Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಂಡ್ಯದಲ್ಲೂ‌ ಪಾಕಿಸ್ತಾನ ಜಿಂದಾಬಾದ್ | Mandya
    Trending

    ಮಂಡ್ಯದಲ್ಲೂ‌ ಪಾಕಿಸ್ತಾನ ಜಿಂದಾಬಾದ್ | Mandya

    vartha chakraBy vartha chakraMarch 5, 202426 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಮಾ.5- ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಆರೋಪದಲ್ಲಿ ಮೂವರನ್ನು ಬಂಧಿಸಿದ ಬೆನ್ನಲ್ಲೇ ಮಂಡ್ಯದಲ್ಲಿ ನಡೆದ ಪ್ರಕರಣ ಒಂದರ ಸಂಬಂಧ ಬಿಜೆಪಿ ಕಾರ್ಯಕರ್ತನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ ಎರಡು ವರ್ಷದ ಹಿಂದೆ ಮಂಡ್ಯದ ಸಂಜಯ ವೃತ್ತದಲ್ಲಿ ನಡೆದಿದ್ದ ಪ್ರತಿಭಟನೆ ಸಂದರ್ಭ ಮಂಡ್ಯ ತಾಲೂಕಿನ ಡನಾಯಕನಪುರ ರವಿ ಎಂಬವರು ಪಾಕಿಸ್ತಾನ್‌ ಜಿಂದಾಬಾದ್‌ ಎಂಬ ಘೋಷಣೆ ಕೂಗಿದ್ದರು ಎಂಬ ಆರೋಪ ಕೇಳಿ ಬಂದಿತ್ತು
    ಈ ಕುರಿತಾಗಿ ಕನ್ನಂಬಾಡಿ ಕುಮಾರ್ ಎಂಬವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದರ ಆಧಾರದ ಮೇಲೆ ಎಫ್ ಐ ಆರ್ ದಾಖಲಿಸಿದ ಮಂಡ್ಯದ ಪಶ್ಚಿಮ ಠಾಣೆ ಪೊಲೀಸರು ಉಪ್ಪರಕನ‌ಹಳ್ಳಿ ಆರಾಧ್ಯ, ಡಣಾಯಕನಪುರ ರವಿ ಅವರನ್ನು ಬಂಧಿಸಿದ್ದಾರೆ.

    ಈ ಬಗ್ಗೆ ಮಾಹಿತಿ ನೀಡಿರುವ ಗೃಹ ಸಚಿವ ಪರಮೇಶ್ವರ್ ಮಂಡ್ಯದಲ್ಲಿ 2022 ನವೆಂಬರ್‌ನಲ್ಲಿ ಬಿಜೆಪಿಯ ಕಾರ್ಯಕರ್ತರು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದರು. ಆಗ ಅಧಿಕಾರದಲ್ಲಿದ್ದ ಬಿಜೆಪಿಯವರು ಯಾಕೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಿಲ್ಲ. ಹಳೆಯ ಪ್ರಕರಣ ಈಗ ಬಹಿರಂಗವಾಗಿರುವ ಹಿನ್ನೆಲೆಯಲ್ಲಿ ಮಂಡ್ಯ ಪೊಲೀಸರು ಒಬ್ಬನನ್ನು ಬಂಧಿಸಿದ್ದಾರೆ. ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ ಮೇಲೆ ಪ್ರಕರಣ ಒಂದೇ ಅಲ್ಲವೇ. ಕಾನೂನು ಎಲ್ಲರಿಗೂ ಒಂದೇ. ಯಾವ ಸಂದರ್ಭದಲ್ಲಿ ಕೂಗಿದ್ದಾರೆ ಎಂಬುದು ತನಿಖೆಯಿಂದ ಹೊರಬರಲಿದೆ’ ಎಂದು ತಿಳಿಸಿದರು.
    ‘ಯುಎಪಿಎ ಪ್ರಕರಣಗಳು ನೇರವಾಗಿ ಕೇಂದ್ರದ ತನಿಖಾ ಸಂಸ್ಥೆಗಳಾದ ಎನ್‌ಐಎ ಅಥವಾ ಸಿಬಿಐಗೆ ಬರುತ್ತದೆ. ಹೀಗಾಗಿ ಎನ್‌ಐಎ ಅವರು ಸುಮೋಟೋ ದಾಖಲಿಸಿಕೊಂಡಿದ್ದಾರೆ. ಸಿಸಿಬಿ ಪೊಲೀಸರು ಸಹ ತನಿಖೆ ಮುಂದುವರಿಸುತ್ತಾರೆ. ನಮ್ಮಲ್ಲಿರುವ ಮಾಹಿತಿಯನ್ನು ಎನ್‌ಐಎಗೆ ಹಂಚಿ ಕೊಳ್ಳಲಾಗುವುದು. ಪ್ರಕರಣ ನಡೆದ ಮರುದಿನ ಸಿಸಿಬಿ ಪೊಲೀಸರು ಸಹ ಜೈಲಿನಲ್ಲಿರುವರನ್ನು ವಿಚಾರಣೆ ನಡೆಸಿದ್ದರು. ಯಾರೇ ತನಿಖೆ ನಡೆಸಿದರು ಒಟ್ಟಾರೆಯಾಗಿ ಆರೋಪಿಯನ್ನು ಪತ್ತೆ ಹಚ್ಚುವುದಷ್ಟೆ ಮುಖ್ಯ’ ಎಂದು ತಿಳಿಸಿದರು.

    ಪ್ರಕರಣದಿಂದ ಸರ್ಕಾರಕ್ಕೆ ಮುಜುಗರ ಆಗಿದೆಯಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಸರ್ಕಾರಕ್ಕೆ ಯಾಕೆ ಮುಜುಗರ ಆಗುತ್ತದೆ. ಸರ್ಕಾರ ಯಾರಿಗಾದರೂ ಪ್ರಾಯೋಜಕತ್ವ ನೀಡಿದೆಯೇ? ಅವನ್ಯಾರೋ ಕೂಗಿದ್ದಾನೆ ಅನ್ನುವುದನ್ನು ಖಚಿತಪಡಿಸಿಕೊಳ್ಳಲು ಕಾಯುತ್ತಿದ್ದೆವು. ಖಚಿತವಾದ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಸರ್ಕಾರಕ್ಕೆ ಮುಜುಗರ ಆಗುವಂಥದ್ದು ಏನೂ ಮಾಡಿಲ್ಲ. ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕ್ರಮ ತೆಗೆದುಕೊಂಡು ಒಳ್ಳೆ ಕೆಲಸ ಮಾಡಿದೆ. ಇದಕ್ಕೆ ಸರ್ಕಾರವನ್ನು ಪ್ರಶಂಶಿಸಬೇಕು’ ಎಂದು ಹೇಳಿದರು.
    ‘ವಿಧಾನಸೌಧದ ಭದ್ರತಾ ವೈಫಲ್ಯ ಇರುವುದು ಕಂಡು ಬಂದರೆ ಇಲಾಖೆಯ ಅಧಿಕಾರಿಗಳು ಖಂಡಿತವಾಗಿಯೂ ಕ್ರಮ ತೆಗೆದುಕೊಳ್ಳುತ್ತಾರೆ. ಯಾರನ್ನೋ ಕೇಳಿ ಕೆಲಸ ಮಾಡುವ ಅಗತ್ಯತೆ ಇಲ್ಲ’ ಎಂದರು.

    #Mandya m ಕಾನೂನು
    Share. Facebook Twitter Pinterest LinkedIn Tumblr Email WhatsApp
    Previous Articleಸ್ನೇಹಿತೆಯ ಮನೆಯಲ್ಲಿ ಚಿನ್ನ ಕದ್ದ ಸಿನಿಮಾ ನಟಿ | Soumya Shetty
    Next Article ತೇಜಸ್ವಿ ಸೂರ್ಯ ಹತ್ಯೆಗೆ ಸ್ಕೆಚ್ ಹಾಕಿದ್ದವನು ಅಂದರ್ | Tejasvi Surya
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • JeremyPah on ಹುಲಿಗಳಿಗೆ ವಿಷವಿಕ್ಕಿದ ಪಾಪಿಗಳು.
    • https://timpapa.com/ on ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • promopmpa on ಬಾಬಾ ಸಿದ್ಧಿಕ್ಕಿ ಹತ್ಯೆ ನಂತರ, ಸಲ್ಮಾನ್‌ ಖಾನ್ ಹತ್ಯೆ ಮಾಡಲು ಟಾರ್ಗೆಟ್ ಮಾಡುತ್ತಿರುವ ಬಿಷ್ಣೋಯ್‌ ಗ್ಯಾಂಗ್!
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    CSK ವಿರುದ್ಧ ಸಿಡಿದೆದ್ದ ಜಡೇಜಾ #varthachakra #csk #jadeja #dhoni #sanjusamson #viralvideo #facts #ipl
    Subscribe