Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗ್ಯಾರಂಟಿಗಳ ಹೆಸರಿನಲ್ಲಿ ಲೂಟಿ ಜಾತ್ರೆ | Congress Guarantees
    ಸುದ್ದಿ

    ಗ್ಯಾರಂಟಿಗಳ ಹೆಸರಿನಲ್ಲಿ ಲೂಟಿ ಜಾತ್ರೆ | Congress Guarantees

    vartha chakraBy vartha chakraFebruary 15, 2024Updated:February 15, 202428 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ಐದು ಗ್ಯಾರಂಟಿಗಳ ಪ್ರಚಾರ ಮತ್ತು ಸಮೀಕ್ಷೆಗಾಗಿ ರಾಜ್ಯ ಕಾಂಗ್ರೆಸ್ ಸರಕಾರ ಜನರ ತೆರಿಗೆ ಹಣವನ್ನು ಮನಸೋ ಇಚ್ಛೆ ಪೋಲು ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದ್ದಾರೆ.
    ವಿಧಾನಸಭೆಯಲ್ಲಿ ಗುರುವಾರ ರಾಜ್ಯಪಾಲರ ಭಾಷಣಾ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು; ಗ್ಯಾರಂಟಿಗಳ ಪ್ರಚಾರಕ್ಕೆ ಕೋಟ್ಯಂತರ ರೂಪಾಯಿ ಸುರಿಯುತ್ತಿರುವ ಸರಕಾರವು, ಬೇಕು ಬೇಕಾದವರಿಗೆ, ಶಾಸಕರ ಕುಟುಂಬಕ್ಕೆ ಸಮೀಕ್ಷೆಯ ಹೆಸರಿನಲ್ಲಿ ಹಣ ಕೊಟ್ಟಿದೆ ಎಂದು ದೂರಿದರು.
    ʼದ ಪಾಲಸಿ ಪ್ರಂಟ್‌ʼ ಎನ್ನುವ ದಿಕ್ಕಿಲ್ಲದ ಸಂಸ್ಥೆಗೆ ಸಮೀಕ್ಷೆ ಮಾಡುವುದಕ್ಕೆ 7.20 ಕೋಟಿ ರೂ. ಮೊತ್ತದ ಗುತ್ತಿಗೆ ಕೊಡಲಾಗಿದೆ. ಆದರೆ, ಕಂಪನಿಯ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಅದರ ಹಿಂದೆ ಮುಂದೆ ಯಾರಿದ್ದಾರೆ ಎನ್ನುವುದೂ ತಿಳಿದಿಲ್ಲ. ಆದರೂ, ಸರಕಾರ ಇಷ್ಟು ಪ್ರಮಾಣದಷ್ಟು ಹಣವನ್ನು ಆ ಕಂಪನಿಗೆ ಕೊಟ್ಟಿದೆ. ಹಾಗಾದರೆ, ಆ ಕಂಪನಿ ಯಾರದು? ಎಂದು ಮಾಜಿ ಮುಖ್ಯಮಂತ್ರಿಗಳು ಪ್ರಶ್ನಿಸಿದರು.

    ʼದ ಪಾಲಸಿ ಫ್ರಂಟ್ʼ ಸಲ್ಲಿಸಿದ ಪ್ರಸ್ತಾವನೆಗೆ ಒಂದೇ ದಿನದಲ್ಲಿ ಚಿರತೆ ವೇಗದಲ್ಲಿ ಒಪ್ಪಿಗೆ ನೀಡಲಾಗಿದೆ. ಈ ಕಡತಕ್ಕೆ ಬಂದಿರುವ ವೇಗ ನನಗೆ ಅಚ್ಚರಿ ಉಂಟು ಮಾಡಿದೆ. ಸರಕಾರದ ವಿವಿಧ ಇಲಾಖೆಗಳಲ್ಲಿ 1.37 ಲಕ್ಷ ಕಡತಗಳು ಕೊಳೆಯುತ್ತಾ ಬಿದ್ದಿವೆ. ಆದರೆ ʼದ ಪಾಲಸಿ ಫ್ರಂಟ್ʼ ಕಡತಕ್ಕೆ ವೇಗವಾಗಿ ಒಪ್ಪಿಗೆ ಸಿಕ್ಕಿದೆ. ಆ ಕಡತ ವಿಲೇವಾರಿ ಆಗಿದ್ದು ಹೇಗೆ? ಯಾವ ʼಪಟ್ಟು?ʼ ಯಾವ ʼಮಟ್ಟು?ʼ ಹಿಂದೆ ಕೆಲಸ ಮಾಡಿದೆ ಎನ್ನುವ ʼಗುಟ್ಟು?ʼ ಸದನದಲ್ಲಿ ರಟ್ಟಾಗಬೇಕಿದೆ ಎಂದರು ಕುಮಾರಸ್ವಾಮಿ ಅವರು.
    ಇನ್ನೊಂದು ಸಂಸ್ಥೆಗೆ ಒಂದು ಕೋಟಿ ರೂಪಾಯಿ ಕೊಡಲಾಗಿದೆ. m2m ಎನ್ನುವ ಕಂಪನಿ ಅದಾಗಿದ್ದು, ಅದೂ ಗ್ಯಾರಂಟಿಗಳ ಬಗ್ಗೆ ಸಮೀಕ್ಷೆ ಮಾಡುತ್ತಿದೆ. ಮಂಡ್ಯ ಜಿಲ್ಲೆಯ ಶಾಸಕರೊಬ್ಬರ ಪತ್ನಿ ನಿರ್ದೇಶಕಿ ಆಗಿರುವ ಕಂಪನಿಗೆ ಕೂಡ ಗ್ಯಾರಂಟಿಗಳ ಪ್ರಚಾರಕ್ಕಾಗಿ ಕೋಟಿ ರೂಪಾಯಿ ನೀಡಲಾಗಿದೆ ಎಂದು ಮಳವಳ್ಳಿ ಶಾಸಕ ನರೇಂದ್ರಸ್ವಾಮಿ ಅವರ ಹೆಸರೆತ್ತದೆ ಆರೋಪ ಮಾಡಿದರು.

    ಗ್ಯಾರಂಟಿಗಳ ಹೆಸರಿನಲ್ಲಿ ಹೀಗೆ ಹಣವನ್ನು ಇಷ್ಟ ಬಂದ ಹಾಗೆ ಪೋಲು ಮಾಡಲಾಗುತ್ತಿದೆ. ಗ್ಯಾರಂಟಿಗಳ ಹೆಸರಿನಲ್ಲಿ ಲೂಟಿಜಾತ್ರೆ ನಡೆಯುತ್ತಿದೆ ಎಂದು ಕುಮಾರಸ್ವಾಮಿ ಆರೋಪ ಮಾಡಿದರು.
    ಪ್ರಚಾರಕ್ಕಾಗಿಯೇ ಈವರೆಗೂ ೧೪೦ ಕೋಟಿ ರೂ.ಗಳನ್ನು ರಾಜ್ಯ ಸರಕಾರ ವೆಚ್ಚ ಮಾಡಿದೆ. ಬೆಳಗ್ಗೆ ಯಾವ ಟೀವಿ ನೋಡಿದರೂ, ಯಾವ ಪೇಪರ್ ನೋಡಿದರೂ ನಿಮ್ಮದೇ (ಸರಕಾರದ್ದು) ದರ್ಶನ ಆಗುತ್ತಿದೆ. ಎದ್ದ ಕೂಡಲೇ ದೇವರ ದರ್ಶನದ ಬದಲು ನಿಮ್ಮದೇ ದರ್ಶನ ಆಗುತ್ತಿದೆ ಎಂದು ಸರಕಾರದ ವಿರುದ್ಧ ಅವರು ಪ್ರಹಾರ ನಡೆಸಿದರು.
    ಪರಿಶುದ್ಧ ಆಡಳಿತ ಎನ್ನುತ್ತೀರಿ. ಎಲ್ಲಿ ನೋಡಿದರೂ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಮಧ್ಯವರ್ತಿಗಳ ಉಪಟಳ ವಿಪರೀತವಾಗಿದೆ ಎಂದು ಅವರು ಹೇಳಿದರು.

    Verbattle
    Verbattle
    Verbattle
    Congress Government Karnataka m Politics ಕಾಂಗ್ರೆಸ್
    Share. Facebook Twitter Pinterest LinkedIn Tumblr Email WhatsApp
    Previous Articleಶಾಸಕರ ಮನೆ ಮದುವೆಗಾಗಿ ಜಿಲ್ಲಾ ಕ್ರೀಡಾಂಗಣ ಬಾಡಿಗೆ ಕೊಟ್ಟ ಅಧಿಕಾರಿ | Haveri
    Next Article ವಿಧಾನಸಭೆಯಲ್ಲಿ ಸಿದ್ದರಾಮಯ್ಯ ದಾಖಲೆ | Siddaramaiah
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn on ನಿರ್ಮಲಾ ಸೀತರಾಮನ್ ಆಪ್ತನ ಹೆಸರಲ್ಲಿ ಧೋನಿ ಮ್ಯಾನೇಜರ್ ಗೆ ವಂಚನೆ
    • LeonardReawn on ಸಾರಿಗೆ ನಿಗಮದ ನೌಕರರಿಗೆ ಅತೀವ ಹರ್ಷ
    • LinwoodGah on ಆಂಧ್ರ ಮುಖ್ಯಮಂತ್ರಿ ಹೆಸರಲ್ಲಿ ವಂಚನೆ
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.