Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹಳ್ಳೀಲಿ ಹೆರಿಗೆ ಮಾಡಿಸಿಕೊಂಡ ಸೀರಿಯಲ್ ನಟಿ
    ಸುದ್ದಿ

    ಹಳ್ಳೀಲಿ ಹೆರಿಗೆ ಮಾಡಿಸಿಕೊಂಡ ಸೀರಿಯಲ್ ನಟಿ

    vartha chakraBy vartha chakraJune 25, 2022Updated:June 25, 2022No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಸಾಮಾನ್ಯವಾಗಿ ಸೆಲೆಬ್ರಿಟಿಗಳು ಸರ್ಕಾರಿ ಆಸ್ಪತ್ರೆಯ  ಕಡೆಗೆ ಸುಳಿಯುವುದಿಲ್ಲ. ನಟ-ನಟಿಯರು ಖಾಸಗಿ ಹಾಸ್ಪಿಟಲ್​ನಲ್ಲಿಯೇ ತಮಗೆ ಬೇಕಾದ ಚಿಕಿತ್ಸೆ ಪಡೆಯುತ್ತಾರೆ. ಅಂಥವರ ನಡುವೆ ಕಿರುತೆರೆ ನಟಿ ಪೂರ್ಣಿಮಾ ಅವರು ಭಿನ್ನವಾಗಿ ನಿಂತಿದ್ದಾರೆ. ಹಲವು ಸೀರಿಯಲ್​ನಲ್ಲಿ ನಟಿಸಿದ ಅನುಭವ ಇರುವ ಅವರು ಈಗ ಮಗುವಿಗೆ ಜನ್ಮ ನೀಡಿದ್ದಾರೆ. ಅದು ಮಂಡ್ಯ  ಜಿಲ್ಲೆಯ ಗ್ರಾಮೀಣ ಪ್ರದೇಶದ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಎಂಬುದು ಗಮನಿಸಬೇಕಾದ ಅಂಶ.
    ಅಷ್ಟಕ್ಕೂ ಅವರು ಬೆಂಗಳೂರಿನ ಖಾಸಗಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಸಹವಾಸ ಬೇಡ ಎಂದು ಕೀಲಾರ ಗ್ರಾಮದ ಸರ್ಕಾರಿ ಆಸ್ಪತ್ರೆಗೆ ಹೋಗಿದ್ದು ಯಾಕೆ? ಅದರ ಹಿಂದಿದೆ ಒಂದು ಇಂಟರೆಸ್ಟಿಂಗ್ ವಿಷಯ. ಖಾಸಗಿ ಆಸ್ಪತ್ರೆಯವರು ಆಗಲ್ಲ ಎಂದು ಕೈಚೆಲ್ಲಿದ ಕಾರ್ಯವನ್ನು ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ಮಾಡಿ ತೋರಿಸಿದ್ದಾರೆ.
    ಪೂರ್ಣಿಮಾ ಅವರು ಮಂಡ್ಯದ ಮದ್ದೂರಿನವರು. ಆದರೆ ಸೆಟ್ಲ್​ ಆಗಿರುವುದು ಬೆಂಗಳೂರಿನಲ್ಲಿ. ಗರ್ಭಿಣಿ ಆದಾಗ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಏನಾಯಿತು ಎಂಬುದನ್ನು ವಿಡಿಯೋ ಮೂಲಕ ಪೂರ್ಣಿಮಾ ವಿವರಿಸಿದ್ದಾರೆ. ‘ಪ್ರೈವೇಟ್​ ಆಸ್ಪತ್ರೆಯಲ್ಲಿ ನನಗೆ ಹೆದರಿಸುತ್ತಿದ್ದರು. ಪ್ಲಸೆಂಟಾ ಡೌನ್​ ಇದೆ ಎನ್ನುತ್ತಿದ್ದರು. ಏನೇನೋ ಹೇಳುತ್ತಿದ್ದರು ಎಂಬ ಕಾರಣಕ್ಕೆ ಒಂದಿಬ್ಬರು ವೈದ್ಯರನ್ನು ಚೇಂಜ್​ ಮಾಡಿದೆ. ಅಲ್ಲಿ ನನಗೆ ಕಂಫರ್ಟೆಬಲ್​ ಎನಿಸುತ್ತ ಇರಲಿಲ್ಲ. ಭಯದಲ್ಲೇ ದಿನ ಕಳೆಯುತ್ತಿದ್ದೆ’ ಎಂದು ಪೂರ್ಣಿಮಾ ಹೇಳಿದ್ದಾರೆ.
    ‘ನಮ್ಮ ಕೀಲಾರದಲ್ಲಿ ಒಳ್ಳೆಯ ಸರ್ಕಾರಿ ಆಸ್ಪತ್ರೆ ಇದೆ ಎಂಬುದು ತಿಳಿಯಿತು. ಸರ್ಜರಿಗೂ ಇಲ್ಲಿ ಒಳ್ಳೆಯ ವ್ಯವಸ್ಥೆ ಇದೆ. ಹಳ್ಳಿ ಎಂಬ ಕಾರಣಕ್ಕೆ ಮೊದಲಿಗೆ ಅನುಮಾನ ಎನಿಸಿತು. ಆದರೂ ಇಲ್ಲೇ ಬಂದು ತೋರಿಸಿಕೊಂಡೆ. ನನಗೆ ಇಲ್ಲಿ ತುಂಬ ಉಪಯೋಗ ಆಯಿತು. ಒಂದು ರೂಪಾಯಿ ಖರ್ಚು ಇಲ್ಲದೇ ಸರ್ಜರಿ ಆಯಿತು. ಪ್ರತಿಯೊಬ್ಬರನ್ನೂ ಇಲ್ಲಿನ ಸಿಬ್ಬಂದಿ ತುಂಬ ಚೆನ್ನಾಗಿ ನೋಡಿಕೊಳುತ್ತಾರೆ. ಸಿಸೇರಿಯನ್ ವ್ಯವಸ್ಥೆಗೆ ರೂಮ್​ ಚೆನ್ನಾಗಿದೆ. ಕೆಲವು ಖಾಸಗಿ ಆಸ್ಪತ್ರೆಯಲ್ಲೂ ಇಷ್ಟು ಒಳ್ಳೆಯ ವ್ಯವಸ್ಥೆ ಸಿಗಲ್ಲ. ಆದರೂ ಖಾಸಗಿಯವರು ಅನವಶ್ಯಕವಾಗಿ 2 ಲಕ್ಷದವರೆಗೂ ಹಣ ಖರ್ಚು ಮಾಡಿಸುತ್ತಾರೆ’ ಎಂದು ಪೂರ್ಣಿಮಾ ಹೇಳಿದ್ದಾರೆ.
    ‘ಎಲ್ಲ ಖಾಸಗಿ ಆಸ್ಪತ್ರೆಯವರು ಹಣ ಸುಲಿಗೆ ಮಾಡುತ್ತಾರೆ ಅಂತ ನಾನು ಹೇಳಲ್ಲ. ಅದೇ ರೀತಿ ಎಲ್ಲ ಸರ್ಕಾರಿ ಆಸ್ಪತ್ರೆ ಇಷ್ಟೇ ಚೆನ್ನಾಗಿ ಇದೆ ಎಂದು ಕೂಡ ಹೇಳುವುದಿಲ್ಲ. ನನಗೆ ಕೀಲಾರದ ಆಸ್ಪತ್ರೆಯಲ್ಲಿ ಒಳ್ಳೆಯ ಅನುಭವ ಆಗಿದೆ. ನೀವು ಕೂಡ ನಿಮ್ಮ ಊರುಗಳಲ್ಲಿ ಇರುವ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ. ಸರ್ಕಾರ ನಮಗೆ ನೀಡುವ ಸೌಲಭ್ಯಗಳನ್ನು ಬಳಸಿಕೊಳ್ಳಿ’ ಎಂದಿದ್ದಾರೆ ಪೂರ್ಣಿಮಾ.

    Entertainment
    Share. Facebook Twitter Pinterest LinkedIn Tumblr Email WhatsApp
    Previous Articleಸೆನ್ಸಾರ್ ಪಾಸ್ ಆದ ಬೈರಾಗಿ..ಬೈರಾಗಿ ಯು/ಎ ಸರ್ಟಿಫಿಕೇಟ್
    Next Article ಎಸ್‌ಎಂ ಕೃಷ್ಣ, ನಾರಾಯಣಮೂರ್ತಿ, ಪಡುಕೋಣೆಗೆ ಕೆಂಪೇಗೌಡ ಪ್ರಶಸ್ತಿ
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Waltertig on Drugs ಪತ್ತೆಗೆ ಶ್ವಾನದಳ ಬಳಕೆ.
    • 07i7e on ಬೀದರ್ ನಲ್ಲಿ ಸಿಕ್ಕಿತು‌ ಬರೋಬ್ಬರಿ 1596 ಕೆ.ಜಿ.ಗಾಂಜಾ | Ganja
    • Anthonyroape on ಅವೀವಾ ಬಿದ್ದಪಗೆ ಇದು ಎರಡನೇ ಮದುವೆ!
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe