Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗೊಂದಲ, ಗೋಜಲಾದ ಜಾತಿಗಣತಿ‌ ವರದಿ ಸ್ವೀಕಾರ ವಿಚಾರ | Karnataka Caste Census
    ಸುದ್ದಿ

    ಗೊಂದಲ, ಗೋಜಲಾದ ಜಾತಿಗಣತಿ‌ ವರದಿ ಸ್ವೀಕಾರ ವಿಚಾರ | Karnataka Caste Census

    vartha chakraBy vartha chakraNovember 23, 2023No Comments3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು : ಜಾತಿ ಜನಗಣತಿಯ (Karnataka Caste Census) ವರದಿ ಸ್ವೀಕಾರದ ವಿಷಯ ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಸೃಷ್ಟಿಸಿದೆ.
    ವರದಿಯ ಮೂಲ ಪ್ರತಿ ಕಳೆದುಹೋಗಿದೆ ಎಂಬ ವರದಿ ಇದಕ್ಕೆ ಮತ್ತಷ್ಟು ತುಪ್ಪ ಸುರಿದಿದೆ.
    ಇದರ ನಡುವೆ ವಿವಾದಿತ ಕಾಂತರಾಜು ವರದಿ ಸ್ವೀಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತರಾತುರಿ ತೋರುತ್ತಿರುವುದು ಅನೇಕ ಅನುಮಾನಗಳನ್ನು ಹುಟ್ಟು ಹಾಕುತ್ತಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.

    ವರದಿಯ ಮೂಲಪ್ರತಿ ಕಾಣೆಯಾಗಿದೆ, ಅದಕ್ಕೆ ಕಾರ್ಯದರ್ಶಿ ಸಹಿ ಇಲ್ಲ, ಇದೊಂದು ಅವೈಜ್ಞಾನಿಕ ವರದಿ ಎಂದು ಅನೇಕ ಸಮುದಾಯಗಳು ಆರೋಪಿಸಿವೆ, ಸಚಿವ ಸಂಪುಟದಲ್ಲೇ ಸಹಮತ ಇಲ್ಲ. ಇಂತಹ ಸಂದರ್ಭದಲ್ಲಿ ವಿವಾದಿತ ವರದಿ ಪಡೆಯಲು ಆತುರ ಏಕೆ ಎಂದು ಅವರು ಪ್ರಶ್ನಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸರಕಾರದ ಕೋಟಿಗಟ್ಟಲೇ ಹಣ ಕೊಟ್ಟು ಸಿದ್ಧಪಡಿಸಿದ ವರದಿ ಕಳುವಾಗಲು ಯಾರು ಕಾರಣ? ಅದರ ಹೊಣೆ ಯಾರದ್ದು? ಕಳುವು ಪ್ರಕರಣದ ಬಗ್ಗೆ ಏಕೆ ತನಿಖೆ ನಡೆಸಲಿಲ್ಲ. ಮೂಲ ವರದಿ ಕಳುವಾಗಿದ್ದರೂ ಅದರ ದತ್ತಾಂಶ ಇದೆ ಎಂದು ಪರಿಷ್ಕೃತ ವರದಿ ಸಿದ್ಧಪಡಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
    ಹತ್ತು ವರ್ಷಗಳ ಹಿಂದಿನ ಜನಸಂಖ್ಯೆಗೂ, ಈಗಿನ ಜನಸಂಖ್ಯೆಗೂ ಸಾಕಷ್ಟು ವ್ಯತ್ಯಾಸ ಇದೆ. ಸಾರ್ವಜನಿಕರಿಂದಲೂ ತಮ್ಮ ಮನೆಗಳಿಗೆ ಸಮೀಕ್ಷೆ ನಡೆಸುವವರು ಬಂದಿರಲಿಲ್ಲ ಎಂದು ವ್ಯಾಪಕ ದೂರುಗಳು ಬಂದಿವೆ. ಇಷ್ಟಾದರೂ ವರದಿ ಸ್ವೀಕರಿಸುತ್ತೇನೆ ಎಂದು ಸಿದ್ದರಾಮಯ್ಯ ಅವರು ಆತುರ ತೋರುತ್ತಿರುವುದು ಜನರಲ್ಲಿ ಸಂಶಯವನ್ನು ಹುಟ್ಟು ಹಾಕಿದೆ ಎಂದರು.

    ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ನೀಡಬೇಕು ಎಂಬ ವಿಷಯದಲ್ಲಿ ನಮ್ಮ ಸಹಮತವಿದೆ. ಆದರೆ ಅವೈಜ್ಞಾನಿಕ, ವಿವಾದಿತ ವರದಿ ಆಧರಿಸಿ ಕ್ರಮಕ್ಕೆ ಮುಂದಾದರೆ ನಮ್ಮ ವಿರೋಧವಿದೆ.ಒಂದು ವೇಳೆ ಇವರಿಗೆ ನಿಜವಾಗಿಯೂ ಮೀಸಲು ನೀಡುವ ವಿಷಯದಲ್ಲಿ ಬದ್ಧತೆ ಇದ್ದರೆ ಪಾರದರ್ಶಕವಾಗಿ ಮರು ಸಮೀಕ್ಷೆ ನಡೆಸಲಿ. ವಿರೋಧ ವ್ಯಕ್ತಪಡಿಸಿರುವ ಸ್ವಾಮೀಜಿಗಳು, ಮುಖಂಡರನ್ನು ಕರೆದು ಅಭಿಪ್ರಾಯ ಕೇಳಲಿ ಎಂದು ಆಗ್ರಹಿಸಿದರು.

    ನಾಪತ್ತೆ ವಿಷಯ ಗೊತ್ತಿಲ್ಲ:
    ಈ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ಆಯೋಗದ ಮಾಜಿ ಅಧ್ಯಕ್ಷ ಕಾಂತರಾಜು ತಮ್ಮ ನೇತೃತ್ವದ ಆಯೋಗದ ವರದಿ ಸದಸ್ಯ ಕಾರ್ಯದರ್ಶಿ ಅವರ ಬಳಿ ಇದೆ. ಅದನ್ನು ಸದಸ್ಯ ಕಾರ್ಯದರ್ಶಿಯಾದರೂ ಸರ್ಕಾರಕ್ಕೆ ತಲುಪಿಸಬೇಕು ಅಥವಾ ಸರ್ಕಾರವೇ ಪಡೆದುಕೊಳ್ಳಬೇಕು. ಮೂಲ ಪ್ರತಿ ನಾಪತ್ತೆಯಾದ ಬಗ್ಗೆ ತಮಗೆ ಮಾಹಿತಿ ಇಲ್ಲ. ನಾವು ಅವಧಿ ಮುಗಿಯುವ ಮುನ್ನವೇ ಸದಸ್ಯ ಕಾರ್ಯದರ್ಶಿ ಅವರಿಗೆ ವರದಿ ನೀಡಿ ಬಂದಿದ್ದೇವೆ. ಒಳಗಿನ ಮಾಹಿತಿಗಳು ತಮಗೆ ಗೊತ್ತಿಲ್ಲ ಎಂದು ತಿಳಿಸಿದರು.
    ಸದಸ್ಯ ಕಾರ್ಯದರ್ಶಿ ಐಎಎಸ್ ಅಧಿಕಾರಿಯಾಗಿದ್ದು, ಆಯೋಗದ ಮುಖ್ಯಸ್ಥರಾಗಿದ್ದರು. ಸಮೀಕ್ಷೆಯ ಕಾರ್ಯತಂಡದ ಸದಸ್ಯರೂ ಆಗಿದ್ದರು. ಅಂತಿಮ ವರದಿಗೆ ಸದಸ್ಯ ಕಾರ್ಯದರ್ಶಿ ಅವರ ಸಹಿ ಇಲ್ಲ ಎಂಬುದು ಸತ್ಯ. ಆದರೆ, ಆಯೋಗದ ಕಾರ್ಯಕಾರಿ ಮಂಡಳಿ ಅಂತಿಮಗೊಂಡಿರುವ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕು ಎಂಬ ನಿರ್ಣಯ ಕೈಗೊಂಡಿತ್ತು. ಅದಕ್ಕೆ ಸದಸ್ಯ ಕಾರ್ಯದರ್ಶಿ ಸಹಿ ಹಾಕಿದ್ದರು ಎಂದು ಹೇಳಿದರು.

    ಸಮೀಕ್ಷೆ ನಡೆದು 8 ವರ್ಷಗಳಾಗಿದ್ದರೂ ಪ್ರಸ್ತುತ ಜಾರಿಗೊಳಿಸುವುದು ಸರಿಯಲ್ಲ ಎಂಬ ಆಕ್ಷೇಪಗಳು ಕೇಳಿ ಬರುತ್ತಿವೆ. ಸುಪ್ರೀಂಕೋರ್ಟ್‍ನ ತೀರ್ಪಿನ ಪ್ರಕಾರ 10 ವರ್ಷಗಳ ವರೆಗೂ ಯಾವುದೇ ಆಯೋಗದ ವರದಿಯನ್ನು ಜಾರಿಗೊಳಿಸುವ ಅವಕಾಶವಿದೆ. ಈ ಹಿನ್ನೆಲೆಯಲ್ಲಿ ತಮ್ಮ ನೇತೃತ್ವದಲ್ಲಿ ನಡೆದಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ ಜಾರಿಯಾಗಲು ಎಲ್ಲಾ ಅರ್ಹತೆಗಳನ್ನು ಹೊಂದಿದೆ ಎಂದು ತಿಳಿಸಿದರು.
    ವರದಿಯನ್ನು ಇನ್ನೂ ಯಾರೂ ನೋಡಿಲ್ಲ. ಅದಕ್ಕೂ ಮುನ್ನವೇ ಅದು ಅವೈಜ್ಞಾನಿಕ, ಹಳೆಯದು ಎಂಬೆಲ್ಲಾ ಅಭಿಪ್ರಾಯಗಳು ಅಪ್ರಸ್ತುತ.ತಳ ಹಾಗೂ ಅವಕಾಶ ವಂಚಿತ ಸಮುದಾಯಗಳಿಗೂ ಸಾಮಾಜಿಕ ನ್ಯಾಯ ಕಲ್ಪಿಸಬೇಕು ಎಂಬ ಉದ್ದೇಶದಿಂದ 2013ರಲ್ಲಿ ರಾಜ್ಯ ಸರ್ಕಾರ ಹಿಂದುಳಿದ ವರ್ಗಗಳ ಆಯೋಗದಿಂದ ಸಮೀಕ್ಷೆ ನಡೆಸಲು ನಿರ್ಧರಿಸಿತ್ತು. ಅದರಂತೆ ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕಲಾಗಿದೆ. 55 ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆದುಕೊಳ್ಳಲಾಗಿದೆ. ಇದನ್ನು ಜಾತಿ ಜನಗಣತಿ ಎಂದು ಬಿಂಬಿಸುವುದು ಸರಿಯಲ್ಲ ಎಂದು ಪ್ರತಿಪಾದಿಸಿದರು.

    ಸಿಎಂ ಸ್ಪಷ್ಟನೆ:
    ಎಲ್ಲಾ ಗೊಂದಲಗಳ ಕುರಿತು ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ,ಜಾತಿ ಜನಗಣತಿ ಬೇಡ ಎನ್ನುವವರಿಗೂ ಅದರಲ್ಲೇನಿದೆ ಎಂದು ತಿಳಿದಿಲ್ಲ ಊಹೆಗಳ ಮೇಲೆ ಮತನಾಡುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಹೇಳಿದರು
    ವರದಿ ಸಲ್ಲಿಸುವ ಮುನ್ನವೇ ಚರ್ಚೆ ಶುರುವಾಗಿದೆ. ವರದಿಯಲ್ಲೇ ಏನಿದೆ ಎಂದು ಅದನ್ನು ಬೇಡ ಎನ್ನುವವರಿಗೂ ಗೊತ್ತಿಲ್ಲ ಮೂಲ ವರದಿ ಕಳೆದಿದೆ ಎಂದು ಹಾಲಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಯಪ್ರಕಾಶ್ ಹೇಳಿಕೆ ಬಗ್ಗೆ ಮಾತನಾಡಿ, ಅವರನ್ನು ಕರೆದು ಮಾತನಾಡುತ್ತೇನೆ ಎಂದರು.

    caste census CEN Karnataka Karnataka Caste Census News Politics ಕಲೆ ನ್ಯಾಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಸಮಾಧಾನಗೊಂಡ ರಮೇಶ್ ಜಾರಕಿಹೊಳಿ | Ramesh Jarkiholi
    Next Article ಬೆಂಗಳೂರಿನ ಚಿರತೆ ಪಡೆ ಕಾರ್ಯಾರಂಭ | Leopard Task Force
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MMO Boosting Services on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • canada pharmaceutical online ordering on ಕರ್ನಾಟಕಕ್ಕೆ ಸಿದ್ದರಾಮಯ್ಯ ಹೆಸರಿಡಬೇಕಂತ
    • FobertCaR on ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    CSK ವಿರುದ್ಧ ಸಿಡಿದೆದ್ದ ಜಡೇಜಾ #varthachakra #csk #jadeja #dhoni #sanjusamson #viralvideo #facts #ipl
    Subscribe