Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯಾರನ್ನು ಮೆಚ್ಚಿಸುವುದಕ್ಕೆ ಈ ರೀತಿ ವರ್ತಿಸುತ್ತಿದ್ದೀರಿ?-ಫಾಝಿಲ್ ಮನೆಗೆ ಭೇಟಿ ನೀಡದ ಸಿಎಂ ವಿರುದ್ಧ HDK ಕಿಡಿ
    ಸುದ್ದಿ

    ಯಾರನ್ನು ಮೆಚ್ಚಿಸುವುದಕ್ಕೆ ಈ ರೀತಿ ವರ್ತಿಸುತ್ತಿದ್ದೀರಿ?-ಫಾಝಿಲ್ ಮನೆಗೆ ಭೇಟಿ ನೀಡದ ಸಿಎಂ ವಿರುದ್ಧ HDK ಕಿಡಿ

    vartha chakraBy vartha chakraAugust 1, 2022Updated:August 1, 2022No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮಂಗಳೂರು: ಎರಡ್ಮೂರು ವರ್ಷದಿಂದ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸಕ್ಕೆ ಬಂದಿಲ್ಲ. ಕರಾವಳಿಯಲ್ಲಿ ನಡೆದ ಹತ್ಯೆ ವಿಷಯದಲ್ಲಿ ಚರ್ಚೆ ಮಾಡೋಕೆ ಬರುತ್ತೇನೆಂದು ಅಂದುಕೊಂಡಿರಲಿಲ್ಲ. ಇದು ನನಗೆ ನೋವು ತಂದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್​ಡಿ.ಕುಮಾರಸ್ವಾಮಿ ಹೇಳಿದರು.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋಮು ಸೌಹಾರ್ದತೆಗೆ ಧಕ್ಕೆ ತರುವ ಕೃತ್ಯ ಹಲವು ಸಮಯದಿಂದ ನಡೆಯುತ್ತಿದೆ. ಸಣ್ಣಪುಟ್ಟ ಪ್ರಕರಣಗಳನ್ನು ಇಲ್ಲಿ ದೊಡ್ಡದಾಗಿ ಮಾಡಲಾಗುತ್ತೆ. ಹಿಂದೂ-ಮುಸ್ಲಿಂ ಸಮಾಜದ ನಡುವೆ ಕಂದಕ ಸೃಷ್ಟಿ ಮಾಡಿದ್ದಾರೆ. ಬೇರೆ ರಾಜಕಾರಣಿಗಳ ತರ ನಾನು ಫ್ಲೈಯಿಂಗ್ ವಿಸಿಟ್ ಮಾಡಿಲ್ಲ. ಮೂರು ಕುಟುಂಬಗಳಿಂದ ಮಾಹಿತಿ ಪಡೆದು ಬಂದಿದ್ದೇನೆ. ಹತ್ಯೆ ನಡೆಸಿದವರಿಗೆ ಕಠಿಣ ಶಿಕ್ಷೆಯಾಗಬೇಕು ಎಂಬುದು ಮೂರು ಕುಟುಂಬದ ಒಕ್ಕೊರಲಿನ ಆಗ್ರಹವಾಗಿದೆ. ಯಾವ ರಾಜಕಾರಣಿ, ಮಂತ್ರಿ, ಸಂಘಟನೆ ಮುಂಚೂಣಿಯಲ್ಲಿದ್ದ ನಾಯಕರ ಹತ್ಯೆಯಾಗಿಲ್ಲ. ಸಂಘಟನೆ ಹೆಸರಲ್ಲಿ ಯುವಕರನ್ನು ದುರುಪಯೋಗ ಮಾಡಲಾಗುತ್ತಿದೆ.

    ಎರಡು ರಾಷ್ಟ್ರೀಯ ಪಕ್ಷಗಳ ಶಾಸಕರನ್ನು ಇಲ್ಲಿ ಹಲವು ವರ್ಷಗಳಿಂದ ಆಯ್ಕೆ ಮಾಡಿದ್ದಾರೆ. ಕಾನೂನಿನ ವೈಫಲ್ಯದ ಬಗ್ಗೆ ಈಗ ಕಾಂಗ್ರೆಸ್ ಚರ್ಚೆ ಮಾಡುತ್ತಿದೆ. ನಿಮ್ಮ ಸರ್ಕಾರ ಇದ್ದಾಗ ಕರಾವಳಿಗೆ ಕೊಟ್ಟ ಕೊಡುಗೆ ಏನು? ಇಲ್ಲಿನ ಜನರಿಗೆ ಯಾವ ರಕ್ಷಣೆ ನೀಡಿದ್ದೀರಿ. ಬಿಜೆಪಿಯ ಮಂತ್ರಿಗಳು ಯಾವ ಕೊಡುಗೆ ನೀಡಿದ್ದೀರಿ? ಮೂರ್ನಾಲ್ಕು ತಿಂಗಳ ಹಿಂದೆ ಇದು ಇಲ್ಲಿಗೆ ನಿಲ್ಲಲ್ಲ ಎಂದಿದ್ದೆ. ಈಗ ಇದು ಪ್ರಾರಂಭ ಆಗಿದೆ. ಮುಖ್ಯಮಂತ್ರಿಗಳು ಇಲ್ಲಿ ಬಂದು ಏನು ಸಾಧನೆ ಮಾಡಿ ಹೋದ್ರು.

    ಎರಡು ಸಮಾಜದಲ್ಲಿ ವಿಶ್ವಾಸ ಮೂಡಿಸುವ ಸಂದೇಶ ಕೊಡಬಹುದೆಂದು ಅಂದುಕೊಂಡಿದ್ದೆ. ಆದ್ರೆ ಈ ವಿಶ್ವಾಸ ಹುಸಿಯಾಯಿತು. ಪ್ರವೀಣ್ ಕುಟುಂಬಕ್ಕೆ ಎಷ್ಟು ಪರಿಹಾರ ಕೊಟ್ಟರು ತಕರಾರಿಲ್ಲ. ಮುಖ್ಯಮಂತ್ರಿ ಇಲ್ಲಿದ್ದಾಗಲೇ ಸುರತ್ಕಲ್​​ನಲ್ಲಿ ಹತ್ಯೆ ನಡೆದಿದೆ. ಮುಖ್ಯಮಂತ್ರಿ ಅಲ್ಲಿಗೂ ಭೇಟಿ ನೀಡಿ ವಿಶ್ವಾಸ ತುಂಬಬೇಕಿತ್ತು. ಆದ್ರೆ ಹತ್ಯೆಯಾದಲ್ಲಿಗೆ ಸಿಎಂ ಭೇಟಿ ನೀಡಿಲ್ಲ. ಯಾರನ್ನು ಮೆಚ್ಚಿಸುವುದಕ್ಕೆ ಈ ರೀತಿ ವರ್ತಿಸುತ್ತಿದ್ದೀರಿ.

    ಡಿಜಿ ಬಂದಿದ್ದು ನೋಡಿ ಮಹತ್ವದ ಹೇಳಿಕೆ ಕೊಡ್ತಾರೆ ಅಂದುಕೊಂಡಿದ್ದೆ. ಹತ್ಯೆ ನಡೆದಾಗಲೇ ಪೊಲೀಸ್ ಮಹಾನಿರ್ದೇಶಕರು ಬರಬೇಕಿತ್ತು. ಬೆಂಗಳೂರಿನಲ್ಲಿ ಯಾವ ಮಹಾ ಘನಂದಾರಿ‌ ಕೆಲಸ ಇದೆ. ವರ್ಗಾವಣೆ ಸೇರಿದಂತೆ ಕೆಲ ಹಣದ ವ್ಯವಹಾರ ನಡೆಸುತ್ತಿದ್ರಾ? ನನಗೆ ಹೇಳುವುದಕ್ಕೆ ಯಾವುದೇ ಮುಲಾಜಿಲ್ಲ. ಐದನೇ ತಾರೀಖಿನ ಒಳಗೆ ನಿಜವಾದ ಹಂತಕರನ್ನು ಅರೆಸ್ಟ್ ಮಾಡಬೇಕು. ಈ ಯಶಸ್ಸು ಕಾಣದಿದ್ದರೆ ಜೆಡಿಎಸ್​ನಿಂದ ಸತ್ಯಾಗ್ರಹ ಹಮ್ಮಿಕೊಳ್ಳುತ್ತೇನೆ ಎಂದು ಎಚ್ಚರಿಕೆ ನೀಡಿದರು.

    hdk Politics ಕಾಂಗ್ರೆಸ್ ರಾಜಕೀಯ ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleಉಗ್ರ ಶಂಕಿತ ವಿದ್ಯಾರ್ಥಿ ಬಂಧನ ಬಿಡುಗಡೆ : ತುಮಕೂರಿನಲ್ಲಿ ಹೆಚ್ಚಿದ ಆತಂಕ
    Next Article ಎನ್ ಟಿ ರಾಮರಾವ್ ಪುತ್ರಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ
    vartha chakra
    • Website

    Related Posts

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • bizneskredity24-884 on ಶಿವಕುಮಾರ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕಂತೆ.
    • BurtonEroke on Modi ಯನ್ನು ಟೀಕಿಸಿದ ಈ George Soros ಯಾರು?
    • TheronPhord on ವನ, ವನ್ಯಜೀವಿ ಸಂರಕ್ಷಣೆಗೆ ನಾವೀನ್ಯ ತಂತ್ರಜ್ಞಾನ ಬಳಕೆ :ಈಶ್ವರ ಖಂಡ್ರೆ | Eshwar Khandre
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe