Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಿಗಮ‌ ಮಂಡಳಿ ನೇಮಕಾತಿಯ ಸುತ್ತ ಮುತ್ತ | Nigama Mandali
    ಸುದ್ದಿ

    ನಿಗಮ‌ ಮಂಡಳಿ ನೇಮಕಾತಿಯ ಸುತ್ತ ಮುತ್ತ | Nigama Mandali

    vartha chakraBy vartha chakraNovember 23, 20231 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ನೆನೆಗುದಿಗೆ ಬಿದ್ದಿರುವ ರಾಜ್ಯದ ನಿಗಮ ಮತ್ತು ಮಂಡಳಿ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿದ ಬೆನ್ನಲ್ಲೇ ಸಾಕಷ್ಟು ಗೊಂದಲ,ಅಸಮಾಧಾನಗಳು ಕೇಳಿಬಂದಿವೆ.
    ಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟುವ ಹಲವು ಮಂದಿ ಶಾಸಕರು ನಿಗಮ ಮಂಡಳಿ (Nigama Mandali) ಅಧ್ಯಕ್ಷ ಸ್ಥಾನದ ಪ್ರಸ್ತಾವನೆಯನ್ನು ನಯವಾಗಿಯೇ ತಿರಸ್ಕರಿಸಿದ್ದಾರೆ ಮತ್ತೆ ಕೆಲವರು ನಿರ್ದಿಷ್ಟ ನಿಗಮದ ಅಧ್ಯಕ್ಷ ಸ್ಥಾನ ಬೇಕು ಎಂದು ಪಟ್ಟು ಹಿಡಿದಿರುವುದು ಪಕ್ಷದ ನಾಯಕತ್ವಕ್ಕೆ ಸವಾಲಾಗಿದೆ.

    ಕಳೆದ ರಾತ್ರಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ನಾಯಕ ಸುರ್ಜೇವಾಲ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮೊದಲಿಗೆ ಎಲ್ಲ ಪ್ರಮುಖ ಶಾಸಕರಿಗೆ ನಿಗಮ ಮಂಡಳಿಗಳ (Nigama Mandali) ಅಧ್ಯಕ್ಷ ಸ್ಥಾನ ನೀಡಬೇಕು ಹಾಗೂ ನಂತರದಲ್ಲಿ ಉಳಿಯುವ ಸ್ಥಾನಗಳನ್ನು ಕಾರ್ಯಕರ್ತರಿಗೆ ಹಂಚಿಕೆ ಮಾಡಬೇಕು ಎಂಬ ತೀರ್ಮಾನ ಕೈಗೊಳ್ಳಲಾಗಿದೆ.
    ಕಾರ್ಯಕರ್ತರಿಗೆ ಸ್ಥಾನಮಾನ ನೀಡುವ ಸಮಯದಲ್ಲಿ ಕಳೆದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮತ್ತು ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಅವಕಾಶ ನೀಡಿದವರಿಗೆ ಈ ಬಾರಿ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಇವರ ಬದಲಾಗಿ ಹೊಸಬರಿಗೆ ಆದ್ಯತೆ ನೀಡಬೇಕು ಎಂಬ ನಿರ್ಧಾರಕ್ಕೆ ಬರಲಾಗಿದೆ.

    28ಕ್ಕೆ ಮತ್ತೊಂದು ಸುತ್ತಿನ ಸಭೆ:
    ಈ ಕುರಿತಂತೆ ಸುದ್ದಿಗಾರರಿಗೆ ಮಾಹಿತಿ ನೀಡಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್
    ನಿಗಮ ಮಂಡಳಿ ನೇಮಕ ವಿಚಾರವಾಗಿ ಚರ್ಚೆ ಮಾಡುತ್ತಿದ್ದೇವೆ. ಹಿರಿಯ ನಾಯಕರು, ಶಾಸಕರ ಅಭಿಪ್ರಾಯವನ್ನು ಪಡೆಯುತ್ತಿದ್ದೇವೆ. ನಾನು ಹಾಗೂ ಮುಖ್ಯಮಂತ್ರಿಗಳು ತೆಲಂಗಾಣ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಹೋಗಬೇಕಿದೆ. 28ರಂದು ನಮ್ಮ ದೆಹಲಿ ನಾಯಕರು ಮತ್ತೆ ರಾಜ್ಯಕ್ಕೆ ಆಗಮಿಸುತ್ತಿದ್ದು, ಆ ಸಭೆ ಬಳಿಕ ನಮ್ಮ ಪಟ್ಟಿಯನ್ನು ಹೈಕಮಾಂಡ್ ನಾಯಕರಿಗೆ ಕಳುಹಿಸುತ್ತೇವೆ” ಎಂದರು.
    ಗೃಹಮಂತ್ರಿಗಳು ಅವರ ಬೆಂಬಲಿಗರಿಗೆ ನಿಗಮ ಮಂಡಳಿ ಸ್ಥಾನದ ವಿಚಾರವಾಗಿ ಬೇಸರವಾಗಿದೆ ಎಂದು ಕೇಳಿದಾಗ, “ಇಲ್ಲಿ ಅವರ ಬೆಂಬಲಿಗರು, ನನ್ನ ಬೆಂಬಲಿಗರು ಎಂಬುದಿಲ್ಲ. ಎಲ್ಲ ಒಟ್ಟಾಗಿ ಕಾಂಗ್ರೆಸ್ ಬೆಂಬಲಿಗರು. ನನಗೆ, ಸಿಎಂ, ಗೃಹ ಸಚಿವರಿಗೆ ಬೆಂಬಲಿಗರು ಇಲ್ಲ. ಇರುವವರೆಲ್ಲಾ ಕಾಂಗ್ರೆಸ್ ಬೆಂಬಲಿಗರು. ಮಂತ್ರಿಗಿರಿ ಸಿಗದ ಹಿರಿಯ ಶಾಸಕರಿಗೆ ನಿಗಮ ಮಂಡಳಿ ಸ್ಥಾನ ನೀಡುವ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ” ಎಂದು ತಿಳಿಸಿದರು.

    ಹರಾಜು ಪ್ರಕ್ರಿಯೆ:
    ಮತ್ತೊಂದೆಡೆ,ವರ್ಗಾವಣೆಯನ್ನು ಫೋನ್‌ ಕರೆಯಲ್ಲೇ ನಿಭಾಯಿಸುವ ವ್ಯವಸ್ಥಿತ ದಂಧೆಯನ್ನಾಗಿ ಮಾಡಿಕೊಂಡಿರುವ ಸಿದ್ದರಾಮಯ್ಯನವರ ಸರ್ಕಾರ ನಿಗಮ ಮಂಡಳಿ ಹರಾಜಿಗೆ ಇಷ್ಟು ದಿನ ಕಾಯುತ್ತಿತ್ತು. ಈ ಹಿಂದೆ ವ್ಯವಹಾರ ಸರಿಯಾಗಿ ಕುದುರದ ಕಾರಣ ಮುಂದೂಡಲಾಗಿದ್ದ ನಿಗಮ ಮಂಡಳಿ ಹುದ್ದೆಗಳ ಹರಾಜು ಪ್ರಕ್ರಿಯೆ ಬಗ್ಗೆ ಸುರ್ಜೆವಾಲ ಅವರು ದೆಹಲಿಯಿಂದ ಬಂದು ಸಮಾಲೋಚನೆಗಳನ್ನು ನಡೆಸಿದ್ದಾರೆ.ಎಂದು ಬಿಜೆಪಿ ವ್ಯಾಖ್ಯಾನಿಸಿದೆ.
    ಹರಾಜು ನಡೆಯುತ್ತಿರುವ ಪರಿಣಾಮವಾಗಿ ನಿಗಮ ಮಂಡಳಿ ಹುದ್ದೆಗೆ ಕೊಡಬೇಕಾದ ಕಲೆಕ್ಷನ್‌ ಪ್ರಮಾಣ ಮತ್ತೆ ಚರ್ಚೆಗೆ ಬಂದಿದೆ ಎಂದು ಬಿಜೆಪಿ ಟೀಕಿಸಿದೆ.
    ನಿಗಮ, ಮಂಡಳಿಗಳನ್ನು ಪಡೆಯಲು ಕೋಟಿ ಕೋಟಿ ಹಣ ಕೊಡಬೇಕು ಎಂದು ಆರೋಪಿಸಿರುವ ಬಿಜೆಪಿ, ಕಲೆಕ್ಷನ್ ಪಟ್ಟಿಯನ್ನು ಸಿದ್ದರಾಮಯ್ಯ ಚಿತ್ರದ ಜೊತೆ ಪೋಸ್ಟ್ ಮಾಡಿದೆ.
    ಜನನ, ಮರಣ ಪ್ರಮಾಣಪತ್ರ ಪಡೆಯುವುದು ಮೂಲಭೂತ ಹಕ್ಕು ಎಂಬ ಕಾರಣಕ್ಕೆ ಅದನ್ನು ಇದುವರೆಗೂ ಉಚಿತವಾಗಿ ನೀಡಲಾಗುತ್ತಿತ್ತು. ಆದರೆ ಅದರ ಮೇಲೆಯೂ ₹100 ರಿಂದ ₹1000ದವರೆಗೂ ಶುಲ್ಕ ವಿಧಿಸಿ ಮರಣದಲ್ಲೂ ದಂಧೆ ನಡೆಸಲು ಕಾಂಗ್ರೆಸ್ ಸರ್ಕಾರ ಮುಂದಾಗಿರುವುದು ಅತಿ ಖಂಡನೀಯ‌ ಎಂದಿದೆ.

    Verbattle
    Verbattle
    Verbattle
    Congress Government Karnataka m NDA News Nigama Mandali Politics Trending Varthachakra ಕಲೆ ಕಾಂಗ್ರೆಸ್ Election ವ್ಯವಹಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಗುಜರಾತಿನ ಈ ಮಾದರಿ ಬಗ್ಗೆ ಪ್ರಧಾನಿ ಮೋದಿ ಉತ್ತರಿಸಬೇಕಂತೆ | Gujarat
    Next Article ಗ್ಯಾರಂಟಿ ಯೋಜನೆಗಳ ಪ್ರಗತಿಗೆ ಸಿಎಂ ಪುಲ್ ಖುಷ್ | Congress Guarantee Schemes
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    1 Comment

    1. Scotthem on December 6, 2025 2:24 pm

      ?Celebremos a cada triunfador del galardon supremo !
      Jugar en casinoretirosinverificacion.com/ permite acceder a una experiencia rГЎpida y privada sin procesos complicados. Muchos jugadores optan por estas opciones debido a la libertad que ofrecen plataformas como casinos sin verificacion. Gracias a esta flexibilidad, cada sesiГіn se vuelve mГЎs cГіmoda al usar servicios como casinoretirosinverificacion.
      Jugar en casino sin registro permite acceder a una experiencia rГЎpida y privada sin procesos complicados. Muchos jugadores optan por estas opciones debido a la libertad que ofrecen plataformas como Casino sin KYC. Gracias a esta flexibilidad, cada sesiГіn se vuelve mГЎs cГіmoda al usar servicios como casino sin dni.
      Casino Retiro Sin VerificaciГіn, diversiГіn inmediata – п»їhttps://casinoretirosinverificacion.com/
      ?Que la suerte te beneficie con celebremos juntos inolvidables lanzamientos prosperos !

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DavidTep on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Daviddek on The Essence Of Gandhi Jayanthi | Gandhi Jayanthi 2023
    • Daviddek on ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.