Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಾಪತ್ತೆಯಾಗಿದ್ದ ಗಂಡ ಬಿಗ್ ಬಾಸ್ ನಲ್ಲಿ ಹೆಣ್ಣಾಗಿ ಪತ್ತೆಯಾದ | Bigg Boss
    Trending

    ನಾಪತ್ತೆಯಾಗಿದ್ದ ಗಂಡ ಬಿಗ್ ಬಾಸ್ ನಲ್ಲಿ ಹೆಣ್ಣಾಗಿ ಪತ್ತೆಯಾದ | Bigg Boss

    vartha chakraBy vartha chakraFebruary 1, 20243 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಫೆ.1- ನಾಪತ್ತೆಯಾಗಿದ್ದ ವಿವಾಹಿತ ವ್ಯಕ್ತಿಯೊಬ್ಬ ಬಿಗ್ ಬಾಸ್ (Bigg Boss) ರಿಯಾಲಿಟಿ ಶೋ ನಿಂದ ಪತ್ತೆಯಾಗಿದ್ದಾರೆ. ಆದರೆ ಈ ವೇಳೆ ಆತ ಲಿಂಗ ಬದಲಾವಣೆ ಮಾಡಿಕೊಂಡು ತೃತೀಯ ಲಿಂಗಿಯಾಗಿದ್ದರು.ಈ ಘಟನೆ ರಾಮನಗರದಲ್ಲಿ ನಡೆದಿದೆ.
    ಕಳೆದ 2017ರಲ್ಲಿ ಮನೆ ಬಿಟ್ಟು ಹೋಗಿ ನಾಪತ್ತೆಯಾಗಿದ್ದ ಪತಿ ಲಿಂಗ ಪರಿವರ್ತನೆ ಮಾಡಿಕೊಂಡಿರುವುದನ್ನು ಕಂಡು ಪತ್ನಿ ಆಘಾತಕ್ಕೀಡಾಗಿದ್ದು ಕುಟುಂಬಸ್ಥರಿಗೆ ದಿಕ್ಕೆ ತೋಚದಂತಾಗಿದೆ.
    ಚಿಕನ್ ಅಂಡಗಿಯಲ್ಲಿ ಕೆಲಸ ಮಾಡಿಕೊಂಡಿದ್ದ ಲಕ್ಷ್ಮಣರಾವ್  2015 ರಲ್ಲಿ ಮದುವೆಯಾಗಿ ಪತ್ನಿಯೊಂದಿಗೆ ರಾಮನಗರಲ್ಲಿ ನೆಲೆಸಿದ್ದರು. ದಂಪತಿಗೆ ಇಬ್ಬರು ಗಂಡು ಮಕ್ಕಳು ಕೂಡ ಇದ್ದಾರೆ. ಮದುವೆ ಆದ ಎರಡೇ ವರ್ಷಕ್ಕೆ 2017ರಲ್ಲಿ ಲಕ್ಷ್ಮಣ್ ರಾವ್ ಸಾಲದ ವಿಚಾರಕ್ಕೆ ಜಿಗುಪ್ಸೆಗೊಂಡು ಮನೆಯಿಂದ ನಾಪತ್ತೆಯಾಗಿದ್ದರು.

    ಆತನ ಬಗ್ಗೆ ಯಾವುದೇ ಸುಳಿವು ಸಿಗದಿದ್ದರಿಂದ ಆತಂಕಗೊಂಡ ಪತ್ನಿ ಐಜೂರು ಪೊಲೀಸ್ ಠಾಣೆಗೆ  ದೂರು ನೀಡಿದ್ದರು.
    ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆತನಿಗಾಗಿ ಹುಡುಕಾಟ ನಡೆಸಿದ್ದರೂ ಇಲ್ಲಿಯವರೆಗೆ ಆತನ ಪತ್ತೆ ಇರಲಿಲ್ಲ.ನಾಪತ್ತೆಯಾದ ಈತನಿಗೆ ಹುಡುಕಾಟ ನಡೆಸಿದ ಪೊಲೀಸರು ಸುಸ್ತಾಗಿದ್ದರು.ಈ ನಡುವೆ ರಿಯಾಲಿಟೋ ಷೋ ‘ಬಿಗ್ ಬಾಸ್’ ಈತನ ಸುಳಿವು ಕೊಟ್ಟಿದೆ.
    ಇತ್ತೀಚೆಗೆ ಬಿಗ್ ಬಾಸ್ ಶೋ ಸ್ಪರ್ಧಿ ನೀತು ವನಜಾಕ್ಷಿ ಮೈಸೂರಿಗೆ ಆಗಮಿಸಿದ್ದಾಗ  ತೃತೀಯ ಲಿಂಗಿಗಳು ಅವರನ್ನು ಸ್ವಾಗತಿಸಿ ಸನ್ಮಾನಿಸಿದ್ದ ವೇಳೆ ತೃತೀಯ ಲಿಂಗಿ ರಶ್ಮಿಕಾ ಮಾಡಿದ್ದ ರೀಲ್ಸ್‌ನಲ್ಲಿ ಲಕ್ಷ್ಮಣ್ ರಾವ್ ಅವರನ್ನು ಹೋಲುವಂತಹ ವ್ಯಕ್ತಿ ಕಾಣಿಸಿಕೊಂಡಿದ್ದರು.ಈ ವಿಡಿಯೋ ದೊಡ್ಡ ಪ್ರಮಾಣದಲ್ಲಿ ವೈರಲ್ ಆಗಿತ್ತು.

    ವೈರಲ್ ಆಗಿದ್ದ ರೀಲ್ಸ್‌ನಲ್ಲಿ ಲಕ್ಷ್ಮಣ್ ಮುಖದ ಸ್ಪಷ್ಟ ಹೋಲಿಕೆ ಇತ್ತು. ಹೀಗಾಗಿ ಕುಟುಂಬಸ್ಥರಿಗೂ ಲಕ್ಷ್ಮಣ್ ಇರಬಹುದು ಎಂಬ ಅನುಮಾನ ಮೂಡಿತ್ತು. ತೃತೀಯ ಲಿಂಗಿಗಳ ಸಾಮಾಜಿಕ ಹೋರಾಟಗಾರ್ತಿ ರಶ್ಮಿಕಾ ಹೆಸರಿನ ರೀಲ್ಸ್ ಪ್ರೊಫೈಲ್ ಪರಿಶೀಲಿಸಿದಾಗ ಐಜೂರು ಪೊಲೀಸರು ಲಕ್ಷ್ಮಣ್ ರಾವ್ ವಿಚಾರ ಪ್ರಸ್ತಾಪಿಸಿದ್ದಾರೆ. ಹಿನ್ನೆಲೆ ಗೊತ್ತಿಲ್ಲವಾದರೂ ವಿಳಾಸ ಕೊಡುವುದಾಗಿ ರಶ್ಮಿಕಾ ಹೇಳಿದ್ದಾರೆ. ವಿಳಾಸ ಅನುಸರಿಸಿ ತೆರಳಿದ್ದ ಪೊಲೀಸರಿಗೆ ಶಾಕ್ ಎದುರಾಗಿದ್ದು, ಪೊಲೀಸರ ಬಳಿ ಇದ್ದ ಫೋಟೋಗೂ ಎದುರಿಗಿದ್ದ ಹೆಣ್ಣಿಗೂ ಅಜಗಜಾಂತರ ವ್ಯತ್ಯಾಸವಿತ್ತು. ಮುಖ ಮಾತ್ರ ಪೂರ್ಣ ಹೋಲಿಕೆಯಾಗುತ್ತಿತ್ತು.
    ಪೊಲೀಸರು ನೀವು ಲಕ್ಷ್ಮಣ್ ರಾವ್ ಅಲ್ಲವೇ ಎಂದು ಕೇಳಿದಾಗ, ನಾನು ಲಕ್ಷ್ಮಣ್ ರಾವ್ ಅಲ್ಲ, ನಾನು ವಿಜಯಲಕ್ಷ್ಮೀ ಎಂದು ಉತ್ತರಿಸಿದ್ದಾರೆ. ಎಷ್ಟೇ ಪ್ರಯತ್ನಿಸಿದರೂ ತಾನು ವಿಜಯಲಕ್ಷ್ಮೀ ಎಂದು ಲಕ್ಷ್ಮಣ್ ಪಟ್ಟು ಹಿಡಿದಿದ್ದು, ಪೊಲೀಸರೂ ಒಂದು ಹಂತದಲ್ಲಿ ಬೇರೆಯೇ ಅಭಿಪ್ರಾಯಕ್ಕೆ ಬಂದಿದ್ದಾರೆ. ಲಕ್ಷ್ಮಣ್ ನಿಮ್ಮ ಹಾಗೆಯೇ ಕಾಣಿಸಿದ ಕಾರಣ ವಿಚಾರಿಸಲು ಬಂದೆವು.

    ನೀವು ವಾಪಾಸ್ ಹೋಗಿ ಎಂದು ಪೊಲೀಸರು ಹೇಳಿದ್ದಾರೆ. ವಾಪಾಸ್ ಹೋಗೊ ವೇಳೆ, ಜೋರಾಗಿ ಲಕ್ಷ್ಮಣ್ ಎಂದು ಇನ್ಸ್ ಪೆಕ್ಟರ್ ಕೂಗಿದ್ದಾರೆ. ಕೂಡಲೇ ಹಾಂ… ಎಂಬ ಪ್ರತ್ಯುತ್ತರ ವಿಜಯಲಕ್ಷ್ಮೀ ಬಾಯಿಯಿಂದ ಬಂದಿದೆ.!
    ಇದಾದ ನಂತರ ಅವರ ಬಗ್ಗೆ ಪೊಲೀಸರಿಗೆ ಎಲ್ಲವೂ ಖಾತ್ರಿಯಾಗಿದೆ.ಬಳಿಕ ಅವರನ್ನು ಐಜೂರು ಠಾಣೆಗೆ ಕರೆ ತಂದು ವಿಚಾರಣೆ ನಡೆಸಿದ್ದಾರೆ. ಬಳಿಕ ಕುಟುಂಬಸ್ಥರನ್ನು ಪೊಲೀಸರು ಠಾಣೆಗೆ ಕರೆಸಿದ್ದಾರೆ. ಠಾಣೆಗೆ ಆಗಮಿಸಿದಾಗ ಗಂಡ ಹೆಣ್ಣಾಗಿ ಪರಿವರ್ತನೆ ಆಗಿದ್ದನ್ನು ಕಂಡು ಪತ್ನಿ ಮೂರ್ಛೆ ಹೋಗಿದ್ದಾರೆ. ಇನ್ನು ತಂದೆಯ ಅವತಾರ ಕಂಡ ಪುಟ್ಟ ಮಕ್ಕಳು ಏನು ನಡೆಯುತ್ತಿದೆ ಎನ್ನುವುದನ್ನೂ ತಿಳಿಯದಂತಾಗಿದ್ದಾರೆ. ಅದೇ ರೀತಿ ಅಳಿಯನ ಅವತಾರ ಕಂಡು ಮಾವ ಪೇಚಾಡಿ ಮಗಳ ಬಾಳು ಹಾಳಾಯಿತು ಎಂದು ಕಣ್ಣೀರಿಟ್ಟಿದ್ದಾರೆ.
    ನಿನಗೆ ಹೆಂಡತಿ ಮಕ್ಕಳು ಬೇಡವೇ” ಎಂದು ಪ್ರಶ್ನಿಸಿದಾಗ, ‘ನನಗೆ ನನ್ನ ತೃತೀಯ ಲಿಂಗಿಗಳ ಕುಟುಂಬವೇ ಇಷ್ಟ. ಹೆಂಡತಿ ಮಕ್ಕಳು ಬೇಡ, ನಿಮ್ಮ ತಂಟೆಗೆ ಬರುವುದಿಲ್ಲ. ನನ್ನನ್ನು ಬಿಟ್ಟು ಬಿಡಿ’ ಎಂದು ಬೇಡಿಕೊಂಡಿದ್ದಾನೆ. ಪೊಲೀಸರು ಮುಚ್ಚಳಿಕೆ ಪತ್ರ ಬರೆಸಿಕೊಂಡು ನಾಪತ್ತೆ ಪ್ರಕರಣ ಇತ್ಯರ್ಥ ಗೊಳಿಸಿದ್ದಾರೆ.

    Bigg Boss Entertainment News Trending ಮದುವೆ ವೈರಲ್
    Share. Facebook Twitter Pinterest LinkedIn Tumblr Email WhatsApp
    Previous Articleಅಯೋಧ್ಯೆಗೆ ಪಾದಯಾತ್ರೆ ಮಾಡಿದ ಮುಸ್ಲಿಂ ಭಕ್ತರು | Ayodhya
    Next Article ಡಿ.ಕೆ. ಸುರೇಶ್ ಅವರಿಗೆ ಪ್ರತ್ಯೇಕ ರಾಷ್ಟ್ರ ಬೇಕಂತೆ | DK Suresh
    vartha chakra
    • Website

    Related Posts

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    3 Comments

    1. order generic cialis in canada on June 9, 2025 1:51 pm

      Good blog you be undergoing here.. It’s severely to espy great worth script like yours these days. I truly recognize individuals like you! Take vigilance!!

      Reply
    2. does flagyl make you urinate more on June 11, 2025 8:10 am

      I couldn’t weather commenting. Well written!

      Reply
    3. cua0t on June 18, 2025 5:05 pm

      order inderal 20mg sale – propranolol without prescription buy methotrexate

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Bobbyglupe on ಸೂರಜ್ ರೇವಣ್ಣ ಪುರುಷತ್ವ ಪರೀಕ್ಷೆ ಹೇಗೆ ನಡೆಯಿತು ಗೊತ್ತಾ..
    • 70233 on ಸುಮ್ಮನಿದ್ದರೆ ಹೀಗೆ ಆಗೋದು.
    • Bobbyglupe on Drugs ಪತ್ತೆಗೆ ಶ್ವಾನದಳ ಬಳಕೆ.
    Latest Kannada News

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe