Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Bus ನಲ್ಲಿ ಯುವತಿ ಮೇಲೆ ಮೂತ್ರ ವಿಸರ್ಜಿಸಿದ Mechanical Engineer
    ಅಪರಾಧ

    Bus ನಲ್ಲಿ ಯುವತಿ ಮೇಲೆ ಮೂತ್ರ ವಿಸರ್ಜಿಸಿದ Mechanical Engineer

    vartha chakraBy vartha chakraFebruary 22, 202327 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಫೆ.22-

    ಇತ್ತೀಚೆಗೆ ವಿಮಾನದಲ್ಲಿ ಪ್ರಯಾಣಿಕನೊಬ್ಬ ಸಹ ಪ್ರಯಾಣಿಕ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ ಘಟನೆ ದೇಶಾದ್ಯಂತ ಸಂಚಲನ ಸೃಷ್ಟಿಸಿತ್ತು. ಈ ಕೃತ್ಯ ಮಾಸುವ ಮುನ್ನವೇ ಇಂತಹುದೇ ಘಟನೆ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಬಸ್‌ನಲ್ಲಿ ನಡೆದಿದೆ.

    ವಿಜಯಪುರದಿಂದ ಮಂಗಳೂರಿಗೆ (Vijayapura – Mangalore) ಹೊರಟಿದ್ದ KSRTC ಸ್ಲೀಪರ್‌ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯವಕನೊಬ್ಬ ಅದೇ ಬಸ್ ನಲ್ಲಿ ಪ್ರಯಾಣ ಮಾಡುತ್ತಿದ್ದ  ಯುವತಿಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ.

    ವಿಜಯಪುರದಿಂದ ಹುಬ್ಬಳ್ಳಿಗೆ ಬರುತ್ತಿದ್ದ ಯುವತಿ KSRTC ಬಸ್‌ನ ಸೀಟ್ ನಂಬರ್ 3ರಲ್ಲಿ ಇದ್ದರು. ವಿಜಯಪುರದಿಂದ ಮಂಗಳೂರಿಗೆ ಹೊರಟಿದ್ದ ಯುವಕ ರಾಮಪ್ಪ ಎಂಬಾತ ಅದೇ ಬಸ್‌ನಲ್ಲಿ ಸೀಟ್‌ ನಂಬರ್‌ 28ರಲ್ಲಿ ಪ್ರಯಾಣಿಸುತ್ತಿದ್ದನು.

    ಈ ಬಸ್‌ ಕಿರೇಸೂರು ಎಂಬ ಬಳಿ ರಾತ್ರಿ ಊಟಕ್ಕೆಂದು ಡಾಬಾದ ಬಳಿ ನಿಲ್ಲಿಸಿತ್ತು. ಎಲ್ಲರೂ ಊಟಕ್ಕೆಂದು ಇಳಿದರೆ ಯುವತಿ ಸೇರಿ ಕೆಲವರು ಮಾತ್ರ ಬಸ್ ನಲ್ಲಿಯೇ ನಿದ್ರೆ ಮಾಡುತ್ತಿದ್ದರು.

    ಆ ಸಂದರ್ಭದಲ್ಲಿ ರಾಮಪ್ಪ ಎಂಬ ಯುವಕ ತನ್ನ ಸೀಟ್‌ನಿಂದ ಎದ್ದು ಬಂದು ಯುವತಿ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ.

    ಏಕಾಏಕಿ ಯುವಕನೊಬ್ಬ ಸೀಟ್‌ನ ಬಳಿ ಬಂದು ಮೂತ್ರ ವಿಸರ್ಜನೆ ಮಾಡುತ್ತಿದ್ದಂತೆ ವಿಚಲಿತಳಾದ ಯುವತಿ ದಿಢೀರ್ ಬಸ್‌ನಿಂದ ಇಳಿದು ಹೊರಗೆ ಓಡಿ ಬಂದಿದ್ದಾರೆ.  ಡಾಬಾದಲ್ಲಿ ಊಟ ಮಾಡುತ್ತಿದ್ದ ಬಸ್‌ ಕಂಡಕ್ಟರ್ ಬಳಿ ತೆರಳಿದ ಯುವತಿ ಕಣ್ಣೀರು ಹಾಕುತ್ತಾ ಸಂಪೂರ್ಣ ಮಾಹಿತಿ ನೀಡಿದ್ದಾರೆ.‌ ಸಹ ಪ್ರಯಾಣಿಕರಿಗೂ ವಿಷಯ ಗೊತ್ತಾಗಿದೆ.

    ಯುವತಿ ಘಟನೆ ವಿವರಿಸುತ್ತದ್ದಂತೆ ಸಿಟ್ಟಿಗೆದ್ದ ಕಂಡಕ್ಟರ್ ಮತ್ತು ಡ್ರೈವರ್ ಹಾಗೂ ಪ್ರಯಾಣಿಕರು ಯುವಕನನ್ನು ‌ಹೊರ ಕರೆದು ಹಿಗ್ಗಾ ಮುಗ್ಗಾ ಬೈದಿದ್ದಾರೆ. ಯುವಕ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಮದ್ಯಪಾನ ಮಾಡಿರಬಹುದು ಎಂದು ಅನುಮಾನಗೊಂಡಿದ್ದಾರೆ.

    ಆ ಬಳಿಕ ಡಾಬಾದಲ್ಲಿಯೇ ಯುವಕನನ್ನು ಬಿಟ್ಟು ಬಸ್‌ ಮಂಗಳೂರಿನತ್ತ ಹೊರಟಿದೆ. ಘಟನೆ ಕುರಿತು ಕಂಡಕ್ಟರ್ ಅವರನ್ನು ಹುಬ್ಬಳ್ಳಿ ಗೋಕುಲ ಬಸ್ ನಿಲ್ದಾಣದಲ್ಲಿ ವಿಚಾರಿಸಿದಾಗ ಘಟನೆ ಜರುಗಿದ್ದು ನಿಜ ಎಂದು ಒಪ್ಪಿಕೊಂಡಿದ್ದಾರೆ.

    ಹೀಗಾಗಿಯೇ ಬಸ್ ಬರುವುದು ಅರ್ಧ ಗಂಟೆ ತಡವಾಗಿದೆ. ಯುವಕ ಸೀಟ್ ನಂಬರ್ 28 ರಲ್ಲಿ ಮಂಗಳೂರಿಗೆ ಪ್ರಯಾಣಿಸುತ್ತಿದ್ದನು. ಘಟನೆ ಜರುಗಿದ ಬಳಿಕ ಆತನನ್ನು ಕಿರೇಸೂರ ಡಾಬಾ ಬಳಿ ಕೆಳಗಿಸಿ‌‌ ಬಂದೆವು. ಯುವತಿಗೆ ಸಮಾಧಾನ ಹೇಳಿದ್ದು, ಹುಬ್ಬಳ್ಳಿಯಲ್ಲಿ ಬಸ್‌ ಇಳಿದು ತೆರಳಿದ್ದಾಳೆ ಎಂದು ತಿಳಿಸಿದ್ದಾರೆ.

    ಸಹಪ್ರಯಾಣಿಕರ ಮೇಲೆ ಮೂತ್ರ ವಿಜರ್ಸನೆ ಮಾಡಿದ ಆ ಯುವಕ 25 ವರ್ಷ ವಯಸ್ಸಿನವಾಗಿದ್ದು, ವಿಚಾರಣೆ ಮಾಡಿದಾಗ ತಾನು ಮೆಕ್ಯಾನಿಕಲ್ ಎಂಜಿನಿಯರ್ ಎಂದು ಹೇಳಿಕೊಂಡಿದ್ದಾನೆ. ಅಕ್ಷರಸ್ಥನಾಗಿ ಅನಾಗರೀಕರಂತೆ ವರ್ತಿಸಿರುವುದಕ್ಕೆ ನಾಚಿಕೆಯಾಗುವುದಿಲ್ಲವೇ ಎಂದು ಸಹ ಪ್ರಯಾಣಿಕರು ಬೈದಿದ್ದಾರೆ. ಈ ಘಟನೆಯ ಕುರಿತು ಯಾವುದೇ ಪೊಲೀಸ್‌ ದೂರು ದಾಖಲಾಗಿಲ್ಲ. KSRTC ಕೂಡಾ ಪ್ರಯಾಣಿಕನ ವಿರುದ್ಧ ಯಾವುದೇ ಕ್ರಮಕ್ಕೂ ಮುಂದಾಗಿಲ್ಲ ಎಂದು ತಿಳಿದುಬಂದಿದೆ.

     

    #bus #KSRTC Karnataka KSRTC m mangalore misbehaviour vijayapura ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleಪೊಲೀಸರಿಂದ BSNLಗೆ ಬೆಣೆ Jio ಗೆ ಮಣೆ
    Next Article ವಿದೇಶಿಯರ ಅಕ್ರಮ ವಾಸ್ತವ್ಯದ ಕೇಂದ್ರವಾದ Bengaluru!
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಜಾತಿ ಸಮೀಕ್ಷೆಯಲ್ಲಿ ಡಿಸಿಎಂ ಕೊಟ್ಟ ವಿವರ ಗೊತ್ತಾ.

    October 4, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Lune Finvex Review on ಕುಂಭಮೇಳದಲ್ಲಿ ಕಿನ್ನರ ಕಲರವ
    • Lune Finvex on ಚಿನ್ನ ಕಳ್ಳಸಾಗಣೆ ಮಾಡಿದ ಅಂಧ
    • Lhanesoume on ಅಗಲಿದ “ಕಲಾ ತಪಸ್ವಿ”
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    CSK ವಿರುದ್ಧ ಸಿಡಿದೆದ್ದ ಜಡೇಜಾ #varthachakra #csk #jadeja #dhoni #sanjusamson #viralvideo #facts #ipl
    Subscribe