು ಯಾವ ರೀತಿ ಕೊಡುತ್ತೇವೆ ಎನ್ನುವುದರ ಮೇಲೆ ಮಾಧ್ಯಮಗಳು ಕೆಲಸ ಮಾಡುತ್ತೇವೆ. ನಮ್ಮ ಭಾಷೆಯ ಮೇಲೆ ನಮಗೆ ಹಿಡಿತವಿಲ್ಲದಿದ್ದರೆ, ಅವರಿಂದ ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಟೀಕೆಯನ್ನು ಸುಂದರವಾಗಿ ಮಾಡಬಹುದು. ಕೂಗಾಡಿದರೆ, ಕೆಟ್ಟ ಶಬ್ಧಗಳನ್ನು ಬಳಕೆ ಮಾಡಿದರೆ ಮಾತ್ರ ಟೀಕೆ ಎಂಬ ಭಾವನೆ ಮೂಡಿದೆ. ಟೀಕೆಯನ್ನು ಮೊನಚಾಗಿ, ಪರಿಣಾಮಕಾರಿಯಾಗಿ ಒಳ್ಳೆಯ ಮಾತುಗಳಿಂದ ಮಾಡಬಹುದು. ಅವೆಲ್ಲ ನಮ್ಮ ಹಿರಿಯ ರಾಜಕಾರಣಿಗಳು ಮತ್ತು ಹಿರಿಯ ಪತ್ರಕರ್ತರಿಂದ ಕಲಿಯಬೇಕಾಗಿದೆ.

    ತಂತ್ರಜ್ಞಾನದಿಂದ ಅಭಿವೃದ್ಧಿಗೊಂಡ ಪತ್ರಿಕೋದ್ಯಮ :

    ಪತ್ರಕರ್ತರ ವೃತ್ತಿ ರೋಚಕವಾಗಿರುತ್ತದೆ. ಪತ್ರಕರ್ತರು ತಮ್ಮ ವರದಿಗಾರಿಕೆಯನ್ನು ತಮ್ಮದೇ ಆದ ಛಾಪನ್ನು ಮೂಡಿಸುತ್ತಾರೆ. ಈಗ ಸುದ್ದಿ ನಿರಂತರವಾಗಿ ಪ್ರಸಾರವಾಗುತ್ತಲೇ ಇರುತ್ತದೆ. ಆಧುನಿಕ ತಂತ್ರಜ್ಞಾನದಿಂದ ಪತ್ರಿಕೋದ್ಯಮದಲ್ಲಿ ಬಹಳಷ್ಟು ಬದಲಾವಣೆಯನ್ನು ಕಂಡಿದೆ. ‘ನಮ್ಮಲ್ಲೇ ಮೊದಲು’ ಎನ್ನುವ ಸ್ಪರ್ಧೆ ಈಗ ಹೆಚ್ಚಾಗಿದೆ ಎಂದರು. ನಾನು 4-5 ಮುಖ್ಯಮಂತ್ರಿಗಳ ಹತ್ತಿರ ಕೆಲಸ ಮಾಡಿದ್ದೇನೆ. ಬೆಳಿಗ್ಗೆ ಗುಪ್ತಚರ ವಿಭಾಗದವರು ಹೇಳುವ ಮಾಹಿತಿ ಕೇಳಬೇಕಿತ್ತು. ಆದರೆ ಈಗ ವಿದ್ಯುನ್ಮಾನ ಮಾಧ್ಯಮಗಳ ಮೂಲಕ ಎಲ್ಲ ಬಲುಬೇಗ ಮಾಹಿತಿಗಳು ದೊರೆಯುತ್ತಿವೆ. ತ್ವರಿತವಾಗಿ ಸಿಗುವ ಇಂತಹ ಮಾಹಿತಿಗಳಿಂದ ಆಡಳಿತ ನಡೆಸಲು ಸಹಾಯವಾಗುತ್ತದೆ. ಯಾವುದಾದರೂ ತುರ್ತು ಪರಿಸ್ಥಿತಿಯಲ್ಲಿ ಕ್ಷಿಪ್ರ ಕ್ರಮಗಳನ್ನು ತೆಗೆದುಕೊಳ್ಳಬೇಕಾದರೆ ಮೊದಲು ಅಲ್ಲಿನ ಮಾಹಿತಿ, ವರದಿ ನಮಗೆ ಸಿಗಬೇಕು. ಈ ನಿಟ್ಟಿನಲ್ಲಿ ಪತ್ರಿಕೋದ್ಯಮದಲ್ಲಿ ತಂತ್ರಜ್ಞಾನ ಒಳ್ಳೆಯದನ್ನೇ ಮಾಡಿದೆ ಎಂದರು.

    ಅಪರಾಧ ವರದಿಗಾರಿಕೆಯಲ್ಲಿ ಸೂಕ್ಷ್ಮತೆ ಇರಬೇಕು:

    ಅಪರಾಧ ವರದಿಗಳು ಯಾರನ್ನು ಗುರಿಯಾಗಿಸಿ ಮಾಡುತ್ತಿರಿ, ಏಕೆಂದರೆ ಟಿವಿ ಕಾರ್ಯಕ್ರಮಗಳನ್ನು ಮಹಿಳೆಯರು, ಮಕ್ಕಳು, ಹಿರಿಯರೂ ವೀಕ್ಷಿಸುತ್ತಾರೆ. ಆದ್ದರಿಂದ ನಿಮ್ಮ ವರದಿಗಳು ವೀಕ್ಷಕರ ಮೇಲೆ ಮಾಡುತ್ತಿರುವ ಪರಿಣಾಮದ ಬಗ್ಗೆ ಚಿಂತನೆ ಅಗತ್ಯ. ಅಪರಾಧ ವರದಿಗಾರಿಕೆಯಲ್ಲಿ ಕ್ರೈಂ ನ್ನು ಎಷ್ಟು ಬಿಂಬಿಸಬೇಕು, ಹೇಗೆ ಬಿಂಬಿಸಬೇಕು ಎಂಬ ಸೂಕ್ಷ್ಮತೆ ಇರಬೇಕು ಎಂದು ಮುಖ್ಯಮಂತ್ರಿಗಳು ಅಭಿಪ್ರಾಯ ಪಟ್ಟರು.

    ಸರ್ಕಾರದ ಮತ್ತು ಮಾಧ್ಯಮಗಳದು ಅವಿನಾಭಾವ ಸಂಬಂಧ. ಸರ್ಕಾರದ ವಿಚಾರಗಳು ಜನರಿಗೆ ಮಾಧ್ಯಮಗಳ ಮೂಲಕವೇ ತಲುಪಲು ಸಾಧ್ಯ. ಬೆಳಗಿನ ಚಹಾದೊಂದಿಗೆ ಮಾಧ್ಯಮಗಳ ಸುದ್ದಿ ಬೇಕೇಬೇಕು. ರಾಜಕೀಯ ಸುದ್ದಿಗಳಿಲ್ಲದೇ ಮಾಧ್ಯಮಗಳಿಲ್ಲ ಎಂದು ಮುಖ್ಯಮಂತ್ರಿಗಳು ನುಡಿದರು.

    Government ರಾಜಕೀಯ ಸಾಹಿತ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಫೇಸ್‌ಬುಕ್‌ನಲ್ಲಿ ಆತ್ಮಹತ್ಯೆ ಫೋಟೋ ಹಾಕಿ ಬೇಜವಾಬ್ದಾರಿ ಮೆರೆದ ಸಂಸದ ತೇಜಸ್ವಿ ಸೂರ್ಯ
    Next Article ಬೈರಾಗಿ-ಹುಲಿ ಶಿವಪ್ಪನ ಕಥೆ ಹೆಂಗಿದೆ ಗೊತ್ತಾ?
    vartha chakra
    • Website

    Related Posts

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    June 25, 2025

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    June 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    June 25, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RaymondCoods on November 19ಕ್ಕೆ Air India ದಲ್ಲಿ ಪ್ರಯಾಣಿಸಬಾರದಂತೆ
    • 1nbnr on ಅದಾನಿ ಹಗರಣಕ್ಕೆ ಸಂಸತ್ ಕಲಾಪ ಬಲಿ
    • 80bnq on ಕುನೊದಲ್ಲಿ ಹೆಣ್ಣು ಚಿರತೆ ಸಾವು
    Latest Kannada News

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    June 25, 2025

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    June 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    June 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ರೀಲ್ಸ್_ನಿಂದ ಯುವತಿ ದುರಂತ ಅಂತ್ಯ #streetphotography #upload #lovefailure #trend #trending #explore
    Subscribe