Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿದ್ದರಾಮಯ್ಯ ಪೂರ್ಣ ಅವಧಿಗೆ ಮುಖ್ಯಮಂತ್ರಿ | Siddaramaiah
    ರಾಜಕೀಯ

    ಸಿದ್ದರಾಮಯ್ಯ ಪೂರ್ಣ ಅವಧಿಗೆ ಮುಖ್ಯಮಂತ್ರಿ | Siddaramaiah

    vartha chakraBy vartha chakraSeptember 16, 20236 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಸೆ.16- ರಾಜ್ಯದ ಮುಖ್ಯಮಂತ್ರಿ ಹುದ್ದೆಯ ಅವಧಿ ವಿಚಾರ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಈ ವಿಷಯವಾಗಿ ಯಾರೂ ಕೂಡ ಬಹಿರಂಗವಾಗಿ ಮಾತನಾಡಬಾರದು ಎಂದು ಹೈಕಮಾಂಡ್ ತಾಕೀತು ಮಾಡಿದ್ದರೂ ಇದನ್ನು ರಾಜ್ಯ ಕಾಂಗ್ರೆಸ್ ನಾಯಕರು ಪರಿಗಣನೆಗೆ ತೆಗೆದುಕೊಂಡಿಲ್ಲ.
    ಈ ವಿಷಯವಾಗಿ ಸಹಕಾರ ಸಚಿವ ಕೆ.ಎನ್.ರಾಜಣ್ಣ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು,ಸಿದ್ದರಾಮಯ್ಯ (Siddaramaiah) ಅವರೇ ಪೂರ್ಣಾವಧಿ ಮುಖ್ಯಮಂತ್ರಿ ಯಾಗಿರುತ್ತಾರೆ ಎಂದು ತಿಳಿಸಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು,ಹೈಕಮಾಂಡ್ ಹಂತದಲ್ಲಿ 50-50 ಅನುಪಾತದಲ್ಲಿ ಅಧಿಕಾರ ಹಂಚಿಕೆಯಾಗಿದೆ ಎಂದು ಯಾರೂ ಹೇಳಿಲ್ಲ. ದೆಹಲಿಯಲ್ಲಿ ನಡೆದ ಸಭೆಗಳಲ್ಲಿ ನಡೆದ ಚರ್ಚೆಯ ಮಾಹಿತಿಗಳು ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರಿಗೆ ಮಾತ್ರ ಗೊತ್ತು. ಈವರೆಗೂ ಅವರು ಎಲ್ಲಿಯೂ ಈ ಬಗ್ಗೆ ಮಾತನಾಡಿಲ್ಲ ಎಂದರು.
    ಸಿದ್ದರಾಮಯ್ಯನವರು (Siddaramaiah) ಪೂರ್ಣಾವಧಿಯ ಮುಖ್ಯಮಂತ್ರಿಯಾಗಿರಬೇಕು ಎಂಬುದು ನನ್ನೊಬ್ಬನದೇ ಅಲ್ಲ, ಕಾಂಗ್ರೆಸ್‌ನ ಬಹುತೇಕರ ಅಭಿಪ್ರಾಯ ನಮ್ಮ ಅಭಿಪ್ರಾಯಗಳನ್ನು ಹೈಕಮಾಂಡ್ ಗೆ ಮನವರಿಕೆ ಮಾಡಿಕೊಡುತ್ತೇವೆ ಎಂದು ಹೇಳಿದ ಅವರು ಮುಖ್ಯಮಂತ್ರಿ ಹುದ್ದೆಗೆ ಅವಧಿ ನಿಗದಿಯಾಗಿದೆ ಎಂಬುದು ಈವರೆಗೂ ಯಾರೂ ಅಧಿಕೃತವಾಗಿ ತಿಳಿಸಿಲ್ಲ ಎಂದು ಹೇಳಿದರು.

    ಡಿ.ಕೆ.ಶಿವಕುಮಾರ್ ಅವರು ಪಕ್ಷದ ಅಧ್ಯಕ್ಷರಾಗಿ ಉತ್ತಮ ಸಂಘಟನೆ ಮಾಡುತ್ತಿದ್ದಾರೆ. ಅವರ ಬಗ್ಗೆ ನಾನೂ ಕೂಡ ಹಲವು ಬಾರಿ ಮೆಚ್ಚುಗೆಯ ಮಾತುಗಳನ್ನಾಡಿದ್ದೇನೆ. ಕಾಂಗ್ರೆಸ್ ಪಕ್ಷ ಮತ್ತಷ್ಟು ಉಪಮುಖ್ಯಮಂತ್ರಿಗಳನ್ನಾಗಿ ಮಾಡಬೇಕು ಎಂಬ ತಮ್ಮ ಹೇಳಿಕೆ ಡಿ.ಕೆ.ಶಿವಕುಮಾರ್ ಸೇರಿದಂತೆ ಯಾರ ವಿರುದ್ಧವೂ ಅಲ್ಲ. ಅವರು ಬೇಸರಗೊಳ್ಳುವ ಅಗತ್ಯವೂ ಇಲ್ಲ ಎಂದು ಸ್ಪಷ್ಟಪಡಿಸಿದರು ನಾನು ಉಪಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯಲ್ಲ. ಆದರೆ ಬಹಳಷ್ಟು ಮಂದಿ ಈ ವಿಷಯವಾಗಿ ತಮ್ಮೊಂದಿಗೆ ಚರ್ಚೆ ಮಾಡಿದ್ದಾರೆ. ಎಲ್ಲರ ಜೊತೆಗೂ ಸೇರಿ ಮುಂದಿನ ದಿನಗಳಲ್ಲಿ ಈ ಬಗ್ಗೆ ಹೈಕಮಾಂಡ್ ನ ಗಮನ ಸೆಳೆಯುವುದಾಗಿ ತಿಳಿಸಿದರು.
    ಲೋಕಸಭೆಯ Electionಗೆ ಸಂಬಂಧಪಟ್ಟಂತೆ ಕಾಂಗ್ರೆಸ್ ತಯಾರಿಗಳನ್ನು ನಡೆಸಿದೆ. ರಾಜಕಾರಣ ನಿರಂತರವಾಗಿ ಚಲನಶೀಲತೆ ಹೊಂದಿದೆ. ಇಲ್ಲಿ ಮೈತ್ರಿ ನಡೆಯುವುದು ಸಾಮಾನ್ಯ. ಬೇರೆಯಾಗುವುದೂ ಕೂಡ ಹೊಸದಲ್ಲ ಎಂದು ಹೇಳಿದರು.

    ಜೆಡಿಎಸ್, ಬಿಜೆಪಿ ಮೈತ್ರಿಯ ಬಗ್ಗೆ ಅವರ ಪಕ್ಷಗಳಲ್ಲೇ ನಿರ್ಧಾರ ತೆಗೆದುಕೊಳ್ಳುತ್ತಾರೆ. ಅದರಲ್ಲಿ ನಾವು ಪ್ರತಿಕ್ರಿಯಿಸುವುದು ಅನಗತ್ಯ. ಈವರೆಗಿನ ಮಾಹಿತಿ ಪ್ರಕಾರ, ಬಿಜೆಪಿಯ ಕೆಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಯಡಿಯೂರಪ್ಪನವರು ಮೈತ್ರಿ ಇನ್ನೂ ಪೂರ್ತಿಗೊಂಡಿಲ್ಲ ಎಂದಿದ್ದಾರೆ. ರಾಜಕಾರಣದಲ್ಲಿ ಕೆಲವರು ಸಿದ್ಧಾಂತಗಳನ್ನು ಒಪ್ಪಿಕೊಳ್ಳುತ್ತಾರೆ, ಇನ್ನೂ ಕೆಲವರು ವಿರೋಧ ಮಾಡುತ್ತಾರೆ. ಅದಕ್ಕೆ ಏನೂ ಮಾಡಲಾಗುವುದಿಲ್ಲ ಎಂದರು.
    ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುವುದು ನಮ್ಮ ಆದ್ಯತೆ. ಅದಕ್ಕಾಗಿ ಎಲ್ಲರ ಜೊತೆಗೂ ಚರ್ಚೆಗಳು ನಡೆಯುತ್ತಿವೆ. ಅದನ್ನು ಆಧರಿಸಿ ಪಕ್ಷದ ವರಿಷ್ಠರಿಗೆ ಸಲಹೆ ನೀಡುತ್ತೇವೆ ಎಂದರು.

    ಬಿಜೆಪಿಯ ಸಂಸದರು ಕಾಂಗ್ರೆಸ್ ಸೇರುತ್ತಾರೆ ಎಂಬುದರ ಬಗ್ಗೆ ತಮಗೆ ಮಾಹಿತಿ ಇಲ್ಲ. ಅವರು ಚುನಾವಣೆ ರಾಜಕೀಯದಿಂದ ನಿವೃತ್ತರಾಗುತ್ತೇವೆ ಎಂಬುದನ್ನು ಕೇಳಿದ್ದೇನೆ. ಹೈಕಮಾಂಡ್ ಕೆಲವು ನಿರ್ಧಾರಗಳನ್ನು ಕೈಗೊಂಡಾಗ ಕೆಳಹಂತದಲ್ಲಿ ವ್ಯತ್ಯಾಸಗಳಾಗುವುದು ಸಾಮಾನ್ಯ. ಅಂತಹ ಸಂದರ್ಭದಲ್ಲಿ ಅಭಿಪ್ರಾಯಗಳು ಭಿನ್ನವಾಗಿರುವುದು ಹೊಸದಲ್ಲ ಎಂದು ಹೇಳಿದರು.
    ಬಿಜೆಪಿ ಶಾಸಕರಾದ ಎಸ್.ಟಿ.ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ಅವರು ಕಾಂಗ್ರೆಸ್ ಸೇರುತ್ತಾರೆ ಎಂಬುದು ಖಚಿತವಾಗಿದೆ. ನಮ್ಮ ಪಕ್ಷದ ಶಾಸಕ ಭೀಮಣ್ಣ ಅವರು ಶಿವರಾಂ ಹೆಬ್ಬಾರ್ ಕಾಂಗ್ರೆಸ್ ಸೇರುವುದು ಖಚಿತ ಎಂದಿದ್ದಾರೆ. ಈ ರೀತಿಯ ಬೆಳವಣಿಗೆಗಳು ಸಾಮಾನ್ಯ ಎಂದರು. ಬಿಜೆಪಿಯ ಮಾಜಿ ಸಚಿವ ವಿ.ಸೋಮಣ್ಣ ಕಾಂಗ್ರೆಸ್ಗೆ ಬರುತ್ತಾರೆ. ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬುದು ಗಾಳಿಮಾತಷ್ಟೆ. ಅಂತಹ ಯಾವ ಚರ್ಚೆಗಳೂ ನಡೆದಿಲ್ಲ ಎಂದು ತಿಳಿಸಿದರು.

    Bangalore m News Politics siddaramaiah Trending ಕಾಂಗ್ರೆಸ್ Election ತುಮಕೂರು ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಬರ ಪರಿಹಾರಕ್ಕೆ ಕೇಂದ್ರದ ಅಡ್ಡಿ | Drought
    Next Article ವಿದ್ಯುತ್ ಕೊರತೆ ನಿವಾರಣೆಗೆ ಪರ್ಯಾಯ ಮೂಲ ಅನಿವಾರ್ಯ
    vartha chakra
    • Website

    Related Posts

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    June 20, 2025

    6 Comments

    1. uj4fy on June 8, 2025 12:47 pm

      how to get generic clomid pill where to get clomid without prescription clomiphene medication cheap clomid without insurance where to buy clomiphene no prescription buy clomid no prescription how can i get cheap clomid pill

      Reply
    2. where to buy real viagra cialis online on June 9, 2025 1:45 am

      More delight pieces like this would make the интернет better.

      Reply
    3. doxycycline and flagyl together on June 10, 2025 7:42 pm

      This website really has all of the tidings and facts I needed adjacent to this case and didn’t comprehend who to ask.

      Reply
    4. h4y2d on June 18, 2025 2:22 am

      propranolol cost – where to buy methotrexate without a prescription methotrexate for sale online

      Reply
    5. d6gt2 on June 20, 2025 11:39 pm

      cheap amoxicillin for sale – combivent 100mcg pills buy combivent 100mcg online cheap

      Reply
    6. k4lrt on June 23, 2025 3:20 am

      azithromycin 500mg us – order tinidazole sale bystolic 20mg canada

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • xv546 on ಬಸವಣ್ಣ ರಾಜ್ಯದ ಸಾಂಸ್ಕೃತಿಕ ರಾಯಭಾರಿ | Basavanna
    • Chriswot on ಸಿದ್ದರಾಮಯ್ಯ ಕಾಂಗ್ರೆಸ್ಸಿನಿಂದ ಉಚ್ಚಾಟನೆ ಸಾಧ್ಯವೇ..!
    • AlbertDuabe on ಅರಣ್ಯ ಇಲಾಖೆಗೆ ಸಾವಿರಾರು ಬಾಕಿ ಉಳಿಸಿಕೊಂಡ ಪ್ರತಿಷ್ಠಿತ ಕಂಪನಿಗಳು | Forest Dept
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe