Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುದರಂಗಡಿ ಗ್ರಾಪಂ ವ್ಯಾಪ್ತಿಯ ಸಾಗುಮನೆ ಬಳಿ ಕಿರು ಸೇತುವೆ ಇಲ್ಲದೆ ತೋಡು ದಾಟಲು ಶಾಲಾ ಮಕ್ಕಳ ಪರದಾಟ
    ಸುದ್ದಿ

    ಮುದರಂಗಡಿ ಗ್ರಾಪಂ ವ್ಯಾಪ್ತಿಯ ಸಾಗುಮನೆ ಬಳಿ ಕಿರು ಸೇತುವೆ ಇಲ್ಲದೆ ತೋಡು ದಾಟಲು ಶಾಲಾ ಮಕ್ಕಳ ಪರದಾಟ

    vartha chakraBy vartha chakraJune 6, 2022Updated:June 6, 2022No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೃಹತ್ ಮೊತ್ತದ ಕಾಮಗಾರಿಗಳು ಯಾವುದೇ ಅಭ್ಯಂತರವಿಲ್ಲದೆ ಸ್ಥಳೀಯಾಡಳಿತಗಳಲ್ಲಿ ಅನುಷ್ಠಾನಗೊಳ್ಳುತ್ತದೆ. ಆದರೆ ಕನಿಷ್ಟ ಮೊತ್ತದ ಕಾಮಗಾರಿಗಳು ಸೂಕ್ತ ಸಮಯದಲ್ಲಿ ನಡೆಯದೆ ಸಾರ್ವಜನಿಕರು ತೊಂದರೆ ಅನುಭವಿಸುತ್ತಲೇ ಇರುತ್ತಾರೆ.
    ಇದಕ್ಕೆ ಪೂರಕವಾಗಿ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮುದರಂಗಡಿ ಗ್ರಾಪಂ ವ್ಯಾಪ್ತಿಯ ಸಾಂತೂರು ಸಾಗುಮನೆ ಬಳಿ ಯಾವತ್ತೋ ನಿರ್ಮಿಸಬೇಕಾಗಿದ್ದ ಕಾಲು ಸಂಕ ಕಾಮಗಾರಿಯ ವಿಳಂಬವೇ ಸಾಕ್ಷಿ.

    ಸಾಂತೂರು ಸಾಗುಮನೆಯ ಕೊಳಕೆ ಮಾರು ಬಳಿ ಮಳೆ ನೀರು ಹರಿದು ಹೋಗುವ ತೋಡಿಗೆ ಕಾಲು ಸಂಕ ನಿರ್ಮಿಸದ ಕಾರಣ ಈ ಭಾಗದ ಶಾಲಾ ಮಕ್ಕಳು ಮತ್ತು ಸ್ಥಳೀಯ ಕೃಷಿಕರು ಕಷ್ಟಕರ ರೀತಿಯಲ್ಲಿ ಎದ್ದು ಬಿದ್ದು ತೋಡು ದಾಟುತ್ತಿದ್ದಾರೆ.

    ಕೃಷಿ ಚಟುವಟಿಕೆಯೇ ಪ್ರಧಾನವಾಗಿರುವ ಈ ಭಾಗದ ಜನರಿಗೆ ರಸ್ತೆ ಸಂಪರ್ಕವಿದೆ. ಆದರೆ ಸುತ್ತುಬಳಸಿ ತೆರಳಬೇಕಾದ ಕಾರಣ ಅವರು ಹತ್ತಿರದ ದಾರಿಯಾದ ಈ ತೋಡು ಬಳಸಿಯೇ ಸಂಚರಿಸುತ್ತಿದ್ದಾರೆ. ಮೇ ತಿಂಗಳಿಂದ ಜನವರಿವರೆಗೆ ಈ ತೋಡಿನಲ್ಲಿ ನೀರು ತುಂಬಿರುವುದರಿಂದ ಅವರ ಕಷ್ಟ ಹೇಳತೀರದು.

    ನೆರೆ ಬಂದರೆ ಮಕ್ಕಳಿಗೆ ಇಲ್ಲಿ ನಡೆದಾಡಲೂ ಕಷ್ಟಕರವಾಗಿದೆ. ಇಂತಹ ಸಂದರ್ಭಗಳಲ್ಲಿ ಹೆತ್ತವರೇ ಇಲ್ಲಿಗೆ ಬಂದು ಮಕ್ಕಳನ್ನು ದಾಟಿಸಬೇಕಾಗಿದೆ. ಕೃಷಿಕರೇ ತುಂಬಿರುವ ಈ ಭಾಗದ ಜನರು ಹಾಲು ಕೊಂಡೊಯ್ಯಲೂ ಇದೇ ಮಾರ್ಗವನ್ನು ಬಳಸುತ್ತಾರೆ. ಈ ತೋಡನ್ನು ಕನಿಷ್ಟ 25ಮನೆಗಳವರು ಬಳಸುತ್ತಿದ್ದಾರೆ.

    ಸ್ಥಳೀಯಾಡಳಿತ ಇಲ್ಲಿ ಕಾಲು ಸಂಕ ನಿರ್ಮಿಸಲು ಹಲವು ಬಾರಿ ಕ್ರಿಯಾ ಯೋಜನೆ ರೂಪಿಸಿತ್ತು. ಕಡಿಮೆ ಮೊತ್ತದ ಕಾಮಗಾರಿಯಾಗಿದ್ದ ಕಾರಣ ಉದಾಸೀನ ಎದ್ದು ಕಾಣುತ್ತದೆ. ಈ ಬಾರಿಯೂ ಇಲ್ಲೆ ಕಾಲು ಸಂಕ ನಿರ್ಮಾಣಕ್ಕೆ ಅನುದಾನ ಜೋಡಿಸಲಾಗಿದೆ. ಆದರೆ ಕಾಮಗಾರಿ ನಡೆದಿಲ್ಲ. ಮತ್ತೆ ಮಳೆಗಾಲ ಮುಗಿಯುವವರೆಗೆ ಕಾಯಬೇಕಿದೆ.

    ಬೆಳ್ಮಣ್ಣು ಸಂತ ಜೋಸೆಫ್ ಪ್ರೌಢ ಶಾಲೆಯ ವಿದ್ಯಾರ್ಥಿನಿ ೯ನೇ ತರಗತಿvಯ ಚಿಂತನಾ ಮಾತನಾಢಿ, ದೂರದ ಬೆಳ್ಮಣ್ಣು ಶಾಲೆಗೆ ಹೋಗಬೇಕಾಗಿರುವುದರಿಂದ ರಸ್ತೆ ಮೂಲಕ ಸುತ್ತು ಬಳಸಿ ಹೋಗಲು ಹೆಚ್ಚು ಸಮಯ ವ್ಯರ್ಥವಾಗುತ್ತದೆ. ಹಾಗಾಗಿ ಹತ್ತಿರದ ತೋಡಿನ ಮೂಲಕ ನಿತ್ಯ ಸಂಚರಿಸುತ್ತಿದ್ದು, ಹೆದರಿಕೊಂಡೇ ನಿತ್ಯ ಸಂಚರಿಸುತ್ತಿದ್ದೇವೆ. ಈಗಾಗಲೇ ಹಲವರು ಇಲ್ಲಿ ಬಿದ್ದ ಘಟನೆಯೂ ನಡೆದಿದೆ ಎಂದು ಹೇಳಿದ್ದಾಳೆ.

    ಸ್ಥಳೀಯರಾದ ಸುಬ್ರಾಯ ನಾಯಕ್ ಮಾತನಾಡಿ, ಕೃಷಿಕರೇ ಹೆಚ್ಚು ವಾಸಿಸುವ ಇಲ್ಲಿನ ಜನರು ಹೆಚ್ಚಾಗಿ ಇದೇ ದಾರಿಯನ್ನು ಬಳಸುತ್ತಿದ್ದಾರೆ. ಹಲವು ಬಾರಿ ನೀರಿಗೆ ಬಿದ್ದ ಘಟನೆ ನಡೆದಿದೆ. ಸ್ಥಳೀಯಾಡಳಿತಕ್ಕೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದರು.

    Verbattle
    Verbattle
    Verbattle
    mudarangadi udupi
    Share. Facebook Twitter Pinterest LinkedIn Tumblr Email WhatsApp
    Previous Articleಸ್ನಾನಕ್ಕೆ ಹೋದವರು ಜಲಸಮಾಧಿ
    Next Article ಆರ್.ಎಸ್.ಎಸ್ ದೇಶ ಭಕ್ತಿ ಕೆಲಸ ಮಾಡುತ್ತಿದೆ- CM ಬೊಮ್ಮಾಯಿ
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    January 22, 2026

    Comments are closed.

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Georgemen on ಬಿಜೆಪಿ ಶಾಸಕ ಬೈರತಿ ಬಸವರಾಜ್ ಗೆ ಪೊಲೀಸ್ ಹುಡುಕಾಟ
    • ScottBox on ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    • WillieCex on JDS ಕಚೇರಿಗೆ ಕರೆಂಟ್ ಕಳ್ಳತನದ ಪೋಸ್ಟರ್ | HD Kumaraswamy
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.