Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » RTO ನೇಮಕಾತಿಯಲ್ಲಿ ಗೋಲ್ ಮಾಲ್ – ಇನ್ಸ್ಪೆಕ್ಟರ್ ಹುದ್ದೆಗೆ ಕೋಟಿ ರೂ. ಡೀಲ್?
    ಸುದ್ದಿ

    RTO ನೇಮಕಾತಿಯಲ್ಲಿ ಗೋಲ್ ಮಾಲ್ – ಇನ್ಸ್ಪೆಕ್ಟರ್ ಹುದ್ದೆಗೆ ಕೋಟಿ ರೂ. ಡೀಲ್?

    vartha chakraBy vartha chakraFebruary 4, 202329 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಫೆ.4-

    ರಾಜ್ಯ ಸಾರಿಗೆ ಇಲಾಖೆಯ ಮೋಟಾರ್ ವೆಹಿಕಲ್ ಇನ್ಸ್‌ಪೆಕ್ಟರ್ (Motor Vehicle Inspector) ಹುದ್ದೆಯ ನೇಮಕಾತಿಯಲ್ಲಿ ಅಕ್ರಮ ನಡೆದಿದ್ದು, ಅಭ್ಯರ್ಥಿಗಳು ನಕಲಿ ಸರ್ಟಿಫಿಕೇಟ್ ನೀಡಿ ಕೆಲಸ ಗಿಟ್ಟಿಸಿಕೊಂಡಿರುವ ಆರೋಪ ಕೇಳಿಬಂದಿದೆ. ಕಳೆದ 2016ರಲ್ಲಿ 150 ಮೋಟರ್ ವೆಹಿಕಲ್ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಕೆಪಿಎಸ್‌ಸಿ (KPSC) ಪರೀಕ್ಷೆ ನಡೆದಿತ್ತು. ಸಾರಿಗೆ ಇಲಾಖೆ ಪರೀಕ್ಷೆಯ ನಂತರ ದಾಖಲೆಗಳ ಪರಿಶೀಲನೆ ಮಾಡಿದ್ದರು. ಈ ವೇಳೆ ಅಭ್ಯರ್ಥಿಗಳು ನಕಲಿ ಸರ್ಟಿಫಿಕೇಟ್​​ ನೀಡಿ ಒಂದೊಂದು ಪೋಸ್ಟ್​​ಗೂ ಒಂದೊಂದು ಕೋಟಿ ರೂ ಡೀಲ್ ಆಗಿರುವ ಆರೋಪ ಕೇಳಿಬಂದಿದೆ.

    ಪರಿಶೀಲನಾ ಹಂತದಲ್ಲಿ ನಡೆದಿತ್ತು ಸಾಲು ಸಾಲು ಅಕ್ರಮಗಳು

    ಸುಳ್ಳು ದಾಖಲೆಯನ್ನು ಸಾರಿಗೆ ಇಲಾಖೆಗೆ ನೀಡಿದ್ದ ಹಲವು ಅಭ್ಯರ್ಥಿಗಳು 2016ರಲ್ಲಿ ನಡೆದ ಪರೀಕ್ಷೆಗೆ 2019ರಲ್ಲಿ 129 ಸಂಭವನೀಯ ಪಟ್ಟಿ ಪ್ರಕಟಿಸಲಾಗಿತ್ತು. ಪಟ್ಟಿಯಲ್ಲಿ ಅಕ್ರಮ ಎಸಗಿದ್ದ ಅಭ್ಯರ್ಥಿಗಳ ಹೆಸರೇ ಇತ್ತು. ಈ ಹಿನ್ನೆಲೆಯಲ್ಲಿ ನೊಂದ ಅಭ್ಯರ್ಥಿಗಳು 2019ರಲ್ಲೇ ಕೆಎಟಿ (KAT) ಗೆ ಹಾಗೂ ಹೈಕೋರ್ಟ್ ಗೆ ಹೋಗಿದ್ದರು. 2021ರಲ್ಲಿ ಹೈಕೋರ್ಟ್​​ ಅಭ್ಯರ್ಥಿಗಳ ಕೋರಿಕೆಯಂತೆ ಲಿಸ್ಟ್ ವಾಪಸ್ ಪಡೆಯುವಂತೆ ಆದೇಶ ಹೊರಡಿಸಿತ್ತು. ಕೋರ್ಟ್ ಆದೇಶದನ್ವಯ ಸಾರಿಗೆ ಇಲಾಖೆ ಪಟ್ಟಿ ವಾಪಸ್ ಪಡೆದಿತ್ತು.

    ಅಕ್ರಮ ಆಗಿದ್ದು ಹೇಗೆ:

    ಹುದ್ದೆಗಳನ್ನು ಅಲಂಕರಿಸಲು ಕಡ್ಡಾಯವಾಗಿದ್ದ ಕೆಲ ಷರತ್ತುಗಳು.

    22.10.2013ರಲ್ಲಿನ ವೃಂದ ಮತ್ತು ನೇಮಕಾತಿ ನಿಯಮದನ್ವಯ ಅಭ್ಯರ್ಥಿ ಬಸ್ಸು, ಲಾರಿ ಇವುಗಳನ್ನು ರಿಪೇರಿ ಮಾಡಲು ಕಡ್ಡಾಯವಾಗಿ ಕಲಿತಿರಬೇಕು. ಯಾವುದಾದರೂ ಸರ್ವೀಸ್ ಸ್ಟೇಷನ್ ಅಥವಾ ಗ್ಯಾರೇಜ್‌ನಲ್ಲಿ ಕೆಲಸ ಮಾಡಿರಬೇಕು. ಕನಿಷ್ಟ 1 ವರ್ಷವಾದರೂ ಸೇವಾನುಭವ ಪಡೆದಿರಬೇಕು ಎಂದು ನಿಯಮವಿದೆ.

    ಆದರೆ 2019ರಲ್ಲಿ ಬಿಡುಗಡೆ ಮಾಡಲಾದ 129 ಅಭ್ಯರ್ಥಿಗಳಿಗೆ ಸೇವಾನುಭವ ಇರಲಿಲ್ಲ. ಸೇವಾನುಭವ ಇರೋದಾಗಿ ಸುಳ್ಳು ದಾಖಲೆ ಸೃಷ್ಟಿ ಮಾಡಿಕೊಂಡಿದ್ರಾ? ನಕಲಿ ಸ್ಯಾಲರಿ ಸರ್ಟಿಫಿಕೇಟ್, ನಕಲಿ ಹಾಜರಾತಿ, ನಕಲಿ ಗ್ಯಾರೇಜ್ ಸರ್ಟಿಫಿಕೇಟ್​​ಗಳನ್ನು ವಾಮ ಮಾರ್ಗದಲ್ಲಿ ಮಾಡಿಸಿಕೊಳ್ಳಲಾಗಿತ್ತು. ಇದೇ ಸುಳ್ಳು ದಾಖಲೆಗಳನ್ನು ನೀಡಿ ಸಾರಿಗೆ ಇಲಾಖೆಯನ್ನು ವಂಚಿಸಲಾಗಿತ್ತು. ಸಾರಿಗೆ ಇಲಾಖೆಯ ಅಧಿಕಾರಿಗಳೂ ಇದಕ್ಕೆ ಸಾಥ್ ನೀಡಿದ್ದರು ಎಂಬ ಅನುಮಾನ ಮೂಡಿದೆ.

    ಕೋರ್ಟ್ ಆದೇಶದ ನಂತರ ಮತ್ತೊಂದು ಸಂಭವನೀಯ ಪಟ್ಟಿ ಬಿಡುಗಡೆ ಮಾಡಲಾಯ್ತು. 2021ರಲ್ಲಿ ಕೆಪಿಎಸ್‌ಸಿ (KPSC) ಯಿಂದ 141 ಜನರ ಮತ್ತೊಂದು ಸಂಭವನೀಯ ಪಟ್ಟಿ ಬಿಡುಗಡೆ ಮಾಡಲಾಗಿತ್ತು. ಈ ಪಟ್ಟಿಯಲ್ಲೂ ಸುಳ್ಳು ದಾಖಲೆ ನೀಡಿದ್ದವರ ಹೆಸರುಗಳೇ ಮುಂದುವರೆದಿದ್ದವು. 1ನೇ ಪಟ್ಟಿಯಲ್ಲಿ ಸುಳ್ಳು ದಾಖಲೆ ನೀಡಿದ್ದವರೇ 2ನೇ ಪಟ್ಟಿಯಲ್ಲೂ ಸ್ಥಾನ ಪಡೆದರು. 103ಕ್ಕೂ ಹೆಚ್ಚು ಅಭ್ಯರ್ಥಿಗಳು ಬಹುತೇಕ ನಕಲಿ ದಾಖಲೆಗಳನ್ನು ನೀಡಿದ್ದಾರೆ ಎನ್ನಲಾಗುತ್ತಿದೆ. ಇಂತಹ 20 ಅಭ್ಯರ್ಥಿಗಳ ದಾಖಲೆ ಸಮೇತ ಮಾಹಿತಿ ಲಭ್ಯವಾಗಿದೆ. ಬೆಂಗಳೂರು, ಮೈಸೂರು, ಕೋಲಾರ, ಶಿವಮೊಗ್ಗ, ವಿಜಯಪುರ, ಹಾಸನ ಹಾಗೂ ಮಂಡ್ಯ ಜಿಲ್ಲೆಗಳ ಅಭ್ಯರ್ಥಿಗಳ ನಕಲಿ ದಾಖಲೆಗಳು ಲಭ್ಯವಾಗಿವೆ.

    Bangalore crime Government KAT KPSC m News RTO ಅಪರಾಧ ಸುದ್ದಿ ಕಾನೂನು ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಅನ್ನ ಹಾಕಿದವರಿಗೇ ದ್ರೋಹ!
    Next Article ದಂಡ ಪಾವತಿಗೆ ಮುಗಿಬಿದ್ದ ವಾಹನ ಸವಾರರು
    vartha chakra
    • Website

    Related Posts

    ಎಚ್ಚೆತ್ತ ರಾಜ್ಯ ಸರ್ಕಾರ

    December 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    December 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    December 12, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಚ್ಚೆತ್ತ ರಾಜ್ಯ ಸರ್ಕಾರ

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಜಗತ್ತಿನ ಅತಿ ದೊಡ್ಡ ರಾಷ್ಟ್ರಧ್ವಜ ಅನಾವರಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • kypit kyrsovyu_omOl on ಮುರಸೋಳಿ ಸೆಲ್ವಂ ಎಂಬ ಗಾರುಡಿಗ.
    • Larrybup on ಪೊಲೀಸ್ ಇಲಾಖೆ ಗೌರವ ಹಾಳಾಗುತ್ತಿದೆಯಂತೆ.
    • Larrybup on ಜಾತಿ ಗಣತಿ ಅಲ್ಲ, ಸಿದ್ದ ಷಡ್ಯಂತ್ರ ಎಂದ ಕುಮಾರಸ್ವಾಮಿ.
    Latest Kannada News

    ಎಚ್ಚೆತ್ತ ರಾಜ್ಯ ಸರ್ಕಾರ

    December 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    December 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    December 12, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ವಿಮಾನಯಾನ ಬಳಕೆಗೆ 47 ಕೋಟಿ ಖರ್ಚು #varthachakra #siddaramaiah #helicopter #airtravel #costs #news
    Subscribe