Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹಣ, ಒಡವೆಯೊಂದಿಗೆ ಪರಾರಿಯಾದ ಎರಡನೇ ಪತ್ನಿ.
    ಸುದ್ದಿ

    ಹಣ, ಒಡವೆಯೊಂದಿಗೆ ಪರಾರಿಯಾದ ಎರಡನೇ ಪತ್ನಿ.

    vartha chakraBy vartha chakraJanuary 27, 2023No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜ.27-ಎರಡನೇ ವಿವಾಹದ ನೆಪದಲ್ಲಿ 62 ವರ್ಷದ ವೃದ್ಧರೊಬ್ಬರಿಗೆ ಟೋಪಿ ಹಾಕಿ 2.30 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ದೋಚಿ ಮಹಿಳೆ ಪರಾರಿಯಾಗಿರುವ ಘಟನೆ ಕಾಟನ್‌ಪೇಟೆಯಲ್ಲಿ ನಡೆದಿದೆ. ಕಾಟನ್‌ಪೇಟೆ OTC ರಸ್ತೆಯ ಷಣ್ಮುಗಂ ಮೋಸ ಹೋಗಿದ್ದು, ಕೃತ್ಯ ಎಸಗಿ ಪರಾರಿಯಾಗಿರುವ ತಮಿಳುನಾಡು ಮೂಲದ ಮಲ್ಲಿಕಾ ಅಲಿಯಾಸ್‌ ಮಲ್ಗರ್‌ (35) ಪತ್ತೆಗೆ ಪೊಲೀಸರು ಶೋಧ ಕೈಗೊಂಡಿದ್ದಾರೆ.

    ‘ಬ್ರೋಕರ್‌ ಮೂಲಕ ಷಣ್ಮುಗಂ ಅವರನ್ನು ಪರಿಚಯ ಮಾಡಿಕೊಂಡು, ಬಳಿಕ ಎರಡನೇ ಮದುವೆ ಮಾಡಿಕೊಂಡು ಆರೋಪಿ ವಂಚಿಸಿದ್ದಾಳೆ’ ಎಂದು ಪೊಲೀಸರು ತಿಳಿಸಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮೊದಲ ಪತ್ನಿಗೆ ವಿಚ್ಛೇದನ ನೀಡಿದ್ದ ಷಣ್ಮುಗಂ, 10 ವರ್ಷದ ಮಗನ ಜೊತೆ ನೆಲೆಸಿದ್ದರು. ಮೆಕ್ಯಾನಿಕ್‌ ಆಗಿ ಜೀವನ ಸಾಗಿಸುತ್ತಿದ್ದ ಅವರು, ಇತ್ತೀಚೆಗೆ ಎರಡನೇ ವಿವಾಹವಾಗಲು ನಿರ್ಧರಿಸಿದ್ದರು. ಆಗ ತಮ್ಮ ಪರಿಚಿತ ತಮಿಳುನಾಡಿನ ಸೇಲಂ ಮೂಲದ ಬ್ರೋಕರ್‌ ಮುನಿಯಮ್ಮ ಅಲಿಯಾಸ್‌ ಮಣಿಯನ್ನು ಅವರು ಸಂಪರ್ಕಿಸಿದ್ದರು. ಕೆಲ ದಿನಗಳ ಬಳಿಕ ತಮಿಳುನಾಡಿನ ದಿಂಡಿಗಲ್ಲಿನಲ್ಲಿ ಹೆಣ್ಣು ಇದೆ ಎಂದು ಷಣ್ಮುಗಂ ಗೆ ಮುನಿಯಮ್ಮ ಹೇಳಿದ್ದಳು. ಅದರಂತೆಯೇ ಜ.4ರಂದು ತನ್ನ ಜೊತೆ ಮಲ್ಲಿಕಾ, ಮತ್ತಿಬ್ಬರು ಪುರುಷರನ್ನು ಬೆಂಗಳೂರಿಗೆ ಕರೆತಂದು ಷಣ್ಮುಗಂ ಮನೆಯಲ್ಲಿ ಮುನಿಯಮ್ಮ ಮದುವೆ ಮಾಡಿಸಿದ್ದಳು. ಅಂದು ರಾತ್ರಿಯೇ ಮುನಿಯಮ್ಮ ಹಾಗೂ ಆಕೆಯ ಸಹಚರರು 35 ಸಾವಿರ ಕಮಿಷನ್‌ ಪಡೆದು ಮರಳಿದ್ದರು.

    ಇತ್ತ ಷಣ್ಮುಗಂ ಜೊತೆ ಕೆಲ ದಿನಗಳವರೆಗೆ ಜೀವನ ಸಾಗಿಸಿದ ಮಲ್ಲಿಕಾ ಕಳೆದ ಜ.10ರ ಮಧ್ಯಾಹ್ನ 64 ಗ್ರಾಂ ಚಿನ್ನಾಭರಣ ಹಾಗೂ 700 ಗ್ರಾಂ ಬೆಳ್ಳಿ ವಸ್ತುಗಳ ಸಮೇತ ಪರಾರಿಯಾಗಿದ್ದಾಳೆ. ಇತ್ತ ಕೆಲಸದ ನಿಮಿತ್ತ ಹೊರ ಹೋಗಿದ್ದ ಷಣ್ಮುಗಂ ಕೆಲ ಹೊತ್ತಿನ ಬಳಿಕ ಮನೆಗೆ ಬಂದಾಗ ಪತ್ನಿ ನಾಪತ್ತೆಯಾಗಿದ್ದು ಗೊತ್ತಾಗಿದೆ. ಪತ್ನಿಗಾಗಿ ಎಲ್ಲೆಡೆ ಹುಡುಕಾಟ ನಡೆಸಿದ ಅವರು, ಬ್ರೋಕರ್‌ ಮುನಿಯಮ್ಮ ಗೆ ಕರೆ ಮಾಡಿ ವಿಚಾರಿಸಿದಾಗ ಸಂಪರ್ಕ ಕಡಿತವಾಗಿದೆ. ಕೊನೆಗೆ ತಾವು ಮೋಸ ಹೋಗಿರುವುದು ಗೊತ್ತಾಗಿ ಕಾಟನ್‌ಪೇಟೆ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

    Bangalore crime ಅಪರಾಧ ಸುದ್ದಿ ಕಳ್ಳತನ ಮದುವೆ
    Share. Facebook Twitter Pinterest LinkedIn Tumblr Email WhatsApp
    Previous Articleಸಾವು-ಬದುಕಿನ ನಡುವೆ Santro Ravi ಹೋರಾಟ.
    Next Article ಪೊಲೀಸ್ ಬಲೆಗೆ ಬಿದ್ದ ನಕಲಿ ಅಂಕಪಟ್ಟಿ ಜಾಲ.
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Anthonyroape on ನೇಮಕಾತಿ ಪರೀಕ್ಷೆಯಿಂದ ಇವರೆಲ್ಲ ಶಾಶ್ವತವಾಗಿ ಡಿಬಾರ್
    • Anthonyroape on ಬಿಜೆಪಿಗೆ ಗುಡ್ ಬೈ ಹೇಳಲು ಸಜ್ಜಾದ ಸದಾನಂದ ಗೌಡ | Sadananda Gowda
    • Waltertig on ಬಾಬಾ ಸಿದ್ಧಿಕ್ಕಿ ಹತ್ಯೆ ನಂತರ, ಸಲ್ಮಾನ್‌ ಖಾನ್ ಹತ್ಯೆ ಮಾಡಲು ಟಾರ್ಗೆಟ್ ಮಾಡುತ್ತಿರುವ ಬಿಷ್ಣೋಯ್‌ ಗ್ಯಾಂಗ್!
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe