Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೇಲಿಯೇ ಎದ್ದು ಹೊಲ ಮೇಯ್ದಂತೆ.. ಶಿಕ್ಷಣ ಇಲಾಖೆ ಕಚೇರಿಯ ಆವರಣದಲ್ಲಿ ಧೂಮಪಾನ, ತಂಬಾಕು ಉತ್ಪನ್ನ ಮಾರಾಟ..
    ಸುದ್ದಿ

    ಬೇಲಿಯೇ ಎದ್ದು ಹೊಲ ಮೇಯ್ದಂತೆ.. ಶಿಕ್ಷಣ ಇಲಾಖೆ ಕಚೇರಿಯ ಆವರಣದಲ್ಲಿ ಧೂಮಪಾನ, ತಂಬಾಕು ಉತ್ಪನ್ನ ಮಾರಾಟ..

    vartha chakraBy vartha chakraAugust 20, 2022Updated:August 20, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು : ನಗರದ ಕೆ.ಆರ್. ವೃತ್ತದ ಬಳಿ ಇರುವ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಖಜಾನೆ ಇಲಾಖೆಯ ಆಯುಕ್ತರ ಕಚೇರಿ ಆವರಣದಲ್ಲಿ ‘ತಂಬಾಕು ಉತ್ಪನ್ನ ಸೇವನೆ ಆರೋಗ್ಯಕ್ಕೆ ಅಪಾಯಕರ’ ಎಂಬ ಸಂದೇಶಗಳೇನೋ ಕಾಣಿಸುತ್ತವೆ. ಆದರೆ, ಪ್ರವೇಶದ್ವಾರದ ಬಳಿ ತಂಬಾಕು ಉತ್ಪನ್ನಗಳ ಮಾರಾಟ ಹಾಗೂ ಧೂಮಪಾನ ಎಗ್ಗಿಲ್ಲದೆ ರಾಜಾರೋಷವಾಗಿಯೇ ನಡೆಯುತ್ತಿದೆ. 
    ಸಿಗರೇಟು ಮತ್ತು ಇತರ ತಂಬಾಕು ಉತ್ಪನ್ನ ಕಾಯಿದೆ-2003ರ (ಕೋಟ್ಪಾ) ಪ್ರಕಾರ ಸಾರ್ವಜನಿಕ ಸ್ಥಳ ಹಾಗೂ ಕಚೇರಿಗಳಲ್ಲಿ ಧೂಮಪಾನ ಕಾನೂನು ಬಾಹಿರ.ಅದರಲ್ಲೂ ಶಿಕ್ಷಣ ಸಂಸ್ಥೆಗಳು, ಶಾಲಾ-ಕಾಲೇಜು ಸಮೀಪ ಇವುಗಳ ಮಾರಾಟ ಮತ್ತು ಸೇವನೆ ಸಂಪೂರ್ಣ ನಿಷಿದ್ಧ.
    ಆದರೆ ಈ ಕಾಯಿದೆಗೆ ಅಪಚಾರ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿ ಮುಂಭಾಗದಲ್ಲೇ ನಡೆಯುತ್ತಿದೆ.ಇನ್ನೂ ಈ ಕಚೇರಿ ಮುಂಭಾಗದಲ್ಲಿ ಸರ್ಕಾರಿ ವಿಜ್ಞಾನ ಕಾಲೇಜು ಕೂಡಾ ಇದೆ.ಆದರೆ ಕಾನೂನು ಪಾಲನೆ ಮಾಡುವವರು, ಉಲ್ಲಂಘನೆ ವಿರುದ್ಧ ಕ್ರಮ ಕೈಗೊಳ್ಳುವವರೂ ಯಾರೂ ಇಲ್ಲದಂತಾಗಿದೆ.
    ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಪ್ರತ್ಯೇಕ ಪರವಾನಗಿ ಪಡೆಯಬೇಕಾಗುತ್ತದೆ. ಈ ನಿಯಮವನ್ನು ಉಲ್ಲಂಘಿಸಿದಲ್ಲಿ ದಂಡ ಹಾಕಿ, ಕಾನೂನಿನ ಅಡಿಯಲ್ಲಿ ಶಿಕ್ಷೆ ವಿಧಿಸಲಾಗುತ್ತದೆ. ಇಲಾಖೆಯ ಅಧಿಕಾರಿಗಳು ಈ ಬಗ್ಗೆ ರಾಜ್ಯದಾದ್ಯಂತ ಅರಿವು ಮೂಡಿಸುತ್ತಿದ್ದಾರೆ. ಆದರೆ, ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿ ಆವರಣದಲ್ಲಿಯೇ ಸಿಗರೇಟ್ ಮತ್ತಿತರ ತಂಬಾಕು ಉತ್ಪನ್ನ ಮಾರಾಟವಾಗುತ್ತಿದ್ದರೂ ಅಧಿಕಾರಿಗಳು ಕಣ್ಣು  ಮುಚ್ಚಿಕೊಂಡಿದ್ದಾರೆ.  
    ತಂಬಾಕು ಉತ್ಪನ್ನಗಳಿಂದ ಉಂಟಾಗುವ ಹಾನಿ ಕುರಿತು ಶಿಕ್ಷಣ ಇಲಾಖೆ ಕಚೇರಿಯ ಪ್ರವೇಶದ್ವಾರ ಹಾಗು ಕಟ್ಟಡದ ಮುಂಭಾಗದಲ್ಲಿ ಭಾರಿ ಗಾತ್ರದ ಮಾಹಿತಿ ಫಲಕ ಹಾಕಲಾಗಿದೆ. ‘ಆರೋಗ್ಯ ಆಯ್ದುಕೊಳ್ಳಿ ತಂಬಾಕನ್ನಲ್ಲ’, ‘ತಂಬಾಕು ನಿಮ್ಮ ಉಸಿರನ್ನು ಕಸಿಯಲು ಬಿಡಬೇಡಿ’ ಎಂಬ ಸಂದೇಶವನ್ನೂ ಅದರಲ್ಲಿ ಕಾಣಬಹುದಾಗಿದೆ.ಆದರೆ ಕಚೇರಿಯ ಆವರಣದಲ್ಲಿ ನಡೆಯುವುದೇ ಬೇರೆ.
    ಕಚೇರಿ ಆವರಣದಲ್ಲಿರುವ ಕಾಫಿ-ಟೀ ಮಾರಾಟದ ಗೂಡಂಗಡಿಯಂತಿರುವ ಅಂಗಡಿಯಲ್ಲಿ ಸಿಗರೇಟ್ ಮಾರಾಟ ನಡೆಯುತ್ತಿದೆ.ಖರೀದಿಸಿದವರು ಅಲ್ಲೇ ಅದನ್ನು ಸೇವನೆ ಮಾಡುತ್ತಾರೆ ಪಕ್ಕದಲ್ಲಿ ಬಿಎಂಟಿಸಿ ಬಸ್ ನಿಲ್ದಾಣ ಕೂಡಾ ಇದ್ದು ಬಸ್ ಗಾಗಿ ಕಾಯುವವರು ಸಿಗರೇಟ್ ಹೊಗೆಯ ಕಾಟ ಅನುಭವಿಸುವುದು ಅನಿವಾರ್ಯ.

    News ಆರೋಗ್ಯ ಕಾನೂನು ಕಾಲೇಜು ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಯುವತಿಯ ಪೈಶಾಚಿಕ ಕೃತ್ಯ.
    Next Article ಪಾರ್ಟಿಯಲ್ಲಿ ಕುಣಿದು ವಿರೋಧ ಪಕ್ಷದ ಕೆಂಗಣ್ಣಿಗೆ ಗುರಿಯಾದ ಪ್ರಧಾನಿ!!
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • imqtb on ಬೆಂಗಳೂರನ್ನು ಮರತೇಬಿಟ್ಟರು! Bengaluru
    • obq89 on ದಾಸನಿಗೆ ಕಪಿಲ್ ಸಿಬಲ್ ವಾದ
    • 07uvy on ಕಾಂಗ್ರೆಸ್ ಸರ್ಕಾರ ಇರೋವರೆಗೂ ಗ್ಯಾರಂಟಿ ನಿಲ್ಲೋಲ್ಲ | Congress Guarantees
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe