Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪರಪ್ಪನ ಅಗ್ರಹಾರದಲ್ಲಿ ಟ್ರ್ಯಾಕಿಂಗ್ ಸಿಸ್ಟಂ
    ಸುದ್ದಿ

    ಪರಪ್ಪನ ಅಗ್ರಹಾರದಲ್ಲಿ ಟ್ರ್ಯಾಕಿಂಗ್ ಸಿಸ್ಟಂ

    vartha chakraBy vartha chakraDecember 8, 2025No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಡಿ.6-
    ಸದಾ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಲ್ಲಿರುವ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸಲು ಹಾಗೂ ಕೈದಿಗಳ ಚಲನವಲನಗಳ ಮೇಲೆ ಹದ್ದಿನ ಕಣ್ಣಿಡಲು ಪ್ರಿಸನರ್ಸ್ ಟ್ರ್ಯಾಕಿಂಗ್ ಮೂವ್​ಮೆಂಟ್ ಸಿಸ್ಟಂ ಜಾರಿಗೊಳಿಸಲಾಗುತ್ತಿದೆ.
    ಮಾದಕವಸ್ತುಗಳ ಸೇವನೆ, ಮೊಬೈಲ್ ಬಳಕೆ ಸೇರಿದಂತೆ ಜೈಲಿನಲ್ಲಿ ನಡೆಯುತ್ತಿದ್ದ ಅಕ್ರಮಗಳನ್ನು ತಹಬದಿಗೆ ತರಲು ಹಾಗೂ ಜೈಲು ಸಿಬ್ಭಂದಿಯ ಹೊಣೆಗಾರಿಕೆ ಹೆಚ್ಚಿಸಿ, ಆಡಳಿತದಲ್ಲಿ ಪಾರದರ್ಶಕತೆ ಮೂಡಿಸಲು ಟ್ರ್ಯಾಕಿಂಗ್ ಸಿಸ್ಟಮ್ ಜಾರಿ ತರಲು ಸಲ್ಲಿಸಿದ್ದ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.
    ಈಗಿರುವ ಸಿಸಿಟಿವಿ ಕ್ಯಾಮರಾಗಳಿಗೆ ಕೃತಕ ಬುದ್ದಿಮತ್ತೆ (ಎಐ) ಸ್ಪರ್ಶ, ಕೈದಿಗಳ ಫೋನ್ ಕರೆ ವ್ಯವಸ್ಥೆ ಸಂಪೂರ್ಣ ಡಿಜಿಟಲ್ ಟ್ರ್ಯಾಕಿಂಗ್, ಸಂದರ್ಶಕರನ್ನು ಭೇಟಿಯಾಗಲು ಡಿಜಿಟಲ್ ಟೋಕನ್ ಪದ್ಧತಿ ಸೇರಿದಂತೆ ಕಾರಾಗೃಹದಲ್ಲಿ ಬಂಧಿಗಳ ಚಲನವಲನಗಳ ಮೇಲೆ ಸಂಪೂರ್ಣ ನಿಗಾ ಇಡಲು ಪ್ರಿಸನರ್ಸ್ ಟ್ರ್ಯಾಕಿಂಗ್ ಮೂವ್​ಮೆಂಟ್ ಸಿಸ್ಟಂ ಜಾರಿಗೆ ತರಲಾಗುತ್ತಿದೆ
    ಸುಮಾರು 2.25 ಕೋಟಿ ರೂಪಾಯಿ ವೆಚ್ಚದ ಈ ಯೋಜನೆಯನ್ನು ಮೂರು ತಿಂಗಳಲ್ಲಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಈ ಮೂಲಕ ರಾಜ್ಯದ ಜೈಲುಗಳು ಸ್ಮಾರ್ಟ್ ಆಗಲಿದ್ದು, ಅಕ್ರಮಗಳಿಗೆ ಬ್ರೇಕ್ ಹಾಕುವ ಇರಾದೆ ಇಲಾಖೆಯದಾಗಿದ್ದು ಸದ್ಯ ಯೋಜನೆಗೆ ಟೆಂಡರ್ ಕರೆದಿದೆ.
    ಶಿಕ್ಷಾಬಂಧಿಗಳು ಹಾಗೂ ವಿಚಾರಣಾಧೀನ ಕೈದಿಗಳು ಪ್ರತ್ಯೇಕ ಬ್ಯಾರಕ್​ಗಳಲ್ಲಿದ್ದರೂ ಊಟ ಹಾಗೂ ಚಿಕಿತ್ಸೆ ಪಡೆಯುವ ನೆಪದಲ್ಲಿ ಒಂದೇ ಕಡೆ ಸೇರುತ್ತಿದ್ದಾರೆ. ಇದರಿಂದ ಪರಸ್ಪರ ವಿಚಾರ ವಿನಿಮಯಗೊಂಡು ಪರೋಕ್ಷವಾಗಿ ಅಪರಾಧ ಚಟುವಟಿಕೆಗಳಿಗೆ ಕಾರಣವಾಗುತ್ತಿದ್ದಾರೆ. ವಿಚಾರಣಾಧೀನ ಹಾಗೂ ಸಜಾಬಂಧಿಗಳಿಗೆ ಪ್ರತ್ಯೇಕ ಊಟದ ಕ್ಯಾಂಟೀನ್ ಜೊತೆ, ಸಣ್ಣಪುಟ್ಟ ಚಿಕಿತ್ಸೆ ಪಡೆಯಲು ಆಯಕಟ್ಟಿನ ಜಾಗದಲ್ಲಿ ಹೊರ ರೋಗಿಗಳ ವಿಭಾಗ (ಒಪಿಡಿ) ತೆರೆಯಲು ಮುಂದಾಗಿದೆ. ಗಂಭೀರ ಪ್ರಮಾಣದಲ್ಲಿ ಅನಾರೋಗ್ಯಕ್ಕೆ ಒಳಗಾಗುವ ಕೈದಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು.
    ಸಂದರ್ಶಕರ ಭೇಟಿ ಕೊಠಡಿಗೆ ಜೈಲಿನ ವಿವಿಧ ಬ್ಯಾರಕ್​ನಿಂದ ಪ್ರವೇಶದ್ವಾರಕ್ಕೆ ಬರುವ ಕೈದಿಗಳು ಮಾತುಕತೆ ನಡೆಸಿದ ಬಳಿಕ ನೇರವಾಗಿ ಬ್ಯಾರಕ್​ಗೆ ಹೋಗದೆ, ಆಸ್ಪತ್ರೆ ಹಾಗೂ ಸಜಾಬಂಧಿಗಳ ಬ್ಯಾರಕ್​ಗಳಿಗೆ ಹೋಗುತ್ತಿದ್ದರು. ಇದನ್ನು ನಿಯಂತ್ರಿಸಲು ಇದೀಗ ಯೋಜನೆ ರೂಪಿಸಲಾಗುತ್ತಿದೆ.
    ಸಂದರ್ಶಕರ ಭೇಟಿ ಬಳಿಕ ಮತ್ತೆ ಕೈದಿಯಿದ್ದ ಬ್ಯಾರಕ್​ಗೆ ತೆರಳಲು ಬಯೊಮೆಟ್ರಿಕ್ ಜೊತೆಗೆ ಟೋಕನ್ ಸಿಸ್ಟಮ್ ಪರಿಚಯಲಾಗುತ್ತಿದೆ. ಟೋಕನ್​ನಲ್ಲಿ ಹೆಸರು, ಕೈದಿ ಸಂಖ್ಯೆ, ಸಮಯ ಸೇರಿದಂತೆ ಇನ್ನಿತರ ಅಂಶಗಳು ಮುದ್ರಿತವಾಗಿರಲಿದೆ. ಗಮ್ಯ ಸ್ಥಳಕ್ಕೆ ತೆರಳಿ ಜೈಲು ಸಿಬ್ಬಂದಿಗೆ ಟೋಕನ್ ನೀಡಿದಾಗ ಉದ್ದೇಶಿತ ಸಾಫ್ಟ್​ವೇರ್​ನಲ್ಲಿ ಸಿಬ್ಬಂದಿ ಅಪ್​ಡೇಟ್ ಮಾಡುತ್ತಾರೆ. ಹೀಗೆ ಪ್ರತಿ ಬಾರಿ ಸಂದರ್ಶಕರನ್ನು ಭೇಟಿಯಾಗಲು ಬಂದು ಹೋಗುವ ಕೈದಿಗಳ ಚಲನವಲನಗಳ ಸಂಪೂರ್ಣ ದತ್ತಾಂಶ ಸಂಗ್ರಹವಾಗಲಿದೆ. ಇನ್ನಿತರ ಕೈದಿಗಳೊಡನೆ ಕೂಡಿ ಅಕ್ರಮ ಚಟುವಟಿಕೆಗೆ ಮುಂದಾದರೆ ಅಂತಹ ಕೈದಿಗಳ ವಿರುದ್ಧ ಕ್ರಮಕೈಗೊಳ್ಳಲು ಟ್ರ್ಯಾಕಿಂಗ್ ಸಿಸ್ಟಮ್ ಸಹಕಾರಿಯಾಗಲಿದೆ ಎಂದು ಜೈಲಾಧಿಕಾರಿಗಳು ತಿಳಿಸಿದ್ದಾರೆ.

    Verbattle
    Verbattle
    Verbattle
    Bengaluru ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಸಾಲದಲ್ಲಿ ಮುಳುಗುತ್ತಿದ್ದಾರೆ ಭಾರತೀಯರು!
    Next Article ಕೇಂದ್ರ ಸರ್ಕಾರದ ವಿರುದ್ಧ ಡಿಸಿಎಂ ಕಿಡಿ
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ
    • Tamyez on ಪರಪ್ಪನ ಅಗ್ರಹಾರದಿಂದ ಬೆದರಿಕೆ ಕರೆ
    • prettiness-801 on ಭೋವಿ ನಿಗಮದ ದುಡ್ಡು ಸಿಕ್ಕವರಿಗೆ ಸೀರುಂಡೆ
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.