Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕನ್ನಡದಲ್ಲಿ ಮಾತನಾಡಿ ಜೈರಾಮ್ ರಮೇಶ್
    ರಾಜಕೀಯ

    ಕನ್ನಡದಲ್ಲಿ ಮಾತನಾಡಿ ಜೈರಾಮ್ ರಮೇಶ್

    vartha chakraBy vartha chakraSeptember 1, 2022No Comments2 Mins Read
    Facebook Twitter WhatsApp Pinterest LinkedIn Tumblr Email
    Jai Ram Ramesh
    Share
    Facebook Twitter LinkedIn Pinterest Email WhatsApp

    ಬೆಂಗಳೂರು Sep 1: ಚಿಕ್ಕ ಮಗಳೂರು ಮೂಲದ ಜಯರಾಂ ರಮೇಶ್ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕರಾಗಿರುವ ಇವರು ಸ್ವಪಕ್ಷೀಯರಿಂದಲೇ ಮುಜುಗರಕ್ಕೊಳಗಾದ ಘಟನೆ ನಡೆದಿದೆ
    ರಾಹುಲ್ ಗಾಂಧಿಯವರ ಮಹತ್ವಾಕಾಂಕ್ಷೆಯ ಭಾರತ್ ಐಕ್ಯತಾ ಯಾತ್ರೆ ಹಿನ್ನೆಲೆ ರಾಜ್ಯ ಕಾಂಗ್ರೆಸ್ ಆಯೋಜಿಸಿದ್ದ ಸಭೆಯಲ್ಲಿ ಜೈರಾಮ್​ ರಮೇಶ್ ಅವರ ಭಾಷಣಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದರು ಇದರಿಂದ ಜಯರಾಂ ರಮೇಶ್ ಮುಜಗರಕ್ಕೊಳಗಾದರು.
    ಸಭೆಯನ್ನುದ್ದೇಶಿಸಿ ಇಂಗ್ಲಿಷ್​‌ನಲ್ಲಿ ಭಾಷಣ ಮಾಡುತ್ತಿದ್ದ ಜೈರಾಮ್ ರಮೇಶ್‌ಗೆ ಕನ್ನಡದಲ್ಲಿ ಮಾತಾಡುವಂತೆ ಕಾರ್ಯಕರ್ತರು ಕೂಗಿದರು.ಆ ಕಾರ್ಯಕರ್ತರನ್ನು ಉಳಿದ ನಾಯಕರು ಸಮಾಧಾನ ಮಾಡಿದರು.
    ಮುಜುಗರದಿಂದಲೇ ಇದಕ್ಕೆ ಪ್ರತಿಕ್ರಿಯಿಸಿದ ಅವರು ತಾಂತ್ರಿಕ ಅಂಶಗಳನ್ನು ಇಂಗ್ಲಿಷ್​ನಲ್ಲಿ ಹೇಳುತ್ತೇನೆ. ನಂತರ ಕನ್ನಡದಲ್ಲಿ ಭಾಷಣ ಮುಂದುವರಿಸುತ್ತೇನೆಂದು ಹೇಳಿ ಜಯರಾಂ ರಮೇಶ್​ ಮಾತು ಮುಂದುವರಿಸಿದರು.
    ಪಕ್ಷ‌ ಬಿಟ್ಟು ಹೋಗುವವರು ಹೋಗಲಿ. ಕೆಲವರು ಡಿಪಾರ್ಚರ್ ಲಾಂಜ್​ನಲ್ಲಿ ನಿಂತಿದ್ದಾರೆ. ಹೇಳಿಕೆಗಳನ್ನೂ ಕೊಡುತ್ತಿದ್ದಾರೆ. ಹೋಗುವವರು ಹೋಗಲಿ, ಮಾತನ್ನಾಡುವವರು ಮಾತನಾಡಲಿ. ಯಾವುದೇ ಕಾರಣಕ್ಕೂ ಭಾರತ್ ಜೋಡೋ ಯಾತ್ರೆ ನಿಲ್ಲುವುದಿಲ್ಲ ಎನ್ನುತ್ತಾ ಗುಲಾಂ ನಬಿ ಆಜಾದ್​ರ ನಡೆಗೆ ಟಾಂಗ್​ ಕೊಟ್ಟರು.
    ಇದು ಮನ್ ಕಿ‌ಬಾತ್ ಅಲ್ಲ. ಇದು ಜನತಾ ಕಿ ಚಿಂತನ್ ಯಾತ್ರೆ. ಭಾರತ್ ಜೊಡೋದಲ್ಲಿ ‌ಯಾವುದೇ ಭಾಷಣ ಇಲ್ಲ. ಇದೊಂದು ಸೈಲೆಂಟ್ ಪಾದಯಾತ್ರೆ. ಪ್ರಧಾನಿಯವರ ವಿರುದ್ಧ ಘೋಷಣೆ ಕೂಗುವುದಲ್ಲ, ಜನರ ಸಮಸ್ಯೆಗಳನ್ನ ಅರಿಯುವ ಕಾರ್ಯಕ್ರಮ. ಪಾದಯಾತ್ರೆ ವೇಳೆ ಆಶಾ ಕಾರ್ಯಕರ್ತೆಯರು, ನರೇಗಾ ಕೂಲಿ ಕಾರ್ಮಿಕರನ್ನ ಭೇಟಿ ಮಾಡಿ ಅವರ ಸಮಸ್ಯೆಗಳನ್ನ ಆಲಿಸುತ್ತೇವೆ ಎಂದು ಜೈರಾಮ್​ ರಮೇಶ್ ಹೇಳಿದರು.
    ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ, ರಾಹುಲ್ ಗಾಂಧಿಯವರ ಪಾದಯಾತ್ರೆ 21 ದಿನ ರಾಜ್ಯದಲ್ಲಿ ಹಾದು ಹೋಗಲಿದೆ. ಎಲ್ಲ ಶಾಸಕರು, ಸಂಸದರು, ಕಾರ್ಯಕರ್ತರು ಪಾಲ್ಗೊಳ್ಳಬೇಕು. ದೇಶದ ಹಿತದೃಷ್ಟಿಯಿಂದ ಈ ಪಾದಯಾತ್ರೆ ಅನಿವಾರ್ಯ. ಇದು ನಮ್ಮ ಯಾತ್ರೆ, ಯಶಸ್ವಿಗೊಳಿಸೋಣ ಎಂದು ಕರೆ ನೀಡಿದರು.
    ಸೆ.8, 9, 10 ರಂದು 224 ಕ್ಷೇತ್ರದಲ್ಲಿ ಕಾರ್ಯಕರ್ತರ ಸಭೆ ಮಾಡಬೇಕು. ಯಾವ ಕ್ಷೇತ್ರದಿಂದ ಎಷ್ಟೆಷ್ಟು ಜನರನ್ನ ಕಳೆದುಕೊಂಡು ಬರಬೇಕೆಂದು ಅಂದು ತೀರ್ಮಾನ ಮಾಡಬೇಕು. ಯಾರ್ಯಾರು 21 ದಿನ ನಡೆಯುತ್ತೀರಾ ಪಟ್ಟಿ ಕೊಡಬೇಕು. ಇದಕ್ಕಾಗಿ ನೋಂದಣಿ ಮಾಡಬೇಕು. ರಾಹುಲ್ ಗಾಂಧಿಯವರ ಹಿಂದೆ ನೀವು ನಡೆಯಬೇಕು. ಸೆಲ್ಫಿಗೋಸ್ಕರ ಯಾರೂ ಬರಬೇಡಿ, ಇತಿಹಾಸ ಸೃಷ್ಟಿಸಲು ಬರಬೇಕು ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

    ಕಾಂಗ್ರೆಸ್ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಕದ್ದ ಚಿತ್ರ ತೆರೆಗೆ ಸಿದ್ಧ
    Next Article ಕರ್ನಾಟಕಕ್ಕೆ ಉತ್ತರಪ್ರದೇಶ ಮಾದರಿಯಂತೆ
    vartha chakra
    • Website

    Related Posts

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    May 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    May 30, 2025

    ವಿಧಾನ ಪರಿಷತ್ ಸದಸ್ಯರಿಗೆ ಬಿಸಿ ಮುಟ್ಟಿಸಿದ ಹೈಕಮಾಂಡ್.

    May 29, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • StanleyNed on ಅಭಿಮಾನಿಯನ್ನೇ ಕೊಲೆ ಮಾಡಿಸಿದ್ರಾ ನಟ ದರ್ಶನ್.?
    • StanleyNed on ಅಕ್ರಮ ಚಿನ್ನ -ಶಶಿ ತರೂರ್ ಆಪ್ತ ಬಂಧನ..
    • StanleyNed on ದೇವರಾಜೇಗೌಡ ಮೆಂಟಲ್ ಕೇಸ್ ಅಂತೆ.!
    Latest Kannada News

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    May 31, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    May 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    May 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಚಿವ ಖಂಡ್ರೆ ಮನೆ ಬಳಿಯೇ ಕಾರ್ ಗಾಜು ಒಡೆದು 2 ಲಕ್ಷ ಕಳವು!
    Subscribe