ಬೆಂಗಳೂರು, ಮಾ.7- ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ Electionಯ ಫಲಿತಾಂಶ ಪ್ರಕಟಣೆ ವೇಳೆ ನಡೆದ ವಿಜಯೋತ್ಸವ ಸಂದರ್ಭದಲ್ಲಿ ಕೇಳಿ ಬಂದ ಪಾಕಿಸ್ತಾನ ಜಿಂದಾಬಾದ್ ಘೋಷಣೆ ರಾಜ್ಯಸಭೆ ಸದಸ್ಯರಾಗುವ ನಾಸಿರ್ ಹುಸೇನ್ ಅವರ ಕನಸಿಗೆ ಅಡ್ಡಿಯಾಗತೊಡಗಿದೆ.
ಚುನಾವಣೆಯ ಫಲಿತಾಂಶ ಪ್ರಕಟಣೆಯ ನಂತರ ವಿಧಾನಸೌಧದ ಆವರಣದಲ್ಲಿ ನಡೆದ ವಿಜಯೋತ್ಸವ ಸಂಭ್ರಮದಲ್ಲಿ ಪಾಲ್ಗೊಂಡಿದ್ದ ನಾಸೀರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ಕೂಗಿ, ಪೊಲೀಸರ ಅತಿಥಿಗಳಾಗಿದ್ದಾರೆ.
ಭಂದಿತರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು ಎಂದು ಪಟ್ಟು ಹಿಡಿದಿರುವ ಬಿಜೆಪಿ ಇದೀಗ ಈ ಪ್ರಕಾರ ಇತ್ಯರ್ಥವಾಗುವವರೆಗೆ ನಾಸಿರ್ ಹುಸೇನ್ ರಾಜ್ಯಸಭೆ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಬಾರದು ಎಂದು ಆಗ್ರಹಿಸಿದೆ.
ಇದರ ಬೆನ್ನಲ್ಲೇ ರಾಜ್ಯಸಭೆಯ ಸಭಾಪತಿ ಹಾಗೂ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರಿಗೆ ಪತ್ರ ಬರೆದಿರುವ ರಾಜ್ಯದ ನಿವೃತ್ತ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳು, ನಾಸೀರ್ ಹುಸೇನ್ ಅವರಿಗೆ ಪ್ರಮಾಣ ವಚನ ಮತ್ತು ಪ್ರತಿಜ್ಞಾವಿಧಿ ಬೋಧಿಸದಂತೆ ಮನವಿ ಮಾಡಿದ್ದಾರೆ.
ರಾಜ್ಯದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದ ಆವರಣದಲ್ಲೇ ನಾಸೇ ಹುಸೇನ್ ಅವರ ಬೆಂಬಲಿಗರು ಪಾಕಿಸ್ತಾನ ಪರ ಘೋಷಣೆ ಹಾಕುವ ಮೂಲಕ ಉದ್ದಟತನ ಮೆರೆದಿದ್ದಾರೆ. ಬಂದಿತರಲ್ಲಿ ಮೊಹಮ್ಮದ್ ಶಫಿ ನಾಶಿಪುಡಿ ನಾಸಿರ್ ಹುಸೇನ್ ಅವರ ಸಂಬಂಧಿಕರು ಆಗಿದ್ದಾರೆ ಈ ಹಿನ್ನಲೆಯಲ್ಲಿ ಇವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ ಕ್ರಮ ಜರುಗಿಸಬೇಕು ಎಂದು ತಮ್ಮ ಪತ್ರದಲ್ಲಿ ಒತ್ತಾಯಿಸಲಾಗಿದೆ.
ನಿವೃತ್ತ ಐಎಎಸ್ ಅಧಿಕಾರಿಗಳಾದ ಎಂ ಮದನ್ ಗೋಪಾಲ್, ಎಂ ಲಕ್ಷ್ಮೀನಾರಾಯಣ, ಅನಿಲ್ ಕುಮಾರ್, ಮುದ್ದುಮೋಹನ್, ನಿವೃತ್ತ ಐಪಿಎಸ್ ಅಧಿಕಾರಿಗಳಾದ ಭಾಸ್ಕರ್ ರಾವ್, ಗೋಪಾಲ್ ಹೊಸೂರ್ ಸೇರಿದಂತೆ 22 ಅಧಿಕಾರಿಗಳು ಪತ್ರಕ್ಕೆ ಸಹಿ ಹಾಕಿದ್ದಾರೆ. ರಾಷ್ಟ್ರ ವಿರೋಧಿ ಘೋಷಣೆ ಕೂಗಿರುವ ಪ್ರಕರಣ ಇತ್ಯರ್ಥವಾಗುವರೆಗೂ ಪ್ರಮಾಣ ವಚನ ಬೋಧಿಸದಂತೆ ಮನವಿ ಮಾಡಿದ್ದಾರೆ.
ನಾಸೀರ್ ಹುಸೇನ್ ಅವರ ಬೆಂಬಲಿಗರು ವಿಜಯೋತ್ಸವ ಆಚರಣೆ ಮಾಡುವ ವೇಳೆ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿರುವುದು ಎಫ್ಎಸ್ಎಲ್ ವರದಿಯಲ್ಲಿ ಬಹಿರಂಗವಾಗಿದೆ.
ಪೊಲೀಸರು ನಾಸೀರ್ ಹುಸೇನ್ ಅವರ ಮೂವರು ಬೆಂಬಲಿಗರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಇವರೆಲ್ಲರೂ ನಾಸೀರ್ ಹುಸೇನ್ ಅವರ ಬೆಂಬಲಿಗರಾಗಿರುವುದರಿಂದ ಉಪರಾಷ್ಟ್ರಪತಿಗಳು ದೇಶ ವಿರೋಧಿ ಘೋಷಣೆ ಕೂಗಲು ಕುಮ್ಮಕ್ಕು ನೀಡಿದ ಆರೋಪದ ಮೇಲೆ ಅಧಿಕಾರ ಗೌಪ್ಯತೆ ಬೋಧಿಸಬಾರದೆಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.
ಸುಮಾರು ಮೂರು ಪುಟಗಳ ಪತ್ರ ಬರೆದಿರುವ ಅಧಿಕಾರಿಗಳು ಪಾಕಿಸ್ತಾನ ಜಿಂದಾಬಾದ್ ಎಂದು ಕೂಗುವುದು ದೇಶವಿರೋಧಿ ಚಟುವಟಿಕೆಗೆ ಸಮ. ಇದನ್ನು ಗಂಭೀರವಾಗಿ ಪರಿಗಣಿಸಿ ನಾಸೀರ್ ಹುಸೇನ್ಗೆ ಅಧಿಕಾರ ಗೌಪ್ಯತೆ ಬೋಧಿಸಬಾರದು. ನಿಮಗಿರುವ ಅಧಿಕಾರವನ್ನು ಚಲಾಯಿಸಿ ಎಂದು ಕೋರಿದ್ದಾರೆ.