Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಳ್ಳಾರಿಯಲ್ಲಿ ಸಿಕ್ಕಿಬಿದ್ದ ಕೆಫೆ ಬಾಂಬರ್ ಸ್ನೇಹಿತ | NIA
    Viral

    ಬಳ್ಳಾರಿಯಲ್ಲಿ ಸಿಕ್ಕಿಬಿದ್ದ ಕೆಫೆ ಬಾಂಬರ್ ಸ್ನೇಹಿತ | NIA

    vartha chakraBy vartha chakraMarch 13, 20241 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.13- ರಾಜಧಾನಿ ಮಹಾನಗರಿ ಬೆಂಗಳೂರನ್ನು ಬೆಚ್ಚಿಬೀಳಿಸಿದ‌ ವೈಟ್ ಫೀಲ್ಡ್ ಸಮೀಪದ ಬ್ರೂಕ್ ಫೀಲ್ಡ್ ನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ರಾಷ್ಟ್ರೀಯ ತನಿಖಾ ದಳ(ಎನ್ ಐಎ) ಅಧಿಕಾರಿಗಳು ಬಳ್ಳಾರಿಯಲ್ಲಿ ಶಂಕಿತನೊಬ್ಬನನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
    ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಎನ್‌ಐಎ ತಂಡಬಬಳ್ಳಾರಿಯ ಟ್ಯಾಂಕ್ ಬಂಡ್ ರೋಡ್ ಗಲ್ಲಿಯ ಮೋತಿ ಸಮೀಪದ ಹೊಸ ಬಸ್ ನಿಲ್ದಾಣದ ಬಳಿ ನೆಲೆಸಿರುವ ಶಬ್ಬೀರ್ ಎಂಬಾತನನ್ನು ವಶಕ್ಕೆ ಪಡೆದಿದೆ.
    ಬಳ್ಳಾರಿಯಲ್ಲಿ ವಾಸಿಸುತ್ತಿರುವ ಈತ ತೋರಣಗಲ್ ನ ಜಿಂದಾಲ್  ಕಂಪನಿಯ ಎಲೆಕ್ಟ್ರಿಕಲ್ ಉದ್ಯೋಗಿ‌ ಎಂದು ಗುರುತಿಸಲಾಗಿದೆ.

    ಈತನಿಗೂ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಪೋಟಕ್ಕೂ ಅತ್ಯಂತ ನಿಕಟವಾದ ಸಂಬಂಧ ಇರುವುದು ತನಿಖೆಯಲ್ಲಿ ‌ಪತ್ತೆಯಾಗಿದೆ.
    ಬಾಂಬ್ ಸ್ಫೋಟದ ಸಂಬಂಧ ಕೆಲ ದಿನಗಳ ಹಿಂದಷ್ಟೇ ಆರೋಪಿಯೊಬ್ಬನನ್ನು ಬಂಧಿಸಿ ವಿಚಾರಣೆ ನಡೆಸಿದ್ದು,ಆತ ನೀಡಿದ ಮಾಹಿತಿಯನ್ನು ಆಧರಿಸಿ ಕಾರ್ಯಾಚರಣೆ ಕೈಗೊಂಡು ಮೋತಿ ಸಮೀಪದ ಹೊಸ ಬಸ್ ನಿಲ್ದಾಣದ ದಾರಿಯಲ್ಲಿರುವ ಮನೆಯಿಂದ ಬುಧವಾರಬೆಳಗಿನ ಜಾವ 4 ಗಂಟೆ ಸುಮಾರಿಗೆ ಶಬ್ಬೀರ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.
    ಶಂಕಿತ ಶಬ್ಬೀರ್ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ನಡೆಸಿದವನಿಗೆ ಕರೆ ಮಾಡಿರುವುದು  ಎನ್ ಐಎ  ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ.

    ಕಳೆದ ಮಾರ್ಚ್‌ 1ರಂದು ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಇಟ್ಟ ಉಗ್ರ ಬೆಂಗಳೂರಿನಿಂದ ತಪ್ಪಿಸಿಕೊಂಡು ತುಮಕೂರು ಮೂಲಕ ಬಳ್ಳಾರಿಗೆ ಹೋಗಿದ್ದ ಎಂದು ಹೇಳಲಾಗಿದೆ.
    ಆ ಸಂದರ್ಭದಲ್ಲಿ ಕೌಲ್ ಬಜಾರ್ ಗೆ ಬಂದಿದ್ದ ಆತ ಶಬ್ಬೀರ್‌ನನ್ನು ಭೇಟಿ ಮಾಡಿದ್ದ ಎಂದು ಹೇಳಲಾಗಿದೆ. ಇದಾದ ನಂತರ ಆತ ಹೈದರಾಬಾದ್ ಗೆ ಪ್ರಯಾಣಿಸಿದ್ದುಆತನಿಗೆ ಹೈದರಾಬಾದ್‌ಗೆ ಹೋಗಲು ಶಬ್ಬೀರ್‌ ಸಹಾಯ ಮಾಡಿರುವುದು ಗೊತ್ತಾಗಿದೆ.
    ಸದ್ಯ ಬಾಂಬ್ ಸ್ಪೋಟದ ಶಂಕಿತ ಹೈದರಾಬಾದ್‌ನಲ್ಲಿ ತಲೆಮರೆಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ.ಎನ್ ಐ ಎ ತಂಡ ಹೈದರಾಬಾದ್ ನಲ್ಲಿ ಬೀಡು ಬಿಟ್ಟಿದ್ದು ಆತನಿಗಾಗಿ ಹುಡುಕಾಟ ನಡೆಸಿದೆ.
    ಸದ್ಯ ಎನ್ ಐ ಎ ವಶದಲ್ಲಿದ್ದ ಶಬ್ಬೀರ್ ಶಂಕಿತ ಉಗ್ರನೊಂದಿಗೆ ಸಂಪರ್ಕ ಹೊಂದಿರವ ಮಾಹಿತಿ ಲಭ್ಯವಾಗಿದೆ. ಪ್ರಾಥಮಿಕ ವಿಚಾರಣೆಯ ಬಳಿಕ ನಗರಕ್ಕೆ ಕರೆತಂದಿರುವ  ಎನ್ ಐ ಎ ಅಧಿಕಾರಿಗಳು ರಹಸ್ಯ ಸ್ಥಳದಲ್ಲಿ ವಿಚಾರಣೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಈ ಪ್ರಕರಣದ ಆಳಕ್ಕಿಳಿದಿರುವ ತನಿಖಾ ತಂಡ ಬಳ್ಳಾರಿಯಲ್ಲಿ ಹಳೆ ಕೇಸ್‌ಗಳಲ್ಲಿ ಬಂಧನವಾಗಿರುವ ಶಂಕಿತರನ್ನು ಈಗಾಗಲೇ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಜತೆಗೆ ನಾಪತ್ತೆಯಾಗಿರುವ ಆರೋಪಿಗಳ ಕುಟುಂಬಸ್ಥರನ್ನೂ ವಿಚಾರಣೆ ಮಾಡಲಾಗುತ್ತಿದೆ.
    ಬಳ್ಳಾರಿಯ ಶಂಕಿತ ಉಗ್ರ ಮಿನಾಜ್‌ ಅಲಿಯಸ್‌ ಸುಲೈಮಾನ್‌, ಸೈಯದ್‌ ಸಮೀರ್‌, ಮುಂಬೈನ ಅನಾಸ್‌ ಇಕ್ಬಾಲ್‌ ಶೇಖ್‌, ದೆಹಲಿಯ ಶಯಾನ್‌ ರೆಹಮಾನ್‌ ಅಲಿಯಾಸ್‌ ಹುಸೈನ್‌ನನ್ನು ನ್ಯಾಯಾಲಯದ ಆದೇಶದ ಮೇರೆಗೆ ವಶಕ್ಕೆ ಪಡೆದು, ಎನ್‌ಐಎ ವಿಚಾರಣೆ ಮಾಡುತ್ತಿದೆ.

    ಬಳ್ಳಾರಿಯಲ್ಲೇ ಮೊಕ್ಕಾಂ:
    ಬಳ್ಳಾರಿ ಮೂಲದ ಶಂಕಿತ ಉಗ್ರ  ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಿನಾಜ್ ಅಲಿಯಾಸ್‌ ಸುಲೈಮಾನ್‌ ಬಾಂಬ್ ಸ್ಫೋಟದ ರೂವಾರಿ ಇರಬಹುದು ಎನ್ನುವ ಶಂಕೆಯಿದ್ದ ಎನ್‌ಐಎ ಅಧಿಕಾರಿಗಳು ಬಳ್ಳಾರಿಯಲ್ಲೇ  ಬೀಡು ಬಿಟ್ಟು ಶಬ್ಬೀರ್ ನನ್ನು ಬಂಧಿಸಿದ್ದಾರೆ.

    Verbattle
    Verbattle
    Verbattle
    NIA ಉಗ್ರ ತುಮಕೂರು ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್ ನಿಂದ ಮಂತ್ರಿಗಳ ಕುಟುಂಬ ಸದಸ್ಯರು ಚುನಾವಣಾ ಅಖಾಡಕ್ಕೆ | Congress
    Next Article ಕರ್ನಾಟಕದಲ್ಲಿ ಸಿಎಎ ಜಾರಿಯಾಗುತ್ತದೆಯಾ? | CAA
    vartha chakra
    • Website

    Related Posts

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    February 11, 2026

    ತಿರುಪತಿ ಲಡ್ಡು ಕಲಬೆರಕೆ ಹಗರಣ: ಸಿಬಿಐ ಚಾರ್ಜ್‌ಶೀಟ್‌ನಿಂದ ಬಯಲಾಯ್ತು ಆಘಾತಕಾರಿ ಸತ್ಯ

    February 9, 2026

    1 Comment

    1. Dygges on February 11, 2026 3:20 pm

      betmgm РњРћ betmgm New York www betmgm

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಉದ್ಯೋಗ
    • LinwoodGah on ಅಕ್ಕನ ಮನೆಗೆ ಕನ್ನ ಹಾಕಿದ ತಂಗಿ
    • Gmodgd on Infosys ಶೋಷಣೆ ಮಾಡುತ್ತಿದೆಯಾ..?
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.