Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೇಂದ್ರದ ವಿರುದ್ಧ ರಾಜ್ಯ ಸರ್ಕಾರದ ಸಮರ | Karnataka
    Trending

    ಕೇಂದ್ರದ ವಿರುದ್ಧ ರಾಜ್ಯ ಸರ್ಕಾರದ ಸಮರ | Karnataka

    vartha chakraBy vartha chakraApril 28, 20246 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಏ.28: ರಾಜ್ಯದ ಬರಪೀಡಿತ ಪ್ರದೇಶಗಳಲ್ಲಿ ಅಗತ್ಯ ಪರಿಹಾರ ಕಾಮಗಾರಿ ಕೈಗೊಳ್ಳಲು ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಆರ್ಥಿಕ ನೆರವು ಸಾಕಾಗುತ್ತಿಲ್ಲ ಎಂದು ಆರೋಪಿಸಿ ತಮ್ಮ ಸಂಪುಟ ಸಹೋದ್ಯೋಗಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಧರಣಿ ನಡೆಸಿದರು.
    ವಿಧಾನಸೌಧ ಆವರಣದಲ್ಲಿರುವ ಗಾಂಧಿ ಪ್ರತಿಮೆ ಮುಂದೆ ಧರಣಿ ನಡೆಸಿದ ಅವರು ರಾಜ್ಯಕ್ಕೆ ನ್ಯಾಯಯುತವಾಗಿ ಸಿಗಬೇಕಾಗಿರುವ ಪರಿಹಾರ ಸಿಗುವವರೆಗೆ ತಮ್ಮ ಹೋರಾಟ ಮುಂದುವರೆಯಲಿದೆ ಎಂದು ಘೋಷಿಸಿದರು.

    ಪ್ರಾಕೃತಿಕ ವಿಕೋಪ ನಿರ್ವಹಣೆ ನಿಧಿ ಅನ್ವಯ ರಾಜ್ಯಕ್ಕೆ 18,171 ಕೋಟಿ ರೂಪಾಯಿ ನೀಡಬೇಕಾಗಿದ್ದರೂ ಕೇಂದ್ರ ಸರ್ಕಾರ ಕೇವಲ 3,498 ಕೋಟಿಗೆ ಅನುಮೋದನೆ ನೀಡಿ, 3,454 ಕೋಟಿ ಬಿಡುಗಡೆ ಮಾಡಿದೆ. ಬರ ಪರಿಹಾರಕ್ಕಾಗಿ ಈ ಹಣ ಸಾಲದು. ಬಾಕಿ ಪರಿಹಾರ ಮೊತ್ತವನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಅಗ್ರಹಿಸಿದರು ರಾಜ್ಯಕ್ಕೆ ಸಿಗಬೇಕಾದ ಬರ ಪರಿಹಾರ ನೆರವಿಗಾಗಿ ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಸರ್ಕಾರ ಸುಪ್ರೀಂಕೋರ್ಟ್‌ ಮೊರೆ ಹೋಗಬೇಕಾಯಿತು ಎಂದು ವಿಷಾದಿಸಿದ ಅವರು ಮಳೆ ಅಭಾವದಿಂದಾಗಿ 48 ಲಕ್ಷ ಹೆಕ್ಟೇರ್‌ನಲ್ಲಿ ಬೆಳೆ ನಷ್ಟವಾಗಿದ್ದು, ಇದರ ಅಂದಾಜು ವೌಲ್ಯ 35 ಸಾವಿರ ಕೋಟಿ ರೂ.ಗಳು. ಎನ್‌ಡಿಆರ್‌ಎಫ್‌ ಮಾರ್ಗಸೂಚಿ ಪ್ರಕಾರ, 18,172 ಕೋಟಿ ರೂ. ಪರಿಹಾರ ನೀಡುವಂತೆ ಮನವಿ ಮಾಡಿದ್ದೆವು.
    ಸುಪ್ರೀಂಕೋರ್ಟ್‌ ಚಾಟಿ ಬೀಸಿದ ಮೇಲೆ 15 ದಿನದಲ್ಲಿ ನಿರ್ಧಾರ ತೆಗೆದುಕೊಳ್ಳುವುದಾಗಿ ಕೇಂದ್ರ ಹೇಳಿತ್ತು. ಮತ್ತೆ ಹೆಚ್ಚುವರಿಯಾಗಿ ಒಂದು ವಾರ ಸಮಯ ಕೇಳಿ ಈಗ ಪ್ರಸ್ತಾವನೆ ಸಲ್ಲಿಸಿದ್ದರ ಪೈಕಿ ಶೇ.19 ರಷ್ಟು ಪರಿಹಾರ ನೀಡುವುದಾಗಿ ಹೇಳಿದೆ. 3,454 ಕೋಟಿ ರೂ. ಪರಿಹಾರ ನೀಡುವುದಾಗಿ ಹೇಳಿದೆ. 14,718 ಕೋಟಿ ರೂ. ಕೊಡುತ್ತಿಲ್ಲ ಎಂದು ವಿವರಿಸಿದರು.
    ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್‌, ಅಮಿತ್‌ ಶಾ ಅವರುಗಳು ರಾಜ್ಯಕ್ಕೆ ಬಂದು ಸುಳ್ಳು ಹೇಳಿದರು. ಪ್ರಸ್ತಾವನೆ ಸಲ್ಲಿಸುವುದು ತಡವಾಗಿದೆ ಎಂದಾಗಿದ್ದರೆ, ತಾವು ಭೇಟಿ ಮಾಡಿದ್ದಾಗಲೇ ಅಮಿತ್‌ ಶಾ ಹೇಳಬಹುದಿತ್ತು. ದ್ವೇಷದ ರಾಜಕಾರಣಕ್ಕಾಗಿ ಸುಳ್ಳು ಹೇಳುತ್ತಿದ್ದಾರೆ ಎಂದರು.

    ನಮ್ಮ ಗ್ಯಾರಂಟಿ ಯೋಜನೆಗಳಿಗೆ ಹಣ ಕೇಳುತ್ತಿಲ್ಲ, ಬರಪೀಡಿತ ರೈತರ ಪರಿಹಾರಕ್ಕೆ ಹಣ ಕೇಳುತ್ತಿದ್ದೇವೆ. ನಾವು ಸಂಗ್ರಹಿಸಿಕೊಟ್ಟ ತೆರಿಗೆಯಲ್ಲಿ ನಮಗೆ ಸರಿಯಾದ ಪಾಲು ನೀಡುವುದು ಮತ್ತು ರೈತರಿಗೆ ಪರಿಹಾರ ನೀಡುವುದು ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರದ ಜವಾಬ್ದಾರಿ ಎಂದು ಹೇಳಿದರು.
    ಕೇಂದ್ರ ಸರ್ಕಾರದ ನೆರವಿಗೆ ಕಾಯದೆ ಈಗಾಗಲೇ ರಾಜ್ಯ ಸರ್ಕಾರ 34 ಲಕ್ಷ ರೈತರಿಗೆ ರಾಜ್ಯಸರ್ಕಾರ ತನ್ನ ಬೊಕ್ಕಸದಿಂದಲೇ ತಲಾ 2 ಸಾವಿರ ರೂ. ಪರಿಹಾರವನ್ನು ಪಾವತಿಸಿದೆ. ಎಲ್ಲರಿಗೂ ಸಮರ್ಪಕವಾಗಿ ಪರಿಹಾರ ದೊರೆಯುತ್ತಿದೆ. ಯಾವ ರೈತರೂ ಪರಿಹಾರ ಸಿಕ್ಕಿಲ್ಲ ಎಂದು ದೂರು ನೀಡಿಲ್ಲ. ಕುಮಾರಸ್ವಾಮಿ ಸುಳ್ಳು ಟೀಕೆಗಳನ್ನು ಮಾಡುತ್ತಿದ್ದಾರೆ. ನಾವು ರೈತರಿಗೆ ಪರಿಹಾರ ನೀಡುತ್ತಿದ್ದೇವೆಯೇ ಹೊರತು ಕುಮಾರಸ್ವಾಮಿಯವರಿಗಲ್ಲ ಎಂದು ತಿರುಗೇಟು ನೀಡಿದರು.
    ಗಾಂಧಿ ಪ್ರತಿಮೆ ಮುಂದೆ ಧರಣಿಗೂ ಮುನ್ನ ದೇವರಾಜ ಅರಸು ಪ್ರತಿಮೆಯಿಂದ ಗಾಂಧಿ ಪ್ರತಿಮೆ ಯವರೆಗೆ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್, ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ , ಸಚಿವರಾದ ಜಿ. ಪರಮೇಶ್ವರ, ರಾಮಲಿಂಗಾರೆಡ್ಡಿ, ಕೃಷ್ಣಬೈರೇಗೌಡ, ಎನ್‌. ಚಲುವರಾಯಸ್ವಾಮಿ, ದಿನೇಶ್ ಗುಂಡೂರಾವ್, ಕೆ. ಎಚ್. ಮುನಿಯಪ್ಪ, ಶಾಸಕರಾದ ಎಚ್. ಸಿ. ಬಾಲಕೃಷ್ಣ, ರಿಜ್ವಾನ್ ಅರ್ಷದ್ ಮತ್ತಿತರರೊಂದಿಗೆ ಪಾದಯಾತ್ರೆ ನಡೆಸಿದರು.

    Karnataka ಕಾಂಗ್ರೆಸ್ ನ್ಯಾಯ ಬೆಳೆ ನಷ್ಟ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಬೆಟ್ಟಿಂಗ್ ಕರ್ಮಕಾಂಡ ನಟ ಸಾಹೀಲ್ ಖಾನ್ ಬಂಧನ | Sahil Khan
    Next Article ಪ್ರಜ್ವಲ್ ರೇವಣ್ಣನಿಗೆ ಎಸ್ಐಟಿ ಕುಣಿಕೆ | Prajwal Revanna
    vartha chakra
    • Website

    Related Posts

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    June 25, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    6 Comments

    1. odytq on June 6, 2025 5:59 pm

      can you buy generic clomiphene without a prescription cheap clomid prices where can i get clomid without prescription can i order generic clomid pills clomiphene cost australia clomid for sale uk can i order clomiphene pills

      Reply
    2. order cialis europe on June 9, 2025 4:24 am

      More posts like this would create the online elbow-room more useful.

      Reply
    3. flagyl for sale on June 10, 2025 10:36 pm

      This is a question which is near to my heart… Myriad thanks! Quite where can I notice the contact details an eye to questions?

      Reply
    4. b6i16 on June 21, 2025 3:16 am

      amoxil tablets – how to buy combivent buy ipratropium without a prescription

      Reply
    5. edgo3 on June 23, 2025 6:42 am

      purchase zithromax without prescription – cheap zithromax 500mg buy nebivolol no prescription

      Reply
    6. ktrqf on June 25, 2025 7:46 am

      amoxiclav price – atbioinfo.com buy acillin sale

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • fj0c5 on ಬಿಜೆಪಿ ಗೆಲುವು ತಂದುಕೊಟ್ಟ ಕಮಲ್ ನಾಥ್ | Kamal Nath
    • u3dju on KYC ಪೂರ್ಣಗೊಳಿಸದ FASTag ನಿಷ್ಕ್ರಿಯ ಆಗುತ್ತೆ
    • l1frx on ಅರಣ್ಯ ಇಲಾಖೆಗೆ ಸಾವಿರಾರು ಬಾಕಿ ಉಳಿಸಿಕೊಂಡ ಪ್ರತಿಷ್ಠಿತ ಕಂಪನಿಗಳು | Forest Dept
    Latest Kannada News

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    June 25, 2025

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೀಲ್ಸ್_ ಮಾಡುವಾಗ 13ನೇ ಅಂತಸ್ತಿನಿಂದ ಬಿದ್ದು ಯುವತಿ ಸಾವು #varthachakra #death #apartement #reels #viral
    Subscribe