Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಧ್ಯಪ್ರದೇಶದ ಹನಿಟ್ರ್ಯಾಪ್ ಕಿಂಗ್ ಪಿನ್ ಅರೆಸ್ಟ್ | Honey Trap
    ರಾಜ್ಯ

    ಮಧ್ಯಪ್ರದೇಶದ ಹನಿಟ್ರ್ಯಾಪ್ ಕಿಂಗ್ ಪಿನ್ ಅರೆಸ್ಟ್ | Honey Trap

    vartha chakraBy vartha chakraSeptember 13, 202328 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಸೆ.13 – ಮಧ್ಯಪ್ರದೇಶದ (Madhya Pradesh) ಅತಿದೊಡ್ಡ ಹೈ ಪ್ರೊಫೈಲ್ ಹನಿಟ್ರಾಪ್ (Honey Trap) ಪ್ರಕರಣದ​ ಮಾಸ್ಟರ್ ಮೈಡ್ ನಗರದಲ್ಲಿ ಸಿಕ್ಕಿಬಿದ್ದಿದ್ದಾಳೆ.
    ಹನಿಟ್ರಾಪ್ ಪ್ರಕರಣದ​ ಮಾಸ್ಟರ್ ಮೈಡ್ ಆರತಿ ದಯಾಳ್​ ಳನ್ನು ಮಹದೇವಪುರ ಪೊಲೀಸರು ಬಂಧಿಸಿ ಮಧ್ಯಪ್ರದೇಶದ ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ.
    ಕಳೆದ 2019 ರಲ್ಲಿ ಮಧ್ಯಪ್ರದೇಶದಲ್ಲಿ ನಡೆದಿದ್ದ ಬಹುದೊಡ್ಡ ಹೈಪ್ರೋಫೈಲ್​ ಹನಿಟ್ರಾಪ್ ಪ್ರಕರಣದಲ್ಲಿ ಜೈಲು ಸೇರಿ 2020 ರಲ್ಲಿ ಜಾಮೀನಿನ ಮೇಲೆ‌ ಹೊರ ಬಂದು ನಾಪತ್ತೆಯಾಗಿದ್ದ ಸೋನು, ಸಮಂತಾ ಇನ್ನಿತರ ಹೆಸರುಗಳಿಂದ ಕುಖ್ಯಾತಿ ಪಡೆದಿದ್ದ, ಆರತಿ ಅಗರ್ವಾಲ್ ಕಳ್ಳತನ ಪ್ರಕರಣದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾಳೆ.

    ಹಿಂದೆ ಹೈ ಪ್ರೊಫೈಲ್ ಹನಿಟ್ರಾಪ್ ಮಾಡುತ್ತಿದ್ದ ಅರತಿ ಇತ್ತೀಚಿನ ದಿನಗಳಲ್ಲಿ ಬೆಂಗಳೂರು ಚೆನ್ನೈ ಸೇರಿ ವಿವಿಧ ಕಡೆ ದರೋಡೆ ಮಾಡುತ್ತಿದ್ದಳು. ಮೊದಲು ಸ್ಪಾಗಳಲ್ಲಿ ಕೆಲಸಕ್ಕೆ ಸೇರುತಿದ್ದ ಆರತಿ, ಹತ್ತು ದಿನ ಕೆಲಸ ಮಾಡಿ ಅಲ್ಲಿಯೇ ಕೆಲಸ ಮಾಡುವ ಯುವತಿಯರ ರೂಮ್ ,ಪಿಜಿ ಯಲ್ಲಿ ಉಳಿದುಕೊಂಡು ಬಳಿಕ ಅವರ ಹಣ ಬಂಗಾರ ಕದ್ದು ಪರಾರಿಯಾಗುತ್ತಿದ್ದಳು.

    ಕಿಂಗ್​ ಪಿನ್​ ಆರತಿ:
    ಹನಿಟ್ರ್ಯಾಪ್ (Honey Trap) ಕಿಂಗ್​ ಪಿನ್​ ಆರತಿ ಬಡ ಕುಟುಂಬದಿಂದ ಬಂದ ಕಾಲೇಜು ಯುವತಿಯರಿಗೆ ಐಷಾರಾಮಿ ಜೀವನವನ್ನು ಪರಿಚಯಿಸಿ ಅವರು ಅದರತ್ತ ಆಕರ್ಷಿತರಾಗುವಂತೆ ಮಾಡುತ್ತಿದ್ದ ಶ್ವೇತಾ ಹಾಗೂ ಆರತಿ ದಯಾಳ್ ನಂತರ ಹನಿಟ್ರ್ಯಾಪ್​ಗೆ ಬಳಸಿಕೊಳ್ಳುತ್ತಿದ್ದರು. ರಾಜಕಾರಣಿಗಳು ಮತ್ತು ಅಧಿಕಾರಿಗಳಿಗೆ ಈ ಕಾಲೇಜು ಯುವತಿಯರನ್ನು ಒದಗಿಸುತ್ತಿದ್ದರು.
    ರಾಜಕಾರಣಿಗಳು ಕಾಲೇಜು ಯುವತಿಯರಿಗೇ ಹೆಚ್ಚು ಡಿಮ್ಯಾಂಡ್ ಇಡುತ್ತಿದ್ದುದರಿಂದ ಶ್ವೇತಾ ಇಂಥದ್ದೊಂದು ಜಾಲ ಹೆಣೆದಿದ್ದಳು. ಜೊತೆಗೆ 40 ವೇಶ್ಯೆಯರನ್ನೂ ಬಾಡಿಗೆ ಆಧಾರದಲ್ಲಿ ಇಟ್ಟುಕೊಂಡಿದ್ದಳು.
    ಸರ್ಕಾರದ ಮಟ್ಟದಲ್ಲಿ ಸಾಕಷ್ಟು ಸಂಪರ್ಕ​ ಹೊಂದಿದ್ದ ಶ್ವೇತಾ ಆರತಿ ದಯಾಳ್ ಜೊತೆ ಸೇರಿಕೊಂಡು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿಗೂ ಯುವತಿ ಮತ್ತು ಮಹಿಳೆಯರನ್ನು ಕಳುಹಿಸುತ್ತಿದ್ದಳು ಎಂಬ ವಿಷಯ ವಿಚಾರಣೆ ವೇಳೆ ತಿಳಿದುಬಂದಿತ್ತು.

    3 ಕೋಟಿ ಹಫ್ತಾ ಬೇಡಿಕೆ:
    ಇಂತಹದ್ದೇ ಹನಿಟ್ರ್ಯಾಪ್​ ಪ್ರಕರಣವೊಂದರಲ್ಲಿ ಇಂದೋರ್‌ ಪುರಸಭೆಯ ಎಂಜಿನಿಯರ್‌ ಹರ್ಬಜನ್‌ ಸಿಂಗ್‌ ಅವರಿಗೆ ಆರತಿ ದಯಾಳ್‌ ಮತ್ತು ಮೋನಿಯಾ ಯಾದವ್‌ ಸೇರಿ 3 ಕೋಟಿ ರೂ. ಹಫ್ತಾ ಬೇಡಿಕೆ ಇಟ್ಟಾಗ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ತನಿಖೆ ನಡೆಸಿದಾಗ ಈ ಜಾಲದ ಕೃತ್ಯ ಬಯಲಾಗಿತ್ತು.
    ಸೆಕ್ಸ್​ ವಿಡಿಯೋ ಪತ್ತೆ:
    ಇನ್ನು ಎಸ್​ಐಟಿ ತನಿಖೆ ವೇಳೆ ಆರೋಪಿಗಳ ಬಳಿ 1000ಕ್ಕೂ ಅಧಿಕ ವಿಡಿಯೋ ಕ್ಲಿಪ್ಪಿಂಗ್​ಗಳು, ಸೆಕ್ಸ್​ ಚಾಟ್​ಗಳು, ಬ್ಲಾಕ್​ಮೇಲ್ ಮಾಡಲು ಇಟ್ಟುಕೊಂಡಿದ್ದ ವಿಡಿಯೋಗಳು ಸಿಕ್ಕಿದ್ದವು. ಇವುಗಳಲ್ಲಿ ಸಿನಿಮಾ ನಟರು, ರಾಜಕಾರಣಿಗಳು, ಉದ್ಯಮಿಗಳು, ಪೊಲೀಸ್ ಅಧಿಕಾರಿಗಳು, ಪತ್ರಕರ್ತರು, ಅಧಿಕಾರಿಗಳ ಜೊತೆಗಿನ ಸೆಕ್ಸ್​ ವಿಡಿಯೋಗಳು ಪತ್ತೆಯಾಗಿದ್ದವು

    crime Honey Trap m madhya pradesh News ಅಪರಾಧ ಸುದ್ದಿ ಕಳ್ಳತನ ಕಾಲೇಜು ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಸಾಲ ತೀರಿದ ತಕ್ಷಣವೇ ದಾಖಲೆ ಕೊಡದಿದ್ದರೆ ಗ್ರಹಚಾರ | Personal Loan
    Next Article ರಾಜ್ಯದ 195 ತಾಲ್ಲೂಕುಗಳು ಬರ ಪೀಡಿತ | Drought
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • narkologiyavladimirvucky on ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • zapojchelyabinskvucky on ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • double happiness cigarette australia on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ವರ್ಷದಲ್ಲಿ 3ನೇ ಗಂಡನನ್ನೂ ಬಿಟ್ಟನಟಿ#varthachakra #malayalamactresses #meeravasudevan #divorce #fact
    Subscribe