Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಂಕಿತ ಉಗ್ರನ ಟೋಪಿಯ ಬೆನ್ನು ಹತ್ತಿದ ಎನ್ಐಎ ತಂಡ | NIA
    Trending

    ಶಂಕಿತ ಉಗ್ರನ ಟೋಪಿಯ ಬೆನ್ನು ಹತ್ತಿದ ಎನ್ಐಎ ತಂಡ | NIA

    vartha chakraBy vartha chakraMarch 23, 202427 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.23- ರಾಜಧಾನಿ ಮಹಾನಗರಿ ಬೆಂಗಳೂರಿನ ವೈಟ್‌ಫೀಲ್ಡ್‌ ಸಮೀಪದ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್‌ ಸ್ಫೋಟ ಪ್ರಕರಣದ ಬೆನ್ನು ಹತ್ತಿರುವ ರಾಷ್ಟ್ರೀಯ ತನಿಖಾದಳ ಈ ಕುರಿತಂತೆ ಮಹತ್ವದ ಮಾಹಿತಿಯನ್ನು ಕಲೆಹಾಗಿದೆ.
    ಕೆಫೆಯಲ್ಲಿ ಸ್ಪೋಟ ನಡೆಸಿದ ಬಾಂಬರ್ ಜೊತೆಗೆ ಆತನ ಒಬ್ಬ ಸ್ನೇಹಿತ ಕೂಡ ಇದ್ದ. ಇಬ್ಬರೂ ಕೂಡ ಸಾಕಷ್ಟು ತಯಾರಿ ಮಾಡಿಯೇ ಸ್ಪೋಟ ನಡೆಸಿದ್ದಾರೆ ಅಷ್ಟೇ ಅಲ್ಲ, ಇಬ್ಬರೂ ಕರ್ನಾಟಕ ಮೂಲದವರಾಗಿದ್ದು, ಸ್ಫೋಟಕ್ಕೆ ಮೊದಲಿನ ಎರಡು ತಿಂಗಳು ತಮಿಳುನಾಡಿನಲ್ಲಿದ್ದರು ಎನ್ನುವುದು ರಾಷ್ಟ್ರೀಯ ತನಿಖಾ ದಳ (ಎನ್ ಐಎ-NIA) ನಡೆಸಿದ ತನಿಖೆಯಲ್ಲಿ ಪತ್ತೆಯಾಗಿದೆ.
    ಬಾಂಬರ್ ನ ಜಾಡು ಹಿಡಿದ ಎನ್‌ಐಎ ಅಧಿಕಾರಿಗಳು ತಮಿಳುನಾಡಿಗೆ ಆತ ಪರಾರಿಯಾಗಿರಬಹುದು ಎನ್ನುವ ಶಂಕೆಯ ಮೇಲೆ ಶೋಧ ಕೈಗೊಂಡಾಗ ಆತ ಸ್ಫೋಟಕ್ಕೂ ಮುನ್ನ ಎರಡು ತಿಂಗಳುಗಳ ಕಾಲ ತಮಿಳುನಾಡಿನಲ್ಲಿ ಉಳಿದಿದ್ದುದು ಗೊತ್ತಾಗಿದೆ.

    ರಾಮೇಶ್ವರಂ ಕೆಫೆಯಲ್ಲಿ ಸ್ಪೋಟಕವನ್ನು ಇಟ್ಟು ಪರಾರಿಯಾದವನ ಜೊತೆ ಮತ್ತೋರ್ವ ಪತ್ತೆಯಾಗಿದ್ದು, ತಮಿಳುನಾಡಿನಲ್ಲಿ ಉಳಿದಿದ್ದ ಶಂಕಿತನ ಜೊತೆಗೆ ಈತನೂ ಇದ್ದ ಎಂಬ ಮಾಹಿತಿಯನ್ನು ಸಂಗ್ರಹಿಸಿದ್ದಾರೆ.
    ಸ್ಫೋಟಕ್ಕೆ ಮುನ್ನ ಇವರು ಓಡಾಡಿದ್ದ ಜಾಡು ಹಿಡಿದ ಎನ್‌ಐಎ ಅಧಿಕಾರಿಗಳಿಗೆ ಎರಡು ತಿಂಗಳು ತಮಿಳುನಾಡಿನ ಲಾಡ್ಜ್‌ನಲ್ಲಿ ಇವರು ಉಳಿದುಕೊಂಡಿರುವುದು ಪತ್ತೆಯಾಗಿದೆ. ಸ್ಫೋಟಕ್ಕೆ ಅವರು ಇಲ್ಲಿ ತರಬೇತಿ ಪಡೆಯುತ್ತಿದ್ದರೇ ಅಥವಾ ಇನ್ನಷ್ಟು ದೊಡ್ಡ ಉಗ್ರ ಕೃತ್ಯದ ತಯಾರಿ ನಡೆಸುತ್ತಿದ್ದರೇ ಎಂಬ ಅಂಶವನ್ನು ತನಿಖೆ ಮಾಡಲಾಗುತ್ತಿದೆ.
    ಸ್ಫೋಟಕ ಇಡಲು ಬರುವ ವೇಳೆ ಮುಖ ಮರೆಮಾಚಲು ಉಗ್ರ ಧರಿಸಿದ್ದ ಟೊಪಿಯ ಮೂಲವನ್ನು ಎನ್‌ಐಎ ಪತ್ತೆ ಹಚ್ಚಿದೆ. ಇದು ತಮಿಳುನಾಡಿನ ಮಾಲ್ ಒಂದರಲ್ಲಿ ಖರೀದಿಸಲಾದ ಟೊಪಿಯಾಗಿದ್ದು, ಟೋಪಿ ಖರೀದಿ ವೇಳೆ ಶಂಕಿತನ ಜೊತೆಗೆ ಮತ್ತೊಬ್ಬನಿದ್ದ. ಖರೀದಿ ವೇಳೆ ಇಬ್ಬರ ಮುಖಚಹರೆ ಅಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಸಿಸಿಟಿವಿ ಫೂಟೇಜ್‌ಗಳನ್ನು ಎನ್‌ಐಎ ಸಂಗ್ರಹಿಸಿದೆ.

    ಮತ್ತೊಂದೆಡೆ, ಭಯೋತ್ಪಾದಕ ಎಸೆದುಹೋದ ಕ್ಯಾಪ್‌ನಲ್ಲಿ ಶಂಕಿತನ ಕೂದಲು ದೊರೆತಿದ್ದು, ಅದನ್ನು ಡಿಎನ್‌ಎ ಟೆಸ್ಟ್‌ಗೆ ಒಳಪಡಿಸಲಾಗಿದೆ. ಸದ್ಯ ಸಿಸಿಟಿವಿಗಳನ್ನು ಆಧರಿಸಿದ ನಡೆದಿರುವ ತನಿಖೆಯಲ್ಲಿ ಸಿಕ್ಕಿರುವ ಈ ಮಹತ್ವದ ಲೀಡ್‌ ಎನ್‌ಐಎಯ ಮತ್ತಷ್ಟು ಆಳದ ತನಿಖೆಗೆ ಪೂರಕವಾಗಿದೆ.
    ತನಿಖೆಯ ಆರಂಭಿಕ ಹಂತದಲ್ಲಿ ಆತನ ಸರಿಯಾದ ಮುಖಚರ್ಯೆ ಕಾಣುವ ಯಾವ ಚಿತ್ರವೂ ಯಾರ ಕೈಗೂ ಸಿಕ್ಕಿರಲಿಲ್ಲ. ಆತ ಕೆಎಸ್‌ಆರ್ಟಿಸಿ ವೋಲ್ವೋ ಬಸ್‌ನಲ್ಲಿ ಬಂದಿದ್ದು, ಹೋಟೆಲ್‌ ಪ್ರವೇಶ ಮಾಡಿದ್ದು, ಬಿಲ್‌ ಕೌಂಟರ್‌, ರವೆ ಇಡ್ಲಿ ಹಿಡಿದುಕೊಂಡು ಹೋಗುವ, ಬಾಂಬಿಟ್ಟ ಬಳಿಕ ಇಳಿದುಕೊಂಡು ಹೋಗುವ ವಿಡಿಯೊಗಳೆಲ್ಲ ಸಿಸಿಟಿವಿಯಲ್ಲಿ ಸಿಕ್ಕಿದ್ದವು. ಆದರೆ, ಅದೆಲ್ಲದರಲ್ಲಿ ಆತ ಮುಖವನ್ನು ಟೋಪಿಯಿಂದ ಮರೆ ಮಾಚಿದ್ದ. ಮಾಸ್ಕ್‌ ಹಾಕಿಕೊಂಡಿದ್ದ. ಹಾಗಾಗಿ ಆತನ ಮುಖ ಕಾಣುತ್ತಿರಲಿಲ್ಲ.

    ಎನ್‌ಐಎ ಆರಂಭಿಕ ಹಂತದಲ್ಲಿ ಆತ ರಾಮೇಶ್ವರಂ ಕೆಫೆಯಲ್ಲಿರುವಾಗ ಸೆರೆ ಹಿಡಿದ ಚಿತ್ರವನ್ನು ಬಿಡುಗಡೆ ಮಾಡಿ ಈ ವ್ಯಕ್ತಿಯ ಮಾಹಿತಿ ಇದ್ದರೆ ದಯವಿಟ್ಟು ತಿಳಿಸಿ ಎಂದು ಹೇಳಿತ್ತು. ಬಳಿಕ ಬಳ್ಳಾರಿ ಬಸ್‌ ನಿಲ್ದಾಣದ ಒಂದು ವಿಡಿಯೊವನ್ನು ಪೋಸ್ಟ್‌ ಮಾಡಿತು. ಆದರೆ, ಅದನ್ನು ಕೆಲವೇ ನಿಮಿಷಗಳಲ್ಲಿ ಜಾಲ ತಾಣದಿಂದ ತೆಗೆದುಹಾಕಿತು.
    ನಂತರ ಎನ್‌ಐಎ ನಾಲ್ಕು ಚಿತ್ರಗಳ ಒಂದು ಬಂಚ್‌ ಅನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಶಂಕಿತ ಆರೋಪಿಯ ಮುಖ ಬಹುತೇಕ ಸ್ಪಷ್ಟವಾಗಿ ಕಾಣಿಸುತ್ತದೆ. ಪೋಟೋದಲ್ಲಿರುವ ವ್ಯಕ್ತಿ ಕಂಡು ಬಂದರೆ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಮನವಿ ಮಾಡಿದೆ. ಪೋನ್ ನಂಬರ್ ಮತ್ತು ಇ ಮೇಲ್ ಐಡಿ ಕೊಟ್ಟು ಮಾಹಿತಿ ನೀಡುವಂತೆ ಮನವಿ ಮಾಡಿದೆ.

    Verbattle
    Verbattle
    Verbattle
    NIA ಉಗ್ರ ಕಲೆ
    Share. Facebook Twitter Pinterest LinkedIn Tumblr Email WhatsApp
    Previous Articleಬಂಡಾಯದ ಗೀತೆಯಲ್ಲಿ ತೋಯುತ್ತಿರುವ ರಾಘವೇಂದ್ರ (ಶಿವಮೊಗ್ಗ ಲೋಕಸಭಾ ಕ್ಷೇತ್ರ) | Shivamogga
    Next Article ಕುಕ್ಕೆ ಸುಬ್ರಹ್ಮಣ್ಯ ಸಮೀಪ ನಕ್ಸಲೀಯರ ವಾಸ್ತವ್ಯ
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Daviddek on ಮತ್ತೊಂದು ಆರೋಪದಲ್ಲಿ ಸಿಲುಕಿದ ಶರಣರು
    • RicardoCor on ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್
    • 77_judi_pmmn on ಗಂಗೆಯಲ್ಲಿ ಮೆಡಲ್ ವಿಸರ್ಜನೆ
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.