ತುಮಕೂರು: ಕಲ್ಪತರು ನಾಡು ತುಮಕೂರಿನಲ್ಲಿ ಬೆಳಂಬೆಳಗ್ಗೆ ಎನ್ ಐಎ ದಾಳಿ ನಡೆಸಿದೆ. ದಾಳಿ ವೇಳೆ ಐಸೀಸ್ ಉಗ್ರರ ಜೊತೆ ನಂಟು ಹೊಂದಿದ ಆರೋಪದ ಮೇಲೆ ತುಮಕೂರಿನ ಮರಳೂರು ದಿಣ್ಣೆ ನಿವಾಸಿಯನ್ನು ವಶಕ್ಕೆ ಪಡೆಯಲಾಗಿದೆ. ಶಂಕಿತ ಉಗ್ರ ಎಚ್ ಎಂಎಸ್ ಯುನಾನಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತಿದ್ದ ಎನ್ನಲಾಗಿದೆ. ದೆಹಲಿ, ಬೆಂಗಳೂರು ಮೂಲದ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಮಹಾರಾಷ್ಟ್ರ ಮೂಲದ ವಿದ್ಯಾರ್ಥಿ ವಶಕ್ಕೆ ಪಡೆಯಲಾಗಿದೆ. ವಶಕ್ಕೆ ಪಡೆದ ಬಳಿಕ ಬೆಂಗಳೂರಿಗೆ ಹೆಚ್ಚಿನ ವಿಚಾರಣೆಗೆ ಕೆರೆದೊಯ್ಯಲಾಗಿದೆ. ಈ ನಡುವೆ ಮಾಜಿ ಶಾಸಕ ರಫೀಕ್ ಅಹಮದ್ ಒಡೆತನದ ಕಾಲೇಜು ಇದಾಗಿತ್ತು ಎನ್ನಲಾಗಿದೆ. ಆದರೆ ಇದಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಸುಮಾರು 15 ವರ್ಷಗಳ ಹಿಂದೆಯೇ ಸದರಿ ಕಾಲೇಜನ್ನು ಮುಂಬೈ ಮೂಲದ ವ್ಯಕ್ತಿಗೆ ವಹಿಸಿಕೊಡಲಾಗಿದೆ. ಘಟನೆಗೂ ಸಂಸ್ಥೆಗೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ. ತುಮಕೂರಿನ ಸದಾಶಿವನಗರದ ಎರಡನೇ ಹಂತದಲ್ಲಿ ಎಚ್ಎಂಎಸ್ ಯುನಾನಿ ಕಾಲೇಜು ಇದೆ.