Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಧಾನಸಭೆಯಲ್ಲಿ ಕೃಷ್ಣಭೈರೇಗೌಡ ಸವಾಲು
    ಮಾಹಿತಿ

    ವಿಧಾನಸಭೆಯಲ್ಲಿ ಕೃಷ್ಣಭೈರೇಗೌಡ ಸವಾಲು

    vartha chakraBy vartha chakraDecember 18, 2025No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಳಗಾವಿ,ಡಿ.18:
    ತಮ್ಮ ವಿರುದ್ಧ ಕೇಳಿ ಬಂದಿರುವ ಭೂ ಕಬಳಿಕೆ ಆರೋಪದ ಬಗ್ಗೆ ಕಂದಾಯ ಮಂತ್ರಿ ಕೃಷ್ಣ ಬೈರೇಗೌಡ ಕೆಂಡಮಂಡಲರಾಗಿದ್ದಾರೆ. ವಿಧಾನಸಭೆಯಲ್ಲಿ ಈ ವಿಷಯ ಪ್ರಸ್ತಾಪವಾಗುತ್ತಿದ್ದಂತೆ ಸ್ವಯಂ ಪ್ರೇರಿತರಾಗಿ ಎದ್ದು ನಿಂತ ಮಂತ್ರಿಗಳು ತಮ್ಮ ವಿರುದ್ಧದ ಆರೋಪದ ಬಗ್ಗೆ ಯಾವುದೇ ರೀತಿಯ ಚರ್ಚೆ ಮತ್ತು ತನಿಖೆಗೆ ಸಿದ್ದ ಎಂದು ಘೋಷಿಸಿದರು.
    ಶಾಸನಸಭೆಯಲ್ಲಿ ಯಾವುದೇ ವ್ಯಕ್ತಿಯ ವಿರುದ್ಧ ವೈಯಕ್ತಿಕ ಆರೋಪ ಮಾಡಬೇಕಾದರೆ ಒಂದು ವಾರ ಮೊದಲು ನೋಟಿಸ್ ನೀಡಬೇಕು ಎಂಬ ನಿಯಮವಿದೆ ಆದರೆ ಈ ವಿಷಯದಲ್ಲಿ ಈಸಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವ್ಯಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ ಎಂದು ಸವಾಲು ಹಾಕಿದರು.
    ಮಂತ್ರಿ ಕೃಷ್ಣ ಬೈರೇಗೌಡ ಅವರು ಸ್ಮಶಾನ ಭೂಮಿ ಒತ್ತುವರಿ ಮಾಡಿದ್ದಾರೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಆರೋಪ ಮಾಡಿದ್ದಾರೆ ಈ ಆರೋಪದ ಬಗ್ಗೆ ಚರ್ಚಿಸಲು ಅವಕಾಶ ನೀಡುವಂತೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಶೂನ್ಯ ವೇಳೆಯಲ್ಲಿ ಮನವಿ ಮಾಡಿದರು.
    ಈ ವೇಳೆ ಸ್ವತಃ ಮಧ್ಯ ಪ್ರವೇಶಿಸಿದ ಕೃಷ್ಣ ಬೈರೇಗೌಡ ಅವರು, “ ಅಧಿವೇಶನದ ಸಂದರ್ಭದಲ್ಲಿ ಸದನದ ಯಾವುದೇ ಸದಸ್ಯರ ಬಗ್ಗೆ ಯಾವುದೇ ವ್ಯಯಕ್ತಿಕ ವಿಚಾರ ಪ್ರಸ್ತಾಪ ಮಾಡಬೇಕಿದ್ದರೆ ಅದಕ್ಕೊಂದು ನಿಯಮಾವಳಿ ಇದೆ. ಕನಿಷ್ಟ ವಾರಕ್ಕೂ ಮುಂಚೆಯೇ ಸದಸ್ಯರಿಗೆ ನೋಟೀಸ್ ನೀಡಬೇಕು. ಆದರೆ, ಈ ವಿಚಾರದಲ್ಲಿ ದಿಢೀರನೆ ಆರೋಪ ಮಾಡಿ ಚರ್ಚೆಗೆ ಅವಕಾಶ ಕೇಳುತ್ತಿದ್ದಾರೆ. ಆದರೂ ನಾನು ಸದನದ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಮೇಲಿನ ಆರೋಪದ ಬಗ್ಗೆ ಸದನದಲ್ಲಿ ಚರ್ಚಿಸಲು ಹಾಗೂ ಉತ್ತರ ನೀಡಲು ನನ್ನದೇನೂ ಅಭ್ಯಂತರ ಇಲ್ಲ. ಈ ವಿಚಾರ ಸಭಾಧ್ಯಕ್ಷರ ವಿವೇಚನೆಗೆ ಬಿಟ್ಟದ್ದು” ಎಂದರು.
    ಈ ವಿಷಯದ ಬಗ್ಗೆ ಪ್ರತಿಕ್ರಿಯಿಸಿದ ಸಭಾಧ್ಯಕ್ಷ ಯು.ಟಿ. ಖಾದರ್ ಅವರು ಇನ್ನೂ ಸಾಕಷ್ಟು ವಿಧೇಯಕಗಳು ಮಂಡನೆಗೆ ಬಾಕಿ ಇದ್ದು, ತದನಂತರ ಈ ವಿಚಾರವನ್ನು ಚರ್ಚಿಸಲು ಅವಕಾಶ ನೀಡುವುದಾಗಿ ತಿಳಿಸಿದರು.

    Share. Facebook Twitter Pinterest LinkedIn Tumblr Email WhatsApp
    Previous Articleನ್ಯಾಷನಲ್ ಹೆರಾಲ್ಡ್ ಪ್ರಕರಣ: ನಮಗೆ ನ್ಯಾಯ ಸಿಕ್ಕಿದೆ – ಡಿ.ಕೆ ಶಿವಕುಮಾರ್
    Next Article ನಗರ ಸಭೆಗಳ ವಿರುದ್ಧ ಕ್ರಿಮಿನಲ್ ಕೇಸ್
    vartha chakra
    • Website

    Related Posts

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    December 22, 2025

    ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ

    December 21, 2025

    ಕೆ.ಎನ್‌.ರಾಜಣ್ಣ ನನಗೆ ಅತ್ಯಂತ ಆಪ್ತ ಎಂದ ಡಿಸಿಎಂ!

    December 21, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ

    ಕೆ.ಎನ್‌.ರಾಜಣ್ಣ ನನಗೆ ಅತ್ಯಂತ ಆಪ್ತ ಎಂದ ಡಿಸಿಎಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • rylonnie shtori na plastikovie okna s elektroprivodom_zvSn on ಕಾಂಗ್ರೆಸ್ ಅಭ್ಯರ್ಥಿ ಪರ ಬಿಜೆಪಿ ಶಾಸಕ ಪ್ರಚಾರ.
    • elektrokarniz kypit_snsl on ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    • elektricheskie jaluzi_lyot on ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    Latest Kannada News

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    December 22, 2025

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    December 21, 2025

    ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ

    December 21, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್.#varthachakra #mallikarjunkharge #siddaramaiah #dkshivakumar
    Subscribe