Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಈ ರಸ್ತೆಯ Bar ಗೂ‌ಜನ ಬರುತ್ತಿಲ್ಲ | Chitradurga
    Trending

    ಈ ರಸ್ತೆಯ Bar ಗೂ‌ಜನ ಬರುತ್ತಿಲ್ಲ | Chitradurga

    vartha chakraBy vartha chakraDecember 30, 20231 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಚಿತ್ರದುರ್ಗ, ಡಿ.30- ಚಿತ್ರದುರ್ಗದ (Chitradurga) ಅತ್ಯಂತ ಜನನಿಬಿಡ ಪ್ರದೇಶದಲ್ಲಿನ ಪಾಳು ಬಿದ್ದ ಮನೆಯಲ್ಲಿ ಐದು ಅಸ್ಥಿಪಂಜರಗಳು ಪತ್ತೆಯಾದ ಬೆನ್ನಲ್ಲೇ ಇಡೀ ರಸ್ತೆಗೆ ಗರ ಬಡಿದಂತಾಗಿದೆ.
    ಪಾಳು ಬಿದ್ದ ಮನೆಯ ಅಕ್ಕಪಕ್ಕದ ಮನೆಗಳ ನಿವಾಸಿಗಳು ಆತಂಕಗೊಂಡು ತಮ್ಮ ಮನೆಗಳಿಗೆ ಬೀಗ ಹಾಕಿ‌ ನೆಂಟರ ಮನೆಗಳಿಗೆ ತೆರಳಿದ್ದಾರೆ.
    ಜನನಿಬಿಡ‌ಪ್ರದೇಶವಾಗಿದ್ದ‌ ಜಿಲ್ಲಾ ಕಾರಾಗೃಹ ರಸ್ತೆಯಲ್ಲಿ ಜನರ ಓಡಾಟ ವಿರಳವಾಗಿದ್ದು, ಇದೀಗ ಬಿಕೋ ಎನ್ನುತ್ತಿದೆ.
    ಪ್ರತಿ ದಿನ ಚಿತ್ರದುರ್ಗದ ನಾಗರಿಕರು ಬೆಳಗ್ಗೆ ಮತ್ತು ಸಂಜೆ ಈ ರಸ್ತೆಯಲ್ಲಿ ವಾಕಿಂಗ್‌ ಮಾಡುತ್ತಿದ್ದರು. ಆದರೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ವಾಯುವಿಹಾರಿಗಳು ಕೂಡ ಭಯಗೊಂಡಿದ್ದಾರೆ. ಹೀಗಾಗಿ ಅವರು ರಸ್ತೆಗೆ ಬಂದಿಲ್ಲ.
    ಇದೇ ರಸ್ತೆಯ ಕೊನೆಯಲ್ಲಿರುವ ಬಾರ್ ಅಂಡ್ ರೆಸ್ಟೋರೆಂಟ್ ಗಳಿವೆ.ಘಟನೆಯ ವಿವರ ತಿಳಿದ ಗ್ರಾಹಕರು ಅಲ್ಲಿಗೂ ಬರುತ್ತಿಲ್ಲ .ಇದರಿಂದ ಬಾರ್ ಮಾಲೀಕರು ಆತಂಕಗೊಂಡಿದ್ದಾರೆ. ವಾಹನ ಸಂಚಾರ, ಜನದಟ್ಟಣೆ ಇಲ್ಲದೇ ಜೈಲು ರಸ್ತೆ‌ ಬಿಕೋ ಎನ್ನುತ್ತಿದೆ.

    ಅಸ್ಥಿಪಂಜರ ಪತ್ತೆಯಾದ ಹಿನ್ನೆಲೆಯಲ್ಲಿ ಭಯಗೊಂಡಿರುವ ವಾಯುವಿಹಾರಿಗಳು ಕೂಡ ಇಂದು ರಸ್ತೆಯತ್ತ ಮುಖಮಾಡಿಲ್ಲ.
    ಕಳೆದ 4 ವರ್ಷಗಳಿಂದ ಜೈಲ್ ರಸ್ತೆಯ ಈ ಮನೆ ಬಾಗಿಲು ಮುಚ್ಚಿತ್ತು.ಮನೆಯಲ್ಲಿ ಯಾರಾದರೂ ಇರಬಹುದು ಎಂದು ಅಕ್ಕಪಕ್ಕದವರು ಭಾವಿಸಿದ್ದರು.ಆದರೆ ಆ ಮನೆಯಲ್ಲಿದ್ದವರು ಮೃತಪಟ್ಟು ಅಸ್ಥಿಪಂಜರವಾಗಿದ್ದಾರೆ.
    ಈ ಸಂಬಂಧ ಮನೆಯಲ್ಲಿದ್ದವರ ಸಂಬಂಧಿ
    ಪವನ್ ಕುಮಾರ್ ಎಂಬವರು ಬಡಾವಣೆ ಠಾಣೆಗೆ ದೂರು ನೀಡಿದ್ದರು. ಈ ಮನೆಯಲ್ಲಿ ನಮ್ಮ ಸಂಬಂಧಿ ಜಗನ್ನಾಥ ರೆಡ್ಡಿ ಮತ್ತು ಕುಟುಂಬ ವಾಸವಾಗಿತ್ತು. ಸುಮಾರು ವರ್ಷಗಳಿಂದ ಜಗನ್ನಾಥ ರೆಡ್ಡಿ ಕುಟುಂಬ ನಮ್ಮ ಸಂಪರ್ಕದಲ್ಲಿರಲಿಲ್ಲ. ನಮ್ಮ ಮನೆಗೆ ಅವರು ಬರುತ್ತಿರಲಿಲ್ಲ.ನಾವು ಅವರ ಮನೆಗೆ ನಾವು ಹೋಗುತ್ತಿರಲಿಲ್ಲ. ಕೆಲ ವರ್ಷಗಳಿಂದ ಜಗನ್ನಾಥ ರೆಡ್ಡಿ ಮತ್ತು ಕುಟುಂಬದವರು ಕಂಡಿಲ್ಲ. ಜಗನ್ನಾಥ ರೆಡ್ಡಿ ಮನೆಯಲ್ಲಿ ಪತ್ತೆ ಆಗಿರುವುದು ಅವರ ಅಸ್ಥಿಪಂಜರ ಆಗಿರಬಹುದೆಂಬ ಶಂಕೆ ಇದೆ. 3 ವರ್ಷದ ಹಿಂದೆಯೇ ಮನೆಯಲ್ಲಿ ಮೃತಪಟ್ಟಿರಬಹುದು ಎಂದು ಮೃತರ ಸಾವಿನ ಬಗ್ಗೆ ಅನುಮಾನ ಇದೆ ಎಂದು ದೂರಿನಲ್ಲಿ ತಿಳಿಸಿದ್ದರು.

    ಈ ಸಂಬಂಧ ಎಸ್‌ಪಿ ಧರ್ಮೇಂದರ್ ಕುಮಾರ್, ಡಿವೈಎಸ್ಪಿ ಅನಿಲ್‌ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ 4 ವರ್ಷದ ಹಿಂದಿನ ಡೆತ್‍ನೋಟ್ ಈ ಐವರ ಸಾವಿನ ಸುಳಿವನ್ನು ಕೊಟ್ಟಿದೆ.
    ಸಾವಿಗೂ ಮುನ್ನ ಈ ಐವರು ಡೆತ್‍ನೋಡ್ ಬರೆದಿಟ್ಟಿದ್ದು, ಅದರಲ್ಲಿ ಕಾರಣವನ್ನು ತಿಳಿಸಿದ್ದಾರೆ.
    ಮೃತ ಜಗನ್ನಾಥರೆಡ್ಡಿ ಪುತ್ರ ನರೇಂದ್ರರೆಡ್ಡಿ ವಿರುದ್ಧ ದರೋಡೆ ಪ್ರಕರಣ ದಾಖಲಾಗಿತ್ತು. 2013ರಲ್ಲಿ ಖಾಸಗಿ ಕಂಪನಿಯೊಂದರಲ್ಲಿ ನರೇಂದ್ರ ರೆಡ್ಡಿ ಎಂಜಿನಿಯರ್ ಆಗಿದ್ದರು. ಇದೇ ವರ್ಷ ಬಿಡದಿ ಬಳಿ ಅವರ ವಾಹನವನ್ನು ತಡೆದು ದರೋಡೆ ಕೇಸ್ ದಾಖಲು ಮಾಡಲಾಗಿತ್ತು. ಇದರಿಂದ ಅವರು ಕೆಲದಿನ ಜೈಲುವಾಸವನ್ನೂ ಅನುಭವಿಸಿದ್ದರು. ನರೇಂದ್ರರೆಡ್ಡಿ ವಿರುದ್ಧದ ಕೇಸಿನಿಂದ ಮನನೊಂದಿದ್ದ ಕುಟುಂಬ 2019ರಲ್ಲಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಶರಣಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಸದ್ಯ ಪ್ರಕರಣದ ತನಿಖೆ ಚುರುಕುಗೊಂಡಿದೆ.

     

    ALSO READ | Latest Kannada News | Kannada News | Chitradurga News

    ಇದು ಖತರ್ನಾಕ್ ಹನಿಟ್ರ್ಯಾಪ್ ತಂಡ | Honey Trap

    Verbattle
    Verbattle
    Verbattle
    #chitradurga #kannada art crime kannada news Karnataka m News Politics Trending Varthachakra ಧರ್ಮ
    Share. Facebook Twitter Pinterest LinkedIn Tumblr Email WhatsApp
    Previous Articleಬಾಗಿಲಿಗೆ ಬರಲಿದೆ ಸರ್ಕಾರ
    Next Article ಜೈಲಿನಲ್ಲಿ ನಾರಾಯಣ ಗೌಡ ಹೇಗಿದ್ದಾರೆ? | Narayan Gowda
    vartha chakra
    • Website

    Related Posts

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    1 Comment

    1. Plivoy on February 13, 2026 2:11 am

      betmgm Connecticut online casino betmgm play betmgm sportsbook

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Carolineadugs on ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    • iksavez on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Glennhof on CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.