Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಿವಮೊಗ್ಗ ಗಲಭೆಗೆ ಪಿಎಫ್ಐ ಕುಮ್ಮಕ್ಕು… !
    ಸುದ್ದಿ

    ಶಿವಮೊಗ್ಗ ಗಲಭೆಗೆ ಪಿಎಫ್ಐ ಕುಮ್ಮಕ್ಕು… !

    vartha chakraBy vartha chakraAugust 16, 2022Updated:August 16, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಶಿವಮೊಗ್ಗ,ಆ.16-ಗೋಲಿ ಬುಗುರಿ ಆಡೋ ಹುಡುಗರು ಚಾಕು ಚೂರಿ ಹಿಡಿದು ಓಡಾಡುತ್ತಿದ್ದು, ನಗರದಲ್ಲಿ ಪದೇ ಪದೇ ಇಂತಹ ಘಟನೆ ನಡೆಯುತ್ತಿರುವುದು ರಾಜ್ಯಕ್ಕೆ ಕಪ್ಪು ಚುಕ್ಕೆಯಾಗಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಸಮಾಧಾನ ಹೊರಹಾಕಿದ್ದಾರೆ.
    ಚಾಕುವಿನಿಂದ ಇಬ್ಬರಿಗೆ ಇರಿದು ಹಿಂಸಾಚಾರ ನಡೆಸಿರುವುದು ಗಂಭೀರ ಪ್ರಕರಣವಾಗಿದೆ, ಸರ್ಕಾರ ಇದನ್ನು ಮತ್ತಷ್ಟು ಗಂಭೀರವಾಗಿ ಪರಿಗಣಿಸಬೇಕು. ಇಂತಹ ಕೃತ್ಯಗಳಿಗೆ ಇತಿಶ್ರೀ ಹಾಕುವ ನಿಟ್ಟಿನಲ್ಲಿ ಕಠಿಣ ಕೆಲಸ ಆಗಲೇಬೇಕಾಗಿದೆ ಎಂದರು.
    ಚಾಕು ಇರಿತಕ್ಕೊಳಗಾದ ಪ್ರೇಮ್ ಸಿಂಗ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದೇನೆ, ದೇವರು ದೊಡ್ಡವನು, ಒಂದು ಕ್ಷಣ ತಡಮಾಡದೆ ಆಸ್ಪತ್ರೆಗೆ ದಾಖಲು ಮಾಡಿದ್ದರಿಂದ ಆಪಾಯದಿಂದ ಪಾರಾಗಿದ್ದಾರೆ ಅವರಿಗೆ ಇನ್ನು ಎಂಟು ದಿನಗಳ ಕಾಲ ಚಿಕಿತ್ಸೆ ಅಗತ್ಯವಿದೆ ಎಂದರು.
    ರಾಜ್ಯದಲ್ಲಿ ನಡೆಯುತ್ತಿರುವ ದುಷ್ಕೃತ್ಯಗಳಿಗೆ ಹಲವು ಸಂಘಟನೆಗಳ ಕುಮ್ಮಕ್ಕಿದೆ. ಪಿಎಫ್ಐ, ಎಸ್‌ಡಿಪಿಐ ಸಂಘಟನೆ ಇದರ ಹಿಂದೆ ಇದೆ. ವಿಪಕ್ಷದವರು ಇದನ್ನು ರಾಜಕೀಕರಣಗೊಳಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇದೆಲ್ಲದಕ್ಕೂ ಬ್ರೇಕ್ ಹಾಕುವಂತಹ ಕೆಲಸವಾಗಬೇಕು. ಈಗಾಗಲೇ ಗೃಹಸಚಿವರು ಕ್ರಮ ತೆಗೆದುಕೊಂಡಿದ್ದಾರೆ ಎಂದರು.
    ಶಾಸಕ ಈಶ್ವರಪ್ಪ, ನಾವು ಸ್ಥಳೀಯ ಶಾಸಕರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಚರ್ಚಿಸುತ್ತೇವೆ. ಶಿವಮೊಗ್ಗದ ಪರಿಸ್ಥಿತಿ ಸುಧಾರಣೆಗೆ ಕಠಿಣ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಒತ್ತಾಯಿಸುತ್ತೇವೆ ಎಂದು ತಿಳಿಸಿದರು.
    ನಗರದಲ್ಲಿ ಅನಗತ್ಯ ಗೊಂದಲದ ವಾತಾವರಣ ಸೃಷ್ಟಿ ಮಾಡಲಾಗುತ್ತಿದೆ. ಕಿಡಿಗೇಡಿಗಳು, ಪುಡಾರಿಗಳು, ಬೀದಿಯಲ್ಲಿ ಹೋಗುವವರು ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಬಗ್ಗೆ ಮಾತನಾಡುತ್ತಿದ್ದಾರೆ. ಸಿದ್ದರಾಮಯ್ಯ ಸೇರಿದಂತೆ ಅನೇಕರು ಗೊಂದಲ ಮಾತನಾಡುತ್ತಿದ್ದಾರೆ ಎಂದು ಬಿ.ವೈ.ವಿಜಯೇಂದ್ರ ಅವರು ಹೇಳಿದರು.
    ಟಿಪ್ಪು ಸುಲ್ತಾನ್ ಮತ್ತು ವೀರ ಸಾವರ್ಕರ್ ಫೋಟೋ ವಿಚಾರವಾಗಿ ಎರಡು ತಂಡಗಳ ನಡುವೆ ವಾಗ್ವಾದ ನಡೆದಿದ್ದು, ಘಟನೆ ವೇಳೆ ಕಿಡಿಗೇಡಿಗಳು ಪ್ರವೀಣ್ ಮತ್ತು ಪ್ರೇಮ್ ಸಿಂಗ್ ಎಂಬವರಿಗೆ ಚಾಕು ಇರಿದು ಪರಾರಿಯಾಗಿದ್ದರು. ಪ್ರಕರಣ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಈಗಾಗಲೇ ಓರ್ವ ಪ್ರಮುಖ ಆರೋಪಿಯ ಸಹಿತ ಮೂವರನ್ನು ಬಂಧಿಸಿದ್ದು, ಪ್ರಮುಖ ಆರೋಪಿಯನ್ನು ತಡರಾತ್ರಿ ಗುಂಡು ಹಾರಿಸಿ ಬಂಧಿಸಲಾಗಿದೆ. ಪ್ರಕರಣದ ಮತ್ತೋರ್ವ ಆರೋಪಿಯ ಬಂಧನಕ್ಕೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

    Politics ಆರೋಗ್ಯ ಈಶ್ವರಪ್ಪ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleವಿನಾಯಿತಿ ಮುಕ್ತ ಅರ್ಥ ವ್ಯವಸ್ಥೆ..!
    Next Article ಬೀದರ್ ನಲ್ಲಿ ಭೀಕರ ಅಪಘಾತ..
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Chriswot on ಕುಡಿದು ಮಾಡಿದ ರಂಪಾಟ.
    • vklqw on ಬಿಯರ್ ರೇಟ್ ಜಾಸ್ತಿ ಆಯ್ತು ನೋಡಿ
    • MichaelRUIZE on ಕಾಡು ಕಡಿದವರನ್ನು ಹುಡುಕಿ | Uttara Kannada
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe