Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪುನೀತ್ ಕೆರೆಹಳ್ಳಿ ಬಂಧನಕ್ಕೆ ಪೊಲೀಸ್ ಬಲೆ | Puneet Kerehalli | Karnataka – Cow Vigilantes
    ರಾಜ್ಯ

    ಪುನೀತ್ ಕೆರೆಹಳ್ಳಿ ಬಂಧನಕ್ಕೆ ಪೊಲೀಸ್ ಬಲೆ | Puneet Kerehalli | Karnataka – Cow Vigilantes

    vartha chakraBy vartha chakraApril 4, 2023Updated:April 5, 20239 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಏ.4- ಪ್ರಬಲ ಹಿಂದುತ್ವ ಪ್ರತಿಪಾದನೆಯ ಮೂಲಕ ಇತ್ತೀಚಿನ ದಿನಗಳಲ್ಲಿ ಗಮನ ಸೆಳೆಯುತ್ತಿರುವ ಸಾಮಾಜಿಕ ಕಾರ್ಯಕರ್ತ ಪುನೀತ್ ಕೆರೆಹಳ್ಳಿ (Puneet Kerehalli) ಇದೀಗ ಕೊಲೆ‌ ಆರೋಪವೊಂದರಲ್ಲಿ‌ ಸಿಲುಕಿದ್ದು,ಈತನ ಬಂಧನಕ್ಕೆ ಪೊಲೀಸರು ಬಲೆ‌ ಬೀಸಿದ್ದಾರೆ.

    ಕನಕಪುರದ ಏಸು‌ಬೆಟ್ಟ ವಿವಾದ,ಟಿಪ್ಪು ಸುಲ್ತಾನ್, ಸಲಾಂ ಆರತಿ,ಹಿಜಾಬ್, ಜಾತ್ರೆಗಳಲ್ಲಿ ಮುಸ್ಲಿಂ Businessಿಗಳ ನಿಷೇಧ ಸೇರಿದಂತೆ ಹಲವಾರು ವಿವಾದಾಸ್ಪದ ವಿಷಯಗಳನ್ನು ಪ್ರತಿಪಾದಿಸುವ ಮೂಲಕ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದರು.

    ಇದೀಗ ಜಾನುವಾರು ಸಾಗಿಸುತ್ತಿದ್ದ ವಾಹನದ ಸಹಾಯಕ ಚಾಲಕ ಇದ್ರೀಸ್ ಪಾಷಾ ನನ್ನು ಹತ್ಯೆ ಮಾಡಿರುವ ಆರೋಪದಲ್ಲಿ ಸಿಲುಕಿದ್ದಾರೆ.
    ಈ ಘಟನೆ ನಂತರ ನಾಪತ್ತೆಯಾಗಿದ್ದಾರೆಂದು ಹೇಳಲಾದ ಪುನಿತ್ ಕೆರೆಹಳ್ಳಿಯನ್ನು ಬಂಧಿಸಲು ರಾಮನಗರ ಜಿಲ್ಲಾ ಪೊಲೀಸರು ನಾಲ್ಕು ವಿಶೇಷ ತಂಡಗಳನ್ನು ರಚಿಸಿದ್ದಾರೆ.

    ಇಲ್ಲಿಯವರೆಗೆ ಪ್ರಕರಣದ ಸಂಬಂಧಿಸಿದಂತೆ ಯಾವುದೇ ಆರೋಪಿಗಳನ್ನು ಇನ್ನೂ ಬಂಧಿಸಿಲ್ಲ. ಫೋರೆನ್ಸಿಕ್ ಮೆಡಿಸಿನ್ ವಿಭಾಗದ ವೈದ್ಯರ ತಂಡ  ಮರಣೋತ್ತರ ಪರೀಕ್ಷೆಯನ್ನು ನಡೆಸಿದೆ ಮತ್ತು (ಪಾಶಾ) ಸಾವಿಗೆ ನಿಖರವಾದ ಕಾರಣ ತಿಳಿಯಲು  ವರದಿಗಾಗಿ ಕಾಯುತ್ತಿದ್ದೇವೆ. ಮರಣೋತ್ತರ ಪರೀಕ್ಷೆಯ ವರದಿಯಿಂದ ಸಾವಿಗೆ ನಿಖರವಾದ ಕಾರಣ ತಿಳಿದುಬರಲಿದೆ ಎಂದು ರಾಮನಗರ ಜಿಲ್ಲಾ ಪೊಲೀಸ್ ಕಳೆದ ಏ.1ರ ಮುಂಜಾನೆ ಕನಕಪುರದ ಸಾತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಚಾಲಕ ಇದ್ರೀಸ್ ಪಾಷಾ (39)ನ ಶಂಕಾಸ್ಪದ ಕೊಲೆಯಾಗಿದ್ದು ಪ್ರಕರಣದ ಪತ್ತೆಗೆ 4 ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಕೇಂದ್ರ ವಲಯದ ಪೊಲೀಸ್ ಮಹಾನಿರೀಕ್ಷಕ (ಐಜಿಪಿ) ಬಿ.ಆರ್. ರವಿಕಾಂತೇಗೌಡ ತಿಳಿಸಿದ್ದಾರೆ.

    ಅಭಿಷೇಕ್ | Abhishek on Twitter: "Who is this Puneeth Kerehalli?Where does he come from?Talks bullshit sitting in car!" / Twitter

    ಸಾತನೂರು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ನೇತೃತ್ವದಲ್ಲಿ ಒಂದು ತಂಡ ರಚನೆಯಾಗಿದ್ದರೆ ರಾಮನಗರ ಉಪವಿಭಾಗದ ಡಿವೈಎಸ್ಪಿ ಮತ್ತೊಂದು ತಂಡದ ನೇತೃತ್ವ ವಹಿಸಿದ್ದಾರೆ. ಉಪ ವಿಭಾಗದ ಪೊಲೀಸರು ನೇತೃತ್ವದಲ್ಲಿ ಮತ್ತೇರಡು ತಂಡ ರಚಿಸಲಾಗಿದೆ.  ಸಾತನೂರು ಪೊಲೀಸ್ ಠಾಣೆಯಿಂದ ಸ್ವಲ್ಪ ದೂರದಲ್ಲಿ ಪಾಷಾ ಶವ ಪತ್ತೆಯಾದ ನಂತರ ಕೆರೆಹಳ್ಳಿ ಸೇರಿ ನಾಲ್ವರ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ.
    2 ಲಕ್ಷಕ್ಕೆ ಬೇಡಿಕೆ:
    ಇರ್ಫಾನ್ (37) ಮತ್ತು ಚಾಲಕ ಸೈಯದ್ ಜಹೀರ್ (40) ಅವರೊಂದಿಗೆ ಇದ್ರೀಸ್ ಪಾಷಾ ಮಾ.31 ಮಧ್ಯರಾತ್ರಿ 12.30 ರ ಸುಮಾರಿಗೆ ಸಂತೆಮಾಳ ವೃತ್ತದ ಬಳಿ 15 ಜಾನುವಾರುಗಳನ್ನು ವಾಹನದಲ್ಲಿ ಸಾಗಿಸುತ್ತಿದ್ದಾಗ ಕೆರೆಹಳ್ಳಿ ಮತ್ತು ಅವರ ಸಂಗಡಿಗರು ವಾಹನ ಅಡ್ಡಗಟ್ಟಿದ್ದಾರೆ.

    ಈ ವೇಳೆ ಅಪಾಯವನ್ನು ಅರಿತ ಪಾಷಾ ಮತ್ತು ಇರ್ಪಾನ್ ಅಲ್ಲಿಂದ ಪರಾರಿಯಾಗಿದ್ದು,  ಜಹೀರ್ ಎಂಬಾತನ  ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.ಈ ವೇಳೆ ತಾವು ಈ ಜಾನುವಾರುಗಳನ್ನು ಖರೀದಿಸಿ ತಮಿಳುನಾಡಿನ ಕೃಷ್ಣಗಿರಿಗೆ ಮಾರಾಟ ಮಾಡಲು ಕೊಂಡೊಯ್ಯಲಾಗುತ್ತಿದ್ದೇವೆ ಎಂದು ಜಹೀರ್ ತನ್ನನ್ನು ಥಳಿಸಿದ ಪುನೀತ್ ಕೆರೆಹಳ್ಳಿ ಮತ್ತು ಇತರ ನಾಲ್ವರಿಗೆ ವಿವರಿಸಲು ಪ್ರಯತ್ನಿಸಿದರೂ, ಕೇಳದೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಅಷ್ಟೇ ಅಲ್ಲದೆ 2 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದು, ಕೊಡದಿದ್ದರೆ ಮುಗಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

    ಈ ಘಟನೆ ಬಗ್ಗೆ ಮಾಹಿತಿ ಬರುತ್ತಿದ್ದಂತೆ ವಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಎರಡೂ ಕಡೆಯವರನ್ನು ಠಾಣೆಗೆ ಕರೆದೊಯ್ದಿದ್ದು, ಅಕ್ರಮ ದನ ಸಾಗಾಟ ಆರೋಪದ ಪ್ರಕರಣ ದಾಖಲಿಸಿದರು ಜೊತೆಗೆ ಹಲ್ಲೆ ಮಾಡಿದ ಆರೋಪದಡಿ ಕೆರೆಹ ದೂರು ಕೆರೆಹಳ್ಳಿ ವಿರುದ್ಧವೂ ಪ್ರತಿದೂರು ದಾಖಲಾಗಿತ್ತು.

    ಆದರೆ, ಮರುದಿನ ಬೆಳಿಗ್ಗೆ, ಪಾಷಾ ಅವರ ಮೃತದೇಹ ಪತ್ತೆಯಾಗಿತ್ತು.ಪೊಲೀಸ್ ಠಾಣೆಯಿಂದ ಕೆಲವು ನೂರು ಮೀಟರ್ ದೂರದಲ್ಲಿ ಪತ್ತೆಯಾದ ದೇಹದ ಮೇಲೆ ಚಿತ್ರಹಿಂಸೆಯ ಗುರುತುಗಳಿದ್ದವು.
    ಈ ಹಲ್ಲೆ ಯಾರು ಮಾಡಿದ್ದಾರೆ ಎಂಬ ಬಗ್ಗೆ ಇನ್ನೂ ಖಚಿತ ಮಾಹಿತಿ ಸಿಕ್ಕಿಲ್ಲ.ದನಗಳನ್ನು ಸಾಗಿಸುತ್ತಿದ್ದ ವಾಹನ ಅಡ್ಡಗಟ್ಟಿದ ಕೆರೆಹಳ್ಳಿ ಮತ್ತು ಆತನ ಸಹಚರರು ಪಾಷಾ ಅವರನ್ನು ಹಿಂಬಾಲಿಸಿದ್ದಾರೆಯೇ ಎಂಬುದನ್ನು ತನಿಖೆ ಮಾಡಲಾಗುತ್ತಿದೆ.

    ಈ ನಡುವೆ ಹಂತಕರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಪಾಷಾ ಕುಟುಂಬಸ್ಥರು ಠಾಣೆ ಎದುರು ಪ್ರತಿಭಟನೆ ನಡೆಸಿದ್ದು, ಪುನೀತ್ ಕೆರೆಹಳ್ಳಿ ಮತ್ತವರ ಸಹಚರರು ಈ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

    ಈ ನಡುವೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಜೊತೆ ಮಾತನಾಡಿದ್ದು ಜಿಲ್ಲೆಯಲ್ಲಿ ಕೋಮು ದಳ್ಳುರಿ ಸೃಷ್ಟಿಸುವ ಪ್ರಯತ್ನ ನಡೆಯುತ್ತಿದ್ದು ಅದಕ್ಕೆ ಅವಕಾಶ ಕೊಡದಂತೆ ಕ್ರಮ ಕೈಗೊಳ್ಳಬೇಕೆಂದು ಸಲಹೆ ಮಾಡಿದ್ದಾರೆ ಅಲ್ಲದೆ ಪುನೀತ್ ಕೆರೆಹಳ್ಳಿ ಮತ್ತು ಅವರ ಸಹಚರರು ರಾಮನಗರ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಳುಗೆಡವಲು ಪ್ರಯತ್ನ ನಡೆಸಿದ್ದು ಅದನ್ನು ಹತ್ತಿಕ್ಕುವಂತೆ ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ

    #cowvigilantes #karnataka #puneet #pune HAL Karnataka ಕಾನೂನು ಕೊಲೆ Business
    Share. Facebook Twitter Pinterest LinkedIn Tumblr Email WhatsApp
    Previous Articleತೇಜಸ್ವಿನಿ ಅನಂತಕುಮಾರ್, ಮಾಳವಿಕ ಅವಿನಾಶ್ ಗೆ BJP ಟಿಕೆಟ್ | Malavika Avinash | Tejaswini Ananth Kumar | BJP
    Next Article Donald Trump ಬಂಧನ-ಬಿಡುಗಡೆ
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    June 20, 2025

    9 Comments

    1. MichaelSmush on November 23, 2024 4:52 am

      Транснациональные перевозки играет ключевую роль в обеспечении стабильных поставок в страны СНГ. Это сложный процесс, включающий доставку товаров, разрешительные процедуры и оптимизацию логистики. Точное управление и работа с проверенными компаниями минимизируют риски и гарантируют своевременную доставку.

      Одной из центральных задач в международных поставках является выбор вида транспорта – https://mezhdunarodnaya-logistika-ved.ru/ . Для импорта в страну используются альтернативные подходы: морские перевозки подходят для больших объемов, воздушные перевозки — груза высокой стоимости, а автомобильные и железнодорожные — оптимальны для гибкости. Территориальные особенности нередко требует мультимодальные подходы.

      Не менее важным этапом является работа с таможней. Грамотная обработка таможенным требованиям, соблюдение законодательства и осведомленность о рисках минимизируют проблемы. Привлечение специалистов учитывает все нюансы, гарантирует эффективность.

      Инновации в логистике активно изменяют работу с импортом. Технологии мониторинга, управленческие платформы и инструменты анализа способствуют эффективность поставок. Предприятия с этим реагировать на вызовы, учитывать новые условия и сохранять стабильность.

      Транснациональные поставки зависит от грамотного управления, высокой компетенции и налаженных отношений. Это ключевой инструмент, позволяющий фирмам страны развивать свои процессы и работать на международном уровне.

      Reply
    2. Michaelautok on February 2, 2025 9:05 pm

      hash delivery in prague https://sale-weed-prague.com

      Reply
    3. wsbk9 on June 4, 2025 10:16 am

      order clomiphene without insurance where can i get cheap clomid price get cheap clomid online how to get clomid pill how can i get clomiphene without dr prescription clomiphene tablets how to buy cheap clomid no prescription

      Reply
    4. online cialis pharmacy on June 9, 2025 11:32 pm

      More posts like this would prosper the blogosphere more useful.

      Reply
    5. flagyl for colitis on June 11, 2025 5:47 pm

      This is a keynote which is forthcoming to my heart… Numberless thanks! Exactly where can I notice the contact details in the course of questions?

      Reply
    6. 4eh9i on June 19, 2025 4:53 am

      inderal 20mg sale – how to buy clopidogrel buy methotrexate paypal

      Reply
    7. Robertasson on June 21, 2025 7:53 pm

      ¡Hola, jugadores expertos !
      Retiros inmediatos en casinos online extranjeros – https://casinosextranjerosdeespana.es/# casinos extranjeros
      ¡Que vivas increíbles instantes únicos !

      Reply
    8. z27e9 on June 22, 2025 1:43 am

      purchase amoxil without prescription – buy amoxil cheap how to buy ipratropium

      Reply
    9. Josephticix on June 23, 2025 11:29 pm

      ¡Saludos, fanáticos del azar !
      Casino online extranjero con lГ­mite de apuestas alto – п»їhttps://casinoextranjerosdeespana.es/ mejores casinos online extranjeros
      ¡Que experimentes maravillosas tiradas afortunadas !

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • gmnnv on ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    • EdwardNor on ವನ, ವನ್ಯಜೀವಿ ಸಂರಕ್ಷಣೆಗೆ ನಾವೀನ್ಯ ತಂತ್ರಜ್ಞಾನ ಬಳಕೆ :ಈಶ್ವರ ಖಂಡ್ರೆ | Eshwar Khandre
    • https://toppassports.com/no-verification-why-some-players-prefer-no-verification-casinos/ on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe