Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಕ್ರಾಂತ್ ರೋಣದ ಬಗ್ಗೆ ಟೀಕೆಗಳ ಸುರಿಮಳೆ
    ಸುದ್ದಿ

    ವಿಕ್ರಾಂತ್ ರೋಣದ ಬಗ್ಗೆ ಟೀಕೆಗಳ ಸುರಿಮಳೆ

    vartha chakraBy vartha chakraJuly 30, 2022Updated:July 30, 2022No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬಹಳ ನಿರೀಕ್ಷೆಯೊಂದಿಗೆ ಬಿಡುಗಡೆಯಾದ ಸುದೀಪ್ ನಾಯಕತ್ವದ ವಿಕ್ರಾಂತ್ ರೋಣ ಸಿನೆಮ ಒಂದು ರೀತಿಯಲ್ಲಿ ಯಶ್ ಸಾರಥ್ಯದ ಕೆಜಿಎಫ್ ಸಿನೆಮಕ್ಕೆ ಸೆಡ್ಡು ಹೊಡೆಯಲೇ ಬರುತ್ತಿದೆ ಎನ್ನುವಂತೆ ಬಿಂಬಿತವಾಗಿತ್ತು. ದುಬೈನ ಬುರ್ಜ್ ಖಲೀಫಾದಲ್ಲಿ ನಡೆದ ಪ್ರಚಾರ ಪ್ರಸಂಗದಿಂದ ಹಿಡಿದು ಹಾಡುಗಳ ಬಿಡುಗಡೆಯ ತನಕ ವಿಕ್ರಾಂತ್ ರೋಣ ಒಂದು ಅದ್ಬುತ ಸಿನೆಮವಾಗಿ ಹೊರಬರಲಿದೆ ಎಂಬಂತಹ ಮಾತು ಎಲ್ಲ ಕಡೆ ಕೇಳಿ ಬರುತ್ತಿತ್ತು. ಸಿನೆಮದ ಬಗ್ಗೆ ಅನೇಕ ಕುತೂಹಲಗಳಿದ್ದರೂ, ಈ ಸಿನೆಮ ಏನು? ಯಾವುದರ ಬಗ್ಗೆ? ಇದರ ಕಥಾಹಂದರವೇನು? ಎನ್ನುವ ಪ್ರಶ್ನೆಗಳಿದ್ದವು. ಅಚಾನಕ್ ಆಗಿ ವಿಪರೀತ ಯಶಸ್ಸು ಕಂಡ ರಂಗಿತರಂಗ ಸಿನೆಮದ ನಿರ್ದೇಶಕ ಅನೂಪ್ ಭಂಡಾರಿ ಇನ್ನೊಂದು ತರದ ಸಿನಿಮಿಯ ಮ್ಯಾಜಿಕ್ ಮಾಡಿ ಬಿಡುತ್ತಾರೆ ಎಂಬ ನಿರೀಕ್ಷೆಯೂ ಇತ್ತು. ಆದರೆ, ಶುಕ್ರವಾರ ಬಿಡುಗಡೆಯಾದ ವಿಕ್ರಾಂತ್ ರೋಣ ಸುದೀಪ್ ಅಭಿಮಾನಿಗಳನ್ನೇ ಆತಂಕಕ್ಕೆ ದೂಡಿಬಿಟ್ಟಿದೆ. ಈ ಸಿನೆಮಾದಿಂದ ಸ್ಟಾರ್ ವ್ಯಾಲ್ಯುಗೆ ಧಕ್ಕೆ ಆಗಿರುವುದು ಖಂಡಿತ ಎಂದು ಅನೇಕ ಮಂದಿ ಹೇಳುತ್ತಿದ್ದಾರೆ. ಏನೋ ಅಬ್ಬರಿಸುವ ಸಿನೆಮ ಮಾಡಲು ಹೋಗಿ ಮುಗ್ಗರಿಸಿದ ಹಾಗೆ ಕಂಡು ಬರುತ್ತಿದೆ ಎಂದು ಸಿನೆಮ ವಿಶ್ಲೇಷಕರು ಹೇಳುತ್ತಿದ್ದಾರೆ. ನಾಯಕ ನಾಯಕಿಗೆ ಹೊಂದಾಣಿಕೆಯೇ ಇಲ್ಲ, ಕತೆಗೂ ನಿರೂಪಣೆಗೂ ಸಂಬಂಧವೇ ಇಲ್ಲ ಮತ್ತು ಹಾಗೆ ಹೇಳಬೇಕೆಂದರೆ ಈ ಸಿನೆಮ ರಂಗಿತರಂಗದ ಪುನರಾವರ್ತನೆ ಎಂದು ಹೇಳಲಾಗುತ್ತಿದೆ.

    ಸುದೀಪ್ ನಟನಾ ಕೌಶಲ್ಯ ಮೆಚ್ಚುವವರು ಈ ಸಿನೆಮವನ್ನು ಒಂದು ಮಟ್ಟದ ತನಕ ಸಹಿಸಿಕೊಳ್ಳಬಹುದು. ಇಲ್ಲದಿದ್ದರೆ, ಇದು ಹಣ ಪೋಲು ಮಾಡಲೆಂದೇ ನಿರ್ಮಾಣವಾದ ಸಿನೆಮ ಎಂದು ಕೆಲವರು ದೂಷಿಸುತ್ತಿದ್ದಾರೆ. ಈ ಸಿನೆಮದ ಬಗ್ಗೆ ಕೆಟ್ಟ ವಿಮರ್ಶೆ ಮಾಡುವವರು ಸುದೀಪ್ ವಿರೋಧಿಯೆಂದೇ ಬಿಂಬಿತವಾಗಿರುವ ದರ್ಶನ್ ಅಭಿಮಾನಗಳು ಎಂಬ ಆರೋಪವೂ ಕೇಳಿಬರುತ್ತಿದೆ. ಒಳ್ಳೆಯ ಅಭಿನಯಕ್ಕೆ ಹೆಸರಾದ ಸುದೀಪ್ ಇಂಥ ಸಿನೆಮವನ್ನು ಯಾತಕ್ಕಾಗಿ ಒಪ್ಪಿಕೊಂಡರು ಎನ್ನುವ ಪ್ರಶ್ನೆಯೂ ಎದ್ದಿದೆ. ವಿಕ್ರಾಂತ್ ರೋಣ ಅನೇಕ ಭಾಷೆಗಳಲ್ಲಿ ಬಿಡುಗಡೆಯಾಗಿದ್ದು, ಈ ಸಿನೆಮದ ಹಿಂದಿ ಅವತರಣಿಕೆಯನ್ನು ವಿಪರೀತವಾಗಿ ಗೇಲಿ ಮಾಡಲಾಗಿದೆ. ಈ ಸಿನೆಮಾದ ಹಿಂದಿ ಭಾಷೆ ಮರಾಠಿಯವರು ಮಾತನಾಡಿದ ಶೈಲಿಯಲ್ಲಿದೆ ಮತ್ತು ಹಿಂದಿಯಲ್ಲಿ ಮಾತನಾಡಿ ಹಿಂದಿಯ ನೇಟಿವಿಟಿಗೆ ಸಂಬಂಧವೇ ಇಲ್ಲದಂತೆ ಸನ್ನಿವೇಶಗಳನ್ನು ತೋರಿಸಲಾಗಿದೆ ಎಂದು ಹೇಳಲಾಗಿದೆ. ಒಂದಿಷ್ಟೂ ಮನರಂಜನೆ ಇಲ್ಲದೇ ಬರೀ ಆಡಂಬರವೇ ಹೆಚ್ಚಿದೆ. ಜಾಕ್ವೆಲಿನ್ ಫೆರ್ನಾಂಡೀಸ್ ಅವರ ಐಟಂ ಸಾಂಗ್ ಕೂಡ ವ್ಯಾಯಾಮದ ರೀತಿಯಲ್ಲಿದೆ ಎಂದು ಆರೋಪ ಮಾಡಲಾಗಿದೆ. ಈ ಮಟ್ಟಕ್ಕೆ ಕೆಟ್ಟ ವಿಮರ್ಶೆಗೆ ಪಾತ್ರವಾದ ವಿಕ್ರಾಂತ್ ರೋಣ ಸಿನೆಮ ಅನೇಕ ಪತ್ರಿಕೆಗಳಲ್ಲಿ 1.5ಸ್ಟಾರ್ ತನಕ ಕೆಳಮಟ್ಟದ ಮೌಲ್ಯಮಾಪನಕ್ಕೆ ಗುರಿಯಾಗಿದೆ.

    ಈ ರೀತಿಯ ವಿಮರ್ಶೆ ಮತ್ತು ಸಾರ್ವಜನಿಕ ಅಭಿಪ್ರಾಯಗಳು ಹೇಗೆ ಸುದೀಪ್ ಅವರ ಸಿನೆಮ ಭವಿಷ್ಯಕ್ಕೆ ಪ್ರಭಾವ ಬೀರಬಹುದು ಎಂಬ ಪ್ರಶ್ನೆಗಳು ಉದ್ಭವವಾಗಿದೆ. ಟೀಕೆಗಳನ್ನು ಅಷ್ಟೊಂದು ಸುಲಭವಾಗಿ ಸ್ವೀಕರಿಸದ ಸುದೀಪ್ ಇಷ್ಟೊಂದು ವ್ಯಾಪಕವಾಗಿ ಬಂದಿರುವ ಟೀಕೆಗಳಿಗೆ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.

    ವಿಶ್ಲೇಷಕ : ನಕ್ಷತ್ರಿಕ

    Entertainment News ಸಿನಿಮ ಸಿನೆಮ ಸುದೀಪ್
    Share. Facebook Twitter Pinterest LinkedIn Tumblr Email WhatsApp
    Previous Articleಈ ಮಗು ಯಾರಿಗೆ ಸೇರಿದ್ದು…?
    Next Article ಹಳೆ ದ್ವೇಷದ ಮಸಲತ್ತು
    vartha chakra
    • Website

    Related Posts

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • oxwvb on ನಷ್ಟದಲ್ಲಿದೆಯಾ ವಿ ಆರ್ ಎಲ್ ಸಂಸ್ಥೆ.
    • Bobbyglupe on ಮಹತ್ವ ಕಳೆದುಕೊಂಡ ಪಾದಯಾತ್ರೆ.
    • 74veq on ನಟ ದರ್ಶನ್ ಕೇಸ್- ತನಿಖೆ ಪೂರ್ಣ.
    Latest Kannada News

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe