Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೀದಿ ನಾಯಿಗಳ ಅನ್ನದಾತ
    Trending

    ಬೀದಿ ನಾಯಿಗಳ ಅನ್ನದಾತ

    vartha chakraBy vartha chakraJuly 18, 2022Updated:July 18, 2022No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಕಳೆದ 15 ವರ್ಷಗಳಿಂದ ಬೀದಿ ನಾಯಿಗಳ ಅನ್ನದಾತರಾಗಿ ದಾನಿಯೊಬ್ಬರು ಇದೀಗ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಪೇಪರ್ ಏಜೆಂಟ್ ಆಗಿಯೂ, ಜನಪ್ರತಿನಿಧಿಯೂ ಆಗಿದ್ದ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ರಾಜೇಶ್ ಬನ್ನೂರು ಇದೀಗ ನಾಯಿಗಳ ಆರೈಕೆಗಾಗಿ‌ ದಾನಿಗಳ ಸಹಾಯ ಯಾಚಿಸುತ್ತಿದ್ದಾರೆ. ಪ್ರತಿದಿನವೂ 150 ಕ್ಕೂ ಮಿಕ್ಕಿದ ನಾಯಿಗಳಿಗೆ ಆಹಾರ ಸೇರಿದಂತೆ ಆರೋಗ್ಯವನ್ನೂ ನೋಡಿಕೊಳ್ಳುತ್ತಿರುವ ಇವರು ದಿನವೊಂದಕ್ಕೆ ನಾಯಿಗಳಿಗಾಗಿ 1500 ರೂಪಾಯಿಗಳನ್ನು ವ್ಯಯಿಸಬೇಕಾದ ಅನಿವಾರ್ಯತೆಯಲ್ಲಿದ್ದಾರೆ. ನಾಯಿಗಳ ಸಂಕಷ್ಟ ತಾಳಲಾರದೆ ಅನ್ನ ನೀಡುವ ಕಾರ್ಯವನ್ನು ಆರಂಭಿಸಿರುವ ರಾಜೇಶ್ ಬನ್ನೂರು ಆಹಾರ ನೀಡುವ ಕೆಲಸವನ್ನು ನಿಲ್ಲಿಸಲು ತೀರ್ಮಾನಿಸಿದ್ದಾರೆ.

    ಸಾಕು ಪ್ರಾಣಿಗಳನ್ನು ಸಾಕುವ ಜನರ ನಿರ್ಲಕ್ಷ್ಯದಿಂದಾಗಿ ಬೀದಿಗೆ ಬೀಳುವ ನಾಯಿಗಳನ್ನು ಕಂಡು ಕಾಣದಂತೆಯೇ ಇರುವವರು ಹೆಚ್ಚು. ಆದರೆ ರಕ್ಷಿತ್ ಶೆಟ್ಟಿಯವರ ಚಾರ್ಲಿ 777 ಚಲನಚಿತ್ರ ತೆರೆಗೆ ಬಂದ ಬಳಿಕ ನಾಯಿಗಳ ಮೇಲಿನ ಕಾಳಜಿ ಕೊಂಚ ಹೆಚ್ಚಾಗಿದೆ ಎಂದರೆ ತಪ್ಪಾಗಲಾರದು. ಆದರೆ ಚಾರ್ಲಿ ಸಿನಿಮಾ ಬರುವ ಮೊದಲೇ ಅಂದರೆ ಸುಮಾರು 15 ವರ್ಷಗಳ ಹಿಂದೆಯೇ ಈ ಬೀದಿ ನಾಯಿಗಳನ್ನು ತಮ್ಮ ಮನೆಯ ಸದಸ್ಯರಂತೆ ಕಾಣುವ ಅಪರೂಪದ ಅನ್ನದಾತ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ರಾಜೇಶ್ ಬನ್ನೂರು. ಪೇಪರ್ ಏಜೆಂಟ್ ಆಗಿ ಕೆಲಸ ನಿರ್ವಹಿಸುತ್ತಿರುವ ರಾಜೇಶ್ ಬನ್ನೂರು ರಾಜಕೀಯದಲ್ಲೂ ತಮ್ಮನ್ನು ತೊಡಗಿಸಿಕೊಂಡವರು. ಪುತ್ತೂರು ಪುರಸಭೆ ಇರುವ ಸಮಯದಲ್ಲಿ ಹಲವು ಬಾರಿ ಪುರಸಭೆ ಸದಸ್ಯರಾಗಿ ಮತ್ತು ಒಂದು ಬಾರಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಇವರು ಸದ್ಯ ರಾಜಕೀಯದಿಂದ ಕೊಂಚ ದೂರ ಉಳಿದು ತನ್ನ ಪೇಪರ್ ಏಜೆಂಟ್ ಕೆಲಸ ನಿರ್ವಹಿಸುತ್ತಿರುವ ರಾಜೇಶ್ ಬನ್ನೂರಿಗೆ ಪುತ್ತೂರು ನಗರದಾದ್ಯಂತ ಪರಿಚಯಸ್ಥ ನಾಯಿಗಳಿವೆ. ಈ ಕಾರಣಕ್ಕಾಗಿಯೇ ರಾಜೇಶ್ ಬನ್ನೂರು ತಿರುಗಾಡಿದ ಕಡೆಗಳಲ್ಲೆಲ್ಲಾ ನಾಯಿಗಳ ದಂಡು ಇವರನ್ನು ಸುತ್ತುವರಿಯುತ್ತೆ. ಈ ರೀತಿಯಾದ ಪರಿಚಯ ನಾಯಿಗಳಿಗೆ ಆಹಾರ, ಆರೈಕೆ ನೀಡುವ ತನಕ ಬೆಳೆದಿದೆ. ಸುಮಾರು 15 ವರ್ಷಗಳಿಂದ ಬೆಳೆದು ಬಂದ ಈ ಸ್ನೇಹಾಚಾರವನ್ನು ಬಿಟ್ಟು ಬರಲಾರದಂತಹ ಸಂಕಷ್ಟದಲ್ಲಿ ರಾಜೇಶ್ ಇದೀಗ ಸಿಲುಕಿದ್ದಾರೆ.

    ಪುತ್ತೂರು ಪೇಟೆಯಾದ್ಯಂತ ಸುಮಾರು 200 ಕ್ಕೂ ಮಿಕ್ಕಿದ ನಾಯಿಗಳ ಅನ್ನದಾತರಾಗಿರುವ ರಾಜೇಶ್ ಬನ್ನೂರು ಈ ನಾಯಿಗಳ ಆರೈಕೆ, ಆಹಾರಕ್ಕಾಗಿ ದಿನವೊಂದಕ್ಕೆ 1000 ದಿಂದ 1500 ರೂಪಾಯಿಗಳನ್ನು ವ್ಯಯಿಸುತ್ತಿದ್ದಾರೆ. ಕೆಲವು ಪರಿಚಯಸ್ಥರು ರಾಜೇಶ್ ಬನ್ನೂರರ ಈ ಸೇವೆಗೆ ತಮ್ಮ ಕೈಯಲ್ಲಾದ ಮಟ್ಟಿಗೆ ಸಹಕಾರ,ಸಹಾಯವನ್ನೂ ನೀಡುತ್ತಿದ್ದಾರೆ. ಆದರೆ‌ ಹೆಚ್ಚಿನ ಪಾಲನ್ನು ರಾಜೇಶ್ ಬನ್ನೂರು ಸ್ವತಹ ಹೊತ್ತುಕೊಳ್ಳುವುದರಿಂದ ಇದೀಗ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ನಾಯಿಗಳಿಗೆ ಅನ್ನ ನೀಡುವುದನ್ನು ನಿಲ್ಲಿಸಬೇಕೆಂದು ಹಲವು ಬಾರಿ ನಿರ್ಧರಿಸಿದ್ದರೂ, ನಿರ್ಧಾರ ಮಾತ್ರ ಮುಂದೂಡಿಕೊಂಡೇ ಹೋಗಿದೆ. ಆದರೆ ಈ ಬಾರಿ ಮಾತ್ರ ನಿರ್ವಹಿಸಲಾರದ ಹಂತಕ್ಕೆ ತಲುಪಿರುವ ಕಾರಣ ಅನಿವಾರ್ಯವಾಗಿ ಸಮಾಜದ ಸಹಾಯಕ್ಕೆ ಕೈಯೊಡ್ಡಿದ್ದಾರೆ.

    bannur rajesh Trending viral ಆರೋಗ್ಯ ಚಲನಚಿತ್ರ ರಾಜಕೀಯ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleದರ ಹೆಚ್ಚಳದ ಹೊರೆ ಇಲ್ಲ : ಸಿಎಂ ಬೊಮ್ಮಾಯಿ
    Next Article PSI ಹಗರಣದಲ್ಲಿ ಇನ್ನೂ ದೊಡ್ಡ ದೊಡ್ಡ ತಿಮಿಂಗಿಲ ಇದ್ದಾವೆ..!
    vartha chakra
    • Website

    Related Posts

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    June 16, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Bobbyglupe on ಬಿಜೆಪಿಗೆ ಗುಡ್ ಬೈ ಹೇಳಲು ಸಜ್ಜಾದ ಸದಾನಂದ ಗೌಡ | Sadananda Gowda
    • Bobbyglupe on ಚುನಾವಣೆ ನಂತರ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ | DK Shivakumar
    • 16l3m on ವಿಷದ ಲಡ್ಡು ಕಳುಹಿಸಿದನು ಸಿಕ್ಕಿ ಬಿದ್ದ
    Latest Kannada News

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe