Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Love ಗಾಗಿ ತಾಯಿ ಒಡವೆ ಕಳವು..
    ಸುದ್ದಿ

    Love ಗಾಗಿ ತಾಯಿ ಒಡವೆ ಕಳವು..

    vartha chakraBy vartha chakraMay 17, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮೇ.17– ಪ್ರಿಯಕರನಿಗಾಗಿ ಮನೆಯಲ್ಲಿದ್ದ ತಾಯಿಯ ಸುಮಾರು 1ಕೆಜಿ ಚಿನ್ನಾಭರಣವನ್ನು ಕಳವು ಮಾಡಿ ರೋಲ್ಡ್ ಗೋಲ್ಡ್ ಚಿನ್ನವನ್ನು ತಂದಿಟ್ಟಿದ್ದ ಐನಾತಿ ಮಗಳು ಆಕೆಯ‌ ಪ್ರಿಯತಮನನ್ನು ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ.
    ಅಮೃತಹಳ್ಳಿಯ ಜಕ್ಕೂರು ಲೇಔಟ್ ರತ್ನಮ್ಮ ನೀಡಿದ ದೂರಿನ ಮೇಲೆ ಪ್ರಕರಣ ದಾಖಲಿಸಿ ಮಗಳು ದೀಪ್ತಿ ಹಾಗು ಮದನ್ ನನ್ನು ಬಂಧಿಸಿ ವಿಚಾರಣೆಗೊಳಪಡಿಸಲಾಗಿದೆ ಎಂದು ಡಿಸಿಪಿ ಡಾ.ಅನೂಪ್ ಶೆಟ್ಟಿ ಅವರು ತಿಳಿಸಿದ್ದಾರೆ.
    ಬಂಧಿತರಿಂದ 36 ಲಕ್ಷ ಮೌಲ್ಯದ 725 ಗ್ರಾಂ ತೂಕದ ವಿವಿಧ ಚಿನ್ನದ ಆಭರಣಗಳು ಕಳವು ಮಾಡಿದ ಆಭರಣಗಳ ಮಾರಾಟದಿಂದ ಬಂದ ಹಣದಿಂದ ಖರೀದಿಸಿದ್ದ ಸುಮಾರು 6 ಲಕ್ಷ ರೂ ಬೆಲೆಬಾಳುವ 3 ಕಾರುಗಳನ್ನು
    ವಶಪಡಿಸಿಕೊಳ್ಳಲಾಗಿದೆ. ಜಕ್ಕೂರು ಲೇಔಟ್​ನಲ್ಲಿ ರತ್ನಮ್ಮ ಹಾಗು ಪುತ್ರಿ ದೀಪ್ತಿ ವಾಸವಾಗಿದ್ದರು. ರತ್ನಮ್ಮ‌ ಟೈಲರ್ ಕೆಲಸ ಮಾಡುತ್ತಿದ್ದರೆ, ಪುತ್ರಿ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದಳು. ಈಗಾಗಲೇ ವಿವಾಹವಾಗಿದ್ದ ದೀಪ್ತಿಗೆ ಪತಿಯಿಂದ ವಿಚ್ಛೇದನ ಪಡೆದುಕೊಂಡಿದ್ದಳು.‌ ಈ ನಡುವೆ ಡ್ರೈವಿಂಗ್ ಕಲಿಯಲು ಮದನ್ ನಡೆಸುತ್ತಿದ್ದ ಡೈವಿಂಗ್ ಸ್ಕೂಲ್​​ಗೆ ದೀಪ್ತಿ ಸೇರಿಕೊಂಡಿದ್ದಳು.‌ ಇಲ್ಲಿ ಶುರುವಾದ ಸ್ನೇಹ ಪ್ರೀತಿಗೆ ತಿರುಗಿದೆ. ಮದನ್​​ಗೆ ಮದುವೆಯಾಗಿ ಇಬ್ಬರೂ ಮಕ್ಕಳಿದ್ದರೂ ದೀಪ್ತಿ ಪ್ರೀತಿಗೆ ಸೈ ಅಂದಿದ್ದ. ಮದನ್ ಪ್ರೀತಿಗೆ ಶರಣಾಗಿದ್ದ ದೀಪ್ತಿ, ಪ್ರಿಯಕರನ ಅಣತಿಯಂತೆ ಮನೆಯಲ್ಲಿದ್ದ ಚಿನ್ನಾಭರಣ ಕಳವು ಮಾಡಿದ್ದಾಳೆ.
    ಹಂತ-ಹಂತವಾಗಿ ಸುಮಾರು ಒಂದು ಕೆ.ಜಿ.ಚಿನ್ನ ಕಳ್ಳತನ ಮಾಡಿ ಕೊಟ್ಟಿದ್ದ ದೀಪ್ತಿ ತಾಯಿಗೆ ಅನುಮಾನ ಬಾರದಿರಲು ಕದ್ದ ಜಾಗದಲ್ಲಿ ನಕಲಿ ಚಿನ್ನಾಭರಣ ಇಟ್ಟಿದ್ದಾಳೆ.‌ ಕೆಲ ದಿನಗಳ ಹಿಂದೆ ಮದುವೆ ಸಲುವಾಗಿ ಒಡವೆ ಧರಿಸಿಕೊಳ್ಳಲು ಬೀರುವಿನಲ್ಲಿ ನೋಡಿದಾಗ ಚಿನ್ನಾಭರಣದಲ್ಲಿ ವ್ಯತ್ಯಾಸ ಕಂಡುಬಂದಿದೆ.
    ಈ ಬಗ್ಗೆ ಮಗಳನ್ನು ಪ್ರಶ್ನಿಸಿದಾಗ ಗೊತ್ತಿಲ್ಲದಂತೆ ನಟಿಸಿದ್ದಾಳೆ.‌‌ ಇದರಿಂದ ಅನುಮಾನಗೊಂಡು ಆಗಾಗ ಮನೆಗೆ ಬರುತ್ತಿದ್ದ ಮದನ್‌ ಹಾಗು ಮಗಳ ವಿರುದ್ಧ ತಾಯಿ ಅಮೃತಹಳ್ಳಿ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ ಚಿನ್ನಾಭರಣ ಕದ್ದಿರುವುದನ್ನು ಇಬ್ಬರೂ ಒಪ್ಪಿಕೊಂಡಿದ್ದಾರೆ. ಕದ್ದ ಚಿನ್ನವನ್ನು ಮುತ್ತೂಟ್ ಗೋಲ್ಡ್ ಲೋನ್ ಹಾಗು ಮಣಪ್ಪುರಂ ಗೋಲ್ಡ್​ನಲ್ಲಿ ಅಡಮಾನ ಇಟ್ಟಿದ್ದು, ಅದರಿಂದ ಬಂದ ಹಣದಲ್ಲಿ ಇಬ್ಬರು ಮೋಜು ಮಸ್ತಿ ಮಾಡುತ್ತಿದ್ದರು ಎಂದು ತಿಳಿಸಿದ್ದಾರೆ.

    love and dokha
    Share. Facebook Twitter Pinterest LinkedIn Tumblr Email WhatsApp
    Previous Articleಮೂರು ಹುಲಿಮರಿಗಳನ್ನು ಸಾಕುತ್ತಿದೆ ಈ ಲ್ಯಾಬ್ರಡಾರ್!
    Next Article ಕೈ ಗಳಿಗೆ ಕೋಳ ಹಾಕಿ.
    vartha chakra
    • Website

    Related Posts

    C.M.ಭಯೋತ್ಪಾದಕ ಕೃತ್ಯ ಎಂದ ಘಟನೆ ಯಾವುದು ಗೊತ್ತಾ ?

    August 1, 2025

    ಬೆಂಗಳೂರಿನಲ್ಲಿ ಅಡಗಿದ್ದ ಆಲ್ ಖೈದಾ ನಾಯಕಿ

    July 31, 2025

    ಆಲ್ ಖೈದಾ ಲೇಡಿಯ ಭಯಾನಕ ನಂಟು.

    July 31, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    C.M.ಭಯೋತ್ಪಾದಕ ಕೃತ್ಯ ಎಂದ ಘಟನೆ ಯಾವುದು ಗೊತ್ತಾ ?

    ಬೆಂಗಳೂರಿನ PUB ಮತ್ತು Bar ಗಳ‌ ಲೈಸೆನ್ಸ್ ರದ್ದಾಗಲಿದೆಯಾ.?

    ಬೆಂಗಳೂರಿನಲ್ಲಿ ಅಡಗಿದ್ದ ಆಲ್ ಖೈದಾ ನಾಯಕಿ

    ಆಲ್ ಖೈದಾ ಲೇಡಿಯ ಭಯಾನಕ ನಂಟು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • presskurs-411 on ಹೆದರಿದ ತೇಜಸ್ವಿ ಸೂರ್ಯ..?
    • RichardNen on ಪಾಕಿಸ್ತಾನೀಯರಿಗಾಗಿ ರಾಜ್ಯದಲ್ಲಿ ಹುಡುಕಾಟ
    • presskurs-941 on ಶಿವಕುಮಾರ್ ಅವರನ್ನು ಕಟ್ಟಿಹಾಕುವ ಪ್ಲಾನ್ ಹೇಗಿದೆ ಗೊತ್ತಾ | DK Shivakumar
    Latest Kannada News

    C.M.ಭಯೋತ್ಪಾದಕ ಕೃತ್ಯ ಎಂದ ಘಟನೆ ಯಾವುದು ಗೊತ್ತಾ ?

    August 1, 2025

    ಬೆಂಗಳೂರಿನ PUB ಮತ್ತು Bar ಗಳ‌ ಲೈಸೆನ್ಸ್ ರದ್ದಾಗಲಿದೆಯಾ.?

    August 1, 2025

    ಬೆಂಗಳೂರಿನಲ್ಲಿ ಅಡಗಿದ್ದ ಆಲ್ ಖೈದಾ ನಾಯಕಿ

    July 31, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe