Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಮೇಶ್ ಜಾರಕಿಹೊಳಿಗೆ BJP ಗೇಟ್ ಪಾಸ್?
    ರಾಜ್ಯ

    ರಮೇಶ್ ಜಾರಕಿಹೊಳಿಗೆ BJP ಗೇಟ್ ಪಾಸ್?

    vartha chakraBy vartha chakraMarch 19, 2023Updated:March 20, 20232 Comments2 Mins Read
    Facebook Twitter WhatsApp Pinterest LinkedIn Tumblr Email
    rammu
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮಾ.19 – ರಾಜ್ಯ ಬಿಜೆಪಿಯಲ್ಲಿನ ವಿದ್ಯಮಾನಗಳು ದಿನಕ್ಕೊಂದು ತಿರುವು ಪಡೆಯುತ್ತಿದ್ದು,ವರಿಷ್ಠರಿಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿದೆ ವಸತಿ ಸಚಿವ ಸೋಮಣ್ಣ ಅವರ ಅಸಮಾಧಾನವನ್ನು ಶಮನ ಮಾಡಿದ ಬೆನ್ನಲ್ಲೇ ಬೆಳಗಾವಿ ಬಿಕ್ಕಟ್ಟು ವರಿಷ್ಠರ ಅಂಗಳ ತಲುಪಿದೆ.
    ಮುಂಬರುವ ಚುನಾವಣೆ ಯಲ್ಲಿ ತಮ್ಮ ಆಪ್ತರಾದ ಮಹೇಶ್ ಕುಮಟಳ್ಳಿ,ಶ್ರೀಮಂತ ಪಾಟೀಲ್ ಅವರಿಗೆ ಟಿಕೆಟ್ ನೀಡಬೇಕೆಂದು ಪಟ್ಟು ಹಿಡಿದಿರುವ ಗೋಕಾಕ್ ಶಾಸಕ ರಮೇಶ ಜಾರಕಿಹೊಳಿ ಬೆಳಗಾವಿ ಜಿಲ್ಲೆ ಚುನಾವಣೆಯ ಸಂಪೂರ್ಣ ಉಸ್ತುವಾರಿ ತಮಗೆ ನೀಡುವಂತೆ ‌ಆಗ್ರಹಿಸಿದ್ದಾರೆ.
    ಆದರೆ,ರಾಜ್ಯ ಸಭಾ ಸದಸ್ಯ‌ ಈರಣ್ಣ ಕಡಾಡಿ, ಸಚಿವ ಲಕ್ಷ್ಮಣ‌ ಸವದಿ,ಶಾಸಕ‌ ಅಭಯ್ ಪಾಟೀಲ್ ಸೇರಿದಂತೆ ಹಲವರು ರಮೇಶ್ ಜಾರಕಿಹೊಳಿ ಅವರಿಗೆ ನಾಯಕತ್ವ ನೀಡಲು ವಿರೋಧ ವ್ಯಕ್ತಪಡಿಸಿದ್ದಾರೆ ಅಷ್ಟೇ ಅಲ್ಲ ಪಕ್ಷದಲ್ಲಿ ಅವರಿಗೆ ವಿಶೇಷ ಆದ್ಯತೆ ನೀಡದಂತೆ ರಾಜ್ಯ ನಾಯಕರ ಮೇಲೆ ಒತ್ತಡ ಹೇರಿದ್ದಾರೆ.
    ಅಷ್ಟೇ ಅಲ್ಲ ರಮೇಶ್ ಜಾರಕಿಹೊಳಿ‌ ನಿರ್ದಿಷ್ಟ ಉದ್ದೇಶದ ರಾಜಕಾರಣ ಮಾಡುತ್ತಿದ್ದಾರೆ.ಇದರಿಂದ ಜಿಲ್ಲೆಯಲ್ಲಿ ಬಿಜೆಪಿಗೆ ಲಾಭವಾಗುವ ಬದಲು ನಷ್ಟವೇ ಹೆಚ್ಚು. ಅನಗತ್ಯವಾಗಿ ಇತರ ಕ್ಷೇತ್ರಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಹೀಗಾಗಿ ಇವರನ್ನು ಗೋಕಾಕ್ ಕ್ಷೇತ್ರಕ್ಕೆ ಮಾತ್ರ ಸೀಮಿತಗೊಳಿಸುವಂತೆ‌ ವರಿಷ್ಠರಿಗೆ ಮನವಿ ಸಲ್ಲಿಸಿದ್ದಾರೆ.
    ಇದಷ್ಟೇ ಅಲ್ಲ,ಇತ್ತೀಚೆಗೆ ರಾಜ್ಯ ಬಿಜೆಪಿ ಚುನಾವಣೆ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಬೆಳಗಾವಿಯ ಎಲ್ಲಾ ಬಿಜೆಪಿ ಶಾಸಕರು ಮತ್ತು ಸಂಸದರ ಸಭೆ ನಡೆಸಿದ್ದರು.ಇದರಲ್ಲಿ ಬಹುತೇಕರು ರಮೇಶ್ ಜಾರಕಿಹೊಳಿ ವಿರುದ್ದ ದೂರುಗಳ ಸರಮಾಲೆಯನ್ನೇ ನೀಡಿದ್ದರು.
    ಅದರಲ್ಲೂ ಸಂಸದ ಈರಣ್ಣ ಕಡಾಡಿ ಮತ್ತು ಲಕ್ಷ್ಮಣ ಸವದಿ ಅವರು ಜಾರಕಿಹೊಳಿ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡುವುದು ಸೂಕ್ತ ಇದರಿಂದ ಬೆಳಗಾವಿ ಬಿಜೆಪಿಗೆ ಲಾಭವಾಗಲಿದೆ ಇಲ್ಲವಾದರೆ ಪಕ್ಷಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಎಚ್ಚರಿಸಿದರೆನ್ನಲಾಗಿದೆ.
    ಇದಾದ ನಂತರ ಪ್ರಧಾನ್ ಪ್ರತ್ಯೇಕವಾಗಿ ಜಾರಕಿಹೊಳಿ ಅವರ ಜೊತೆ ಮಾತುಕತೆ ನಡೆಸಿ, ಸಮಗ್ರ ವರದಿಯೊಂದನ್ನು ಸಲ್ಲಿಸಿದ್ದಾರೆ. ಇದರಲ್ಲಿ ಅವರು ಜಾರಕಿಹೊಳಿ ಅವರನ್ನು ಕಟ್ಟಿ ಹಾಕುವ ಇಲ್ಲವೇ ಪಕ್ಷದಿಂದ ಹೊರ ಹಾಕುವ ನಿರ್ಧಾರ ‌ಕೈಗೊಳ್ಳುವುದು ಸೂಕ್ತ ಯಾವುದೇ ಕಾರಣಕ್ಕೂ ಅವರ ಬೇಡಿಕೆ ಹಾಗೂ ಒತ್ತಡ ತಂತ್ರಕ್ಕೆ ಮಣಿಯಬಾರದು ಎಂದು ವರದಿಯಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ
    ಈ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ದಿಡೀರ್ ದೆಹಲಿಗೆ ದೌಡಾಯಿಸಿ, ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದು, ಈ ಬೆಳವಣಿಗೆ ಹಲವರ ಹುಬ್ಬೇರುವಂತೆ ಮಾಡಿದೆ.
    ಅಮಿತ್ ಶಾ ಭೇಟಿ ಬಳಿಕ ಪ್ರತಿಕ್ರಿಯೆ ನೀಡಿದ ರಮೇಶ್ ಜಾರಕಿಹೊಳಿ,ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿರುವ ರಾಜಕೀಯ ಬೆಳವಣಿಗೆಗಳ ಕುರಿತು ಅವರೊಂದಿಗೆ ಸುದೀರ್ಘ ಚರ್ಚೆ ನಡೆಸಿದ್ದೇನೆ ಎಂದು ಹೇಳಿದರು.
    ಬೆಳಗಾವಿ ಜಿಲ್ಲೆಯ 18 ಕ್ಷೇತ್ರಗಳಲ್ಲಿನ ಬೆಳವಣಿಗೆಗಳ ಬಗ್ಗೆ ಶಾ ಅವರೊಂದಿಗೆ ಮಾಹಿತಿ ಹಂಚಿಕೊಂಡಿದ್ದೇನೆ ಇಲ್ಲಿ ಬಿಜೆಪಿ ಮೇಲುಗೈ ಸಾಧಿಸಲು ಅನುಸರಿಸಬಹುದಾದ ರಾಜಕೀಯ ತಂತ್ರಗಳ ಬಗ್ಗೆಯೂ ಚರ್ಚೆ ನಡೆಸಿದೆ. ಆದರೆ, ಸಭೆಯಲ್ಲಿ ಚರ್ಚೆಯಾದ ಕೆಲವು ಗೌಪ್ಯ ವಿಚಾರಗಳನ್ನು ಬಹಿರಂಗಪಡಿಸುವುದಿಲ್ಲ ಎಂದು ಹೇಳಿದರು.

    Verbattle
    Verbattle
    Verbattle
    BJP Election ಧರ್ಮ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಆರೋಗ್ಯ ನೌಕರರ ಮೇಲೆ ESMA ಬ್ರಹ್ಮಾಸ್ರ್ತ
    Next Article BJP ಸಿಎಂ ಅಭ್ಯರ್ಥಿ ಯಾರು?
    vartha chakra
    • Website

    Related Posts

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    February 11, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    February 10, 2026

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    February 10, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಸಿದ್ದರಾಮಯ್ಯ ರಾಜೀನಾಮೆ ಕೊಡಲ್ಲ.
    • Bsrhqx on ಕಾಂಗ್ರೆಸ್ ಸರ್ಕಾರದಲ್ಲಿ ಕಮಿಷನ್ ಶೇಕಡ 40 ಅನ್ನು ದಾಟಿದೆಯಂತೆ | Congress
    • Pekwtb on ಸಂಕಷ್ಟಕ್ಕೆ ಸಿಲುಕಿದ ಲಕ್ಷ್ಮಿ ಹೆಬ್ಬಾಳ್ಕರ್ ಮಗ, ಅಳಿಯ | Lakshmi Hebbalkar
    Latest Kannada News

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.