Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕನ್ನಡ ಭಾಷೆಯ ಬೆಳವಣಿಗೆಗೆ ಹೊಸ ಕಾನೂನು
    ರಾಜ್ಯ

    ಕನ್ನಡ ಭಾಷೆಯ ಬೆಳವಣಿಗೆಗೆ ಹೊಸ ಕಾನೂನು

    vartha chakraBy vartha chakraFebruary 17, 202319 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಫೆ. 17-

    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಮ್ಮ ಕೊನೆಯ ಬಜೆಟ್ ನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ (Department of Kannada and Culture) ಗೆ ಹೆಚ್ಚಿನ ಮಹತ್ವ ನೀಡಿದ್ದು, ಹಲವು ಹೊಸ ಯೋಜನೆಗಳನ್ನು ಪ್ರಕಟಿಸಿದ್ದಾರೆ.

    ಪ್ರಮುಖವಾಗಿ ಆಡಳಿತದಲ್ಲಿ, ಕೈಗಾರಿಕೋದ್ಯಮಗಳಲ್ಲಿ, ಶಿಕ್ಷಣ ಕ್ಷೇತ್ರದಲ್ಲಿ ಕನ್ನಡದ ವ್ಯಾಪಕ ಬಳಕೆಗಾಗಿ ಹಾಗೂ ಕನ್ನಡಿಗರ ಹಿತಾಸಕ್ತಿಯ ರಕ್ಷಣೆಗಾಗಿ ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ಅಧಿನಿಯಮವನ್ನು ಜಾರಿಗೆ ತರಲಾಗುವುದು ಎಂದು ಘೋಷಿಸಿದ್ದಾರೆ.

    ‘ನಮ್ಮ ಜಿಲ್ಲೆ ನಮ್ಮ ಸಂಸ್ಕೃತಿ’ ಎಂಬ ಹೊಸ ಯೋಜನೆ ರೂಪಿಸಲಾಗಿದೆ. ಇದರಡಿಯಲ್ಲಿ ಪ್ರತಿ ಜಿಲ್ಲೆಯಲ್ಲಿ ಎಲ್ಲಾ ವರ್ಗದ ಸ್ಥಳೀಯ ಕಲಾವಿದರನ್ನು ಒಳಗೊಂಡಂತೆ ಜಾನಪದ ಹಬ್ಬವನ್ನು ಆಯೋಜನೆ ಮಾಡಲಾಗುವುದು ಎಂದು ಹೇಳಿದ್ದಾರೆ.

    ಗಡಿನಾಡು ಪ್ರದೇಶದಲ್ಲಿ ಕನ್ನಡ ಭಾಷೆ, ಕಲೆ, ಶಿಕ್ಷಣ ಮತ್ತು ಸಂಸ್ಕೃತಿಯ ವಿಕಾಸಕ್ಕೆ ಪ್ರಾಶಸ್ತ್ಯವನ್ನು ನೀಡಲಾಗುವುದು. ಹಾಗೆಯೇ ಗಡಿ ಪ್ರದೇಶದ ರಸ್ತೆಗಳ ಹಾಗೂ ಸಮಗ್ರ ಅಭಿವೃದ್ಧಿಗೆ ವಿವಿಧ ಇಲಾಖೆಗಳ ಮುಖಾಂತರ 150 ಕೋಟಿ ರೂ. ಒದಗಿಸಲಾಗುವುದು. ಕರ್ನಾಟಕ ಜಗತ್ತಿನೆಲ್ಲೆಡೆ ಒಂದು ಶಕ್ತಿಯಾಗಿ ಹೊರ ಹೊಮ್ಮುತ್ತಿದ್ದು, ಕನ್ನಡವನ್ನು ಹೊರ ಜಗತ್ತಿಗೆ ಪರಿಚಯಿಸುವ ನಿಟ್ಟಿನಲ್ಲಿ ಹೆಮ್ಮೆಯ ಕನ್ನಡಿಗರನ್ನು ಒಳಗೊಂಡ 3ನೇ ವಿಶ್ವ ಕನ್ನಡ ಸಮ್ಮೇಳನವನ್ನು ದಾವಣಗೆರೆಯಲ್ಲಿ ಆಯೋಜಿಸಲಾಗುವುದು ಎಂದು ತಿಳಿಸಿದರು.

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು ಮತ್ತು ಕರ್ನಾಟಕ ಏಕೀಕರಣಕ್ಕಾಗಿ ಹೋರಾಡಿದ ಮಹನೀಯರ ಬದುಕು ಮತ್ತು ಸಾಧನೆಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಲು ಅವರ ಜೀವನಗಾಥೆಗಳನ್ನು ಪಠ್ಯಪುಸ್ತಕಗಳಲ್ಲಿ ಅಳವಡಿಸಲಾಗುವುದು ಎಂದರು.

    ಕರ್ನಾಟಕ ಏಕೀಕರಣದಲ್ಲಿ ಮಹತ್ವದ ಪಾತ್ರವನ್ನು ವಹಿಸಿದ ಹಾಗೂ ಇಂದಿಗೂ ಕನ್ನಡ ನಾಡು-ನುಡಿಯ ಸೇವೆಯಲ್ಲಿ ಸಕ್ರಿಯವಾಗಿರುವ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಚಟುವಟಿಕೆಗಳಿಗೆ ನೆರವು ನೀಡಲಾಗುವುದು.

    ಯುವಜನರ ಸರ್ವತೋಮುಖ ಅಭಿವೃದ್ಧಿಯ ನಿಟ್ಟಿನಲ್ಲಿ ‘ಯುವ ನೀತಿ 2022’ ಅನ್ನು ರೂಪಿಸಲಾಗಿದೆ. ಗ್ರಾಮೀಣ ಯುವಕರ ಸ್ವಯಂ ಉದ್ಯೋಗವನ್ನು ಪ್ರೋತ್ಸಾಹಿಸಲು 2022-23ನೇ ಸಾಲಿನಲ್ಲಿ ‘ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆ’ಯಡಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರಚನೆಯಾದ ಸ್ವಾಮಿ ವಿವೇಕಾನಂದ ಯುವಕರ ಜಂಟಿ ಬಾಧ್ಯತಾ ಗುಂಪುಗಳಿಗೆ ತಲಾ 10,000 ರೂ.ನಂತೆ ಸುತ್ತುನಿಧಿ ಹಾಗೂ ಸ್ವಯಂ ಉದ್ಯೋಗ ಚಟುವಟಿಕೆಗಳನ್ನು ಕೈಗೊಳ್ಳಲು ಒಂದು ಲಕ್ಷ ರೂ., ಒಳಗೊಂಡಂತೆ ಬ್ಯಾಂಕ್ಗಳ ಸಹಾಯದೊಂದಿಗೆ 5 ಲಕ್ಷ ರೂ. ವರೆಗೆ ಸಹಾಯಧನ ನೀಡಲಾಗುವುದು ಎಂದು ತಿಳಿಸಿದರು.

    ನಾಡು, ನುಡಿ, ಸಂಸ್ಕೃತಿ ಕುರಿತು ಅಮೂಲ್ಯ ಕೃತಿಗಳನ್ನು ಪ್ರಕಟಿಸುತ್ತಿರುವ ಕನ್ನಡ ಪುಸ್ತಕ ಪ್ರಾಧಿಕಾರದ ಚಟುವಟಿಕೆಗಳಿಗೆ 2 ಕೋಟಿ ರೂ. ನೆರವು ನೀಡಲಾಗುವುದು.ದೇಶವನ್ನು ಆಳಿದ ಗಂಗ, ಕದಂಬ, ರಾಷ್ಟ್ರಕೂಟ, ಚಾಲುಕ್ಯ, ಹೊಯ್ಸಳ ಮತ್ತಿತರ ಕನ್ನಡದ ರಾಜವಂಶಗಳ ಇತಿಹಾಸ ಹಾಗೂ ಕೊಡುಗೆಗಳ ಬಗ್ಗೆ ಕನ್ನಡ ವಿಶ್ವವಿದ್ಯಾಲಯದ ವತಿಯಿಂದ ಅಧ್ಯಯನ ಮಾಡಲಾಗುವುದು ಎಂದರು.

    ಕರ್ನಾಟಕ ರಾಜ್ಯದ ಕನ್ನಡ ಮಾತೆಯಾದ ಶ್ರೀ ಭುವನೇಶ್ವರಿ ತಾಯಿಯ ಬೃಹತ್ ಮೂರ್ತಿ ಹಾಗೂ ಥೀಮ್ ಪಾರ್ಕ್ ಅನ್ನು ಬೆಂಗಳೂರು ನಗರದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಪ್ರಕಟಿಸಿದರು. ಬೆಂಗಳೂರಿನ ಸಂಸ್ಕೃತಿ ಹಾಗೂ ಧಾರ್ಮಿಕ ಶ್ರದ್ಧೆಯ ಅವಿಭಾಜ್ಯ ಅಂಗವಾಗಿರುವ ಕರಗ ಉತ್ಸವ ಆಚರಣೆಗೆ ಸರ್ಕಾರದಿಂದ ವಿಶೇಷ ಅನುದಾನವನ್ನು ಒದಗಿಸಲಾಗುವುದು ಎಂದು ಹೇಳಿದ್ದಾರೆ.

    Verbattle
    Verbattle
    Verbattle
    #budget #kannada art Bangalore basavaraj bommai culture Department of Kannada and Culture Government Karnataka m ಕರಗ ಉತ್ಸವ ಕಲೆ ಕಾನೂನು ಧಾರವಾಡ ಧಾರ್ಮಿಕ ಬೊಮ್ಮಾಯಿ ವಿದ್ಯಾರ್ಥಿ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಭಾರತ ಮೂಲದ Neal Mohan – YouTube ನ ಹೊಸ CEO!
    Next Article Online ವಂಚನೆ ತಡೆಗೆ‌ Cyber security operations centre
    vartha chakra
    • Website

    Related Posts

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    January 22, 2026

    ಈಶ್ವರ ಖಂಡ್ರೆ ಅವರಿಗೆ ಹೊಸ ಜವಾಬ್ದಾರಿ

    January 22, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Daviddek on ಯಾರೇ.. ಕೂಗಾಡಲಿ…
    • RicardoCor on ರಾಹುಲ್ ಗಾಂಧಿಗೆ ರಾಜಣ್ಣ ಬರೆದ ಪತ್ರದಲ್ಲಿ ಏನಿದೆ ಗೊತ್ತಾ?
    • Jeffreymaf on ಪೆನ್ ಡ್ರೈವ್ ಹಂಚಿದವರು ಯಾರು ??
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.