Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಪ್ಪ,ಮಗನಿಗೆ ಹೆದರುವ ಮಗ ನಾನಲ್ಲ ಎಂದ ಯತ್ನಾಳ್ | Yatnal
    ರಾಜಕೀಯ

    ಅಪ್ಪ,ಮಗನಿಗೆ ಹೆದರುವ ಮಗ ನಾನಲ್ಲ ಎಂದ ಯತ್ನಾಳ್ | Yatnal

    vartha chakraBy vartha chakraFebruary 12, 202460 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ಎಲ್ಲವೂ ಸರಿ ಹೋಗಿದೆ ಎಂದುಕೊಂಡ ರಾಜ್ಯ ಬಿಜೆಪಿಯಲ್ಲಿ ಇದೀಗ ಮತ್ತೊಂದು ಸುತ್ತಿನ ಸಂಘರ್ಷ ಆರಂಭಗೊಂಡಿದೆ. ರಾಜ್ಯಸಭೆಯ ಟಿಕೆಟ್ ಪ್ರಕಟವಾದ ಬೆನ್ನಲ್ಲೇ ಮಾಜಿ ಸಚಿವ ಬಂಡಾಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೊಮ್ಮೆ ನಾಯಕತ್ವದ ವಿರುದ್ಧ ಗುಡುಗಿದ್ದಾರೆ.
    ವಿಧಾನಮಂಡಲದ ಅಧಿವೇಶನ ಹಾಗೂ ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಂತೆ ಯತ್ನಾಳ್ ಮಾಡಿರುವ ಈ ಆರೋಪ ರಾಜ್ಯ ಬಿಜೆಪಿಯಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವುದು ಮತ್ತೊಮ್ಮೆ ಸಾಕಾಗಿದೆ.

    ಮೊನ್ನೆಯಷ್ಟೇ ದೆಹಲಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರ ನಿವಾಸದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಅವರ ಜೊತೆ ಮಾತುಕತೆ ನಡೆಸಿದ್ದರು. ಈ ವೇಳೆ ನಡೆದ ಮಾತುಕತೆಯ ಪರಿಣಾಮವಾಗಿ ಬಿಜೆಪಿಯಲ್ಲಿ ಉಂಟಾಗಿದ್ದ ಎಲ್ಲಾ ಗೊಂದಲಗಳು ಬಗೆಹರಿದಿವೆ ಎಂದು ವ್ಯಾಖ್ಯಾನಿಸಲಾಗಿತ್ತು. ಆದರೆ ಇದೀಗ ಬಸನಗೌಡ ಪಾಟೀಲ ಯತ್ನಾಳ್ ನೀಡಿರುವ ಹೇಳಿಕೆ ಬಿಜೆಪಿಯಲ್ಲಿ ಇನ್ನೂ ಕೂಡ ಭಿನ್ನಮತ ಆರಿಲ್ಲ ಎಂದು ಸಾಬೀತಾಗಿದೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್ ತನಗೆ ಹೊಂದಾಣಿಕೆ ರಾಜಕಾರಣ ಮಾಡಿ ಗೊತ್ತಿಲ್ಲ ಅದನ್ನು ಮಾಡಿ ರಾಜಕಾರಣದಲ್ಲಿರುವ ಉಮೇದಿಯೂ ತನಗಿಲ್ಲ, ಪ್ರಶಸ್ತಿಗಳಿಗಾಗಿ ಮತ್ತು ಟಿಕೆಟ್ ಇಲ್ಲವೇ ಆಧಿಕಾರಕ್ಕಾಗಿ ವಶೀಲಿ ಮಾಡಿದವನಲ್ಲ ಎಂದು ಗುಡುಗಿದ್ದಾರೆ.

    ತಮ್ಮರಾಜಕೀಯ ಬದುಕಿನಲ್ಲಿ ಅಟಲ್ ಬಿಹಾರಿ ವಾಜಪೇಯಿ ಮತ್ತು ಲಾಲ್ ಕೃಷ್ಣ ಅಡ್ವಾಣಿ ಅವರಿಬ್ಬರಿಗೆ ಬಿಟ್ಟರೆ ಯಾರಿಗೂ ಕಾಲು ಮುಟ್ಟಿ ನಮಸ್ಕರಿಸಿದವನಲ್ಲ.ಹೊಂದಾಣಿಕೆ ಮಾಡಿಕೊಂಡರೆ ಭವಿಷ್ಯ ಚೆನ್ನಾಗಿರುತ್ತೆ ಅಂತ ಬಹಳಷ್ಟು ಜನ ಹೇಳುತ್ತಾರೆ, ಅದು ತನಗೆ ಬೇಕಿಲ್ಲ, ಲೋಕಸಭಾ ಚುನಾವಣೆಯ ಬಳಿಕ ತನಗೊಂದು ಗತಿ ಕಾದಿದೆ ತನಗೆ ಚೆನ್ನಾಗಿ ಗೊತ್ತಿದೆ, ಹಾಗಂತ ವಶೀಲಿ ಮಾಡುವ ಜಾಯಮಾನ ತನ್ನದಲ್ಲ ಎಂದು ಸ್ಪಷ್ಟಪಡಿಸಿದರು.
    ಅಪ್ಪ ಮಗನಿಗೆ ಹೆದರುವ ಜಾಯಮಾನ ನನ್ನದಲ್ಲ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಾಯಿ ಮುಚ್ಚಿಕೊಂಡು ಸುಮ್ಮನೆ ಇದ್ದೇನೆ ಚುನಾವಣೆ ಮುಗಿದ ನಂತರ ಇವರ ಎಲ್ಲಾ ಬಂಡವಾಳ ಬಯಲು ಮಾಡುತ್ತೇನೆ ಎಂದು ಹೇಳಿದರು.
    ಕಳೆದ ವಿಧಾನಸಭೆ ಚುನಾವಣೆಯಲ್ಲಿ ಎರಡು ಕಡೆ ಸೋಮಣ್ಣ ಅವರನ್ನು ಸೋಲಿಸಿದರು ಹಾವೇರಿಯಲ್ಲಿ ಬಸವರಾಜ ಬೊಮ್ಮಾಯಿ ಮತ್ತು ವಿಜಯಪುರದಲ್ಲಿ ನನ್ನನ್ನು ಸೋಲಿಸಲು ಸಾಕಷ್ಟು ಪ್ರಯತ್ನ ಮಾಡಿದರು. ಯಾರಿಗೆಲ್ಲ ದುಡ್ಡು ಕೊಟ್ಟರು, ಯಾರೆಲ್ಲರ ಜೊತೆ ಮಾತನಾಡಿದರು, ಎಲ್ಲಾ ವಿವರಗಳು ತಮ್ಮ ಬಳಿ ಇವೆ ಸಮಯಕ್ಕಾಗಿ ಕಾಯುತ್ತಿದ್ದೇನೆ ಆಗ ಅದನ್ನು ಬಹಿರಂಗಪಡಿಸುತ್ತೇನೆ ಈ ವಿಷಯದಲ್ಲಿ ಯಾರಿಗೂ ಹೆದರುವ ಮಾತೇ ಇಲ್ಲ ಎಂದು ಸ್ಪಷ್ಟಪಡಿಸಿದರು.

    ರಾಜ್ಯದಲ್ಲಿ ವಿಜಯೇಂದ್ರ ನೇತೃತ್ವದಲ್ಲಿ ನಾವು ಚುನಾವಣೆ ಎದುರಿಸುತ್ತಿಲ್ಲ ಪ್ರಧಾನಿ ಮೋದಿ ಅಮಿತ್ ಶಾ ನೇತೃತ್ವದಲ್ಲಿ ಮತ್ತು ಶ್ರೀ ರಾಮನ ಹೆಸರಿನಲ್ಲಿ ಬಿಜೆಪಿ ಚುನಾವಣೆ ಎದುರಿಸುತ್ತಿದೆ ರಾಜ್ಯದಲ್ಲಿ ಈ ಬಾರಿ ಬಿಜೆಪಿ ಆರ್ಥಿಕ ಸಂಖ್ಯಾ ಸಂಸದರು ಆಯ್ಕೆ ಮಾಡಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
    ಅಪ್ಪ ಮಕ್ಕಳ ಜೊತೆ ರಾಜಿಯಾಗುವ ಪ್ರಶ್ನೆಯೇ ಇಲ್ಲ ವಿಜಯೇಂದ್ರ ಅವರಿಂದ ನನಗೇನು ಆಗಬೇಕಾಗಿಲ್ಲ ನಾನೇನು ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಕೇಳಿಲ್ಲ. ಹೆದರಿಕೊಂಡು ಬಾಯಿ ಮುಚ್ಚಿ ಕುಳಿತಿದ್ದೇನೆ ಎಂದು ಭಾವಿಸಬೇಡಿ ಚುನಾವಣೆ ಮುಗಿದ ಮೇಲೆ ಇವರ ಇತಿಹಾಸವನ್ನು ತೆಗೆದಿಡುತ್ತೇನೆ ಎಂದು ಹೇಳಿದರು.

    Yatnal Election ಬೊಮ್ಮಾಯಿ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleನಾನು ಸುಳ್ಳು ಹೇಳುತ್ತಿಲ್ಲ ಎಂದ ಕೃಷ್ಣ ಬೈರೇಗೌಡ | KBG
    Next Article ರಾಜ್ಯದ ಗ್ಯಾರಂಟಿ ದೇಶಕ್ಕೆ ಮಾದರಿ ಎಂದ ರಾಜ್ಯಪಾಲರು | TC Gehlot
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • australia cigerettes deliery on ಗಂಗೆಯಲ್ಲಿ ಮೆಡಲ್ ವಿಸರ್ಜನೆ
    • australia cigerettes deliery on ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರದ ಸಮರ.
    • лучшие адвокаты москвы по уголовным делам on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ವರ್ಷದಲ್ಲಿ 3ನೇ ಗಂಡನನ್ನೂ ಬಿಟ್ಟನಟಿ#varthachakra #malayalamactresses #meeravasudevan #divorce #fact
    Subscribe