Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸೋಮಣ್ಣ ಅವರಿಗೆ ರಾಜ್ಯಸಭೆ ಸದಸ್ಯತ್ವದ ಗೌರವ? | Somanna
    Trending

    ಸೋಮಣ್ಣ ಅವರಿಗೆ ರಾಜ್ಯಸಭೆ ಸದಸ್ಯತ್ವದ ಗೌರವ? | Somanna

    vartha chakraBy vartha chakraJanuary 2, 20241 Comment3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.ಜ,2 – ವಿಧಾನಸಭೆಯ ಪ್ರತಿಪಕ್ಷ ನಾಯಕ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷರ ನೇಮಕವಾಗುತ್ತಿದ್ದಂತೆ ನಾಯಕತ್ವದ ವಿರುದ್ಧ ಬಹಿರಂಗವಾಗಿಯೇ ತಮ್ಮ ಅಸಮಾಧಾನ ಹೊರಹಾಕುವ ಮೂಲಕ ಬಂಡಾಯ ಸಾರಿದ ಮಾಜಿ ಸಚಿವ ಹಾಗೂ ಹಿರಿಯ ನಾಯಕ ವಿ. ಸೋಮಣ್ಣ (Somanna) ಅವರನ್ನು ಸಮಾಧಾನಪಡಿಸಲು ಹೈಕಮಾಂಡ್ ಮುಂದಾಗಿದೆ.
    ಬಿಜೆಪಿ ನಾಯಕತ್ವದ ವಿರುದ್ಧ ಬೇಸರಗೊಂಡು ಸೋಮಣ್ಣ ಅವರು ಪಕ್ಷ ತೊರೆಯಲು ಸಜ್ಜಾಗಿದ್ದಾರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂಬ ವರದಿಗಳ ಬೆನ್ನೆಲ್ಲೇ ಹೈಕಮಾಂಡ್ ಮಧ್ಯಪ್ರವೇಶಿಸಿದೆ.

    ಅಷ್ಟೇ ಅಲ್ಲ ಸೋಮಣ್ಣ (Somanna) ಅವರಿಗೆ ಉನ್ನತ ಹುದ್ದೆ ನೀಡುವ ಮೂಲಕ ಅವರನ್ನು ಸಮಾಧಾನಪಡಿಸಲು ತೀರ್ಮಾನಿಸಿದೆ. ಈ ಕುರಿತಂತೆ ತಮ್ಮದೇ ಮೂಲಗಳಿಂದ ಹೈಕಮಾಂಡ್ ವರದಿಯೊಂದನ್ನು ಪಡೆದಿದೆ. ಅದರಲ್ಲಿ
    ಸೋಮಣ್ಣ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ ರಾಗಿದ್ದಾರೆ ಅವರು ಪಕ್ಷ ತೊರೆದು ಹೋದರೆ ದೊಡ್ಡ ಹಾನಿ ಉಂಟಾಗಲಿದೆ ಎಂದು ವಿವರಿಸಲಾಗಿದೆ. ಅಷ್ಟೇ ಅಲ್ಲ ಅವರು ಕಾಂಗ್ರೆಸ್ ಸೇರಿದರೆ ಬಿಜೆಪಿ ಇನ್ನಷ್ಟು ಹಾನಿಯಾಗಲಿದೆ ಎಂಬುದಾಗಿ ವಿವರಿಸಿ ಹಲವು ಅಂಕಿ ಅಂಶಗಳನ್ನು ನೀಡಲಾಗಿದೆ ಎಂದು ಗೊತ್ತಾಗಿದೆ.
    ಈ ವರದಿ ಅವಲೋಕಿಸಿದ ವರಿಷ್ಠರು ಈ ಕುರಿತಂತೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರೊಂದಿಗೆ ಮಾತುಕತೆ ನಡೆಸಿದೆ.

    ಈ ಮಾತುಕತೆ ವೇಳೆ ಯಡಿಯೂರಪ್ಪ ಅವರು ಮಾಜಿ ಸಚಿವ ಸೋಮಣ್ಣ ಅವರು ಪಕ್ಷ ಬಿಟ್ಟರೆ ಕೊಂಚಮಟ್ಟಿಗೆ ಹಿನ್ನಡೆ ಆಗಲಿದೆ. ಅವರು ತಮ್ಮ ಸಮುದಾಯದ ಪ್ರಭಾವಿ ನಾಯಕರಾಗಿದ್ದು ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ತಾವು ಕೂಡ ಪ್ರಯತ್ನ ನಡೆಸಿದ್ದು ಅದು ಇಲ್ಲಿಯವರೆಗೆ ಫಲಪ್ರದವಾಗಿಲ್ಲ ತಾವು ಅವರೊಂದಿಗೆ ಮಾತುಕತೆ ಮುಂದುವರಿಸುತ್ತಿದ್ದೇನೆ ಎಂದು ವರಿಷ್ಠರಿಗೆ ವಿವರಿಸಿದ ಅವರು ಹೈಕಮಾಂಡ್ ಮಧ್ಯಪ್ರವೇಶಸಿ ಅವರನ್ನು ಸಮಾಧಾನಪಡಿಸಿದರೆ ಉತ್ತಮ. ಇದರಿಂದ ವಿಜಯೇಂದ್ರ‌ ಕೈ ಬಲಪಡಿಸಿದಂತಾಗಲಿದ್ದು,ಗೊಂದಲ ದೂರಾಗಲಿದೆ ಇದರಿಂದ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಅನುಕೂಲವಾಗಲಿದೆ ಎಂದು ಹೇಳಿರುವುದಾಗಿ ಉನ್ನತ ಮೂಲಗಳು ತಿಳಿಸಿವೆ.
    ಯಡಿಯೂರಪ್ಪ ಅವರು ಈ ರೀತಿ ತಮ್ಮ ಅಭಿಪ್ರಾಯವನ್ನು ತಿಳಿಸುತ್ತಿದ್ದಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ದಾ ಮತ್ತು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ದೆಹಲಿಗೆ ಕರೆಯಿಸಿಕೊಂಡು ಸೋಮಣ್ಣ ಅವರಿಗೆ ಸ್ಥಾನಮಾನ ನೀಡುವ ಮೂಲಕ ಅವರನ್ನು ಪಕ್ಷದಲ್ಲೇ ಉಳಿಸಿಕೊಳ್ಳುವ ಕುಳಿತಂತೆ ಚರ್ಚೆ ನಡೆಸಿದ್ದಾರೆ.

    ಚರ್ಚೆಯ ವೇಳೆ ವಿಜಯೇಂದ್ರ ಅವರು ಸೋಮಣ್ಣ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮರಾಜನಗರ ಮತ್ತು ಮೈಸೂರಿನ ವರುಣ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದರು ಪಕ್ಷದ ಹೈಕಮಾಂಡ್ ಸೂಚನೆಯ ಮೇರೆಗೆ ಅವರು ಕ್ಷೇತ್ರ ಬದಲಾಯಿಸಿದ್ದಾರೆ ಇಲ್ಲಿ ಅವರಿಗೆ ಹಿನ್ನಡೆಯಾಗಿದೆ ಅದಕ್ಕೆ ತಾವೇ ಕಾರಣ ಎಂಬುದಾಗಿ ಅವರು ಭಾವಿಸಿದ್ದು ನನ್ನ ವಿರುದ್ಧ ದ್ವೇಷ ಕಾರುತ್ತಿದ್ದಾರೆ ನಾವ್ಯಾರೂ ಅವರ ಸೋಲಿಗೆ ಕಾರಣರಲ್ಲ ಅವರು ಪಕ್ಷದ ಹಿರಿಯನಾಯಕ.ಅವರು ಬಿಜೆಪಿಯಲ್ಲಿ ಮುಂದುವರೆಯುವುದು ಉತ್ತಮ ಎಂದು ತಿಳಿಸಿದರೆಂದು ಎಂದು ಉನ್ನತ ಮೂಲಗಳು ಸ್ಪಷ್ಟಪಡಿಸಿವೆ ಈ ವೇಳೆ ಅರುಣ್ ಸಿಂಗ್ ಅವರು ಸೋಮಣ್ಣ ಅವರನ್ನು ತುಮಕೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಸಿದರೆ ಹೇಗಿರಲಿದೆ ಎಂಬ ಕುರಿತಾಗಿ ವಿಜಯೇಂದ್ರ ಅವರ ಅಭಿಪ್ರಾಯ ಕೇಳಿದ್ದಾರೆ.ಇದಕ್ಕೆ ತಮ್ಮದೇ ವಾದ ಮಂಡಿಸಿದ ವಿಜಯೇಂದ್ರ,ತುಮಕೂರಿನಿಂದ ಬಿಜೆಪಿ ಅಭ್ಯರ್ಥಿಯಾಗಿ ಸೋಮಣ್ಣ ಅವರು ಕಣಕ್ಕಿಳಿಯಲು ತಮ್ಮ ತಕರಾರು ಎನೂ ಇಲ್ಲ ಆದರೆ ಅವರ ವಯಸ್ಸನ್ನು ಪರಿಗಣಿಸಬೇಕು ಹೀಗಾಗಿ ಅವರನ್ನು ಚುನಾವಣೆಗೆ ಸ್ಪರ್ಧಿಸಲು ಹೇಳುವುದಕ್ಕಿಂತ ಅವರಿಗೆ ಪಕ್ಷದಲ್ಲಿ ಉನ್ನತ ಹುದ್ದೆ ನೀಡಿ ಅಭ್ಯರ್ಥಿಗಳ ಪರ ಕೆಲಸ ಮಾಡಲು ಸೂಚಿಸಬಹುದಾಗಿದೆ ಎಂದು ಹೇಳಿದರು ಎಂದು ಉನ್ನತ ಮೂಲಗಳು ತಿಳಿಸಿವೆ. ಇದಾದ ನಂತರ ಅರುಣ್ ಸಿಂಗ್ ಅವರು ಸೋಮಣ್ಣ ಅವರು ರಾಜ್ಯ ಬಿಜೆಪಿಯಲ್ಲಿ ಮುಂದುವರೆಯುವುದರಿಂದ ಆಗುವ ಅನುಕೂಲ ಅನಾನುಕೂಲ ಮತ್ತು ಪಕ್ಷ ತೊರೆಯುವುದರಿಂದ ಉಂಟಾಗುವ ಪರಿಣಾಮಗಳ ಕುರಿತಾಗಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ದಾ ಅವರಿಗೆ ವರದಿ ನೀಡಿದ್ದಾರೆ.

    ಈ ವರದಿಯನ್ನು ಪರಿಶೀಲನೆ ಮಾಡಿಸ ನಂತರ ನಡ್ದಾ ಅವರು ಸೋಮಣ್ಣ ಅವರನ್ನು ಸಂಪರ್ಕಿಸಿ ತಮ್ಮ ಎಲ್ಲಾ ಅಹವಾಲು ಕೇಳಲು ಪಕ್ಷದ ಹೈಕಮಾಂಡ್ ಸಿದ್ಧವಿದೆ ಯಾವುದೇ ಕಾರಣಕ್ಕೂ ತಾವು ದುಡುಕಿನ ನಿರ್ಧಾರ ಕೈಗೊಳ್ಳಬಾರದು ಎಂದು ಸಲಹೆ ಮಾಡಿದರು ಎಂದು ಗೊತ್ತಾಗಿದೆ
    ನಿಮ್ಮ ಸಮಸ್ಯೆಗಳ ಕುರಿತಂತೆ ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರೊಂದಿಗೆ ಮಾತುಕತೆ ನಡೆಸಲಾಗಿದ್ದು ಎಲ್ಲವೂ ಬಗೆಹರಿಯಲಿದೆ ತಮ್ಮನ್ನು ಪ ಪಕ್ಷ ಎಂದಿಗೂ ಕಡೆಗಣಿಸಿಲ್ಲ.ಯಾವುದೇ ಕಾರಣಕ್ಕೂ ಬೇಸರ ಮಾಡಿಕೊಳ್ಳಬಾರದು ನಿಮ್ಮೊಂದಿಗೆ ತಾವು ಮುಕ್ತವಾಗಿ ಮಾತನಾಡಲು ಸಿದ್ದರಿದ್ದು,ದೆಹಲಿಗೆ ಬರುವಂತೆ ಆಹ್ವಾನ ನೀಡಿದ್ದಾರೆ.
    ಇದನ್ನು ನಯವಾಗಿ ನಿರಾಕರಿಸಿದ ಸೋಮಣ್ಣ ಪಕ್ಷ ಹೇಳಿದಂತೆ ನಡೆದುಕೊಂಡ ತಮಗೆ ದೊಡ್ಡ ಪ್ರಮಾಣದ ಹಿನ್ನಡೆ ಉಂಟಾಗಿದೆ.ಅದನ್ನು ಸರಿ ಪಡಿಸುವ ಯಾವುದೇ ಪ್ರಯತ್ನವನ್ನು ನಾಯಕತ್ವ ಮಾಡಿಲ್ಲ.ಈಗಲೂ ಮಾತುಕತೆ, ಸಂಧಾನ ಎಂಬ ವಿಷಯದಲ್ಲಿ ಕಾಲಹರಣ ತಮಗಿಷ್ಟವಿಲ್ಲ ಎಂದು ನಿಷ್ಠೂರವಾಗಿ ಹೇಳಿದರೆಂದು ಅವರ ಆಪ್ತ ಮೂಲಗಳು ತಿಳಿಸಿವೆ.
    ಇದಾದ ನಂತರ ಅವರನ್ನು ಸಮಾಧಾನ ಪಡಿಸಿದ ನಡ್ಡಾ ಅವರು ತಮಗೆ ಪಕ್ಷದಲ್ಲಿ ಸೂಕ್ತ ಹುದ್ದೆಯ ಜೊತೆಗೆ ರಾಜ್ಯಸಭೆಯ ಸದಸ್ಯತ್ವ ನೀಡಲಿದೆ ಹೀಗಾಗಿ ತಾವು ಪಕ್ಷ ತೊರೆಯುವ ನಿರ್ಧಾರ ಕೈ ಬಿಟ್ಟು ಬಿಜೆಪಿಯಲ್ಲಿ ಮುಂದುವರಿಯಬೇಕು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಕರ್ನಾಟಕದಿಂದ ಬಿಜೆಪಿ ಸಂಸದರು ಆಯ್ಕೆ ಮಾಡುವ ರೀತಿಯಲ್ಲಿ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ‌.
    ಇದಾದ ನಂತರ ಸೋಮಣ್ಣ ಅವರು ತಮ್ಮ ನಿಲುವು ಬದಲಾಯಿಸಿದ್ದಾರೆ.ಇದೀಗ ಜನವರಿ 9ರಂದು ದೆಹಲಿಗೆ ತೆರಳುತ್ತಿದ್ದು ಪಕ್ಷದ ಅಧ್ಯಕ್ಷ ನಡ್ಡಾ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮತ್ತು ರಾಷ್ಟ್ರೀಯ ಸಂಘಟನಾ ಪ್ರಯಾಣ ಕಾರ್ಯದರ್ಶಿ ಸಂತೋಷ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ ಅಲ್ಲಿ ಅವರ ರಾಜ್ಯಸಭಾ ಸದಸ್ಯತ್ವದ ಕುರಿತುವಂತೆ ಸ್ಪಷ್ಟ ಚಿತ್ರಣ ಹೊರಬೀಳಲಿದೆ ಎಂದು ಗೊತ್ತಾಗಿದೆ.

     

    ALSO READ – Latest Kannada News | Latest News In Kannada

    ಯತ್ನಾಳ್, ಸೋಮಣ್ಣನಿಗೆ ಹೈಕಮಾಂಡ್ ಬುಲಾವ್ | Yatnal

    Verbattle
    Verbattle
    Verbattle
    #kannada art ED kannada news m News somanna Varthachakra Yatnal ಕಾಂಗ್ರೆಸ್ ಕಾರು Election ತುಮಕೂರು
    Share. Facebook Twitter Pinterest LinkedIn Tumblr Email WhatsApp
    Previous Articleಸಿದ್ದೇಶ್ವರ ಶ್ರೀ ಗಳನ್ನು ನೆನೆದ ಈಶ್ವರ ಖಂಡ್ರೆ | Eshwar Khandre
    Next Article 400 Case ವಾಪಸ್ ಗೆ ಸರ್ಕಾರದ ಸಿದ್ಧತೆ | Farmers Protest
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    March 29, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    March 27, 2026

    ವಾಹನ ಸವಾರರೇ ಎಚ್ಚರ!

    March 27, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jamesnab on ಹೀಗೂ ಸುದ್ದಿಯಾದ ನಳಪಾಡ್.
    • Eigxld on BJP ಉನ್ನತ ಸಮಿತಿಗಳ ರಚನೆ-ಹುಸಿಯಾದ ನಿರೀಕ್ಷೆ
    • JamesMes on ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    March 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    March 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    March 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.