Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಾವು-ಬದುಕಿನ ನಡುವೆ Santro Ravi ಹೋರಾಟ.
    ಸುದ್ದಿ

    ಸಾವು-ಬದುಕಿನ ನಡುವೆ Santro Ravi ಹೋರಾಟ.

    vartha chakraBy vartha chakraJanuary 27, 2023No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    Bengaluru
    ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ ಹೈ ಪ್ರೊಫೈಲ್ ಲೈಂಗಿಕ ಪ್ರಕರಣದ ಪ್ರಮುಖ ಆರೋಪಿ Santro Ravi ಇದೀಗ ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದಾನೆ. ‘ಮಧುಮೇಹ ಸೇರಿದಂತೆ ಹಲವು ಕಾರಣಗಳಿಂದಾಗಿ ಆತನ ಆರೋಗ್ಯ ಸ್ಥಿತಿಯಲ್ಲಿ ವ್ಯತ್ಯಾಸವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ರಾತ್ರಿಯಿಂದ ಆತನ ಆರೋಗ್ಯದಲ್ಲಿ ಏರುಪೇರು ಉಂಟಾಯಿತು. ತಕ್ಷಣವೇ ಆತನಿಗೆ ಪರಪ್ಪನ ಅಗ್ರಹಾರ ಜೈಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಆದರೆ ಇದರಿಂದ ಹೆಚ್ಚಿನ ಸುಧಾರಣೆಯಾಗದ ಹಿನ್ನೆಲೆಯಲ್ಲಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಆದರೆ ಉನ್ನತ ಮೂಲಗಳ ಪ್ರಕಾರ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಖೈದಿಯಾಗಿರುವ ಸ್ಯಾಂಟ್ರೋ ರವಿ ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಯ ಯತ್ನ ಮಾಡಿದ್ದಾನೆ. ತಾನು ಹಾಕಿಕೊಂಡಿದ್ದ ಪ್ಯಾಂಟ್ ಬಿಚ್ಚಿ ಅದರಿಂದ ನೇಣು ಬಿಗಿದುಕೊಂಡಿದ್ದಾನೆ. ಅದನ್ನು ಗಮನಿಸಿದ ಇತರೆ ಜೈಲು ವಾಸಿಗಳು ಮತ್ತು ಭದ್ರತಾ ಸಿಬ್ಬಂದಿ ಆತನನ್ನು ರಕ್ಷಿಸಿ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ ಎನ್ನಲಾಗಿದೆ. ನೇಣು ಬಿಗಿದುಕೊಂಡ ಪರಿಣಾಮ ಆತನ ಉಸಿರಾಟದಲ್ಲಿ ವ್ಯತ್ಯಯವಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ.

    Congress – JDS ಮೈತ್ರಿ ಸರ್ಕಾರದ ಪತನದ ವೇಳೆ ಪ್ರಮುಖ ಪಾತ್ರ ವಹಿಸಿದ್ದ Santro Ravi, ನಂತರ ನೂತನ ಸರ್ಕಾರದಲ್ಲಿ ಅತ್ಯಂತ ಪ್ರಭಾವಿ ವ್ಯಕ್ತಿಯಾಗಿ ಬೆಳೆದಿದ್ದ. ಕೆಲವು ಮಂತ್ರಿಗಳು, ಹಿರಿಯ ಅಧಿಕಾರಿಗಳ ಜೊತೆ ಒಡನಾಟ ಹೊಂದಿದ್ದ ಆತ ಆಯಕಟ್ಟಿನ ಹುದ್ದೆಯ ಅಧಿಕಾರಿಗಳ ವರ್ಗಾವಣೆಯ ದಂಧೆ ನಡೆಸುತ್ತಿದ್ದ. ಸರ್ಕಾರದ ಅತಿಥಿ ಗೃಹ ‘ಕುಮಾರಕೃಪಾ’ದಲ್ಲಿ ಅನಧಿಕೃತ ಕೊಠಡಿ ಹೊಂದಿದ್ದ ಈತ ಅಲ್ಲಿಂದ ಹೈ ಪ್ರೊಫೈಲ್ ವೇಶ್ಯಾವಾಟಿಕೆ ನಡೆಸುತ್ತಿದ್ದ ಎಂಬ ಆರೋಪ ಎದುರಿಸುತ್ತಿದ್ದಾನೆ.

    ಮೈಸೂರು ಮೂಲದ Santro Ravi ಮೇಲೆ ಎರಡನೇ ಪತ್ನಿ ಎಂದು ಹೇಳಿಕೊಂಡಿರುವ ಮಹಿಳೆಯೊಬ್ಬರು ಅತ್ಯಾಚಾರದ ಆರೋಪ ಹೊರಿಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ‘ಬೇರೆಯವರೊಂದಿಗೆ ದೇಹ ಸಂಪರ್ಕ ಬೆಳೆಸುವಂತೆ ರವಿ ಒತ್ತಾಯಿಸುತ್ತಿದ್ದಾನೆ’ ಎಂದು ಆರೋಪಿಸಿದ್ದರು. ಪೊಲೀಸರು ತನಿಖೆ ಆರಂಭಿಸಿದಾಗ ಹಲವು ಪ್ರಕರಣಗಳು ಬೆಳಕಿಗೆ ಬಂದವು. ವೇಶ್ಯಾವಾಟಿಕೆಯಲ್ಲಿ ತೊಡಗಿಸಿದ್ದ ರವಿ ಹಲವು ಹೆಣ್ಣುಮಕ್ಕಳನ್ನು ದಂಧೆಗೆ ನೂಕಿದ್ದ, ಈ ಹಿಂದೆ ಜೈಲುವಾಸ ಅನುಭವಿಸಿದ್ದ ಅಂಶಗಳೂ ಬೆಳಕಿಗೆ ಬಂದಿತ್ತು.

    ಪೊಲೀಸ್ ವರ್ಗಾವಣೆಯಲ್ಲಿ Santro Ravi ಸಕ್ರಿಯ ಪಾತ್ರ ನಿರ್ವಹಿಸಿದ್ದ ಸಂಗತಿ ರಾಜಕೀಯದ ದಾಳವಾಗಿತ್ತು. ಹಲವು ಸಚಿವರು ಹಾಗೂ ಶಾಸಕರೊಂದಿಗೆ Santro Ravi ಇರುವ ಚಿತ್ರಗಳು ವೈರಲ್ ಆಗಿದ್ದವು. ವೇಶ್ಯಾವಾಟಿಕೆಗಾಗಿ ರಷ್ಯಾ, ಇರಾನ್, ಮುಂಬೈ, ಕೊಲ್ಕೊತ್ತಾ ಗಳಿಂದ ಯುವತಿಯರನ್ನು ಕರೆಸುತ್ತಿದ್ದ. ಸ್ಯಾಂಟ್ರೋ ಕಾರಿನಲ್ಲಿ ಯುವತಿಯರನ್ನು ಸರಬರಾಜು ಮಾಡುತ್ತಿದ್ದ ಕಾರಣ ಇವನಿಗೆ ಸ್ಯಾಂಟ್ರೋ ರವಿ ಎನ್ನುವ ಹೆಸರು ಬಂದಿತ್ತು.

    Verbattle
    Verbattle
    Verbattle
    Congress JDS News Politics santro ravi ಆರೋಗ್ಯ ರಾಜಕೀಯ ವೈರಲ್
    Share. Facebook Twitter Pinterest LinkedIn Tumblr Email WhatsApp
    Previous ArticleGST ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರು!
    Next Article ಹಣ, ಒಡವೆಯೊಂದಿಗೆ ಪರಾರಿಯಾದ ಎರಡನೇ ಪತ್ನಿ.
    vartha chakra
    • Website

    Related Posts

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    February 10, 2026

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    February 10, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    ರಷ್ಯಾ ಅಧ್ಯಕ್ಷ ಪುತಿನ್ ಸುತ್ತ ಲೈಂಗಿಕ ಬ್ಲ್ಯಾಕ್‌ಮೇಲ್ ತಂತ್ರದ ಹುತ್ತ: ಏನಿದು ಹನಿ ಟ್ರ್ಯಾಪ್?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ನೇಮಕಾತಿ, ಭಡ್ತಿ ಗೆ ಇದ್ದ ಆತಂಕ ದೂರ !
    • Tllakr on ಗ್ಯಾರಂಟಿಗಳಿಗೆ ಬೆನ್ನೆಲುಬಾದ ಬಜೆಟ್ | Karnataka Budget 2024
    • Qdhaqf on ರಸ್ತೆಯಲ್ಲಿ ಪುಂಡರ ಹಾವಳಿ.
    Latest Kannada News

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    February 10, 2026

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    February 10, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.