Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸುರ್ಜೆವಾಲಾ ವಿರುದ್ಧ ಮಂತ್ರಿಗಳ ಬಂಡಾಯ | Randeep Surjewala
    ರಾಜಕೀಯ

    ಸುರ್ಜೆವಾಲಾ ವಿರುದ್ಧ ಮಂತ್ರಿಗಳ ಬಂಡಾಯ | Randeep Surjewala

    vartha chakraBy vartha chakraFebruary 9, 20243 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.9- ಲೋಕಸಭೆ ಚುನಾವಣೆ ಹೊಸ್ತಿಲಿನಲ್ಲಿ ರಾಜ್ಯ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ವಿದ್ಯಮಾನಗಳು ಕುತೂಹಲ ಮೂಡಿಸಿವೆ .ಅದರಲ್ಲೂ ಪ್ರಮುಖವಾಗಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಎಐಸಿಸಿ ನಾಯಕ ರಣದೀಪ್ ಸುರ್ಜೇವಾಲ ವಿರುದ್ಧ ಮಂತ್ರಿಗಳು ಬಂಡಾಯ ಸಾರಿದ್ದಾರೆ.
    ಲೋಕೋಪಯೋಗಿ ಮಂತ್ರಿ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಅಹಿಂದ ಸಮುದಾಯಕ್ಕೆ ಸೇರಿದ ಮಂತ್ರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸರ್ಕಾರದ ಆಡಳಿತ ಮತ್ತು ಪಕ್ಷದ ಚಟುವಟಿಕೆಗಳಲ್ಲಿ ಸುರ್ಜೆವಾಲ ಅನಗತ್ಯವಾಗಿ ಹಸ್ತಕ್ಷೇಪ ಮಾಡುತ್ತಿದ್ದು ಅದಕ್ಕೆ ಕಡಿವಾಣ ಹಾಕುವಂತೆ ಮನವಿ ಮಾಡಿದ್ದಾರೆ.
    ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲೂ ಸುರ್ಜೇವಾಲ ಅವರು ಮೂಗು ತೂರಿಸುತ್ತಿದ್ದಾರೆ. ಕಾರ್ಯಕರ್ತರಿಗೆ ಶಿಫಾರಸು ಪತ್ರಗಳನ್ನು ನೀಡುವ ಮೂಲಕ ಗೊಂದಲ ಮೂಡಿಸುತ್ತಿದ್ದಾರೆ ಎಂದು ದೂರು ನೀಡಿರುವುದಾಗಿ ಮೂಲಗಳು ತಿಳಿಸಿವೆ.

    ಪ್ರಮುಖವಾಗಿ ನಿಗಮ ಮಂಡಳಿ ನೇಮಕಾತಿ ವಿಷಯದಲ್ಲಿ ಇವರು ತಮ್ಮ ಅಧಿಕಾರ ವ್ಯಾಪ್ತಿಯನ್ನು ಮೀರಿ ನಿರ್ಧಾರ ಕೈಗೊಂಡಿದ್ದಾರೆ ಅದನ್ನು ಆದೇಶದ ಮೂಲಕ ಜಾರಿಗೆ ತರುವಂತೆ ಇಲಾಖೆಯ ಉಸ್ತುವಾರಿಗಳಾದ ತಮ್ಮ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ತಿಳಿಸಿದ್ದಾರೆ.
    ನಿಗಮ ಮಂಡಳಿ ನೇಮಕಾತಿ ಕುರಿತಂತೆ ಪಕ್ಷದ ಜಿಲ್ಲಾ ಘಟಕಗಳು ಶಾಸಕರು ಹಾಗೂ ಹಿರಿಯ ಮುಖಂಡರೊಂದಿಗೆ ಸತತ ಸಮಾಲೋಚನೆ ನಡೆಸಿ ಪಟ್ಟಿ ಸಿದ್ಧಪಡಿಸಲಾಗಿದೆ ಅದನ್ನು ಅನುಮೋದಿಸುವಂತೆ ಹೈಕಮಾಂಡ್ ಗೆ ರವಾನಿಸಿದ್ದನ್ನೆ ನೆಪವಾಗಿಟ್ಟುಕೊಂಡು ಅದರಲ್ಲಿ ಹಲವಾರು ಬದಲಾವಣೆಗಳನ್ನು ಮಾಡಿದ್ದಾರೆ ಎಂದು ಮುಖ್ಯಮಂತ್ರಿಗಳಿಗೆ ತಿಳಿಸಿರುವುದಾಗಿ ಗೊತ್ತಾಗಿದೆ.

    ನಿನ್ನೆ ಬೆಳಗ್ಗೆ ಆಹಾರ ಸಚಿವ ಕೆಎಚ್ ಮುನಿಯಪ್ಪ ನಿವಾಸದಲ್ಲಿ ಉಪಹಾರ ಸಭೆ ನಡೆಸಿದ ಈ ಎಲ್ಲಾ ಸಚಿವರು ನಿಗಮ ಮಂಡಳಿ ನೇಮಕಾತಿ ಪಟ್ಟಿಯಲ್ಲಿ ನುಸುಳಿರುವ ಪ್ರಭಾವತಿ ಕಾಂತಾ ನಾಯಕ್ ಪ್ರೇಮ ಸರೋವರ ಶ್ರೀನಿವಾಸ್ ಸೇರಿದಂತೆ ಒಂಬತ್ತು ಹೆಸರುಗಳ ಬಗ್ಗೆ ಈ ಎಲ್ಲ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಪಕ್ಷಕ್ಕೆ ನೀಡಿರುವ ಕೊಡುಗೆ ಏನು ಯಾವ ಆಧಾರದಲ್ಲಿ ಇವರಿಗೆ ನಿಗಮ ಮಂಡಳಿಯ ಹುದ್ದೆ ನೀಡಬೇಕು ಸುರ್ಜೇವಾಲ ಅವರು ಯಾವ ಅಂಶ ಪರಿಗಣಿಸಿ ಇವರ ಹೆಸರನ್ನು ಪಟ್ಟಿಯಲ್ಲಿ ಸೇರಿಸಿದ್ದಾರೆ ಎಂದು ಪ್ರಶ್ನಿಸಿರುವ ಈ ನಾಯಕರು ಯಾವುದೇ ಕಾರಣಕ್ಕೂ ಈ ಪಟ್ಟಿಗೆ ಅನುಮೋದನೆ ನೀಡಬಾರದು ಎಂದು ಮುಖ್ಯಮಂತ್ರಿಗಳನ್ನು ಆಗ್ರಹಿಸಿರುವುದಾಗಿ ತಿಳಿದು ಬಂದಿದೆ.
    ಪಕ್ಷದ ಉಸ್ತುವಾರಿಯಾಗಿರುವ ಈ ನಾಯಕ ಅನಗತ್ಯವಾಗಿ ಆಡಳಿತ ವ್ಯವಹಾರಗಳಲ್ಲಿ ಮಾಡುತ್ತಿರುವ ಹಸ್ತಕ್ಷೇಪದ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹೈಕಮಾಂಡ್ ಗಮನಕ್ಕೆ ತರಬೇಕು ಎಂದು ಮುಖ್ಯಮಂತ್ರಿಗಳಿಗೆ ಸಲಹೆ ಮಾಡಿರುವುದಾಗಿ ಗೊತ್ತಾಗಿದೆ.

    Verbattle
    Verbattle
    Verbattle
    ಕಾಂಗ್ರೆಸ್ Election ವ್ಯವಹಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಡ್ರಗ್ಸ್ ದಂಗೆಕೋರರ ವಿರುದ್ಧ ಬುಲ್ಡೋಜರ್ ಕಾನೂನು
    Next Article ಜೆ ಡಿ ಎಸ್ ಗೆ ಗುಡ್ ಬೈ ಹೇಳಲಿರುವ ಇಬ್ಬರು ಶಾಸಕರು | JDS
    vartha chakra
    • Website

    Related Posts

    ಬಿಜೆಪಿಯ ಅಂತಿಮ ದಿನಗಳು ಹತ್ತಿರವಾಗಿವೆ: ಚಿಕ್ಕಬಳ್ಳಾಪುರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

    February 23, 2026

    ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧ

    February 23, 2026

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    February 21, 2026

    3 Comments

    1. Euoaij on February 11, 2026 6:47 pm

      betmgm Arkansas betmgm-play betmgm District of Columbia

      Reply
    2. Bpfmdi on February 19, 2026 7:30 am

      Test your luck in the best online games. crown coin casino login offers exclusive promotions and tournaments. Become a millionaire in one evening!

      Reply
    3. Tmzeyb on February 23, 2026 2:10 am

      Sweet Bonanza tempts you with colorful symbols and explosive potential. Land sweet bonanza 21100x 8+ matches anywhere and watch the wins roll in. Spin for glory!

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅತ್ತೆಯ ಸಾವಿಗೆ ದೇವರ ಮೊರೆ ಹೋದ ಸೊಸೆ! ಹುಂಡಿಯಲ್ಲಿ ಸಿಕ್ಕ ಪತ್ರ ವೈರಲ್!!

    ನಾಯಿ ಕಚ್ಚಿದ್ದಕ್ಕೆ ಹೀಗಾ ಮಾಡಿಕೊಳ್ಳೋದು..?!

    ಬಿಜೆಪಿಯ ಅಂತಿಮ ದಿನಗಳು ಹತ್ತಿರವಾಗಿವೆ: ಚಿಕ್ಕಬಳ್ಳಾಪುರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

    ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Diegotup on ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    • Tayloradvag on Alcohol ಇಲ್ಲದೆ ಪಾರ್ಟಿ ನಡೆಯುತ್ತಾ?
    • Edwardwromi on ಬಿಜೆಪಿ ಶಾಸಕ ಬೈರತಿ ಬಸವರಾಜ್ ಗೆ ಪೊಲೀಸ್ ಹುಡುಕಾಟ
    Latest Kannada News

    ಅತ್ತೆಯ ಸಾವಿಗೆ ದೇವರ ಮೊರೆ ಹೋದ ಸೊಸೆ! ಹುಂಡಿಯಲ್ಲಿ ಸಿಕ್ಕ ಪತ್ರ ವೈರಲ್!!

    February 24, 2026

    ನಾಯಿ ಕಚ್ಚಿದ್ದಕ್ಕೆ ಹೀಗಾ ಮಾಡಿಕೊಳ್ಳೋದು..?!

    February 24, 2026

    ಬಿಜೆಪಿಯ ಅಂತಿಮ ದಿನಗಳು ಹತ್ತಿರವಾಗಿವೆ: ಚಿಕ್ಕಬಳ್ಳಾಪುರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

    February 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.