ಕಾರವಾರ, ಅ.6 – ಮೂರು ದಿನಗಳ ಹಿಂದಿನ ಹಳೆಯ ಕೆಎಸ್ಆರ್ಟಿಸಿ (KSRTC) ಬಸ್ ಟಿಕೆಟ್ ಕೊಲೆಗಾರರನ್ನು ಹಿಡಿದು ಕೊಟ್ಟಿದೆ.ಬಸ್ ಟಿಕೆಟ್ ನ ಸುಳಿವು ಆಧರಿಸಿ ಕುಮಟಾದಲ್ಲಿ ನಡೆದ ಕೊಲೆ ಪ್ರಕರಣವನ್ನು ಜಿಲ್ಲಾ ಪೊಲೀಸರು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಳೆದ ಸೆಪ್ಟೆಂಬರ್ 30ರಂದು ಶಿರಸಿ-ಕುಮಟಾ ಹೆದ್ದಾರಿಯ ದೇವಿಮನೆ ಘಾಟ್ನ ದೇವಸ್ಥಾನದ ಹಿಂಭಾಗದಲ್ಲಿ ಬಶೀರ್ (40) ಎಂಬುವರ ಮೃತದೇಹ ಪತ್ತೆಯಾಗಿತ್ತು.
ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ ಕುಮಟಾ ಪೊಲೀಸರಿಗೆ ಪ್ರಾರಂಭದಲ್ಲಿ ಯಾವುದೇ ಸುಳಿವು ಸಿಗಲಿಲ್ಲ. ಮೃತ ವ್ಯಕ್ತಿಯ ಪಾಕೆಟ್ ನಲ್ಲಿ ಸಿಕ್ಕ ಕೆಎಸ್ ಆರ್ ಟಿಸಿ ಬಸ್ ಟಿಕೆಟ್ ಸಿಕ್ಕಿತ್ತು.ಅದರ ಜಾಡು ಹಿಡಿದು ಹೊರಟ ಪೊಲೀಸರಿಗೆ ಮೃತ ವ್ಯಕ್ತಿ ಇತ್ತೀಚೆಗೆ ಗಜೇಂದ್ರಗಢಕ್ಕೆ ಹೋಗಿರುವುದು ದೃಢವಾಗಿತ್ತು,
ಈ ವೇಳೆ ಆತನ ಜೊತೆಗೆ ಮತ್ತೊಬ್ಬರು ಪ್ರಯಾಣಿಸಿದ್ದರು.
ಪೊಲೀಸರು ತನಿಖೆ ನಡೆಸಿದ ವೇಳೆ ಆತನ ಜೊತೆಗೆ ಪತ್ನಿಯೂ ಪ್ರಯಾಣಿಸಿರುವುದು ಬೆಳಕಿಗೆ ಬಂತು. ನಂತರ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಮುಸಿಗೆರೆಗೆ ಪೊಲೀಸ್ ತಂಡ ತೆರಳಿ ವಿಚಾರವನ್ನು ದೃಢ ಪಡಿಸಿಕೊಂಡಿತ್ತು.
ಬಶೀರ್ ಪತ್ನಿ ರಜ್ಮಾ ಆತನೊಂದಿಗೆ ತೆರಳಿದ್ದರು ಕೆಲ ವರ್ಷಗಳ ಹಿಂದೆ ಅವರಿಬ್ಬರು ವಿವಾಹವಾಗಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದರು.ಕುರಿ ವ್ಯಾಪಾರಿಯಾಗಿದ್ದ ಬಶೀರ್ ಕೆಲವು ತಿಂಗಳ ಹಿಂದೆ ಕುರಿಗಳನ್ನು ಮಾರಲು ಹೋಗಿದ್ದಾಗ ಬಾದಾಮಿಯಲ್ಲಿ ಪರಶುರಾಮ ಎಂಬಾತನ ಪರಿಚಯವಾಗಿತ್ತು.
ಬಶೀರ್ ಸೋದರ ಸಂಬಂಧಿ ಕಾಸಿಂ ಎಂಬುವರ ಮೂಲಕ ಪರಶುರಾಮನ ಪರಿಚಯವಾಗಿ,ಸ್ನೇಹಕ್ಕೆ ತಿರುಗಿತ್ತು.ತನ್ನ ಸ್ನೇಹಿತನಾಗಿದ್ದ ಪರುಶುರಾಮ್ ನನ್ನು ಬಶೀರ್ ತನ್ನ ಪತ್ನಿಗೆ ಪರಿಚಯಿಸಿದ್ದ.
ಇದಾದ ಬಳಿಕ ಪರಶುರಾಮ ಆಗಿಂದಾಗ್ಗೆ ಬಶೀರ್ ಮನೆಗೆ ಬಂದು ಹೋಗ ತೊಡಗಿದ.ಹೀಗಿರುವಲ್ಲಿ ಬಶೀರ್ ಪತ್ನಿ ರಜ್ಮಾ ಮತ್ತು ಪರಶುರಾಮ ನ ನಡುವೆ ಸಲುಗೆ ಬೆಳೆಯುತ್ತದೆ. ಇದಕ್ಕೆ ಬಶೀರ್ ಆಕ್ಷೇಪ ವ್ಯಕ್ತ ಪಡಿಸಿದ್ದ, ಈ ವಿಷಯವಾಗಿ ಇಬ್ಬರ ನಡುವೆ ಪದೇ ಪದೇ ಜಗಳ ನಡೆಯುತ್ತಿತ್ತು.ಇದರಿಂದ ಕೋಪಗೊಂಡ ರಜ್ಮಾ ,ಪರಶುರಾಮನ ಸಹಾಯ ಪಡೆದು ಬಶೀರ್ ನನ್ನು ಕೊಲೆ ಮಾಡಲು ಸಂಚು ರೂಪಿಸುತ್ತಾಳೆ.ಅದರಂತೆ ರಜ್ಮಾ ಸೆ. 26 ರಂದು 10 ಸಾವಿರ ರು ಹಣ ನೀಡಿದ್ದಳು ಎಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿ ಟಿ ಜಯಕುಮಾರ್ ತಿಳಿಸಿದ್ದಾರೆ.
ಕೊಲೆ ಸಂಚು ಕಾರ್ಯಗತಗೊಳಿಸಲು ಪರುಶುರಾಮ್ ಮಂಗಳೂರಿಗೆ ಪ್ರಯಾಣ ಬೆಳೆಸಿದ್ದ. ಆರೋಪಿಯು ತನ್ನ ಸ್ನೇಹಿತ ಆದೇಶ್ನನ್ನು ಭೇಟಿಯಾಗಲು ಬಶೀರ್ ಮತ್ತು ಇನ್ನೊಬ್ಬ ಸ್ನೇಹಿತ ರವಿಯ ಜೊತೆ ಮಂಗಳೂರಿಗೆ ಹೋಗಿದ್ದ. ಅಲ್ಲಿ ಆದೇಶ್ನೊಂದಿಗೆ ಉಳಿದುಕೊಂಡು ಅಲ್ಲಿಂದ ಒಟ್ಟಿಗೆ ಪಣಂಬೂರು ಬೀಚ್ ಗೆ ತೆರಳಿ ಬಶೀರ್ನನ್ನು ಕೊಲೆ ಮಾಡುವ ಯೋಜನೆಯನ್ನು ಪರಶುರಾಮ್ ಹೇಳಿದ್ದ. ಆದರೆ ಮಂಗಳೂರಿನಲ್ಲಿ ಮಾಡಬೇಡಿ ಎಂದು ಸಲಹೆ ನೀಡಿದ ಆದೇಶ್ ಅದರಂತೆ ಬಶೀರ್ ನನ್ನು ಗಜೇಂದ್ರಗಡದಿಂದ ದೇವಿಮನೆ ಘಾಟ್ ದೇವಸ್ಥಾನದ ಹಿಂಭಾಗಕ್ಕೆ ಕರೆದುಕೊಂಡು ಹೋಗುತ್ತಾರೆ.
ಇದನ್ನು ಆದೇಶ್ ವ್ಯವಸ್ಥೆ ಮಾಡುತ್ತಾನೆ.ಗಜೇಂದ್ರ ಗಡದಲ್ಲಿ ಅವರೆಲ್ಲರನ್ನು ಬಸ್ ಹತ್ತಿಸಿ ಆದೇಶ್ ದೇವಸ್ಥಾನದ ಬಳಿ ಇರುವ ದೇವಿಮನೆ ಘಾಟ್ನಲ್ಲಿ ಇಳಿಸುವಂತೆ ಬಸ್ ಚಾಲಕ ಮತ್ತು ಕಂಡಕ್ಟರ್ಗೆ ತಿಳಿಸಿದರು. ಅದರಂತೆ ಸೆ.29ರಂದು ದೇವಸ್ಥಾನದ ಬಳಿ ಇಳಿದರು’ ಈ ಎಲ್ಲವೂ ಮೃತನ ಬಳಿ ದೊರೆತ ಬಸ್ ಟಿಕೆಟ್ ನಿಂದಾಗಿ ಗೊತ್ತಾಗುತ್ತದೆ ಎಂದು ಕಾರವಾರ ಹೆಚ್ಚುವರಿ ಎಸ್ಪಿ ಜಯಕುಮಾರ್ ವಿವರಿಸಿದರು.
ಆರೋಪಿಗಳು ಬಶೀರ್ಗೆ ಚೆನ್ನಾಗಿ ಮದ್ಯ ಕುಡಿಸಿದ್ದಾರೆ. ನಂತರ ಆತನನ್ನು ಕೊಲೆ ಮಾಡಿ ಶವವನ್ನು ಅಲ್ಲಿ ಬಿಸಾಡಿದ್ದು, ಮರುದಿನ ಬೆಳಗ್ಗೆ ಶವ ಪತ್ತೆಯಾಗಿದೆ.
ಪ್ರಕರಣವನ್ನು ಅಲ್ಪಾವಧಿಯಲ್ಲಿ ಭೇದಿಸಿದ ಪೊಲೀಸ್ ಇನ್ಸ್ಪೆಕ್ಟರ್ ತಿಮ್ಮಪ್ಪ, ಸಬ್ ಇನ್ಸ್ಪೆಕ್ಟರ್ ನವೀನ್ ನಾಯ್ಕ್ ಮತ್ತು ಇತರರ ನೇತೃತ್ವದ ತಂಡವನ್ನು ಪೊಲೀಸ್ ಉನ್ನತಾಧಿಕಾರಿಗಳು ಅಭಿನಂದಿಸಿದ್ದಾರೆ. ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ.


2 Comments
Betano Casino – donde la suerte se encuentra con el lujo. RegГstrate para hasta €500 de bono https://betanogame.org/es/ mГЎs 200 giros gratis. La acciГіn estГЎ en vivo 24/7 y los pagos son ultrarrГЎpidos.
Entre agora no Mostbet e comece com 130% a mais + 290 rodadas de presente – https://mostbetpt.pro/como-se-registrar/ , Registre-se no Mostbet e comece uma jornada cheia de adrenalina e prГЄmios .