Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » RSS ಪರ ಬ್ಯಾಟಿಂಗ್ ಮಾಡದಂತೆ ರಾಜ್ಯ ಬಿಜೆಪಿಗೆ ಸಂಘ ಸೂಚನೆ?
    ಸುದ್ದಿ

    RSS ಪರ ಬ್ಯಾಟಿಂಗ್ ಮಾಡದಂತೆ ರಾಜ್ಯ ಬಿಜೆಪಿಗೆ ಸಂಘ ಸೂಚನೆ?

    vartha chakraBy vartha chakraJune 7, 2022Updated:August 22, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸಚಿವರು, ಮುಖಂಡರು ಆರೆಸ್ಸೆಸ್ ವಕ್ತಾರರಂತೆ ವರ್ತಿಸುತ್ತಿರುವುದು ಆರೆಸ್ಸೆಸ್ ನಾಯಕರಿಗೇ ಇರಿಸುಮುರಿಸು ಉಂಟು ಮಾಡಿದೆಯೇ?
    ಹೌದು ಎನ್ನುತ್ತಿವೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮೂಲಗಳು.
    ಇದೇ ಕಾರಣಕ್ಕಾಗಿ ಮಂಗಳವಾರ ಬೆಳಗ್ಗೆ ಕೆಲ ಬಿಜೆಪಿ ನಾಯಕರಿಗೆ ಚುರುಕು ಮುಟ್ಟಿಸುವ ಕೆಲಸವನ್ನೂ ಆರೆಸ್ಸೆಸ್ ನಾಯಕರು ಮಾಡಿದ್ದಾರೆ ಎಂದು ತಿಳಿದುಬಂದಿದೆ.
    ಆರೆಸ್ಸೆಸ್‌ನ ವಕ್ತಾರರಂತೆ ವರ್ತಿಸಬೇಡಿ ಎಂದು ಬಿಜೆಪಿ ನಾಯಕರಿಗೆ ಖಡಕ್ ಸಂದೇಶವನ್ನೂ ರವಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿ ನಾಯಕರನ್ನು ಸಮರ್ಥಿಸಿ ಮಾತನಾಡುತ್ತಿದ್ದ ಕೆಲ ಆರೆಸ್ಸೆಸ್ ನಾಯಕರಿಗೂ ಈ ನಿಟ್ಟಿನಲ್ಲಿ ಸೂಚನೆ ನೀಡಿದ್ದು, ತಕ್ಷಣ ಈ ವರ್ತನೆ ನಿಲ್ಲಿಸುವಂತೆ ಎಚ್ಚರಿಕೆ ನೀಡಲಾಗಿದೆ.
    ಈ ಮಧ್ಯೆ, ಹಿಂದುಗಳಿಗೆ ಧಾರ್ಮಿಕ ಹಾಗು ಸಾಂಸ್ಕೃತಿಕ ನಾಯಕತ್ವ ನೀಡಿರುವ
    ಆರೆಸ್ಸೆಸ್ ಬಗ್ಗೆ ವಿಪರೀತವಾಗಿ ಟೀಕಿಸುತ್ತಿರುವ ಕೈ ನಾಯಕರ ನಡೆಯಿಂದ ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ಗೇ ಮುಳುವಾಗಲಿದೆ ಎನ್ನಲಾಗುತ್ತಿದೆ.
    ಆರೆಸ್ಸೆಸ್ ಬಗ್ಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು‌‌ ಕಾಂಗ್ರೆಸ್ ನಾಯಕರು‌ ವಾಚಾಮಗೋಚರವಾಗಿ ಟೀಕೆ‌ ಮಾಡುತ್ತಿರುವುದು ಸಾಮಾನ್ಯ ಜನರಿಗೂ ಇಷ್ಟವಾಗುತ್ತಿಲ್ಲ. ಇದೇ ರೀತಿಯ ಟೀಕೆಯನ್ನು ಕಾಂಗ್ರೆಸ್ ನಾಯಕರು ಮುಂದುವರಿಸಿದರೆ ಮುಂದಿನ‌ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಭಾರೀ ನಷ್ಟವಾಗಲಿದೆ ಎಂಬ ಮಾತು ಕಾಂಗ್ರೆಸ್ ವಲಯದಲ್ಲೇ ಕೇಳಿಬರುತ್ತಿದೆ.
    ಕಾಂಗ್ರೆಸ್ ಟೀಕೆಗಳ ಬಗ್ಗೆ ಜನರೇ ನಿರ್ಧರಿಸಲಿ. ಹೀಗಾಗಿ ಇನ್ಮುಂದೆ ಕಾಂಗ್ರೆಸ್ ನಾಯಕರ ಟೀಕಾತ್ಮಕ ಮಾತುಗಳಿಗೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡದಿರಲೂ ಆರೆಸ್ಸೆಸ್ ನಿರ್ಧರಿಸಿದೆ ಎಂದು ಹೆಸರು ಬಹಿರಂಗಪಡಿಸಲಿಚ್ಛಿಸದ ಆರೆಸ್ಸೆಸ್ ಹಿರಿಯರೊಬ್ಬರು ತಿಳಿಸಿದ್ದಾರೆ.
    ಹಾಗೆಯೇ ಬಿಜೆಪಿಯಿಂದಲೂ ಒಂದು ಹಂತದ ಅಂತರ ಕಾಯ್ದುಕೊಂಡು ತನ್ನ ಗೌರವ ಉಳಿಸಿಕೊಳ್ಳಲು ಆರೆಸ್ಸೆಸ್ ಮುಂದಾಗಿದೆ ಎಂದು ತಿಳಿದುಬಂದಿದೆ.

    Religion rss ಕಾಂಗ್ರೆಸ್ ಧಾರ್ಮಿಕ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Article27 ದೇಶಗಳಿಗೆ ಹರಡಿದ ಮಂಕಿ ಪಾಕ್ಸ್: ಹೆಚ್ಚಿದ ಆತಂಕ
    Next Article ಹಳೆಯ ಟ್ವೀಟ್ ವೈರಲ್: ಭಾವುಕರಾದ ಅಪ್ಪು‌ ಅಭಿಮಾನಿಗಳು
    vartha chakra
    • Website

    Related Posts

    ಎಚ್ಚೆತ್ತ ರಾಜ್ಯ ಸರ್ಕಾರ

    December 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    December 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    December 12, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಚ್ಚೆತ್ತ ರಾಜ್ಯ ಸರ್ಕಾರ

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಜಗತ್ತಿನ ಅತಿ ದೊಡ್ಡ ರಾಷ್ಟ್ರಧ್ವಜ ಅನಾವರಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • kypit kyrsovyu_ruOl on ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • kypit kyrsovyu_hzOn on ವಿಧಾನಸೌಧದಲ್ಲಿ ಸಾಹಿತ್ಯ ಉತ್ಸವ.
    • blockchain authentication on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಎಚ್ಚೆತ್ತ ರಾಜ್ಯ ಸರ್ಕಾರ

    December 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    December 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    December 12, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ವಿಮಾನಯಾನ ಬಳಕೆಗೆ 47 ಕೋಟಿ ಖರ್ಚು #varthachakra #siddaramaiah #helicopter #airtravel #costs #news
    Subscribe