Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಲೋಕಸಭೆ ಚುನಾವಣೆಯಲ್ಲಿ ಆಕ್ರಮದ ಸಾಮ್ರಾಜ್ಯ | Lok Sabha 2024
    ಅಪರಾಧ

    ಲೋಕಸಭೆ ಚುನಾವಣೆಯಲ್ಲಿ ಆಕ್ರಮದ ಸಾಮ್ರಾಜ್ಯ | Lok Sabha 2024

    vartha chakraBy vartha chakraMarch 30, 2024No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಮಾ- 30 ಲೋಕಸಭೆ ಚುನಾವಣೆಯ (Lok Sabha 2024) ಮಾದರಿ ನೀತಿ ಸಂಹಿತೆ ಜಾರಿಗೆ ಬಂದ ಬಳಿಕ ಈವರೆಗೆ ರಾಜ್ಯದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 20.85 ಕೋಟಿ ನಗದು 27 ಕೋಟಿ ರೂ ಮೌಲ್ಯದ ಮದ್ಯವನ್ನು ಜಪ್ತಿ ಮಾಡಲಾಗಿದೆ.
    ಮಾದರಿ ನೀತಿ ಸಂಹಿತೆಯು ಮಾ.16 ರಿಂದ ಜಾರಿಗೆ ಬಂದಿದ್ದು,ರಾಜ್ಯದಲ್ಲಿ ಇಲ್ಲಿಯವರೆಗೆ ಒಟ್ಟು 62.42 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
    ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಹೊರಡಿಸಿರುವ ಪ್ರಕಟಣೆಯ ಪ್ರಕಾರ, ಮಾದರಿ ನೀತಿ ಸಂಹಿತೆ ಜಾರಿಯಾದಾಗಿನಿಂದ ಫ್ಲೈಯಿಂಗ್ ಸ್ಕ್ವಾಡ್, ಸ್ಟ್ಯಾಟಿಕ್ ಸರ್ವೆಲೆನ್ಸ್ ತಂಡಗಳು ಮತ್ತು ಪೊಲೀಸ್ ಅಧಿಕಾರಿಗಳು 20.85 ಕೋಟಿ ನಗದು, 70.86 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳು (ಮತದಾರರಿಗೆ ಉಚಿತವಾಗಿ ಹಂಚಲು ಕೊಂಡೊಯ್ಯುತ್ತಿದ್ದುದು), 27 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ 8.63 ಲಕ್ಷ ಲೀಟರ್ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.

    1.47 ಕೋಟಿ ರೂ.ಗೂ ಅಧಿಕ ಮೌಲ್ಯದ 211.23 ಕೆಜಿ ಮಾದಕ ವಸ್ತುಗಳು, 9 ಕೋಟಿ ರೂ.ಗೂ ಅಧಿಕ ಮೌಲ್ಯದ 15 ಕೆಜಿಗಿಂತ ಹೆಚ್ಚಿನ ಚಿನ್ನ, 27 ಲಕ್ಷ ರೂ.ಗೂ ಅಧಿಕ ಮೌಲ್ಯದ 59.04 ಕೆಜಿ ಬೆಳ್ಳಿ ಹಾಗೂ 9 ಲಕ್ಷ ರೂ. ಮೌಲ್ಯದ 21.17 ಕ್ಯಾರೆಟ್ ವಜ್ರವನ್ನು ವಶಪಡಿಸಿಕೊಳ್ಳಲಾಗಿದೆ.
    ನಗದು, ಮದ್ಯ, ಡ್ರಗ್ಸ್, ಬೆಲೆಬಾಳುವ ಲೋಹ ಮತ್ತು ಉಚಿತವಾಗಿ ಹಂಚಲು ಕೊಂಡೊಯ್ಯುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಂಡ ಬಗ್ಗೆ ಅಧಿಕಾರಿಗಳು 969 ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ.
    ತುಮಕೂರಿನಲ್ಲಿ 14 ಲಕ್ಷ ಹಣ, ಚಿನ್ನ ಜಪ್ತಿ
    ತುಮಕೂರಿನಲ್ಲಿ ಶುಕ್ರವಾರ ಕಾರ್ಯಾಚರಣೆ ನಡೆಸಿರುವ ಚುನಾವಣಾ ಅಧಿಕಾರಿಗಳು ಬಟವಾಡಿ ಚೆಕ್​ಪೋಸ್ಟ್​ನಲ್ಲಿ ಆಂಧ್ರ ಮೂಲದ ನಾಗಭೂಷಣ್ ಎಂಬುವರು ಬಸ್​ನಲ್ಲಿ 14.63 ಲಕ್ಷ ಹಣ, 128 ಗ್ರಾಂ ಚಿನ್ನಾಭರಣ ಸಾಗಿಸುತ್ತಿದ್ದುದನ್ನು ಪತ್ತೆ ಮಾಡಿ ವಶಪಡಿಸಿಕೊಂಡಿದ್ದಾರೆ.

    ಎಲ್ಲೆಲ್ಲಿ ಏನೇನು ಜಪ್ತಿ:
    ತಮಿಳುನಾಡು ಭಾಗದ ಜೂಜುವಾಡಿ ಚೆಕ್​ಪೋಸ್ಟ್​ನಲ್ಲಿ ಬೆಂಗಳೂರಿನಿಂದ ಹೊಸೂರು ಕಡೆ ತೆರಳುತ್ತಿದ್ದ ಕಾರಿನಲ್ಲಿ ದಾಖಲೆ ಇಲ್ಲದ 10 ಲಕ್ಷ ರೂ ನಗದನ್ನು ನಿನ್ನೆ ಜಪ್ತಿ ಮಾಡಲಾಗಿದೆ.
    ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಕಣಕುಂಬಿ ಚೆಕ್ ಪೋಸ್ಟ್​ನಲ್ಲಿ 7 ಲಕ್ಷ 98 ಸಾವಿರ ರೂಗಳನ್ನು ಜಪ್ತಿಮಾಡಲಾಗಿದೆ. ವ್ಯಕ್ತಿಯೊಬ್ಬ ಗೋವಾದಿಂದ ಬೆಳಗಾವಿಗೆ ಬಸ್​ನಲ್ಲಿ ಹಣ ಸಾಗಿಸ್ತಿದ್ದ ವೇಳೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
    ಬಳ್ಳಾರಿ ಜಿಲ್ಲೆ ಕಂಪ್ಲಿಯ ಕೋಟೆ ಚೆಕ್​ಪೋಸ್ಟ್​ನಲ್ಲಿ ದಾಖಲೆ ಇಲ್ಲದೆ ಬೈಕ್​ನಲ್ಲಿ ಸಾಗಿಸುತ್ತಿದ್ದ 8.23 ಲಕ್ಷ ರೂ. ನಗದು ಜಪ್ತಿ ಮಾಡಿಕೊಳ್ಳಲಾಗಿದೆ.

    3.289 ಕೆಜಿ‌ ಬೆಳ್ಳಿ ವಶ:
    ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ನಾಲವಾರದಲ್ಲಿ 6 ಲಕ್ಷ 37 ಸಾವಿರ ಮೌಲ್ಯದ ಚಿನ್ನ ಜಪ್ತಿ ಮಾಡಲಾಗಿದೆ. ಸರ್ಕಾರಿ ಬಸ್​​ನಲ್ಲಿ 114 ಗ್ರಾಂ ಚಿನ್ನ, 3 ಕೆಜಿ 289 ಗ್ರಾಂ ಬೆಳ್ಳಿ ಆಭರಣಗಳನ್ನ ವಶಕ್ಕೆ ಪಡೆಯಲಾಗಿದೆ. ಮತ್ತೊಂದೆಡೆ, ದೊಡ್ಡಬಳ್ಳಾಪುರ ತಾಲೂಕಿನ ಹುಲಿಕುಂಟೆ ಚೆಕ್​​ಪೋಸ್ಟ್​ನಲ್ಲಿ 2 ಲಕ್ಷ, ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ-ಚಿತ್ರದಹಳ್ಳಿ ರಸ್ತೆಯಲ್ಲಿ 1 ಲಕ್ಷ 50 ಸಾವಿರ ಹಣ, ಅತ್ತ ಧಾರವಾಡದ ಕೃಷಿ ವಿವಿ ಬಳಿಯ ಚೆಕ್​ಪೋಸ್ಟ್​ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 3 ಲಕ್ಷ 70 ಸಾವಿರ ರೂ ಜಪ್ತಿ ಮಾಡಲಾಗಿದೆ.
    ರಾಜ್ಯದಲ್ಲಿ ಏಪ್ರಿಲ್ 26 ಮತ್ತು ಮೇ 7 ರಂದು ಎರಡು ಹಂತಗಳಲ್ಲಿ 28 ಕ್ಷೇತ್ರಗಳಿಗೆ ಲೋಕಸಭೆ ಚುನಾವಣೆ ನಡೆಯಲಿದೆ.

    lok sabha lok sabha 2024 ಚಿನ್ನ Election ಡ್ರಗ್ಸ್ ಧಾರವಾಡ ಬೈಕ್
    Share. Facebook Twitter Pinterest LinkedIn Tumblr Email WhatsApp
    Previous Articleಬಿಜೆಪಿಗೆ ಸೋಲಿನ ರುಚಿ ಉಣಿಸಲು ಸಜ್ಜಾದ ಮನ್ಸೂರ್ ಅಲಿಖಾನ್ (ಬೆಂಗಳೂರು ಕೇಂದ್ರ ಸಾಕ್ಷಾತ್ ಸಮೀಕ್ಷೆ) | Mansoor Ali Khan
    Next Article KPSCಯಲ್ಲಿ ಹೀಗೂ ನಡೆಯುತ್ತೆ ಗೋಲ್ ಮಾಲ್
    vartha chakra
    • Website

    Related Posts

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    December 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    December 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    December 22, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Vicenteswete on ಬಹಿರಂಗ ಚರ್ಚೆಗೆ ಬರುವಂತೆ ಅಮಿತ್ ಶಾ ಗೆ ಸವಾಲು | Amit Shah
    • https://dlvdev.wpengine.com/2025/12/10/coolzino-italia-casino-online-con-esperienza-unica-e-bonus-esclusivi/ on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • rylonnie shtori na plastikovie okna s elektroprivodom_npSn on ಬೆಂಗಳೂರಿಗೆ ಎರಡು ಸಾವಿರ ಹೆಚ್ಚುವರಿ ಪೊಲೀಸ್
    Latest Kannada News

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    December 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    December 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    December 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್.#varthachakra #mallikarjunkharge #siddaramaiah #dkshivakumar
    Subscribe