Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರೀತಿಗಾಗಿ ಬಂದ ಯುವತಿ Pakistan ಕ್ಕೆ ಗಡಿಪಾರು
    ರಾಷ್ಟ್ರೀಯ

    ಪ್ರೀತಿಗಾಗಿ ಬಂದ ಯುವತಿ Pakistan ಕ್ಕೆ ಗಡಿಪಾರು

    vartha chakraBy vartha chakraFebruary 20, 202348 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಫೆ.20-

    ಪ್ರೀತಿ ಅರಸಿ ಭಾರತಕ್ಕೆ ಬಂದು ಬೆಂಗಳೂರಿನಲ್ಲಿ ವಾಸ್ತವ್ಯ ಹೊಡಿದ್ದ Pak ಮಹಿಳೆಯನ್ನು ಪೊಲೀಸರು ಮತ್ತೆ ಅಟರಿ ಬಾರ್ಡರ್‌ ಮೂಲಕ ವಾಪಸ್ ಕಳುಹಿಸಿದ್ದಾರೆ. ಪಾಕ್ ಯುವತಿ ಇಕ್ರಾ ಜೀವನಿ ಎಂಬ ಯುವತಿ ಆನ್‌ಲೈನ್‌ನಲ್ಲಿ ಲುಡೋ ಗೇಮ್ ಆಡುವ ಚಟ ಬೆಳೆಸಿಕೊಂಡಿದ್ದು, ಈ ಆಟ ಆಡುತ್ತಲೇ ಆಕೆಗೆ ಭಾರತದ ಉತ್ತರ ಪ್ರದೇಶ ಮೂಲದ 26 ವರ್ಷದ ಮುಲಾಯಂ ಸಿಂಗ್ ಎಂಬಾತನ ಪರಿಚಯವಾಗಿದೆ.

    ಪರಿಚಯ ಪ್ರೇಮಕ್ಕೆ ತಿರುಗಿ ಆತನನ್ನು ಬಿಟ್ಟಿರಲಾರದಷ್ಟರ ಮಟ್ಟಿಗೆ ಹಚ್ಚಿಕೊಂಡ ಆಕೆ ಅದಕ್ಕಾಗಿ ಪಾಕಿಸ್ತಾನ ಬಿಟ್ಟು ಭಾರತಕ್ಕೆ ಬರುವುದಕ್ಕೆ ಮುಂದಾಗಿದ್ದಳು. ಆದರೆ ಬರುವುದು ಹೇಗೆ ಈಕೆಯ ಬಳಿ ಭಾರತ VISA ಇಲ್ಲ.

    ಹೀಗಿರುವಾಗ ಗೆಳೆಯ ಮುಲಾಯಂ ಆಕೆಗೆ ನೇಪಾಳ (Nepal) ಕ್ಕೆ ಹೋಗಿ ಅಲ್ಲಿಂದ ಸನೋಲಿ ಗಡಿ ಮೂಲಕ ಅಕ್ರಮವಾಗಿ ಭಾರತ ಪ್ರವೇಶಿಸುವಂತೆ ಸಲಹೆ ನೀಡಿದ್ದಾನೆ.   ಪ್ರಿಯಕರನ ಮಾತು ಕೇಳಿದ ಆಕೆ ಅದರಂತೆ ಪಾಕಿಸ್ತಾನದಿಂದ ನೇಪಾಳಕ್ಕೆ ತೆರಳಿದ್ದಾಳೆ. ಕಳೆದ ಸೆಪ್ಟೆಂಬರ್ 19 ರಂದು ನೇಪಾಳದ ರಾಜಧಾನಿ ಕಠ್ಮಂಡು (Katmandu) ವಿನ ತ್ರಿಭುವನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ  ಲ್ಯಾಂಡ್ ಆದ ಇಕ್ರಾ ಜೀವನಿಯನ್ನು ಅಲ್ಲಿ ಮುಲಾಯಂ ಸ್ವಾಗತಿಸಿದ್ದಾನೆ.

    ಅಲ್ಲಿ ಇಬ್ಬರು ಮದುವೆಯಾಗಿದ್ದು, ಒಂದು ವಾರಗಳ ಕಾಲ ಇಬ್ಬರೂ ಅಲ್ಲೇ  ಕಳೆದಿದ್ದಾರೆ. ನಂತರ ಇಬ್ಬರು ಇಂಡೋ ನೇಪಾಳ್ ಸನೋಲಿ ಬಾರ್ಡರ್‌  ಮೂಲಕ ಭಾರತವನ್ನು ಪ್ರವೇಶಿಸಿದ್ದಾರೆ. ನಂತರ ಬೆಂಗಳೂರಿಗೆ ಬಂದ ಈ ಜೋಡಿ ಇಲ್ಲಿ ವಾಸ ಮಾಡಲು ಶುರು ಮಾಡಿದ್ದಾರೆ. ಇಕ್ರಾ ರವಾ ಎಂಬ ಹಿಂದೂ ಹೆಸರನ್ನು ಇರಿಸಿಕೊಂಡಿದ್ದು ಇಬ್ಬರು ಜೊತೆಯಾಗಿ ವಾಸ ಮಾಡಲು ಶುರು ಮಾಡಿದ್ದಾರೆ.

    ಈ ಮಧ್ಯೆ ಹಿಂದೂಗಳೆಂದು ಹೇಳಿಕೊಂಡು ಮನೆಯಲ್ಲಿ ನಮಾಜ್  ಮಾಡುತ್ತಿರುವುದ್ದನ್ನು ನೋಡಿದ ನೆರೆಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಇವರು ವಾಸವಿದ್ದ ಮನೆ ಮೇಲೆ ದಾಳಿ ನಡೆಸಿ ವಿಚಾರಣೆ ನಡೆಸಿದಾಗ ಅಲ್ಲಿ ಇಕ್ರಾ ಹಾಗೂ ಆಕೆಯ ಪಾಕಿಸ್ಥಾನಿ ಪಾಸ್‌ಪೋರ್ಟ್ ಪೊಲೀಸರಿಗೆ ಸಿಕ್ಕಿದೆ.

    ನಂತರ ಆಕೆಯನ್ನು ಬಂಧಿಸಿ ಕರೆತಂದ ಪೊಲೀಸರು, ಅಮೃತಸರಕ್ಕೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಆಕೆಯನ್ನು ಅಟರಿ ಬಾರ್ಡರ್ ಮೂಲಕ ವಾಪಸ್ ಪಾಕಿಸ್ಥಾನಕ್ಕೆ ಕಳುಹಿಸಿ ಕೊಟ್ಟಿದ್ದಾರೆ.

    ಇವರು ನೇಪಾಳದಿಂದ ಸೀದಾ ಬೆಂಗಳೂರಿಗೆ ಬಂದು ಸರ್ಜಾಪುರ ರಸ್ತೆಯ ಜುನ್ನಸಂದ್ರದಲ್ಲಿ ವಾಸವಾಗಿದ್ದರು. ಈ ಮಧ್ಯೆ ತಾಯಿಯನ್ನು ಸಂಪರ್ಕ ಮಾಡಲು ಇಕ್ರಾ ಜೀವನಿ ಯತ್ನಿಸಿದ್ದು, ಈ ಸಂಗತಿಯನ್ನು ಪತ್ತೆ ಮಾಡಿದ್ದ ಕೇಂದ್ರ ಗುಪ್ತಚರ ಇಲಾಖೆ, ಬೆಂಗಳೂರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ಇಕ್ರಾ ಜೀವನಿ ಹಾಗೂ ಮುಲಾಯಂ ಸಿಂಗ್‌ನನ್ನು ಜ. 23 ರಂದು ಪೊಲೀಸರು ಬಂಧಿಸಿದ್ದರು. ನಂತರ ಯುವತಿಯನ್ನು ವಿಚಾರಣೆ ನಡೆಸಿದಾಗ ರಾವಾ ಯಾದವ್ ಎಂಬ ಹೆಸರು ಬದಲಾಯಿಸಿಕೊಂಡು ಪಾಸ್‌ಪೋರ್ಟ್‌ಗೆ ಅರ್ಜಿ ಹಾಕಿದ್ದ ಸಂಗತಿ ತಿಳಿದಿತ್ತು. ಇನ್ನು ಬಂಧಿತ ಯುವತಿಯ ಬಗ್ಗೆ FRRO ಅಧಿಕಾರಿಗಳಿಗೆ ಪೊಲೀಸರು ಮಾಹಿತಿ ನೀಡಿದ್ದರು.

    ಒಟ್ಟಿನಲ್ಲಿ ಪ್ರೀತಿ ಅರಸಿ ಗಡಿ ದಾಟಿ ಬಂದ ಯುವತಿ ಮತ್ತೆ ತನ್ನ ತಾಯ್ನಾಡಿಗೆ ಹೋಗುವಂತಾಗಿದೆ.ಇತ್ತ ಸಾಮಾಜಿಕ ಜಾಲತಾಣಗಳಲ್ಲಿ ಆಕೆಯನ್ನು ವಾಪಸ್ ಕಳುಹಿಸಿರೋದಕ್ಕೆ ಜನ ಬೇಸರ ವ್ಯಕ್ತಪಡಿಸಿದ್ದಾರೆ, ಅಲ್ಲಿ ಆಕೆಯ ಸ್ಥಿತಿ ಹೇಗಿರುವುದೋ ಏನೋ? ಅದು ಆಕೆ ಭಾರತದ ಅದರಲ್ಲೂ ಹಿಂದೂ ಯುವಕನ ಜೊತೆ ಓಡಿ ಬಂದಿದ್ದಾಳೆ ಎಂದು ತಿಳಿದರೆ ಅವರು ಆಕೆಯನ್ನು ಹತ್ಯೆ ಮಾಡುವುದು ಪಕ್ಕಾ. ಆಕೆಯ ಬಗ್ಗೆ ಮಾನವೀಯ ನೆಲೆಯಲ್ಲಿ ಯೋಚಿಸಿ ಇಲ್ಲಿ ಉಳಿಯಲು ಆಕೆಗೆ ಆಶ್ರಯ ನೀಡಬೇಕಿತ್ತು ಎಂದು ಜನ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    #pakistan ATM KAT katmandu m Nepal pak girl in India ಮದುವೆ
    Share. Facebook Twitter Pinterest LinkedIn Tumblr Email WhatsApp
    Previous Articleಆರ್ಥಿಕ ಪ್ರಗತಿಯಲ್ಲಿ ಕರ್ನಾಟಕ ದಾಪುಗಾಲು – CM
    Next Article ಸೋನು ನಿಗಮ್ ಮೇಲೆ ಹಲ್ಲೆ
    vartha chakra
    • Website

    Related Posts

    ಭಾರತೀಯರು ದೇಶ ಬಿಟ್ಟು ಹೋಗುತ್ತಿದ್ದಾರೆ!

    December 20, 2025

    ಕೋರ್ಟ್ ನಲ್ಲಿ ಕಾಂಗ್ರೆಸ್ ಗೆಲುವು

    December 16, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    December 12, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • elektricheskie jaluzi_gkot on ಮುರಸೋಳಿ ಸೆಲ್ವಂ ಎಂಬ ಗಾರುಡಿಗ.
    • Daviddep on ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    • Ronaldfloca on ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    Latest Kannada News

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    December 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    December 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    December 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್.#varthachakra #mallikarjunkharge #siddaramaiah #dkshivakumar
    Subscribe